Homeಅಂಕಣಗಳುಹಂಪಿ ವಿಶ್ವವಿದ್ಯಾಲಯ ಘನತೆ, ವೈಚಾರಿಕತೆಯ ಅಳಿವು-ಉಳಿವು

ಹಂಪಿ ವಿಶ್ವವಿದ್ಯಾಲಯ ಘನತೆ, ವೈಚಾರಿಕತೆಯ ಅಳಿವು-ಉಳಿವು

- Advertisement -
- Advertisement -

ಬಿ. ಶ್ರೀಪಾದ ಬಟ್ |

ಹಂಪಿ ವಿಶ್ವವಿದ್ಯಾಲಯದಲ್ಲಿನ ಇತ್ತೀಚಿನ ವಿವಾದವನ್ನು ಗಮನಿಸಿದಾಗ ಅಲ್ಲಿನ ಕುಲಪತಿಗಳಾದ ಮಲ್ಲಿಕಾ ಘಂಟಿಯವರಿಗೆ ಯಾರು ವಿದ್ಯಾಸಾದಕರು, ಯಾರು ವಿ

ದ್ವಂಸಕರು ಎಂಬುದರ ಅರಿವು ಇಲ್ಲದೆ ಹೋಯಿತೆ ಎನ್ನುವ ಪ್ರಶ್ನೆ ಮೂಡುತ್ತದೆ. ವಿಶಯವೇನೆಂದರೆ ಕನ್ನಡ ವಿವಿಯ ನುಡಿಹಬ್ಬದ ಪ್ರಯುಕ್ತ ಡಿಸೆಂಬರ್ 31, 2018-ಜನವರಿ 1, 2019 ರಂದು ಆಯೋಜಿಸಲಾಗಿದ್ದ ಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಬಕ್ಕೆ ಸುಳ್ಳು ಬಿತ್ತಿ ದ್ವೇಶವನ್ನು ಬೆಳೆಸಿದ ಪತ್ರಕರ್ತ ವಿಶ್ವೇಶ್ವರ ಭಟ್ಟರನ್ನು ಅತಿಥಿಗಳನ್ನಾಗಿ ಕರೆದಿದ್ದು ಇಡೀ ವಿವಾದದ ಕೇಂದ್ರವಾಗಿದೆ. ಸದರಿ ಪತ್ರಕರ್ತರನ್ನು ಯಾವ ಅರ್ಹತೆಯ ಮೇಲೆ ಆಹ್ವಾನಿಸಿದ್ದೀರಿ ಎಂದು ಪ್ರಜ್ನಾವಂತರು ಪ್ರಶ್ನಿಸಿ

ಹಂಪಿ ವಿಶ್ವವಿದ್ಯಾಲಯ

ದ್ದಾರೆ. ಏಕೆಂದರೆ ವಿಶ್ವೇಶ್ವರ ಭಟ್ಟ ಎನ್ನುವ ಪತ್ರಕರ್ತ ಕನ್ನಡ ಪತ್ರಿಕೋದ್ಯಮವನ್ನು ಅದೋಗತಿಗಿಳಿಸಿದ, ಮಹಿಳೆಯರ ಕುರಿತು ಅತ್ಯಂತ ಕೀಳು ಮಟ್ಟದಲ್ಲಿ, ತುಚ್ಚವಾಗಿ ಬರೆದಂತಹ ವ್ಯಕ್ತಿ. ಹಿಂದುತ್ವ ಮತಾಂದತೆಯ ವಿಶವನ್ನು ತ

