Homeರಾಜಕೀಯಹಾಸನ: ಇಲ್ಲಿ ಜೆಡಿಎಸ್ ಭದ್ರ

ಹಾಸನ: ಇಲ್ಲಿ ಜೆಡಿಎಸ್ ಭದ್ರ

- Advertisement -
- Advertisement -
  • ಆಕಾಶ್ ಕೆರೆಕಟ್ಟೆ |

ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹಾಸನದಲ್ಲಿ ಕಾವು ಹೆಚ್ಚುತ್ತಿವೆ. ಏಳು ಕ್ಷೇತ್ರಗಳ ಪೈಕಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇರ ಎದುರಾಳಿಗಳಾಗಿರುವುದು ನಾಲ್ಕು ಕ್ಷೇತ್ರಗಳಲ್ಲಿ. ಇನ್ನು ಮೂರು ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ತೀವ್ರ ಪೈಪೋಟಿ ಕೊಡುವ ಮಟ್ಟಿಗೆ ತನ್ನ ಪಡೆಯನ್ನು ಸಿದ್ಧಪಡಿಸಿಕೊಂಡಿದೆ.

ರೇವಣ್ಣ

ಮಾಜಿ ಪ್ರಧಾನಿ ದೇವೇಗೌಡರು ಆರು ಬಾರಿ ಪ್ರತಿನಿಧಿಸಿದ್ದ ಹೊಳೆನರಸೀಪುರ ಕ್ಷೇತ್ರ ಇಬ್ಬರು ಪ್ರಬಲ ಎದುರಾಳಿಗಳ ಕಾರಣದಿಂದ ರಾಜ್ಯದ ಗಮನ ಸೆಳೆದಿದೆ. ದೇವೇಗೌಡರ ಮಗ ಹಾಗೂ ಮಾಜಿ ಮಂತ್ರಿ ಎಚ್.ಡಿ.ರೇವಣ್ಣ, ಕಾಂಗ್ರೆಸ್‍ನ ಬಿ.ಪಿ.ಮಂಜೇಗೌಡರ ವಿರುದ್ಧ ಸೆಣೆಸುತ್ತಿದ್ದಾರೆ. ಕ್ಷೇತ್ರಕ್ಕೆ ಹೊಸಮುಖವಾದ ಮಂಜೇಗೌಡ ಪಕ್ಷದ ಹಿರಿಯ ನೇತಾರರ ಬೆಂಬಲದಿಂದ ಪ್ರಬಲ ಪೈಪೋಟಿ ಕೊಡುತ್ತಿದ್ದಾರೆ. ಅವರ ಸ್ಪರ್ಧೆಗೆ ಮಹತ್ವ ಸಿಕ್ಕಿದ್ದೇ ರೇವಣ್ಣನ ಪ್ರತಿಕ್ರಿಯೆಗಳಿಂದ. ಸಾರಿಗೆ ಇಲಾಖೆಯ ನೌಕರನಾಗಿದ್ದ ಮಂಜೇಗೌಡ ಕೆಲಸಕ್ಕೆ ರಾಜೀನಾಮೆ ನೀಡಿ ಚುನಾವಣಾ ಕಣ ಪ್ರವೇಶಿಸುವ ಮೊದಲೇ, ರೇವಣ್ಣ ಆತನ ವಿರುದ್ಧ ಟೀಕೆಗೆ ಇಳಿದರು. ಆತನ ರಾಜೀನಾಮೆಯನ್ನು ಸರಕಾರ ಒಪ್ಪಬಾರದು ಎಂದು ಒತ್ತಾಯಿಸಿದರು. ಕೊನೆಗೆ ಸರಕಾರ ರಾಜೀನಾಮೆ ಒಪ್ಪಿದ ಮೇಲೆ, ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಹಾಗಾಗಿ, ಮಂಜೇಗೌಡ ಅಂಕಣ ಪ್ರವೇಶಿಸುವ ಮೊದಲೇ ರೇವಣ್ಣ ಆತನಿಗೆ ‘ಪ್ರಬಲ ಪ್ರತಿಸ್ಪರ್ಧಿ’ ಎಂಬ ಪಟ್ಟ ದಯಪಾಲಿಸಿದ್ದರು.

