Homeಸಿನಿಮಾಸಿನಿ ಸುದ್ದಿಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

ಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

- Advertisement -
- Advertisement -

ರಂಗಿತರಂಗ, ಕಳೆದ ವರ್ಷದ ಅತ್ಯದ್ಭುತ ಸಿನಿಮಾಗಳಲ್ಲಿ ಒಂದು. ಆ ತಂಡದ ಮೇಲೆ ಭರವಸೆಯನ್ನೂ ಹೆಚ್ಚಿಸಿದ್ದ ಸಿನಿಮಾ ಅದು. ಆದರೀಗ ರೇಡಿಯೋ ಆಂಕರಮ್ಮ ಮಾಡಿದ ಯಡವಟ್ಟಿಗೆ ಇಡೀ ತಂಡ ತಮ್ಮ ಪ್ರತಿಭೆಯ ಕ್ವಾಲಿಟಿಗೆ ಮಸಿ ಬಳಿಸಿಕೊಂಡು ಮರುಗುತ್ತಿದೆ. ಆಕ್ಚುಯಲಿ ಏನಾಗಿದೆ ಅಂದ್ರೆ, ಮೊನ್ನೆ ಈ ತಂಡದ ಹೊಸ ಸಿನಿಮಾ ರಾಜರಥಾ ಬಿಡುಗಡೆಯಾಗಿತ್ತು. ಸಿನಿಮಾದ ಪ್ರಚಾರಕ್ಕೆಂದು ರಪರಪ ರ್ಯಾಪಿಡಮ್ಮ ಅರ್ಥಾತ್ ರ್ಯಾಪಿಡ್ ರಶುಮಮ್ಮನ ರೇಡಿಯೋ ಶೋನಲ್ಲಿ ತಂಡ ಕೂತಿತ್ತು. ಉಸಿರು ಬಿಗಿಹಿಡಿದಂತೆ ಒಂದೇಸಮನೆ ಮಾತಾಡೋದು ಬಿಟ್ಟು ತಮಗೊಂದು ಸೆನ್ಸಿಬಲ್ ಹೊಣೆ ಇದೆ ಅನ್ನೋದನ್ನೇ ಮರೆತ ಆ್ಯಂಕರ್ ಪರಂಪರೆಯ ರ್ಯಾಪಿಡ್ ರಶ್ಮಿ `ನಿಮ್ಮ ರಾಜರಥಾ ಸಿನಿಮಾವನ್ನು ನೋಡದಿರೋ ಪ್ರೇಕ್ಷಕರನ್ನು ನೀವು ಏನಂತ ಕರೀತೀರಾ?’ ಅನ್ನೋ ಅಸಂಬಂದ್ಧ ಪ್ರಶ್ನೆ ಎಸೆದಿದ್ದಳು. ಒಂದು ಸಿನಿಮಾ ರಿಲೀಸ್ ಆಯ್ತು ಅಂದ್ರೆ ಅದನ್ನು ಎಲ್ಲರು ನೋಡ್ಲೇಬೇಕಾ, ಹಾಗೊಮ್ಮೆ ನೋಡದೆ ಇದ್ರೆ ಅವರಲ್ಲಿ ಏನೊ ಡಿಫೆಕ್ಟ್ ಇದೆ ಅಂತ ಅಂದ್ಕೋಬೇಕಾ… ವಿಚಿತ್ರವಾಗಿದೆ ಆಯಮ್ಮನ ವಾದ. ಹೋಗ್ಲಿ, ಚಿತ್ರತಂಡವಾದರು ಈ ಪ್ರಶ್ನೆಯ ಅಸಂಬದ್ಧತೆಯನ್ನ ಅರ್ಥ ಮಾಡಿಕೊಂಡು ಆಂಕಂರಮ್ಮನನ್ನ ತಿದ್ದಬಹುದಿತ್ತು. ಅದರ ಬದಲಿಗೆ `ಈ ಸಿನಿಮಾ ನೋಡ್ದೇ ಇರೋರು ಕಚಡಾ ನನ್ಮಕ್ಕಳು’ ಅಂದುಬಿಡೋದಾ?.

