Homeಅಂಕಣಗಳುಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

ಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

- Advertisement -
- Advertisement -

ಮಿಥ್ಯ: ಸ್ವಾತಂತ್ರಯ ಸಿಗಲು ನೆಹರೂ ಕೊಡುಗೆ ಏನಿಲ್ಲ ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿದ್ದರು. ಬಿಜೆಪಿಯ ಐಟಿ ಸೆಲ್ ಕೂಡ ನೆಹರು ಕುರಿತು ಸಾಕಷ್ಟು ಫೇಕ್ ಸ್ಟೋರಿಗಳನ್ನು ಹರಡುತ್ತಲೇ ಬಂದಿದೆ.

ಸತ್ಯ: ಇವತ್ತು ಖರೀದಿಸಿದ ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು, ಜವಾಹರಲಾಲ್ ನೆಹರೂ ಕುರಿತು ಏನೆಲ್ಲ ಸುಳ್ಳುಗಳನ್ನು ಹಬ್ಬಿಸಲು ಯತ್ನಿಸುತ್ತಿದ್ದರೂ, ನೆಹರೂ ಕೊಡುಗೆ ಈ ದೇಶಕ್ಕೆ ಅಪಾರ ಎಂಬುದನ್ನು ಅವರಿಂದ ಮುಚ್ಚಿಡಲಾಗುತ್ತಿಲ್ಲ. 1964ರಲ್ಲಿ ನೆಹರೂ ಮಡಿದಾಗ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯು ‘ಆಧುನಿಕ ಭಾರತದ ನಿಮ್ರಾತೃ’ ಎಂದು ಬಣ್ಣಿಸುತ್ತದೆ. ‘ದಿ ಎಕನಾಮಿಸ್ಟ್’ ಪತ್ರಿಕೆಯು ‘ನೆಹರೂ ಇಲ್ಲದ ಜಗತ್ತು’ ಎಂಬ ಕವರ್ಸ್ಟೋರಿಯನ್ನು ಪ್ರಕಟಿಸುತ್ತದೆ. ಆ ಹೊತ್ತಿಗಾಗಲೇ ನೆಹರೂ ತೃತೀಯ ರಾಷ್ಟ್ರಗಳಲ್ಲಿ ಹೊಸ ಭರವಸೆ ಮೂಡಿಸಿದ್ದರು.

ಸಂಸತ್ತಿನಲ್ಲಿ ಇಂತಹ ನೆಹರೂ ಕುರಿತು ಮಾತನಾಡುವ ನಮ್ಮ ದಿ ಗ್ರೇಟ್ ಪ್ರಧಾನ ಮಂತ್ರಿಯವರು, ‘ಸ್ವಾಂತಂತ್ರ್ಯ ಹೋರಾಟಕ್ಕೆ ನೆಹರೂ ಕೊಡುಗೆ ಏನಿಲ್ಲ’ ಎಂದು ಮೂರ್ಖನಂತೆ ಮಾತಾಡುತ್ತಾರೆ. ಹಾಗಾದರೆ ಮೋದಿಯವರ ಆದರ್ಶಗಳಾದ ಹೆಡಗೆವಾರ್, ಸಾವರ್ಕರ್, ಗೋಳ್ವಾಲ್ಕರ್-ಈ ತರಿವಳಿಗಳ ಕೊಡುಗೆ ಏನು? ಇವರು ಪುಟ್ಟಾಪೂರಾ ಬ್ರಿಟಿಷರ ಚೇಲಾಗಳಂತೆ ವರ್ತಿಸಿದ್ದಕ್ಕೆ ಇತಿಹಾಸದಲ್ಲಿ ದಾಖಲೆಗಳಿವೆ. ಅದಿರಲಿ, ಇವರ ಕುರಿತು ಮೋದಿ ಸಾಹೇಬರೇಕೆ ಮಾತೇ ಆಡಲ್ಲ? ಈ ತ್ರಿವಳಿಗಳನ್ನು ಆರೆಸ್ಸೆಸ್ ಆರಾಧಿಸುತ್ತದೆ, ಮೋದಿಗೂ ಕೂಡ ಈ ಮೂವರು ಆದರ್ಶರೇ. ಬಟ್, ಬಾಹ್ಯವಾಗಿ ಮೋದಿ ಎಂದೂ ಇವರ ಪರ ಮಾತಾಡುತ್ತಿಲ್ಲ. ಮಾತಾಡುವ ಧಮ್ಮೂ ಇಲ್ಲ. ಯಾಕೆಂದರೆ ಈ ಮೂವರೂ ಮೋದಿಯಷ್ಟೇ ದೇಶದ್ರೋಹಿಗಳಾಗಿದ್ದರು!

