Homeಅಂಕಣಗಳುಹಿಂಸೆಯನ್ನು ವಿರೋಧಿಸೋಣ, ಜೊತೆಗೆ.....

ಹಿಂಸೆಯನ್ನು ವಿರೋಧಿಸೋಣ, ಜೊತೆಗೆ…..

- Advertisement -
- Advertisement -

ಗೌರಿ ಲಂಕೇಶ್
ನವೆಂಬರ್ 23, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಹಿಂಸೆ. ಈ ಪದ ವಾಸ್ತವದಲ್ಲಿ ಪಡೆಯುವ ನಾನಾ ಸ್ವರೂಪಗಳ ಬಗ್ಗೆ ಇತ್ತೀಚೆಗೆ ನಾನಾ ಚರ್ಚೆಗಳು ನಡೆದಿವೆ. ನಮ್ಮದು ಅಹಿಂಸಾವಾದವನ್ನು ನಂಬಿರುವ ದೇಶ ಎಂದೇ ಹೇಳಿಕೊಂಡು ಬಂದಿರುವ ಭಾರತದಲ್ಲಿ ಇವತ್ತಿಗೂ ದುರ್ಬಲರ ಮೇಲೆ ದೌರ್ಜನ್ಯ ನಡೆಯಿತ್ತಲೇ ಇದೆ. ಅದನ್ನೆಲ್ಲ ನಮ್ಮ ಸಮಾಜದ ಹುಳುಕುಗಳು ಎಂದು ಹೇಳುತ್ತಾ ಸುಮ್ಮನಿದ್ದವರೆಲ್ಲ, ಯಾವಾಗ ಹಲವರು ಆ ಹುಳುಕುಗಳನ್ನು ನಿವಾರಿಸಲು ಹಿಂಸೆಯೆನಿಸುವ ಮಾರ್ಗಕ್ಕಿಳಿದರೋ, ಆಗ ಈ ಹಿಂಸಾತ್ಮಕ ಮಾರ್ಗಕ್ಕೆ ನಮ್ಮ ಸಮಾಜದಲ್ಲಿ ಜಾಗವಿಲ್ಲ ಎಂದು ಸಿಡಿದೆದ್ದಿದ್ದಾರೆ.
ಹೌದು, ಹಿಂದೆಯನ್ನು ಎಂದಿಗೂ ಸಹಿಸಕೂಡದು. ಆದರೆ ನಮ್ಮ ಕಣ್ಣುಮುಂದೆಯೇ ನಮ್ಮ ಸುತ್ತಲು ನಡೆಯುತ್ತಿರುವ ಹಿಂಸೆಯ ಬಗ್ಗೆ ಯಾಕೆ ಎಲ್ಲರಿಗೂ ಜಾಣ ಕುರುಡು? ಇವತ್ತು ಪ್ರತಿನಿತ್ಯದ ಹಿಂಸೆ ಉದ್ಭವಿಸುತ್ತಿರುವುದು ಆ ಯುವಕರು ಹಿಡಿದಿರುವ ಬಂದೂಕುಗಳಿಂದಲ್ಲ, ಬದಲಾಗಿ ಸಮಾಜದ ಪುರುಷ ಪ್ರಧಾನ ಆಲೋಚನೆ, ಊಳಿಗಮಾನ್ಯ ವ್ಯವಸ್ಥೆ, ಉಳ್ಳವರ ಪರವಾಗಿರುವ ರಾಜಕೀಯ, ಜಾಗತೀಕರಣದಿಂದಾಗುತ್ತಿರುವ ಅನ್ಯಾಯ…. ಇಂಥದೆಲ್ಲ ವಿಭಿನ್ನ ಬಗೆಯ ಹಿಂಸೆಯ ರೂಪಗಳಿಂದ. ಇದು ನಮ್ಮ ಭಾರತೀಯ ಸಮಾಜಕ್ಕೆ ಮಾತ್ರ ಅನ್ವಯಿಸುವುದಿಲ್ಲ, ಬದಲಾಗಿ ಮೇಲೆ ಹೇಳಿದ ಅಂಶಗಳು ಜಾಗತಿಕ ಮಟ್ಟದಲ್ಲೂ ಹಿಂಸೆಯನ್ನು ಹುಟ್ಟುಹಾಕುತ್ತಿದೆ.
ಇತ್ತೀಚೆಗೆ ಪ್ಯಾರಿಸ್ ನಗರದಲ್ಲಿ ಒಂದು ಪ್ರಯೋಗವನ್ನು ನಡೆಸಲಾಯಿತು. ಎಲ್ಲ ರೀತಿಯಲ್ಲೂ ಸಮಾನವಾದ ಅರ್ಹತೆಗಳನ್ನುಳ್ಳ ಎರಡು ಅರ್ಜಿಗಳನ್ನು-ಒಂದರಲ್ಲಿ ಕ್ರಿಶ್ಚಿಯನ್ ಹೆಸರನ್ನು ಹಾಗೂ ಪ್ರತಿಷ್ಠಿತ ಬಡಾವಣೆಯ ವಿಳಾಸವನ್ನು, ಮತ್ತೊಂದರಲ್ಲಿ ಮುಸ್ಲಿಂ ಹೆಸರನ್ನು ಹಾಗೂ ಬಡ-ಮಧ್ಯಮ ವರ್ಗದವರು ವಾಸಿಸುವ ಏರಿಯಾದ ವಿಳಾಸವನ್ನು ನಮೂದಿಸಿ-ಕೆಲಸಕ್ಕೆ ಅಹ್ವಾನಿಸಿದ್ದ ಕಚೇರಿಗಳಿಗೆ ಕಳುಹಿಸಲಾಗಿತ್ತು. ಸ್ವರ್ಗದಂತಹ ಪ್ಯಾರಿಸ್‍ನಲ್ಲೂ ನರಕಗಳಿರುತ್ತವೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕ್ರಿಶ್ಚಿಯನ್ ಹೆಸರಿನ, ಪ್ರತಿಷ್ಠಿತ ಬಡಾವಣೆಯ ಅರ್ಜಿಗೆ ಐದು ಅಹ್ವಾನಗಳು ಬಂದರೆ, ಮುಸ್ಲಿಂ ಹೆಸರಿನ ಬಡವರ್ಗಗಳ ಏರಿಯಾದ ಅರ್ಜಿಗೆ ಒಂದೇ ಒಂದು ಆಹ್ವಾನ ಬಂದಿತ್ತು.