ನ್ನ ಪತ್ರಿಕೆಯಲ್ಲಿ ದಿನನಿತ್ಯ ಪ್ರಚಾರ ಮಾಡಿದ, ಆ ಮೂಲಕ ಸಮಾಜದ ಸ್ವಾಸ್ಥ್ಯ ಕೆಡೆಸಿದ ಈ ಭಟ್ಟರನ್ನು ವಿಶಭಟ್ಟ ಎಂದು ಅಡ್ಡ ಹೆಸರಿನಿಂದ ಕರೆಯುತ್ತಾರೆ. ಈ ಮುಂಚೆ ಕನ್ನಡ ವಿವಿಯ ಕುಲಪತಿಗಳಾಗಿದ್ದ ಎಂ.ಎಂ. ಕಲ್ಬುರ್ಗಿಯವರ ವಿರುದ್ದ ಸುಳ್ಳುಗಳನ್ನು ಅಪಪ್ರಚಾರ ಮಾಡಲು ತಾನು ಸಂಪಾದಕನಾಗಿದ್ದ ದಿನಪತ್ರಿಕೆ ಮತ್ತು ಟಿವಿ ಚಾನಲ್ ನಲ್ಲಿ ಮತಾಂದರಿಗೆ ಸಂಪೂರ್ಣ ಅವಕಾಶವನ್ನು ಕೊಟ್ಟ ಈ ವಿ.ಭಟ್ಟರಿಗೆ ಸಂವಿದಾನ ಮೇಲೆಯೂ ಗೌರವವಿಲ್ಲ. ಸಂವಿದಾನದ ನೀತಿಸಂಹಿತೆಗಳಿಗೆ ಬದ್ದರಾಗಿ ಕಾರ್ಯನಿರ್ವಹಿಸುತ್ತಿರುವ ಹಂಪಿ ವಿವಿಯು ಸಂವಿದಾನ ವಿರೋದಿಯಾದಂತಹ ವಿಶ್ವೇಶ್ವರ ಭಟ್ಟರನ್ನು ಅತಿಥಿಯನ್ನಾಗಿ ಆಯ್ಕೆ ಮಾಡುವುದು ಸಹ ಪ್ರಜಾತಾಂತ್ರಿಕ ವಿರೋದಿ ಎನಿಸಿಕೊಳ್ಳುತ್ತದೆ

ಆದರೆ ಮಲ್ಲಿಕಾ ಘಂಟಿಯವರು ಸಿಂಡಿಕೇಟ್ ಸದಸ್ಯರ ಸಬೆ ನಡೆಸದೆ, ಹಿರಿಯ ಪ್ರಾದ್ಯಾಪಕರೊಂದಿಗೆ ಸಮಾಲೋಚಿಸದೆ ಏಕಪಕ್ಷೀಯವಾಗಿ ಈ ನಿರ್ಣಯವನ್ನು ತೆಗೆದುಕೊಂಡರು ಎಂದು ಹೇಳಲಾಗುತ್ತಿದೆ. ಸ್ವತಃ ಉಪಕುಲಪತಿಗಳೆ ಒಂದೆಡೆ ಇದು ನನ್ನ ನಿರ್ದಾರ ಎಂದು ಹೇಳಿದ್ದಾರೆ. ಅಕ್ಕ ಮಹಾದೇವಿ “ಕಂಗಳಲ್ಲಿ ಕಾಂಬೆನೆಂದು ಕತ್ತಲೆಯ ಹೊಕ್ಕಡೆಂತಯ್ಯ, ಬೆಟ್ಟದ ತುದಿಯ ಮೆಟ್ಟಲೆಂದು ಹಳ್ಳಕೊಳ್ಳಂಗಳಲ್ಲಿ ಇಳಿದಡೆಂತಯ್ಯ” ಎಂದು ಕೇಳುತ್ತಾಳೆ. ಪ್ರಜ್ನಾವಂತರು ಇದೇ ಪ್ರಶ್ನೆಯನ್ನು ಇಂದು ಕುಲಪತಿಗಳಿಗೆ ಕೇಳುತ್ತಿದ್ದಾರೆ.

