Homeಕರ್ನಾಟಕಹಿಂದಿ ಹೇರಿಕೆಯ ವಿರುದ್ಧ ಜೂನ್ 4ರಂದು ಟ್ವಿಟ್ಟರ್ ಅಭಿಯಾನಕ್ಕೆ ಕರೆ

ಹಿಂದಿ ಹೇರಿಕೆಯ ವಿರುದ್ಧ ಜೂನ್ 4ರಂದು ಟ್ವಿಟ್ಟರ್ ಅಭಿಯಾನಕ್ಕೆ ಕರೆ

ಹೊಸ ಶಿಕ್ಷಣ ನೀತಿಯ ಮೂಲಕ ಹಿಂದಿ ಹೇರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ಅಭಿಯಾನ ನಡೆಸಲು ಕನ್ನಡಪರ ಹೋರಾಟಗಾರರು ನಿರ್ಧರಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಶಿಕ್ಷಣ ನೀತಿಯ ಮೂಲಕ ಹಿಂದಿ ಹೇರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಟ್ವಿಟ್ಟರ್ ಅಭಿಯಾನ ನಡೆಸಲು ಕನ್ನಡಪರ ಹೋರಾಟಗಾರರು ನಿರ್ಧರಿಸಿದ್ದಾರೆ. ಇದೇ ಮಂಗಳವಾರ ಜೂನ್ 4 ರಂದು ಸಂಜೆ 6 ಗಂಟೆಗೆ #KarnatakaAgainstHindiImposition ಹ್ಯಾಷ್ ಟ್ಯಾಗ್ ಬಳಸಿ ಟ್ವಿಟ್ಟರ್ ಟ್ರೆಂಡ್ ಮಾಡಲು ಕರೆ ನೀಡಲಾಗಿದೆ.

ಈ ಹೊತ್ತಿನವರೆಗೆ ಆರನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಮಾತ್ರ ಹಿಂದಿ ಕಲಿಕೆ ಇದೆ. ಹತ್ತನೇ ತರಗತಿಯ ಮೂರು ಭಾಷೆಗಳಲ್ಲಿ ಯಾವುದೇ ಎರಡು ಭಾಷೆಗಳಲ್ಲಿ ಮಗು ಉತ್ತೀರ್ಣವಾದರೆ ಮೂರನೇ (ಅದು ಬಹುತೇಕ ಹಿಂದಿಯೇ ಆಗಿರುತ್ತದೆ) ಭಾಷೆಯಲ್ಲಿ ಫೇಲಾದರೂ ಉತ್ತೀರ್ಣವೆಂದೇ ಪರಿಗಣಿಸುವ ನಿಯಯವೊಂದಿತ್ತು. (ಈಗ ಕಳೆದೆರಡು- ಮೂರು ವರ್ಷಗಳಲ್ಲಿ ಈ ನಿಯಮವನ್ನೂ ಬದಲಿಸಿದ್ದಾರೆಂದು ಹೇಳಲಾಗುತ್ತಿದೆ) ಈಗಿನ ಕರಡು ಹೇಳುವ ಪ್ರಕಾರ ಕೆಜಿಯಿಂದ ಹಿಡಿದು 12ನೇ ವಯಸ್ಸಿನವರೆಗೆ ಹಿಂದಿ ಕಡ್ಡಾಯ.