ಇಂಥಾ ಅಸಮಾನತೆಯೂ ಒಂದು ಬಗೆಯ ಹಿಂಸೆ. ಈ ಹಿಂಸೆಯನ್ನು ಅದೆಷ್ಟು ದಿನ ತಾನೆ ಅಹಿಂಸೆಯ ನೆಪದಿಂದ ಸಹಿಸಿಕೊಳ್ಳಲು ಸಾಧ್ಯ. ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಾದಾಗ ಪ್ಯಾರಿಸ್‍ನ ಬಿಸಿರಕ್ತದ ಹುಡುಗರು ಗಲಭೆಗಿಳಿದಿದ್ದಾರೆ. ಆ ಗಲಭೆಗಳನ್ನು ವಿರೋಧಿಸುವುದು ಎಷ್ಟು ಜರೂರೋ, ಆ ಗಲಭೆಗೆ ಕಾರಣವಾದ ನಮ್ಮ ಸಮಾಜದ ಅಂತರ್ಗತ ಹಿಂಸೆಗಳನ್ನು ಹೋಗಲಾಡಿಸಬೇಕಾದ್ದೂ ನಮ್ಮೆಲ್ಲರ ಮೇಲಿರುವ ಹೊಣೆ. ಇಲ್ಲವಾದಲ್ಲಿ ಹಿಂಸೆಯನ್ನು ವಿರೋಧಿಸುವ ಹಕ್ಕನ್ನೇ ನಾವೆಲ್ಲ ಕಳೆದುಕೊಂಡುಬಿಡುತ್ತೇವೆ.
ಅದಕ್ಕೆ ಮೊದಲೇ ಹೇಳಿದ್ದು. ‘ಹಿಂಸೆ’ ಎಂದ ಕೂಡಲೇ “ಸಹಿಸಕೂಡದು” ಎಂದು ಅರಚುವ ಬದಲಾಗಿ ಆ ಹಿಂಸೆಯ ಮೂಲ ಎಲ್ಲಿದೆ ಎಂದು ವಿಶ್ಲೇಷಿಸುವ ಅಗತ್ಯ ಇವತ್ತಿನ ತುರ್ತು ಎಂದು. ಏಕೆಂದರೆ ಪ್ಯಾರಿಸ್‍ಗೆ ಬೆಂಕಿ ಹಚ್ಚಿರುವವರು ಹಿಂಸಾವಾದಿಗಳೂ ಅಲ್ಲ, ಭಯೋತ್ಪಾದಕರೂ ಅಲ್ಲ, ಬದಲಾಗಿ ಅದು ಅಲ್ಲಿನ ವ್ಯವಸ್ಥೆಯಲ್ಲೇ ಅಡಗಿರುವ ಹಿಂಸೆಗೆ ಬಲಿಯಾದವರ ಪ್ರತಿಕ್ರಿಯೆ ಅಷ್ಟೇ. ಇಂತಹ ಪ್ರತಿಕ್ರಿಯೆಯನ್ನು ನಿಷೇಧಾಜ್ಞೆಯಿಂದಾಗಲಿ, ಸ್ಪೆಷಲ್ ಸ್ಕ್ವಾಡ್‍ಗಳಿಂದಾಗಲಿ, ಗೋಲಿಬಾರ್‍ನಿಂದಾಗಲಿ ತಡೆಯಲಾಗುವುದಿಲ್ಲ.
ಇದೆಲ್ಲ ನಾವು ಕೈಕಟ್ಟಿ ಕೂತಿರುವಷ್ಟು ಕಾಲ ನಡೆಯುತ್ತಲೇ ಇರುತ್ತೆ. ಜನರಿಗೆ ಅನ್ಯಾಯದ ಬಗ್ಗೆ ಅರಿವು ಮೂಡಿದ ನಂತರವೂ ಅವರು ಕೈಕಟ್ಟಿ ಕೂತಿರಬೇಕು ಎಂದು ನಿರೀಕ್ಷಿಸಲಾಗುವುದಿಲ್ಲ. ಹಾಗೊಮ್ಮೆ ಅವರು ಪ್ಯಾರಿಸ್ ಯುವಕರಂತೆ ಕಾರ್ಯೋನ್ಮುಖರಾದರೆ ಅವರಿಗೆ ಆಗ ಅಹಿಂಸೆಯ ಪಾಠ ಬೋಧಿಸಲಾಗುವುದಿಲ್ಲ. ಆದ್ದರಿಂದಲೇ ಹಿಂಸೆಯ ವಿವಿಧ ವ್ಯಾಖ್ಯಾನಗಳಿಗಿಂತ ಅದರ ಬೇರು ಎಲ್ಲಿದೆ ಎಂದು ಹುಡುಕಬೇಕಿದೆ. ಈ ಪ್ರಶ್ನೆಯನ್ನು ಗಾಂಧೀಜಿಯವರೂ ನಿರಾಕರಿಸಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...