ವಿವಿಯ ಆಡಳಿತ ಮಂಡಳಿ ಮತ್ತು ಕುಲಪತಿಗಳ ಈ ಆಯ್ಕೆಯನ್ನು ವಿರೋದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋದ ವ್ಯಕ್ತವಾಯಿತು. ಸಾಹಿತಿ, ಲೇಖಕ, ಪತ್ರಕರ್ತರು, ಹೋರಾಟಗಾರರು ವಿಶ್ವೇಶ್ವರ ಬಟ್ಟರಂತಹ ಜೀವವಿರೋದಿ ಪತ್ರಕರ್ತರನ್ನು ಆಹ್ವಾನಿಸಿದ್ದನ್ನು ಸಾಮೂಹಿಕವಾಗಿ ಖಂಡಿಸಿ ಪತ್ರವನ್ನು ಬರೆದರು. ವಿವಿಯ ಈ ನಡೆಯು ಕೆಟ್ಟ ಸಂಪ್ರದಾಯಕ್ಕೆ ನಾಂದಿಯಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ವಿಶ್ವೇಶ್ವರ ಭಟ್ಟರ ಆಯ್ಕೆಯ ಈ ನಿರ್ದಾರವನ್ನ ಕೈಬಿಡಬೇಕು ಎಂದು ಆಗ್ರಹಿಸಿದರು. ಕವಿಗಳಿಗೆ ಕವಿ-ಕಾವ್ಯ ಗೋಶ್ಟಿಯಲ್ಲಿ ಬಾಗವಹಿಸಬಾರದೆಂದು ಮನವಿಯನ್ನು ಸಹ ಮಾಡಲಾಯಿತು.

ಮಲ್ಲಿಕಾ ಘಂಟಿ

ಕವಿ, ಲೇಖಕರಾದ ಲಕ್ಷ್ಮೀಪತಿ ಕೋಲಾರ, ಹನುಮಂತ ಹಾಲಗೇರಿ, ಕೆ.ಪಿ.ನಟರಾಜ, ರಮೇಶ್ ಗಬ್ಬೂರು, ಜಾಜಿ ದೇವೆಂದ್ರಪ್ಪ, ಅರುಣ್ ಜೋಳದ ಕೂಡ್ಲಿಗಿ ಅವರು ಕವಿಗೋಶ್ಟಿಯಲ್ಲಿ ಭಾಗವಹಿಸದಿರಲು ನಿರ್ದರಿಸಿದರು.

ಹಂಪಿ ವಿವಿಯ ಬಯಲು ಚಿಂತನ ಸಂಶೋದನ ವಿದ್ಯಾರ್ಥಿ ಬಳಗದವರು ಕುಲಪತಿ ಕಚೇರಿ ಎದುರು ಪ್ರತಿಬಟಿಸಿದರು. ಮುಂದೊದಗಬಹುದಾದ ಯಾವುದೇ ವ್ಯತಿರಿಕ್ತ ಪರಿಣಾಮಗಳನ್ನು ಲೆಕ್ಕಿಸದೆ ನ್ಯಾಯದ ಪರವಾಗಿ ಬೆಂಬಲಿಸಿದ ಅಲ್ಲಿನ ಸ್ನಾತಕೋತ್ತರ, ಸಂಶೋದನ ವಿದ್ಯಾರ್ಥಿಗಳ ಈ ದಿಟ್ಟತೆ ಇಡೀ ವಿವಾದಕ್ಕೆ ಹೊಸ ತಿರುವನ್ನು ತಂದಿತು. ಮೌನವಾಗಿದ್ದೀರಿ ಯಾಕೆ ಎನ್ನುವ ಪ್ರಶ್ನೆಗೆ ಗುರಿಯಾಗಿದ್ದ ವಿ.ವಿ.ಯ ಪ್ರಾದ್ಯಾಪಕರು ಕುಲಪತಿಗಳ ಏಕಪಕ್ಷೀಯ ನಿರ್ದಾರದ ವಿರುದ್ದ ತಮ್ಮ ಪ್ರತಿಭಟನೆ ದಾಖಲಿಸಿದರು. (ಆದರೆ ಕೆಲ ಪ್ರಾದ್ಯಾಪಕರು ವಿ.ಭಟ್ಟನನ್ನು ಆಹ್ವಾನಿಸಿದ್ದು ಗೊತ್ತಾದ ತಕ್ಷಣ ಕುಲಪತಿಗಳಿಗೆ ತಮ್ಮ ವಿರೋದವನ್ನು ವ್ಯಕ್ತಪಡಿಸಿದ್ದರು)