ಆ ಒಂದು ಹೇಳಿಕೆ ಹೊಸಬರ ತಂಡದ ಮೇಲಿದ್ದ ಸಭ್ಯತೆಯ ನಿರೀಕ್ಷೆಗಳನ್ನೆಲ್ಲ ಧ್ವಂಸ ಮಾಡಿದ್ದಲ್ಲದೆ, ಹೈಗ್ರೌಂಡ್ಸ್ ಪೊಲೀಸ್ ಸ್ಟೇಷನ್‍ನಲ್ಲಿ ಪುಕ್ಕಟೆ ಕೇಸ್ ಕೂಡಾ ಅವರ ಹೆಗಲೇರುವಂತೆ ಮಾಡಿದೆ. ಅದೊಂದು ವಿವಾದವಾಗಿ ಬೆಳೆದದ್ದು, ಸಾರಾ ಗೋವಿಂದು ರಾಜಿಪಂಚಾಯ್ತಿಯಲ್ಲಿ ಅವರೆಲ್ಲ `ಸೋ, ಸಾರಿ ಪ್ರೇಕ್ಷಕರೇ’ ಅಂತ ಅವಲತ್ತುಕೊಂಡದ್ದು, ಇವೆಲ್ಲ ಸುದ್ದಿಗಳಾಗಿ ರಾರಾಜಿಸಿದವು. ಆದ್ರೆ ಈ ಆಂಕರ್‍ಗಳ ಐಲುತನದ ಬಗ್ಗೆ ಹೆಚ್ಚು ಚರ್ಚೆಯೇ ಹುಟ್ಟಿಕೊಳ್ಳಲಿಲ್ಲ. ಅದೇ ದುರಂತದ ಸಂಗತಿ. ನಿರೂಪಣೆ ತನ್ನ ಸೊಗಸು ಕಳಕೊಂಡು ಅದ್ಯಾವ ಘಳಿಗೆಯಲ್ಲಿ ಆಂಕರಿಂಗ್‍ನ ಅರೆಬೆಂದ ರೂಪ ಪಡೆಯಿತೋ ಆಗಿನಿಂದ ಅವರ ಅಧ್ವಾನಗಳನ್ನು ನೋಡಲಾಗುತ್ತಿಲ್ಲ. ಇತ್ತೀಚೆಗೆ ಈ ಆಂಕರ್‍ಗಳಿಗೆ ಸ್ಟಾರ್‍ಗಿರಿಯ ಭ್ರಮೆಯೂ ಶುರುವಾಗಿದ್ದು ಅವರ ಅವತಾರಗಳಿಗೆ ಲಂಗು ಲಗಾಮೇ ಇಲ್ಲದಂತಾಗಿದೆ. ಆಂಕರ್‍ಗಳ ಇಂಥಾ ಅಸಂಬಂದ್ಧ ಐಲಾಟ ಇದೇ ಮೊದಲೇನಲ್ಲ. ಯುವನಟಿ ರಶ್ಮಿಕಾ ಮಂದಣ್ಣಗೆ `ಕನ್ನಡದಲ್ಲಿ ಶೋ ಆಫ್ ನಟ ಅಂತ ನೀವು ಯಾರನ್ನ ಕರೀತಿರಿ?’ ಅನ್ನೋ ಪ್ರಶ್ನೆ ಹಾಕಿದ್ದ ಆಂಕರ್, ಆಕೆಗೆ ಇಷ್ಟವಿಲ್ಲದಿದ್ದರೂ ಒತ್ತಾಯಿಸಿ `ಯಶ್’ ಎಂಬ ಉತ್ತರ ಹೊರಬರುವಂತೆ ಮಾಡಿದ್ದ. ಪಾಪಾ, ಆಕೆ ಆಮೇಲೆ ಹಲವರ ವಿರೋಧ ಎದುರಿಸಬೇಕಾಯ್ತು. ಅದೇರೀತಿ ಆ್ಯಂಕರಿಂಗ್ ದೊರೆ ಬಿಗ್‍ಬಾಸ್ ಸಂಜನಾಗೆ `ನಿಮ್ಮ ಪ್ರಕಾರ ‘ಬಿಲ್ಡಪ್’ ನಟ ಯಾರು?’ ಅಂತ ಕೇಳಿ, ಅವಳ ಬಾಯಿಂದ ದರ್ಶನ್ ಹೆಸರು ಹೊರಬರುವಂತೆ ಮಾಡಿದ್ದ. ಅದೂ ವಿವಾದವಾಗಿತ್ತು. ಇಂಥಾ ಅದೆಷ್ಟೊ ನಿದರ್ಶನಗಳು ಸಿಗುತ್ತವೆ.

ವಿವಾದ ಸೃಷ್ಟಿಸೋದು, ಮತ್ತೊಬ್ಬರನ್ನು ಹೀಗಳೆಯೋದೇ ಆ್ಯಂಕರಿಂಗ್ ಅಂದುಕೊಂಡಿರೋ ಇವರಿಗೆ ನಿರೂಪಣೆಯ ವ್ಯಾಕರಣ ಅರ್ಥವಾಗೋದು ಕಷ್ಟ. ಆದ್ರೆ, ಕಡೇಪಕ್ಷ ತಾವಾಡುವ ಮಾತುಗಳಲ್ಲಿ ಒಂದಷ್ಟು ಕಾಮನ್‍ಸೆನ್ಸ್ ಇರಬೇಕು ಅನ್ನೋ ಪ್ರಜ್ಞೇನಾದ್ರು ಇವರು ಬೆಳೆಸಿಕೊಳ್ಳಬೇಕಿದೆ. ಅಂದಹಾಗೆ, ಇದೆಲ್ಲಾ ನಮ್ಮ ಎಂಟರ್‍ಟೈನ್‍ಮೆಂಟ್ ಚಾನೆಲ್ ಆ್ಯಂಕರ್‍ಗಳ ಐಲಾಟವಾಯ್ತು. ಇನ್ನು ನ್ಯೂಸ್ ಚಾನೆಲ್ ಆ್ಯಂಕರ್‍ಗಳ ಐಲಾಟಕ್ಕೆ ಹೋದ್ರೆ, ಬೆಂಗ್ಳೂರಲ್ಲಿ ಪ್ರಳಯವೇ ಆಗ್ಬಿಡುತ್ತೆ. ಬೇಡ ಬಿಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...