Homeಸಿನಿಮಾಸಿನಿ ಸುದ್ದಿಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

ಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

- Advertisement -
- Advertisement -

ರಂಗಿತರಂಗ, ಕಳೆದ ವರ್ಷದ ಅತ್ಯದ್ಭುತ ಸಿನಿಮಾಗಳಲ್ಲಿ ಒಂದು. ಆ ತಂಡದ ಮೇಲೆ ಭರವಸೆಯನ್ನೂ ಹೆಚ್ಚಿಸಿದ್ದ ಸಿನಿಮಾ ಅದು. ಆದರೀಗ ರೇಡಿಯೋ ಆಂಕರಮ್ಮ ಮಾಡಿದ ಯಡವಟ್ಟಿಗೆ ಇಡೀ ತಂಡ ತಮ್ಮ ಪ್ರತಿಭೆಯ ಕ್ವಾಲಿಟಿಗೆ ಮಸಿ ಬಳಿಸಿಕೊಂಡು ಮರುಗುತ್ತಿದೆ. ಆಕ್ಚುಯಲಿ ಏನಾಗಿದೆ ಅಂದ್ರೆ, ಮೊನ್ನೆ ಈ ತಂಡದ ಹೊಸ ಸಿನಿಮಾ ರಾಜರಥಾ ಬಿಡುಗಡೆಯಾಗಿತ್ತು. ಸಿನಿಮಾದ ಪ್ರಚಾರಕ್ಕೆಂದು ರಪರಪ ರ್ಯಾಪಿಡಮ್ಮ ಅರ್ಥಾತ್ ರ್ಯಾಪಿಡ್ ರಶುಮಮ್ಮನ ರೇಡಿಯೋ ಶೋನಲ್ಲಿ ತಂಡ ಕೂತಿತ್ತು. ಉಸಿರು ಬಿಗಿಹಿಡಿದಂತೆ ಒಂದೇಸಮನೆ ಮಾತಾಡೋದು ಬಿಟ್ಟು ತಮಗೊಂದು ಸೆನ್ಸಿಬಲ್ ಹೊಣೆ ಇದೆ ಅನ್ನೋದನ್ನೇ ಮರೆತ ಆ್ಯಂಕರ್ ಪರಂಪರೆಯ ರ್ಯಾಪಿಡ್ ರಶ್ಮಿ `ನಿಮ್ಮ ರಾಜರಥಾ ಸಿನಿಮಾವನ್ನು ನೋಡದಿರೋ ಪ್ರೇಕ್ಷಕರನ್ನು ನೀವು ಏನಂತ ಕರೀತೀರಾ?’ ಅನ್ನೋ ಅಸಂಬಂದ್ಧ ಪ್ರಶ್ನೆ ಎಸೆದಿದ್ದಳು. ಒಂದು ಸಿನಿಮಾ ರಿಲೀಸ್ ಆಯ್ತು ಅಂದ್ರೆ ಅದನ್ನು ಎಲ್ಲರು ನೋಡ್ಲೇಬೇಕಾ, ಹಾಗೊಮ್ಮೆ ನೋಡದೆ ಇದ್ರೆ ಅವರಲ್ಲಿ ಏನೊ ಡಿಫೆಕ್ಟ್ ಇದೆ ಅಂತ ಅಂದ್ಕೋಬೇಕಾ… ವಿಚಿತ್ರವಾಗಿದೆ ಆಯಮ್ಮನ ವಾದ. ಹೋಗ್ಲಿ, ಚಿತ್ರತಂಡವಾದರು ಈ ಪ್ರಶ್ನೆಯ ಅಸಂಬದ್ಧತೆಯನ್ನ ಅರ್ಥ ಮಾಡಿಕೊಂಡು ಆಂಕಂರಮ್ಮನನ್ನ ತಿದ್ದಬಹುದಿತ್ತು. ಅದರ ಬದಲಿಗೆ `ಈ ಸಿನಿಮಾ ನೋಡ್ದೇ ಇರೋರು ಕಚಡಾ ನನ್ಮಕ್ಕಳು’ ಅಂದುಬಿಡೋದಾ?.