ಮಂಜೇಗೌಡ

ಪ್ರಚಾರದ ವೇಳೆ ಅಲ್ಲಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಮುಖಾಮುಖಿಯಾಗುತ್ತಿದ್ದಾರೆ. ಬಿರುಸಿನ ಮಾತುಕತೆ, ಕೈ ಮಿಲಾಯಿಸುವ ಮಟ್ಟಕ್ಕೆ ಘಟನೆಗಳು ನಡೆದಿವೆ. ರೇವಣ್ಣನ ಮಡದಿ ಭವಾನಿ, ಮಕ್ಕಳು ಪ್ರಜ್ವಲ್ ಹಾಗೂ ಸೂರಜ್ ಕ್ಷೇತ್ರದಲ್ಲಿ ಬಿಡುವಿಲ್ಲದೆ ಓಡಾಡುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಪ್ರಜ್ವಲ್ ಅಪ್ಪನ ಕ್ಷೇತ್ರ ಅಷ್ಟೇ ಅಲ್ಲದೆ ಬೇರೆಡೆಯೂ ಪ್ರಚಾರ ಮಾಡಿದ್ದರು. ಆದರೆ ಈಗ ಅವರು ತಮ್ಮ ಶ್ರಮವನ್ನು ಸಂಪೂರ್ಣವಾಗಿ ಅಪ್ಪನ ಕ್ಷೇತ್ರಕ್ಕೆ ಸೀಮಿತಗೊಳಿಸಿದಂತೆ ಕಾಣುತ್ತಿದೆ. ಅತ್ತ ಕಾಂಗ್ರೆಸ್ ಪಾಳಯದಲ್ಲಿ ಪಕ್ಷದ ಬೆಂಬಲದ ಜೊತೆಗೆ ಈ ಹಿಂದೆ ಎರಡು ಬಾರಿ ಸ್ಪರ್ಧಿಸಿ ಗಮನಾರ್ಹ ಮತ ಗಳಿಸಿದ್ದ ಮಾಜಿ ಮಂತ್ರಿ ಜಿ.ಪುಟ್ಟಸ್ವಾಮಿಗೌಡರ ಸೊಸೆ ಅನುಪಮ ಮಹೇಶ್ ಅವರ ಬೆಂಬಲ ಕೂಡ ಮಂಜೇಗೌಡರಿಗಿದೆ. ಆದರೂ ರೇವಣ್ಣನ ಪ್ರಾಬಲ್ಯಕ್ಕೇ ಮತದಾರರು ಜೈ ಎನ್ನುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿ ಲೆಕ್ಕಕ್ಕೂ ಇಲ್ಲ, ಆಟಕ್ಕೂ ಇಲ್ಲ.

ಎ ಮಂಜು

ಜಿಲ್ಲಾ ಮಂತ್ರಿ ಎ.ಮಂಜು (ಕಾಂಗ್ರೆಸ್) ಪ್ರತಿನಿಧಿಸುವ ಅರಕಲಗೂಡು ಕ್ಷೇತ್ರದಲ್ಲಿ ಎರಡು ಬಾರಿ ಸೋಲು ಅನುಭವಿಸಿದ್ದ ಎ.ಟಿ.ರಾಮಸ್ವಾಮಿ (ಜೆಡಿಎಸ್) ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ‘ಒಳ್ಳೆಯ ಮನುಷ್ಯ’ ಎಂಬ ಮೆಚ್ಚುಗೆಯ ಮಾತುಗಳಿಗೆ ಪಾತ್ರರಾಗಿರುವ ರಾಮಸ್ವಾಮಿ ಎದುರಾಳಿಯ ತಂತ್ರಗಳಿಗೆ ಸೆಡ್ಡು ಹೊಡೆಯುತ್ತಾರಾ ಎನ್ನುವುದೇ ಪ್ರಶ್ನೆ. ಇವರಿಬ್ಬರ ಜೊತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಯೋಗಾರಮೇಶ್ ಕೂಡಾ ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ. ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂವತ್ತೆರಡು ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ಅವರು ಅಂದಿನಂತೆ ಈ ಬಾರಿಯೂ ಪ್ರಬಲ ಪೈಪೋಟಿ ನೀಡಿ ಸಾಂಪ್ರದಾಯಿಕ ಜೆಡಿಎಸ್ ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ.

