Homeಸಿನಿಮಾಸಿನಿ ಸುದ್ದಿಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

ಹಲೋ ಆಂಕರ್ಸ್, ಕೊಂಚ ಸೆನ್ಸ್ ಬೆಳೆಸಿಕೊಳ್ತೀರಾ..

- Advertisement -
- Advertisement -

ರಂಗಿತರಂಗ, ಕಳೆದ ವರ್ಷದ ಅತ್ಯದ್ಭುತ ಸಿನಿಮಾಗಳಲ್ಲಿ ಒಂದು. ಆ ತಂಡದ ಮೇಲೆ ಭರವಸೆಯನ್ನೂ ಹೆಚ್ಚಿಸಿದ್ದ ಸಿನಿಮಾ ಅದು. ಆದರೀಗ ರೇಡಿಯೋ ಆಂಕರಮ್ಮ ಮಾಡಿದ ಯಡವಟ್ಟಿಗೆ ಇಡೀ ತಂಡ ತಮ್ಮ ಪ್ರತಿಭೆಯ ಕ್ವಾಲಿಟಿಗೆ ಮಸಿ ಬಳಿಸಿಕೊಂಡು ಮರುಗುತ್ತಿದೆ. ಆಕ್ಚುಯಲಿ ಏನಾಗಿದೆ ಅಂದ್ರೆ, ಮೊನ್ನೆ ಈ ತಂಡದ ಹೊಸ ಸಿನಿಮಾ ರಾಜರಥಾ ಬಿಡುಗಡೆಯಾಗಿತ್ತು. ಸಿನಿಮಾದ ಪ್ರಚಾರಕ್ಕೆಂದು ರಪರಪ ರ್ಯಾಪಿಡಮ್ಮ ಅರ್ಥಾತ್ ರ್ಯಾಪಿಡ್ ರಶುಮಮ್ಮನ ರೇಡಿಯೋ ಶೋನಲ್ಲಿ ತಂಡ ಕೂತಿತ್ತು. ಉಸಿರು ಬಿಗಿಹಿಡಿದಂತೆ ಒಂದೇಸಮನೆ ಮಾತಾಡೋದು ಬಿಟ್ಟು ತಮಗೊಂದು ಸೆನ್ಸಿಬಲ್ ಹೊಣೆ ಇದೆ ಅನ್ನೋದನ್ನೇ ಮರೆತ ಆ್ಯಂಕರ್ ಪರಂಪರೆಯ ರ್ಯಾಪಿಡ್ ರಶ್ಮಿ `ನಿಮ್ಮ ರಾಜರಥಾ ಸಿನಿಮಾವನ್ನು ನೋಡದಿರೋ ಪ್ರೇಕ್ಷಕರನ್ನು ನೀವು ಏನಂತ ಕರೀತೀರಾ?’ ಅನ್ನೋ ಅಸಂಬಂದ್ಧ ಪ್ರಶ್ನೆ ಎಸೆದಿದ್ದಳು. ಒಂದು ಸಿನಿಮಾ ರಿಲೀಸ್ ಆಯ್ತು ಅಂದ್ರೆ ಅದನ್ನು ಎಲ್ಲರು ನೋಡ್ಲೇಬೇಕಾ, ಹಾಗೊಮ್ಮೆ ನೋಡದೆ ಇದ್ರೆ ಅವರಲ್ಲಿ ಏನೊ ಡಿಫೆಕ್ಟ್ ಇದೆ ಅಂತ ಅಂದ್ಕೋಬೇಕಾ… ವಿಚಿತ್ರವಾಗಿದೆ ಆಯಮ್ಮನ ವಾದ. ಹೋಗ್ಲಿ, ಚಿತ್ರತಂಡವಾದರು ಈ ಪ್ರಶ್ನೆಯ ಅಸಂಬದ್ಧತೆಯನ್ನ ಅರ್ಥ ಮಾಡಿಕೊಂಡು ಆಂಕಂರಮ್ಮನನ್ನ ತಿದ್ದಬಹುದಿತ್ತು. ಅದರ ಬದಲಿಗೆ `ಈ ಸಿನಿಮಾ ನೋಡ್ದೇ ಇರೋರು ಕಚಡಾ ನನ್ಮಕ್ಕಳು’ ಅಂದುಬಿಡೋದಾ?.