ಆ ಒಂದು ಹೇಳಿಕೆ ಹೊಸಬರ ತಂಡದ ಮೇಲಿದ್ದ ಸಭ್ಯತೆಯ ನಿರೀಕ್ಷೆಗಳನ್ನೆಲ್ಲ ಧ್ವಂಸ ಮಾಡಿದ್ದಲ್ಲದೆ, ಹೈಗ್ರೌಂಡ್ಸ್ ಪೊಲೀಸ್ ಸ್ಟೇಷನ್‍ನಲ್ಲಿ ಪುಕ್ಕಟೆ ಕೇಸ್ ಕೂಡಾ ಅವರ ಹೆಗಲೇರುವಂತೆ ಮಾಡಿದೆ. ಅದೊಂದು ವಿವಾದವಾಗಿ ಬೆಳೆದದ್ದು, ಸಾರಾ ಗೋವಿಂದು ರಾಜಿಪಂಚಾಯ್ತಿಯಲ್ಲಿ ಅವರೆಲ್ಲ `ಸೋ, ಸಾರಿ ಪ್ರೇಕ್ಷಕರೇ’ ಅಂತ ಅವಲತ್ತುಕೊಂಡದ್ದು, ಇವೆಲ್ಲ ಸುದ್ದಿಗಳಾಗಿ ರಾರಾಜಿಸಿದವು. ಆದ್ರೆ ಈ ಆಂಕರ್‍ಗಳ ಐಲುತನದ ಬಗ್ಗೆ ಹೆಚ್ಚು ಚರ್ಚೆಯೇ ಹುಟ್ಟಿಕೊಳ್ಳಲಿಲ್ಲ. ಅದೇ ದುರಂತದ ಸಂಗತಿ. ನಿರೂಪಣೆ ತನ್ನ ಸೊಗಸು ಕಳಕೊಂಡು ಅದ್ಯಾವ ಘಳಿಗೆಯಲ್ಲಿ ಆಂಕರಿಂಗ್‍ನ ಅರೆಬೆಂದ ರೂಪ ಪಡೆಯಿತೋ ಆಗಿನಿಂದ ಅವರ ಅಧ್ವಾನಗಳನ್ನು ನೋಡಲಾಗುತ್ತಿಲ್ಲ. ಇತ್ತೀಚೆಗೆ ಈ ಆಂಕರ್‍ಗಳಿಗೆ ಸ್ಟಾರ್‍ಗಿರಿಯ ಭ್ರಮೆಯೂ ಶುರುವಾಗಿದ್ದು ಅವರ ಅವತಾರಗಳಿಗೆ ಲಂಗು ಲಗಾಮೇ ಇಲ್ಲದಂತಾಗಿದೆ. ಆಂಕರ್‍ಗಳ ಇಂಥಾ ಅಸಂಬಂದ್ಧ ಐಲಾಟ ಇದೇ ಮೊದಲೇನಲ್ಲ. ಯುವನಟಿ ರಶ್ಮಿಕಾ ಮಂದಣ್ಣಗೆ `ಕನ್ನಡದಲ್ಲಿ ಶೋ ಆಫ್ ನಟ ಅಂತ ನೀವು ಯಾರನ್ನ ಕರೀತಿರಿ?’ ಅನ್ನೋ ಪ್ರಶ್ನೆ ಹಾಕಿದ್ದ ಆಂಕರ್, ಆಕೆಗೆ ಇಷ್ಟವಿಲ್ಲದಿದ್ದರೂ ಒತ್ತಾಯಿಸಿ `ಯಶ್’ ಎಂಬ ಉತ್ತರ ಹೊರಬರುವಂತೆ ಮಾಡಿದ್ದ. ಪಾಪಾ, ಆಕೆ ಆಮೇಲೆ ಹಲವರ ವಿರೋಧ ಎದುರಿಸಬೇಕಾಯ್ತು. ಅದೇರೀತಿ ಆ್ಯಂಕರಿಂಗ್ ದೊರೆ ಬಿಗ್‍ಬಾಸ್ ಸಂಜನಾಗೆ `ನಿಮ್ಮ ಪ್ರಕಾರ ‘ಬಿಲ್ಡಪ್’ ನಟ ಯಾರು?’ ಅಂತ ಕೇಳಿ, ಅವಳ ಬಾಯಿಂದ ದರ್ಶನ್ ಹೆಸರು ಹೊರಬರುವಂತೆ ಮಾಡಿದ್ದ. ಅದೂ ವಿವಾದವಾಗಿತ್ತು. ಇಂಥಾ ಅದೆಷ್ಟೊ ನಿದರ್ಶನಗಳು ಸಿಗುತ್ತವೆ.

ವಿವಾದ ಸೃಷ್ಟಿಸೋದು, ಮತ್ತೊಬ್ಬರನ್ನು ಹೀಗಳೆಯೋದೇ ಆ್ಯಂಕರಿಂಗ್ ಅಂದುಕೊಂಡಿರೋ ಇವರಿಗೆ ನಿರೂಪಣೆಯ ವ್ಯಾಕರಣ ಅರ್ಥವಾಗೋದು ಕಷ್ಟ. ಆದ್ರೆ, ಕಡೇಪಕ್ಷ ತಾವಾಡುವ ಮಾತುಗಳಲ್ಲಿ ಒಂದಷ್ಟು ಕಾಮನ್‍ಸೆನ್ಸ್ ಇರಬೇಕು ಅನ್ನೋ ಪ್ರಜ್ಞೇನಾದ್ರು ಇವರು ಬೆಳೆಸಿಕೊಳ್ಳಬೇಕಿದೆ. ಅಂದಹಾಗೆ, ಇದೆಲ್ಲಾ ನಮ್ಮ ಎಂಟರ್‍ಟೈನ್‍ಮೆಂಟ್ ಚಾನೆಲ್ ಆ್ಯಂಕರ್‍ಗಳ ಐಲಾಟವಾಯ್ತು. ಇನ್ನು ನ್ಯೂಸ್ ಚಾನೆಲ್ ಆ್ಯಂಕರ್‍ಗಳ ಐಲಾಟಕ್ಕೆ ಹೋದ್ರೆ, ಬೆಂಗ್ಳೂರಲ್ಲಿ ಪ್ರಳಯವೇ ಆಗ್ಬಿಡುತ್ತೆ. ಬೇಡ ಬಿಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...