ಎಚ್.ಎಸ್. ಪ್ರಕಾಶ್

ಹಾಸನದಲ್ಲಿ ಮೂವರು ಗಂಭೀರ ಅಭ್ಯರ್ಥಿಗಳಿದ್ದಾರೆ. ಜೆಡಿಎಸ್‍ನ ಎಚ್.ಎಸ್.ಪ್ರಕಾಶ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಂದ ಪೈಪೋಟಿ ಎದುರಿಸುತ್ತಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಮಹೇಶ್ ಮತ್ತು ಬಿಜೆಪಿಯ ಪ್ರೀತಂ ಗೌಡ ಅವರ ಪ್ರಬಲ ಪೈಪೋಟಿಯಿಂದ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ. ಬಿಜೆಪಿ ಅಭ್ಯರ್ಥಿ ಗೆಲುವಿನ ಹಂತಕ್ಕೆ ತಲುಪುತ್ತಾರೋ ಇಲ್ಲವೋ, ಆದರೆ ಗಮನಾರ್ಹ ಮತಗಳನ್ನಂತೂ ಪಡೆಯುತ್ತಾರೆ ಎನ್ನುವುದು ಸದ್ಯದ ಲೆಕ್ಕಾಚಾರ. ಅವರ ಮತಗಳಿಕೆ ಫಲಿತಾಂಶ ನಿರ್ಧರಿಸಲಿದೆ. ಕಾಂಗ್ರೆಸ್ ತನ್ನ ರಾಜ್ಯಮಟ್ಟದ ತಂತ್ರಗಾರಿಕೆಯ ಕಾರಣಕ್ಕೆ ಮುಸ್ಲಿಂ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಸಾಧ್ಯತೆ ಇದೆ. ಆದರೆ ದೇವೇಗೌಡರು ಮತದಾನದ ಹಿಂದಿನ ಎರಡು ದಿನಗಳ ಕಾಲ ಒಂದು ಸುತ್ತು ಬಂದು ಬದಲಾವಣೆ ಮಾಡುವ ಸಾಮಥ್ರ್ಯ ಉಳ್ಳವರು. ಎಲ್ಲಾ ಅಭ್ಯರ್ಥಿಗಳು ಆ ಎರಡು ದಿನಗಳಿಗಾಗಿ ಕಾಯುತ್ತಿದ್ದಾರೆ. ಹಿಂದಿನಂತೆ ದೇವೇಗೌಡರು ಪ್ರಭಾವ ಬೀರುವಲ್ಲಿ ಯಶಸ್ವಿಯಾದರೆ ಜೆಡಿಎಸ್ ಮತ್ತೆ ಬಾವುಟ ಹಾರಿಸುವಲ್ಲಿ ಸಂಶಯವಿಲ್ಲ.