ಹೀಗಾಗಿ ಐದು ವರ್ಷಗಳಲ್ಲಿ ನೀವೇನು ಮಾಡಿದಿರಾ ಎಂಬ ಪ್ರಶ್ನೆಗೆ ಉತ್ತರಿಸುವ ಯೋಗ್ಯತೆಯನ್ನೇ ಕಳೆದುಕೊಂಡಿರುವ ಪ್ರಧಾನಿ, ನೆಹರೂ ಈ ದೇಶಕ್ಕೆ ಏನು ಮಾಡಿದರು, ಕಾಂಗ್ರೆಸ್ ಈ ದೇಶಕ್ಕೆ ಏನು ಮಾಡಿತು ಎಂದು ವಿಷಯಾಂತರ ಮಾಡುತ್ತಿದ್ದಾರೆ. ನೆಹರು ವ್ಯಕ್ತಿತ್ವವನ್ನು ಮಸುಕಾಗಿಸುವ ಉದ್ದೇಶದಿಂದಲೇ ಹಲವಾರು ಮಿಥ್ಯಗಳನ್ನು, ಮತ್ತೆ ಕೆಲವು ತಪ್ಪು ವಿಶ್ಲೇಷಣೆಗಳನ್ನು ಮಾಡಲಾಗುತ್ತಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಪಾಲು ಏನಿಲ್ಲ ಎಂಬುದು ತೀರಾ ಬಾಲಿಶತನದ ಹೇಳಿಕೆಯಷ್ಟೇ. 1921ರಿಂದ 1945ರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕಾರಣಕ್ಕೆ ನೆಹರು 9 ಸಲ ಜೈಲಿಗೆ ತಳ್ಳಲ್ಪಡುತ್ತಾರೆ. 12 ದಿನಗಳಿಂದ ಹಿಡಿದು, 1041ಗಳ ಅವಧಿಯ ಜೈಲು ಶಿಕ್ಷೆ ಅನುಭವಿಸಿದರು. ಒಟ್ಟು 3,259 ದಿನಗಳನ್ನು ನೆಹರು ಜೈಲಿನಲ್ಲಿ ಕಳೆದರು. ಅಂದರೆ ತಮ್ಮ ಜೀವನದ ಒಂಭತ್ತು ವರ್ಷಗಳಷ್ಟು ಅವಧಿಯನ್ನು ನೆಹರು ಜೈಲಿನಲ್ಲೇ ಕಳೆದರು. ಜೈಲು ಶಿಕ್ಷೆಯನ್ನು ನೆಹರು ತಮ್ಮ ಓದಿಗೆ ಬಳಸಿಕೊಂಡರು. ಸಾಕಷ್ಟು ವೈವಿಧ್ಯಮಯ ಪುಸ್ತಕಗಳನ್ನು ಓದುತ್ತ ನಿಜವಾದ ಭಾರತದ ರೂಪುರೇಷೆ ಹೇಗಿರಬೇಕೆಂಬುದನ್ನು ಅರಿಯುತ್ತ ಹೋದರು. ಫೆಬ್ರುವರಿ 1934 ಮತ್ತು ಸೆಪ್ಟೆಂಬರ್ 1935- ಈ ಅವಧಿಯಲ್ಲಿ ನೆಹರು 188 ಪುಸ್ತಕಗಳನ್ನು ಜೈಲಿನಲ್ಲಿ ಓದಿದ್ದರು.

ಆದರೆ ಸಂಘ ಪರಿವಾರದ ಕೇಂದ್ರಸ್ಥಾನದಲ್ಲಿರುವ ಮತ್ತು ಇಡೀ ಸಂಘ ಪರಿವಾರವನ್ನು ನಿರ್ದೇಶಿಸುವ, ನಿಯಂತ್ರಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮಾತ್ರ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದಿದ್ದಷ್ಟೇ ಅಲ್ಲ, ಅದು ಬ್ರಿಟಿಷರ ಪರವಾದ ನಿಲುವುಗಳನ್ನು ಹೊಂದಿತ್ತು. ಅದರ ನಾಯಕ ಕೇಶವ ಹೆಡಗೆವಾರ್ ಸ್ವಾತಂತ್ರ್ಯ ಚಳುವಳಿಯಿಂದ ದೂರ ಇರುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಿದ್ದರು. ಹಿಂದೂತ್ವದ ಇನ್ನೊಬ್ಬ ನಾಯಕ ಸಾವರ್ಕರ್ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ಅಂಡಮಾನ್ ಜೈಲು ಸೇರಿದ್ದು ನಿಜ. ಹಾಗೆಯೇ ಬ್ರಿಟಿಷರೊಂದಿಗೆ ರಾಜಿಯಾಗಿ ಶಿಕ್ಷೆಯಿಂದ ಮುಕ್ತಿ ಪಡೆದಿದ್ದೂ ನಿಜ.

ಸ್ವಾತಂತ್ರ್ಯ ಚಳುವಳಿಯಿಂದ ದೂರವೇ ಉಳಿದ ಸಂಘಟನೆಯಿಂದ ರೂಪುಗೊಂಡ ನರೇಂದ್ರ ಮೋದಿಯವರು, ಸುಮಾರು 9 ವರ್ಷಗಳಷ್ಟು ಕಾಲ ಜೈಲಿನಲ್ಲಿ ಕಳೆದ ನೆಹರುರ ಹೋರಾಟದ ಪಾತ್ರವನ್ನು ಕಡೆಗಣಿಸಿ ಮಾತಾಡುತ್ತಿರುವುದೇ ಹಾಸ್ಯಾಸ್ಪದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...