Homeಅಂಕಣಗಳುಹಿಂಸೆಯನ್ನು ವಿರೋಧಿಸೋಣ, ಜೊತೆಗೆ.....

ಹಿಂಸೆಯನ್ನು ವಿರೋಧಿಸೋಣ, ಜೊತೆಗೆ…..

- Advertisement -
- Advertisement -

ಗೌರಿ ಲಂಕೇಶ್
ನವೆಂಬರ್ 23, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಹಿಂಸೆ. ಈ ಪದ ವಾಸ್ತವದಲ್ಲಿ ಪಡೆಯುವ ನಾನಾ ಸ್ವರೂಪಗಳ ಬಗ್ಗೆ ಇತ್ತೀಚೆಗೆ ನಾನಾ ಚರ್ಚೆಗಳು ನಡೆದಿವೆ. ನಮ್ಮದು ಅಹಿಂಸಾವಾದವನ್ನು ನಂಬಿರುವ ದೇಶ ಎಂದೇ ಹೇಳಿಕೊಂಡು ಬಂದಿರುವ ಭಾರತದಲ್ಲಿ ಇವತ್ತಿಗೂ ದುರ್ಬಲರ ಮೇಲೆ ದೌರ್ಜನ್ಯ ನಡೆಯಿತ್ತಲೇ ಇದೆ. ಅದನ್ನೆಲ್ಲ ನಮ್ಮ ಸಮಾಜದ ಹುಳುಕುಗಳು ಎಂದು ಹೇಳುತ್ತಾ ಸುಮ್ಮನಿದ್ದವರೆಲ್ಲ, ಯಾವಾಗ ಹಲವರು ಆ ಹುಳುಕುಗಳನ್ನು ನಿವಾರಿಸಲು ಹಿಂಸೆಯೆನಿಸುವ ಮಾರ್ಗಕ್ಕಿಳಿದರೋ, ಆಗ ಈ ಹಿಂಸಾತ್ಮಕ ಮಾರ್ಗಕ್ಕೆ ನಮ್ಮ ಸಮಾಜದಲ್ಲಿ ಜಾಗವಿಲ್ಲ ಎಂದು ಸಿಡಿದೆದ್ದಿದ್ದಾರೆ.
ಹೌದು, ಹಿಂದೆಯನ್ನು ಎಂದಿಗೂ ಸಹಿಸಕೂಡದು. ಆದರೆ ನಮ್ಮ ಕಣ್ಣುಮುಂದೆಯೇ ನಮ್ಮ ಸುತ್ತಲು ನಡೆಯುತ್ತಿರುವ ಹಿಂಸೆಯ ಬಗ್ಗೆ ಯಾಕೆ ಎಲ್ಲರಿಗೂ ಜಾಣ ಕುರುಡು? ಇವತ್ತು ಪ್ರತಿನಿತ್ಯದ ಹಿಂಸೆ ಉದ್ಭವಿಸುತ್ತಿರುವುದು ಆ ಯುವಕರು ಹಿಡಿದಿರುವ ಬಂದೂಕುಗಳಿಂದಲ್ಲ, ಬದಲಾಗಿ ಸಮಾಜದ ಪುರುಷ ಪ್ರಧಾನ ಆಲೋಚನೆ, ಊಳಿಗಮಾನ್ಯ ವ್ಯವಸ್ಥೆ, ಉಳ್ಳವರ ಪರವಾಗಿರುವ ರಾಜಕೀಯ, ಜಾಗತೀಕರಣದಿಂದಾಗುತ್ತಿರುವ ಅನ್ಯಾಯ…. ಇಂಥದೆಲ್ಲ ವಿಭಿನ್ನ ಬಗೆಯ ಹಿಂಸೆಯ ರೂಪಗಳಿಂದ. ಇದು ನಮ್ಮ ಭಾರತೀಯ ಸಮಾಜಕ್ಕೆ ಮಾತ್ರ ಅನ್ವಯಿಸುವುದಿಲ್ಲ, ಬದಲಾಗಿ ಮೇಲೆ ಹೇಳಿದ ಅಂಶಗಳು ಜಾಗತಿಕ ಮಟ್ಟದಲ್ಲೂ ಹಿಂಸೆಯನ್ನು ಹುಟ್ಟುಹಾಕುತ್ತಿದೆ.
ಇತ್ತೀಚೆಗೆ ಪ್ಯಾರಿಸ್ ನಗರದಲ್ಲಿ ಒಂದು ಪ್ರಯೋಗವನ್ನು ನಡೆಸಲಾಯಿತು. ಎಲ್ಲ ರೀತಿಯಲ್ಲೂ ಸಮಾನವಾದ ಅರ್ಹತೆಗಳನ್ನುಳ್ಳ ಎರಡು ಅರ್ಜಿಗಳನ್ನು-ಒಂದರಲ್ಲಿ ಕ್ರಿಶ್ಚಿಯನ್ ಹೆಸರನ್ನು ಹಾಗೂ ಪ್ರತಿಷ್ಠಿತ ಬಡಾವಣೆಯ ವಿಳಾಸವನ್ನು, ಮತ್ತೊಂದರಲ್ಲಿ ಮುಸ್ಲಿಂ ಹೆಸರನ್ನು ಹಾಗೂ ಬಡ-ಮಧ್ಯಮ ವರ್ಗದವರು ವಾಸಿಸುವ ಏರಿಯಾದ ವಿಳಾಸವನ್ನು ನಮೂದಿಸಿ-ಕೆಲಸಕ್ಕೆ ಅಹ್ವಾನಿಸಿದ್ದ ಕಚೇರಿಗಳಿಗೆ ಕಳುಹಿಸಲಾಗಿತ್ತು. ಸ್ವರ್ಗದಂತಹ ಪ್ಯಾರಿಸ್‍ನಲ್ಲೂ ನರಕಗಳಿರುತ್ತವೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕ್ರಿಶ್ಚಿಯನ್ ಹೆಸರಿನ, ಪ್ರತಿಷ್ಠಿತ ಬಡಾವಣೆಯ ಅರ್ಜಿಗೆ ಐದು ಅಹ್ವಾನಗಳು ಬಂದರೆ, ಮುಸ್ಲಿಂ ಹೆಸರಿನ ಬಡವರ್ಗಗಳ ಏರಿಯಾದ ಅರ್ಜಿಗೆ ಒಂದೇ ಒಂದು ಆಹ್ವಾನ ಬಂದಿತ್ತು.
