Homeಸಿನಿಮಾಸಿನಿ ಸುದ್ದಿಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

ಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

- Advertisement -
- Advertisement -

ರಂಗಿತರಂಗ, ಕಳೆದ ವರ್ಷದ ಅತ್ಯದ್ಭುತ ಸಿನಿಮಾಗಳಲ್ಲಿ ಒಂದು. ಆ ತಂಡದ ಮೇಲೆ ಭರವಸೆಯನ್ನೂ ಹೆಚ್ಚಿಸಿದ್ದ ಸಿನಿಮಾ ಅದು. ಆದರೀಗ ರೇಡಿಯೋ ಆಂಕರಮ್ಮ ಮಾಡಿದ ಯಡವಟ್ಟಿಗೆ ಇಡೀ ತಂಡ ತಮ್ಮ ಪ್ರತಿಭೆಯ ಕ್ವಾಲಿಟಿಗೆ ಮಸಿ ಬಳಿಸಿಕೊಂಡು ಮರುಗುತ್ತಿದೆ. ಆಕ್ಚುಯಲಿ ಏನಾಗಿದೆ ಅಂದ್ರೆ, ಮೊನ್ನೆ ಈ ತಂಡದ ಹೊಸ ಸಿನಿಮಾ ರಾಜರಥಾ ಬಿಡುಗಡೆಯಾಗಿತ್ತು. ಸಿನಿಮಾದ ಪ್ರಚಾರಕ್ಕೆಂದು ರಪರಪ ರ್ಯಾಪಿಡಮ್ಮ ಅರ್ಥಾತ್ ರ್ಯಾಪಿಡ್ ರಶುಮಮ್ಮನ ರೇಡಿಯೋ ಶೋನಲ್ಲಿ ತಂಡ ಕೂತಿತ್ತು. ಉಸಿರು ಬಿಗಿಹಿಡಿದಂತೆ ಒಂದೇಸಮನೆ ಮಾತಾಡೋದು ಬಿಟ್ಟು ತಮಗೊಂದು ಸೆನ್ಸಿಬಲ್ ಹೊಣೆ ಇದೆ ಅನ್ನೋದನ್ನೇ ಮರೆತ ಆ್ಯಂಕರ್ ಪರಂಪರೆಯ ರ್ಯಾಪಿಡ್ ರಶ್ಮಿ `ನಿಮ್ಮ ರಾಜರಥಾ ಸಿನಿಮಾವನ್ನು ನೋಡದಿರೋ ಪ್ರೇಕ್ಷಕರನ್ನು ನೀವು ಏನಂತ ಕರೀತೀರಾ?’ ಅನ್ನೋ ಅಸಂಬಂದ್ಧ ಪ್ರಶ್ನೆ ಎಸೆದಿದ್ದಳು. ಒಂದು ಸಿನಿಮಾ ರಿಲೀಸ್ ಆಯ್ತು ಅಂದ್ರೆ ಅದನ್ನು ಎಲ್ಲರು ನೋಡ್ಲೇಬೇಕಾ, ಹಾಗೊಮ್ಮೆ ನೋಡದೆ ಇದ್ರೆ ಅವರಲ್ಲಿ ಏನೊ ಡಿಫೆಕ್ಟ್ ಇದೆ ಅಂತ ಅಂದ್ಕೋಬೇಕಾ… ವಿಚಿತ್ರವಾಗಿದೆ ಆಯಮ್ಮನ ವಾದ. ಹೋಗ್ಲಿ, ಚಿತ್ರತಂಡವಾದರು ಈ ಪ್ರಶ್ನೆಯ ಅಸಂಬದ್ಧತೆಯನ್ನ ಅರ್ಥ ಮಾಡಿಕೊಂಡು ಆಂಕಂರಮ್ಮನನ್ನ ತಿದ್ದಬಹುದಿತ್ತು. ಅದರ ಬದಲಿಗೆ `ಈ ಸಿನಿಮಾ ನೋಡ್ದೇ ಇರೋರು ಕಚಡಾ ನನ್ಮಕ್ಕಳು’ ಅಂದುಬಿಡೋದಾ?.

