Homeಸಿನಿಮಾಕ್ರೀಡೆಹಿಮಾಳ ಸಾಧನೆ ನುಂಗಿಹಾಕಿದ ಭಾರತದ ಜಾತಿ ಮನಸ್ಸು

ಹಿಮಾಳ ಸಾಧನೆ ನುಂಗಿಹಾಕಿದ ಭಾರತದ ಜಾತಿ ಮನಸ್ಸು

- Advertisement -
- Advertisement -

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ. ಅಸ್ಸಾಂನ ನಾಗಾಂವ ಜಿಲ್ಲೆಯ ಧಿಂಗ್ ಹಳ್ಳಿಯ ಬಡರೈತ ಕುಟುಂಬದ ಈ ಕೂಸಿಗೆ ಕ್ರೀಡಾ ಹಿನ್ನೆಲೆ ಇಲ್ಲ. ಹುಟ್ಟಿದೂರಿನಲ್ಲಿ ಕ್ರೀಡೆಯ ಮೂಲ ಸೌಕರ್ಯದ ಯಾವ ಸವಲತ್ತೂ ಇರಲಿಲ್ಲ. ಇಂಥಾ ಹುಡುಗಿ ಇಡೀ ಜಗತ್ತೇ ನಿಬ್ಬೆರಗಾಗುವಂಥ ಸಾಧನೆ ಮಾಡಿದ್ದಾಳೆ. ಭಾರತದ ಕ್ರೀಡಾ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಚಿನ್ನ ಪಡೆದವಳು ಹಿಮಾ ದಾಸ್!

ದೇಶಕ್ಕೆ ವಿಶ್ವ ಚಾಂಪಿಯನ್ ಪಟ್ಟ ತಂದುಕೊಟ್ಟ ಹಿಮಾಳ ಬಗ್ಗೆ ದೇಶಾದ್ಯಂತ ಪ್ರಶಂಸೆಯ ಮಹಾಪೂರವೇ ಹರಿದು ಬಂತು. ಆಡಳಿತ ಪಕ್ಷ ವಿರೋಧ ಪಕ್ಷಗಳೆಲ್ಲವೂ ಹಿಮಾಳಿಗೆ ಅಭಿನಂದನೆ ಹೇಳಲು ಪೈಪೋಟಿಗೆ ಬಿದ್ದವು. ಕ್ರೀಡಾಲೋಕದ ದಿಗ್ಗಜರು, ಸಿನಿಮಾ ತಾರೆಯರು, ಸಾಹಿತ್ಯವಂತರು – ಹೀಗೆ ಎಲ್ಲರೂ ಅಭಿನಂದನೆಯ ಹೊಳೆಯನ್ನೇ ಹರಿಸಿದರು. ಸಾಮಾಜಿಕ ಜಾಲತಾಣಗಳಲ್ಲಂತೂ ಅಭಿನಂದನೆಯ ಪ್ರವಾಹವೇ ಹರಿಯಿತು. ಪ್ರಪ್ರಥಮ ಬಾರಿಗೆ ಭಾರತದ ಹುಡುಗಿ ವಿಶ್ವ ಚಾಂಪಿಯನ್ ಆಗಿ ಚಿನ್ನದ ಪದಕ ಗಳಿಸಿದ್ದರಿಂದ ಈ ಅಭಿಮಾನದ ಹೊಳೆ ಸಹಜವೇ ಆಗಿತ್ತು.