ಇಂಥಾ ಅಸಮಾನತೆಯೂ ಒಂದು ಬಗೆಯ ಹಿಂಸೆ. ಈ ಹಿಂಸೆಯನ್ನು ಅದೆಷ್ಟು ದಿನ ತಾನೆ ಅಹಿಂಸೆಯ ನೆಪದಿಂದ ಸಹಿಸಿಕೊಳ್ಳಲು ಸಾಧ್ಯ. ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಾದಾಗ ಪ್ಯಾರಿಸ್‍ನ ಬಿಸಿರಕ್ತದ ಹುಡುಗರು ಗಲಭೆಗಿಳಿದಿದ್ದಾರೆ. ಆ ಗಲಭೆಗಳನ್ನು ವಿರೋಧಿಸುವುದು ಎಷ್ಟು ಜರೂರೋ, ಆ ಗಲಭೆಗೆ ಕಾರಣವಾದ ನಮ್ಮ ಸಮಾಜದ ಅಂತರ್ಗತ ಹಿಂಸೆಗಳನ್ನು ಹೋಗಲಾಡಿಸಬೇಕಾದ್ದೂ ನಮ್ಮೆಲ್ಲರ ಮೇಲಿರುವ ಹೊಣೆ. ಇಲ್ಲವಾದಲ್ಲಿ ಹಿಂಸೆಯನ್ನು ವಿರೋಧಿಸುವ ಹಕ್ಕನ್ನೇ ನಾವೆಲ್ಲ ಕಳೆದುಕೊಂಡುಬಿಡುತ್ತೇವೆ.
ಅದಕ್ಕೆ ಮೊದಲೇ ಹೇಳಿದ್ದು. ‘ಹಿಂಸೆ’ ಎಂದ ಕೂಡಲೇ “ಸಹಿಸಕೂಡದು” ಎಂದು ಅರಚುವ ಬದಲಾಗಿ ಆ ಹಿಂಸೆಯ ಮೂಲ ಎಲ್ಲಿದೆ ಎಂದು ವಿಶ್ಲೇಷಿಸುವ ಅಗತ್ಯ ಇವತ್ತಿನ ತುರ್ತು ಎಂದು. ಏಕೆಂದರೆ ಪ್ಯಾರಿಸ್‍ಗೆ ಬೆಂಕಿ ಹಚ್ಚಿರುವವರು ಹಿಂಸಾವಾದಿಗಳೂ ಅಲ್ಲ, ಭಯೋತ್ಪಾದಕರೂ ಅಲ್ಲ, ಬದಲಾಗಿ ಅದು ಅಲ್ಲಿನ ವ್ಯವಸ್ಥೆಯಲ್ಲೇ ಅಡಗಿರುವ ಹಿಂಸೆಗೆ ಬಲಿಯಾದವರ ಪ್ರತಿಕ್ರಿಯೆ ಅಷ್ಟೇ. ಇಂತಹ ಪ್ರತಿಕ್ರಿಯೆಯನ್ನು ನಿಷೇಧಾಜ್ಞೆಯಿಂದಾಗಲಿ, ಸ್ಪೆಷಲ್ ಸ್ಕ್ವಾಡ್‍ಗಳಿಂದಾಗಲಿ, ಗೋಲಿಬಾರ್‍ನಿಂದಾಗಲಿ ತಡೆಯಲಾಗುವುದಿಲ್ಲ.
ಇದೆಲ್ಲ ನಾವು ಕೈಕಟ್ಟಿ ಕೂತಿರುವಷ್ಟು ಕಾಲ ನಡೆಯುತ್ತಲೇ ಇರುತ್ತೆ. ಜನರಿಗೆ ಅನ್ಯಾಯದ ಬಗ್ಗೆ ಅರಿವು ಮೂಡಿದ ನಂತರವೂ ಅವರು ಕೈಕಟ್ಟಿ ಕೂತಿರಬೇಕು ಎಂದು ನಿರೀಕ್ಷಿಸಲಾಗುವುದಿಲ್ಲ. ಹಾಗೊಮ್ಮೆ ಅವರು ಪ್ಯಾರಿಸ್ ಯುವಕರಂತೆ ಕಾರ್ಯೋನ್ಮುಖರಾದರೆ ಅವರಿಗೆ ಆಗ ಅಹಿಂಸೆಯ ಪಾಠ ಬೋಧಿಸಲಾಗುವುದಿಲ್ಲ. ಆದ್ದರಿಂದಲೇ ಹಿಂಸೆಯ ವಿವಿಧ ವ್ಯಾಖ್ಯಾನಗಳಿಗಿಂತ ಅದರ ಬೇರು ಎಲ್ಲಿದೆ ಎಂದು ಹುಡುಕಬೇಕಿದೆ. ಈ ಪ್ರಶ್ನೆಯನ್ನು ಗಾಂಧೀಜಿಯವರೂ ನಿರಾಕರಿಸಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...