ಆ ಒಂದು ಹೇಳಿಕೆ ಹೊಸಬರ ತಂಡದ ಮೇಲಿದ್ದ ಸಭ್ಯತೆಯ ನಿರೀಕ್ಷೆಗಳನ್ನೆಲ್ಲ ಧ್ವಂಸ ಮಾಡಿದ್ದಲ್ಲದೆ, ಹೈಗ್ರೌಂಡ್ಸ್ ಪೊಲೀಸ್ ಸ್ಟೇಷನ್‍ನಲ್ಲಿ ಪುಕ್ಕಟೆ ಕೇಸ್ ಕೂಡಾ ಅವರ ಹೆಗಲೇರುವಂತೆ ಮಾಡಿದೆ. ಅದೊಂದು ವಿವಾದವಾಗಿ ಬೆಳೆದದ್ದು, ಸಾರಾ ಗೋವಿಂದು ರಾಜಿಪಂಚಾಯ್ತಿಯಲ್ಲಿ ಅವರೆಲ್ಲ `ಸೋ, ಸಾರಿ ಪ್ರೇಕ್ಷಕರೇ’ ಅಂತ ಅವಲತ್ತುಕೊಂಡದ್ದು, ಇವೆಲ್ಲ ಸುದ್ದಿಗಳಾಗಿ ರಾರಾಜಿಸಿದವು. ಆದ್ರೆ ಈ ಆಂಕರ್‍ಗಳ ಐಲುತನದ ಬಗ್ಗೆ ಹೆಚ್ಚು ಚರ್ಚೆಯೇ ಹುಟ್ಟಿಕೊಳ್ಳಲಿಲ್ಲ. ಅದೇ ದುರಂತದ ಸಂಗತಿ. ನಿರೂಪಣೆ ತನ್ನ ಸೊಗಸು ಕಳಕೊಂಡು ಅದ್ಯಾವ ಘಳಿಗೆಯಲ್ಲಿ ಆಂಕರಿಂಗ್‍ನ ಅರೆಬೆಂದ ರೂಪ ಪಡೆಯಿತೋ ಆಗಿನಿಂದ ಅವರ ಅಧ್ವಾನಗಳನ್ನು ನೋಡಲಾಗುತ್ತಿಲ್ಲ. ಇತ್ತೀಚೆಗೆ ಈ ಆಂಕರ್‍ಗಳಿಗೆ ಸ್ಟಾರ್‍ಗಿರಿಯ ಭ್ರಮೆಯೂ ಶುರುವಾಗಿದ್ದು ಅವರ ಅವತಾರಗಳಿಗೆ ಲಂಗು ಲಗಾಮೇ ಇಲ್ಲದಂತಾಗಿದೆ. ಆಂಕರ್‍ಗಳ ಇಂಥಾ ಅಸಂಬಂದ್ಧ ಐಲಾಟ ಇದೇ ಮೊದಲೇನಲ್ಲ. ಯುವನಟಿ ರಶ್ಮಿಕಾ ಮಂದಣ್ಣಗೆ `ಕನ್ನಡದಲ್ಲಿ ಶೋ ಆಫ್ ನಟ ಅಂತ ನೀವು ಯಾರನ್ನ ಕರೀತಿರಿ?’ ಅನ್ನೋ ಪ್ರಶ್ನೆ ಹಾಕಿದ್ದ ಆಂಕರ್, ಆಕೆಗೆ ಇಷ್ಟವಿಲ್ಲದಿದ್ದರೂ ಒತ್ತಾಯಿಸಿ `ಯಶ್’ ಎಂಬ ಉತ್ತರ ಹೊರಬರುವಂತೆ ಮಾಡಿದ್ದ. ಪಾಪಾ, ಆಕೆ ಆಮೇಲೆ ಹಲವರ ವಿರೋಧ ಎದುರಿಸಬೇಕಾಯ್ತು. ಅದೇರೀತಿ ಆ್ಯಂಕರಿಂಗ್ ದೊರೆ ಬಿಗ್‍ಬಾಸ್ ಸಂಜನಾಗೆ `ನಿಮ್ಮ ಪ್ರಕಾರ ‘ಬಿಲ್ಡಪ್’ ನಟ ಯಾರು?’ ಅಂತ ಕೇಳಿ, ಅವಳ ಬಾಯಿಂದ ದರ್ಶನ್ ಹೆಸರು ಹೊರಬರುವಂತೆ ಮಾಡಿದ್ದ. ಅದೂ ವಿವಾದವಾಗಿತ್ತು. ಇಂಥಾ ಅದೆಷ್ಟೊ ನಿದರ್ಶನಗಳು ಸಿಗುತ್ತವೆ.

ವಿವಾದ ಸೃಷ್ಟಿಸೋದು, ಮತ್ತೊಬ್ಬರನ್ನು ಹೀಗಳೆಯೋದೇ ಆ್ಯಂಕರಿಂಗ್ ಅಂದುಕೊಂಡಿರೋ ಇವರಿಗೆ ನಿರೂಪಣೆಯ ವ್ಯಾಕರಣ ಅರ್ಥವಾಗೋದು ಕಷ್ಟ. ಆದ್ರೆ, ಕಡೇಪಕ್ಷ ತಾವಾಡುವ ಮಾತುಗಳಲ್ಲಿ ಒಂದಷ್ಟು ಕಾಮನ್‍ಸೆನ್ಸ್ ಇರಬೇಕು ಅನ್ನೋ ಪ್ರಜ್ಞೇನಾದ್ರು ಇವರು ಬೆಳೆಸಿಕೊಳ್ಳಬೇಕಿದೆ. ಅಂದಹಾಗೆ, ಇದೆಲ್ಲಾ ನಮ್ಮ ಎಂಟರ್‍ಟೈನ್‍ಮೆಂಟ್ ಚಾನೆಲ್ ಆ್ಯಂಕರ್‍ಗಳ ಐಲಾಟವಾಯ್ತು. ಇನ್ನು ನ್ಯೂಸ್ ಚಾನೆಲ್ ಆ್ಯಂಕರ್‍ಗಳ ಐಲಾಟಕ್ಕೆ ಹೋದ್ರೆ, ಬೆಂಗ್ಳೂರಲ್ಲಿ ಪ್ರಳಯವೇ ಆಗ್ಬಿಡುತ್ತೆ. ಬೇಡ ಬಿಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...