ಅಂದರೆ ಮೊದಲು 12 ವಯಸ್ಸಿನಿಂದ ಆರಂಭವಾಗುತ್ತಿದ್ದ ಹಿಂದಿ ಕಲಿಕೆ ಈಗ ನಾಲ್ಕನೇ ವರ್ಷಕ್ಕೆ ಹಿಂತಳ್ಳಲ್ಪಡುತ್ತದೆ. ಹಾಗೆಯೇ 10ನೇ ತರಗತಿ ನಂತರ ಹಿಂದಿಯನ್ನು ಭಾಷೆಗಳ ಪಟ್ಟಿಯಲ್ಲಿ ಆಯ್ಕೆಯಾಗಿ ಮಾತ್ರ ಬೋಧಿಸಲಾಗುತ್ತಿತ್ತು. ಇನ್ನು ಮುಂದೆ ಕಡ್ಡಾಯವಾಗಿ ಬೋಧಿಸಬೇಕು ಎಂದಾಗುತ್ತದೆ. ಹಾಗೆ ಕಡ್ಡಾಯ ಮಾಡುವುದಾದರೆ ಪಿಯು ಹಂತದಲ್ಲಿ ಮೂರು ಭಾಷೆಗಳಾಗುತ್ತವೆ, ಇಲ್ಲವೇ ಈಗಿರುವ ಕನ್ನಡ, ಇಂಗ್ಲಿಷ್ ಎರಡರಲ್ಲಿ ಒಂದನ್ನು ಕೈ ಬಿಡಬೇಕಾಗುತ್ತದೆ. ಅಂಥ ಸಂದರ್ಭ ಬಂದರೆ ಖಂಡಿತವಾಗಿ ಕನ್ನಡವನ್ನೇ ಕೈಬಿಡಲಾಗುತ್ತದೆ. ಹಿಂದಿ ಆ ಸ್ಥಾನದಲ್ಲಿ ವಿರಾಜಮಾನವಾಗಲಿದೆ ಎಂದು ಫೇಸ್ ಬುಕ್ ನಲ್ಲಿ ರೋಹಿತ್ ಅಗಸರಹಳ್ಳಿ ವಿವರಿಸಿದ್ದಾರೆ.

ತಮಿಳುನಾಡಿನಲ್ಲಿ ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಂಡಿಲ್ಲ. ಹಾಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಬಿಟ್ಟ ತಕ್ಷಣವೇ ಅವರು ಹಿಂದಿ ಹೇರಿಕೆಯ ವಿರುದ್ಧ ತೀವ್ರವಾಗಿ ಹೋರಾಟ ನಡೆಸಿದರು. ಜೂನ್ ಒಂದರಂದೆ ತಮಿಳುನಾಡಿನಲ್ಲಿ #StopHindiImposition ಹ್ಯಾಷ್ ಟ್ಯಾಗ್ ಬಳಸಿ ಟ್ವಿಟ್ಟರ್ ಟ್ರೆಂಡ್ ಮಾಡಲಾಗಿತ್ತು. ಇದಕ್ಕೆ ಬೆದರಿದ ಕೇಂದ್ರ ಸರ್ಕಾರ ನಾವು ಹಿಂದಿ ಹೇರುತ್ತಿಲ್ಲ, ಒಂದು ಆಯ್ಕೆಯಾಗಿ ಮುಂದಿಟ್ಟಿದ್ದೇವೆ ಎಂದು ಸಬೂಬು ಹೇಳಿತ್ತು.

ಈಗ ಕರ್ನಾಟಕದಲ್ಲಿ ಹಿಂದಿ ಹೇರಿಕೆಯ ವಿಚಾರ ಬಿಸಿಬಿಸಿ ಚರ್ಚೆ ನಡೆಯುತ್ತಿದ್ದು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಸುದ್ದಿಯೆಬ್ಬಿಸಿದೆ. ಇದರ ಬೆನ್ನಲ್ಲೇ ಜೂನ್ 4ರ ಸಂಜೆ 6ಕ್ಕೆ ಟ್ವಿಟ್ಟರ್ ಟ್ರೆಂಡ್‍ಗೆ ಕರೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತ್ರಿಭಾಷಾ ಸೂತ್ರ ಕ್ಕೆ ಸಿಕ್ಕಿಯೇ ನಮ್ಮ ತ್ರೀ ಭಾಷೆಗಳೂ ಎಕ್ಕುಟ್ಟ ಹೋಗಿದ್ದು..ಆ ಕಡೆಗೆ ಇಂಗ್ಲೀಷು ಪರ್ಫೆಕ್ಟ್ ಇಲ್ಲ ಈ ಕಡೆಗೆ ಹಿಂದಿನೂ ಪರ್ಫೆಕ್ಟ ಆಗ್ಲಿಲ್ಲ.ಕೊನೆಗೆ ಉಳ್ಕೊಂಡಿದ್ದು ಒಂದೆ ಭಾಷೆ ಗಂಡು ಮೆಟ್ಟಿನ ಕನ್ನಡ..

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...