ಎ.ಟಿ.ರಾಮಸ್ವಾಮಿ

ಶ್ರವಣಬೆಳಗೊಳ ಮತ್ತು ಅರಸೀಕೆರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ಇದ್ದಂತಿಲ್ಲ. ಅರಸೀಕೆರೆಯಲ್ಲಿ ಕುಡಿವ ನೀರು ಪೂರೈಕೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮ ಮಾಡಿ ಖ್ಯಾತಿ ಹೊಂದಿರುವ ಕೆ.ಎಂ.ಶಿವಲಿಂಗೇಗೌಡರ ಎದುರು ಕಾಂಗ್ರೆಸ್ ಅಭ್ಯರ್ಥಿ ಶಶಿಧರ್ ದುರ್ಬಲರಾಗಿ ಕಾಣುತ್ತಾರೆ. ಶ್ರವಣಬೆಳಗೊಳದಲ್ಲಿ ಕಾಂಗ್ರೆಸ್‍ನ ಸಿ.ಎಸ್.ಪುಟ್ಟೇಗೌಡರು ಕಳೆದ ಬಾರಿಯಂತೆಯೇ ಸೋಲು ಅನುಭವಿಸಬಹುದು. ಜೆಡಿಎಸ್‍ನ ಸಿ.ಎನ್.ಬಾಲಕೃಷ್ಣ ಗೆಲ್ಲುವ ಸಾಧ್ಯತೆಗಳಿವೆ.

ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ನಾರ್ವೆ ಸೋಮಶೇಖರ್ ಚುನಾವಣೆ ಘೋಷಣೆಗೆ ಮೊದಲೇ ಅಲೆ ಎಬ್ಬಿಸಿದ್ದರು. ಹೇರಳವಾಗಿ ಹಣ ಖರ್ಚು ಮಾಡಿ ಪಾರ್ಟಿ ಮಾಡಿದ್ದರು. ಅವರ ಕ್ರಿಮಿನಲ್ ಹಿನ್ನೆಲೆ ಹೊರತಾಗಿಯೂ ಈ ಮೀಸಲು ಕ್ಷೇತ್ರದ ಮೇಲ್ವರ್ಗಗಳು ಅವರನ್ನು ಬೆಂಬಲಿಸುತ್ತಿವೆ. ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರು ‘ಸ್ಪೃಶ್ಯ’ ಸಮುದಾಯಕ್ಕೆ ಸೇರಿದವರು. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿರುವ ಅಸ್ಪೃಶ್ಯರು ಅವರನ್ನು ಬೆಂಬಲಿಸುವುದು ಅಷ್ಟಕಷ್ಟೆ. ಕಾಂಗ್ರೆಸ್ ಕೊನೆಕ್ಷಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯನವರನ್ನು ಕಣಕ್ಕೆ ತಂದರು. ಅವರು ಬಂದಿದ್ದು ತಡವಾಯ್ತು, ಹಾಗಾಗಿ ಕ್ಷೇತ್ರವನ್ನು ಪರಿಚಯ ಮಾಡಿಕೊಳ್ಳುವುದರಲ್ಲಿಯೇ ಅವರಿಗೆ ಸಾಕಷ್ಟು ಸಮಯ ಬೇಕಾಗಿದೆ. ಈ ಎಲ್ಲಾ ಕಾರಣಗಳಿಗೆ ಮತದಾರ ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿಯವರನ್ನು ಬೆಂಬಲಿಸುವ ಸಾಧ್ಯತೆ ಇದೆ. ಹೇಗೂ ದೇವೇಗೌಡರ ಕಾರಣಕ್ಕೆ ಮೇಲ್ವರ್ಗದ ಮತಗಳಲ್ಲಿ ದೊಡ್ಡ ಮೊತ್ತ ಅವರ ಪಾಲಾಗಬಹುದು.

ಜೆಡಿಎಸ್ ಪಕ್ಷ ಬಿಎಸ್‍ಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರೂ, ಹಾಸನದ ಮಟ್ಟಿಗೆ ಅದರ ಪರಿಣಾಮ ನಗಣ್ಯ. ಮೇಲಾಗಿ ಈ ಜಿಲ್ಲೆಯಲ್ಲಿ ಬಿಎಸ್‍ಪಿ ಪ್ರತಿನಿಧಿಸುವ ದಲಿತರು ದಬ್ಬಾಳಿಕೆ ಅನುಭವಿಸುತ್ತಿರುವುದೇ ಜೆಡಿಎಸ್ ಜೊತೆ ಪ್ರಬಲವಾಗಿ ಗುರುತಿಸಿಕೊಂಡಿರುವ ಸಮುದಾಯದಿಂದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...