ಆ ಒಂದು ಹೇಳಿಕೆ ಹೊಸಬರ ತಂಡದ ಮೇಲಿದ್ದ ಸಭ್ಯತೆಯ ನಿರೀಕ್ಷೆಗಳನ್ನೆಲ್ಲ ಧ್ವಂಸ ಮಾಡಿದ್ದಲ್ಲದೆ, ಹೈಗ್ರೌಂಡ್ಸ್ ಪೊಲೀಸ್ ಸ್ಟೇಷನ್‍ನಲ್ಲಿ ಪುಕ್ಕಟೆ ಕೇಸ್ ಕೂಡಾ ಅವರ ಹೆಗಲೇರುವಂತೆ ಮಾಡಿದೆ. ಅದೊಂದು ವಿವಾದವಾಗಿ ಬೆಳೆದದ್ದು, ಸಾರಾ ಗೋವಿಂದು ರಾಜಿಪಂಚಾಯ್ತಿಯಲ್ಲಿ ಅವರೆಲ್ಲ `ಸೋ, ಸಾರಿ ಪ್ರೇಕ್ಷಕರೇ’ ಅಂತ ಅವಲತ್ತುಕೊಂಡದ್ದು, ಇವೆಲ್ಲ ಸುದ್ದಿಗಳಾಗಿ ರಾರಾಜಿಸಿದವು. ಆದ್ರೆ ಈ ಆಂಕರ್‍ಗಳ ಐಲುತನದ ಬಗ್ಗೆ ಹೆಚ್ಚು ಚರ್ಚೆಯೇ ಹುಟ್ಟಿಕೊಳ್ಳಲಿಲ್ಲ. ಅದೇ ದುರಂತದ ಸಂಗತಿ. ನಿರೂಪಣೆ ತನ್ನ ಸೊಗಸು ಕಳಕೊಂಡು ಅದ್ಯಾವ ಘಳಿಗೆಯಲ್ಲಿ ಆಂಕರಿಂಗ್‍ನ ಅರೆಬೆಂದ ರೂಪ ಪಡೆಯಿತೋ ಆಗಿನಿಂದ ಅವರ ಅಧ್ವಾನಗಳನ್ನು ನೋಡಲಾಗುತ್ತಿಲ್ಲ. ಇತ್ತೀಚೆಗೆ ಈ ಆಂಕರ್‍ಗಳಿಗೆ ಸ್ಟಾರ್‍ಗಿರಿಯ ಭ್ರಮೆಯೂ ಶುರುವಾಗಿದ್ದು ಅವರ ಅವತಾರಗಳಿಗೆ ಲಂಗು ಲಗಾಮೇ ಇಲ್ಲದಂತಾಗಿದೆ. ಆಂಕರ್‍ಗಳ ಇಂಥಾ ಅಸಂಬಂದ್ಧ ಐಲಾಟ ಇದೇ ಮೊದಲೇನಲ್ಲ. ಯುವನಟಿ ರಶ್ಮಿಕಾ ಮಂದಣ್ಣಗೆ `ಕನ್ನಡದಲ್ಲಿ ಶೋ ಆಫ್ ನಟ ಅಂತ ನೀವು ಯಾರನ್ನ ಕರೀತಿರಿ?’ ಅನ್ನೋ ಪ್ರಶ್ನೆ ಹಾಕಿದ್ದ ಆಂಕರ್, ಆಕೆಗೆ ಇಷ್ಟವಿಲ್ಲದಿದ್ದರೂ ಒತ್ತಾಯಿಸಿ `ಯಶ್’ ಎಂಬ ಉತ್ತರ ಹೊರಬರುವಂತೆ ಮಾಡಿದ್ದ. ಪಾಪಾ, ಆಕೆ ಆಮೇಲೆ ಹಲವರ ವಿರೋಧ ಎದುರಿಸಬೇಕಾಯ್ತು. ಅದೇರೀತಿ ಆ್ಯಂಕರಿಂಗ್ ದೊರೆ ಬಿಗ್‍ಬಾಸ್ ಸಂಜನಾಗೆ `ನಿಮ್ಮ ಪ್ರಕಾರ ‘ಬಿಲ್ಡಪ್’ ನಟ ಯಾರು?’ ಅಂತ ಕೇಳಿ, ಅವಳ ಬಾಯಿಂದ ದರ್ಶನ್ ಹೆಸರು ಹೊರಬರುವಂತೆ ಮಾಡಿದ್ದ. ಅದೂ ವಿವಾದವಾಗಿತ್ತು. ಇಂಥಾ ಅದೆಷ್ಟೊ ನಿದರ್ಶನಗಳು ಸಿಗುತ್ತವೆ.

ವಿವಾದ ಸೃಷ್ಟಿಸೋದು, ಮತ್ತೊಬ್ಬರನ್ನು ಹೀಗಳೆಯೋದೇ ಆ್ಯಂಕರಿಂಗ್ ಅಂದುಕೊಂಡಿರೋ ಇವರಿಗೆ ನಿರೂಪಣೆಯ ವ್ಯಾಕರಣ ಅರ್ಥವಾಗೋದು ಕಷ್ಟ. ಆದ್ರೆ, ಕಡೇಪಕ್ಷ ತಾವಾಡುವ ಮಾತುಗಳಲ್ಲಿ ಒಂದಷ್ಟು ಕಾಮನ್‍ಸೆನ್ಸ್ ಇರಬೇಕು ಅನ್ನೋ ಪ್ರಜ್ಞೇನಾದ್ರು ಇವರು ಬೆಳೆಸಿಕೊಳ್ಳಬೇಕಿದೆ. ಅಂದಹಾಗೆ, ಇದೆಲ್ಲಾ ನಮ್ಮ ಎಂಟರ್‍ಟೈನ್‍ಮೆಂಟ್ ಚಾನೆಲ್ ಆ್ಯಂಕರ್‍ಗಳ ಐಲಾಟವಾಯ್ತು. ಇನ್ನು ನ್ಯೂಸ್ ಚಾನೆಲ್ ಆ್ಯಂಕರ್‍ಗಳ ಐಲಾಟಕ್ಕೆ ಹೋದ್ರೆ, ಬೆಂಗ್ಳೂರಲ್ಲಿ ಪ್ರಳಯವೇ ಆಗ್ಬಿಡುತ್ತೆ. ಬೇಡ ಬಿಡಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...