ಮೇಲಿನ ಎಲ್ಲಾ ಒತ್ತಡಗಳಿಗೆ ಮಣಿದ ಮಲ್ಲಿಕಾ ಘಂಟಿಯವರು ಎರಡು ದಿನದ ಸಮಾರೋಪ ಸಮಾರಂಬವನ್ನೆ ರದ್ದುಗೊಳಿಸಲಾಗಿದೆ ಎಂದು ಪ್ರಕಟಿಸಿದರು. ಆದರೂ ಸಹ ತಮ್ಮದೇನು ತಪ್ಪಿಲ್ಲ ಎಂಬಂತೆ ವಿ.ಭಟ್ಟರನ್ನು ಕರೆಸುವ ತಮ್ಮ ನಿರ್ದಾರವನ್ನು ಪದೆ ಪದೆ ಸಮರ್ಥಿಸಿಕೊಂಡರು. ಈ ಸಮರ್ಥನೆಯ ಭರದಲ್ಲಿ ಇಡೀ ವಿವಾದವನ್ನು ಎಡಪಂಥೀಯ ವರ್ಸಸ್ ಬಲಪಂಥೀಯ ಎಂದು ಶರಾ ಬರೆದುಬಿಟ್ಟರು. ತಮ್ಮ ಈ ಹತಾಶ ಹೇಳಿಕೆಯ ಮೂಲಕ ಜನತೆಯನ್ನು ತಪ್ಪು ದಾರಿಗೆಳೆಯುವ ಪ್ರಯತ್ನವನ್ನು ಮಾಡಿದರು. ಆದರೆ ಪತ್ರಕರ್ತ ವೇಶದ ಒಬ್ಬ ಜೀವವಿರೋದಿ ವ್ಯಕ್ತಿಯನ್ನು ಹಂಪಿ ವಿವಿಯಂತಹ ಉನ್ನತ ಶಿಕ್ಷಣ ಸಂಸ್ಥೆಗೆ ಅತಿಥಿಯಾಗಿ ಆಹ್ವಾನಿಸುವುದರ ವಿರುದ್ದ ಮಾತ್ರ ಇಲ್ಲಿ ಪ್ರತಿಬಟನೆ ಇತ್ತು ಹೊರತಾಗಿ ಯಾವುದೆ ಸಿದ್ದಾಂತಗಳ ನಡುವಿನ ಜಗಳವಂತೂ ಅಲ್ಲವೆ ಅಲ್ಲ . ಕನ್ನಡ ವಿವಿಯ ಘನತೆ ಮತ್ತು ವೈಚಾರಿಕ ಪರಂಪರೆಯನ್ನು ಕಾಪಾಡುವ ಕಳಕಳಿಯೂ ಇಲ್ಲಿನ ಪ್ರಜ್ನಾವಂತರ ಪ್ರತಿಭಟನೆಯ ಮೂಲ ಆಶಯವಾಗಿತ್ತು. ಮುಂದಿನ ಪೀಳಿಗೆಗೆ ಕನ್ನಡ ವಿವಿ ಒಂದು ಅರ್ಥಪೂರ್ಣ ಮಾದರಿಯಾಗಿರಬೇಕು ಎಂಬುದೆ ಈ ಪ್ರತಿರೋದದ ಪ್ರಜ್ನೆಯಾಗಿತ್ತು. ಬಲಪಂಥೀಯರನ್ನು ಕರೆಸುವುದಕ್ಕೆ ಯಾವುದೆ ಬಗೆಯ ವಿರೋದ ವ್ಯಕ್ತಪಡಿಸುವುದು ಪ್ರಜಾಪ್ರಬುತ್ವ ವಿರೋದಿ ನಡವಳಿಕೆಯಾಗುತ್ತದೆ ಎನ್ನುವ ಸ್ಪಶ್ಟ ತಿಳುವಳಿಕೆ ಮೇಲಿನ ಪ್ರಜ್ನಾವಂತರಿಗಿದೆ. ಮತ್ತು ಇಂತಹ ಫ್ಯಾಸಿಸ್ಟ್ ವರ್ತನೆಯನ್ನು ಕಾಲಕಾಲಕ್ಕೆ ಖಂಡಿಸುತ್ತಲೆ ಬಂದಿದ್ದಾರೆ.

ಕಡೆಗೂ ಕಾಡುವುದೇನೆಂದರೆ “ಎಲ್ಲಾ ಬಿಟ್ಟ ಮಗ ಭಂಗಿ ಯಾಕೆ ನೆಟ್ಟ” ??

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....