ಇಂಥಾ ಸಂಭ್ರಮದ ಗಳಿಗೆಯಲ್ಲೇ ಜಗತ್ತಿನೆದುರು ಭಾರತ ತಲೆತಗ್ಗಿಸಬೇಕಾದ ವಿದ್ಯಮಾನವೂ ಸಂಭವಿಸಿದೆ.
ಕ್ರೀಡಾ ಆಗಸದಲ್ಲಿ ದಿಡೀರ್ ಮಿಂಚಿನಂತೆ ಬಂದೆರಗಿದ ಹಿಮಾದಾಸ್ ಯಾರು, ಏನು ಎಂಬ ಬಗ್ಗೆ ಹೊರ ಜಗತ್ತಿಗಿರಲಿ, ಭಾರತೀಯರಿಗೇ ಗೊತ್ತಿರಲಿಲ್ಲ. ಹೀಗಾಗಿ ಕುತೂಹಲಭರಿತ ಭಾರತೀಯರು ಈ ಹೊಸ ತಾರೆಯ ಬಗ್ಗೆ ತಿಳಿದುಕೊಳ್ಳಲು ಗೂಗಲ್ ಸರ್ಚ್ ಇಂಜಿನ್‍ನ ಮೊರೆಹೋದರು. ಹಿಮಾದಾಸ್ ಯಾರು? ಯಾವ ಊರು? ಹಿಂದಿನ ಕ್ರೀಡಾ ಸಾಧನೆ ಏನು? ಆಕೆಯ ಶಿಕ್ಷಣ ಎಲ್ಲಿ ನಡೆದಿದೆ? ತರಬೇತು ನೀಡಿದವರು ಯಾರು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಿರಬಹುದೆಂದು ನೀವು ಸಹಜವಾಗಿ ಊಹಿಸುತ್ತೀರಿ. ಆದರೆ ಗೂಗಲ್‍ನಲ್ಲಿ ಹೆಚ್ಚಿನ ಮಂದಿ ಹುಡುಕಿದ್ದು ಆಕೆಯ ಜಾತಿಯನ್ನು! ಭಾರತೀಯರಿಗೆ ಯಾಕೆ ಅಷ್ಟೊಂದು ಕುತೂಹಲ ಗೊತ್ತೆ? ಆಕೆಯ ಜಾತಿ ಯಾವುದೆಂದು ಪತ್ತೆಯಾದರೆ ಅದಕ್ಕೆ ತಕ್ಕಂತೆ ಅವಳಿಗೆ ಬಿರುದು ಸನ್ಮಾನಗಳನ್ನು ಕೊಡಬಹುದು. ಆಕೆಯನ್ನು ತಮ್ಮ ಜಾತಿಯ ‘ಹಿರಿಮೆ’ಗೆ ಗರಿಯನ್ನಾಗಿಯೂ, ಐಕಾನ್ ಆಗಿಯೂ ಬಳಸಿಕೊಳ್ಳಬಹುದು. ಇದು ವಿಚಿತ್ರ ಅನಿಸಬಹುದು. ಆದರೆ ಇದುವೇ ಭಾರತದ ಅತ್ಯಂತ ಸಹಜ ಸ್ಥಿತಿ. ಭಾರತೀಯರ ಇಂಥಾ ಜಾತಿ ಬುದ್ದಿಯ ಬಗ್ಗೆ ಜಗತ್ತಿನ ಸಾವಿರಾರು ಮಂದಿ ಛೀಮಾರಿ ಹಾಕಿದ್ದಾರೆ.
ಗೂಗಲ್‍ನಲ್ಲಿ ಹಿಮಾ ದಾಸ್ ಎಂದು ಸರ್ಚ್ ಕೊಟ್ಟರೆ ನಮಗೆ ಮೊದಲು ಅದರ ನ್ಯೂಸ್ ಫೀಡ್‍ನ ಆಯ್ಕೆಗಳು ಕಾಣಸಿಗುತ್ತವೆ. ಇದೇ ವಿಷಯದ ವಿಭಿನ್ನ ಆಯಾಮಗಳ ಬಗ್ಗೆ ಅತಿ ಹೆಚ್ಚು ಹುಡುಕಾಟ ನಡೆಸಿರುವ ವಿಷಯ ಪಟ್ಟಿಯನ್ನು ಅನುಕ್ರಮವಾಗಿ ಗೂಗಲ್ ನಿಮಗೆ ಒದಗಿಸುತ್ತದೆ. ಹೀಗೆ ಭಾರತೀಯರ ಜಾತಿವಾದಿ ಮನಸ್ಥಿತಿ ಸರ್ಚ್ ಲಿಸ್ಟ್‍ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಿಮಾ ದಾಸ್‍ಳ ಪ್ರತಿಭೆ ವಿಶ್ವಮಟ್ಟದಲ್ಲಿ ಸಾಬೀತಾಗಿದೆಯಲ್ಲಾ? ಆಕೆಯ ಪ್ರತಿಭೆಯನ್ನು ಗುರುತಿಸಿದರಷ್ಟೇ ಸಾಲದೆ? ಇಲ್ಲ. ಆಕೆಯ ಜಾತಿ ಯಾವುದೆಂದು ತಿಳಿದುಕೊಂಡ ನಂತರವೇ ಆಕೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕೋ ಬೇಡವೋ ಎಂದು ನಿರ್ಧರಿಸಲು ಬಹುಶಃ ಈ ಮಂದಿ ನಿರ್ಣಯಿಸಿದ್ದಿರಬಹುದು. ಇದು ಭಾರತೀಯ ಮನಸ್ಥಿತಿ.

ಭಾರತದಲ್ಲಿ ಜಾತಿ ವ್ಯವಸ್ಥೆ ಮುಂದುವರೆದಿರುವುದಕ್ಕೆ ಶಿಕ್ಷಣದ ಕೊರತೆ ಪ್ರಮುಖ ಕಾರಣ ಎಂದೂ, ಎಲ್ಲೋ ಮೂಲೆಯ ಕುಗ್ರಾಮಗಳಲ್ಲಿ ಮಾತ್ರ ಜಾತಿ ವ್ಯವಸ್ಥೆ ಉಳಿದುಕೊಂಡಿದೆ, ನಗರಪ್ರದೇಶಗಳಲ್ಲಿ ಜಾತಿ ವ್ಯವಸ್ಥೆ ನಾಮಾವಶೇಷವಾಗಿದೆಯೆಂತಲೂ ಎಂದು ಅನೇಕ ಆಸ್ಥಾನ ಪಂಡಿತರು ಸದಾ ತೌಡು ಕುಟ್ಟುತ್ತಾರೆ. ಹಾಗಾದರೆ ಜಾಲತಾಣದಲ್ಲಿ ಹಿಮಾಳ ಜಾತಿ ಕಂಡುಕೊಳ್ಳಲು ಪ್ರಯಾಸಪಟ್ಟವರು ಅವಿದ್ಯಾವಂತರೆ? ಅಥವಾ ಕುಗ್ರಾಮದ ಗಮಾರರೆ? ಹೀಗೆ ಕ್ಯಾಸ್ಟ್ ಸರ್ಚ್ ಮಾಡಿದ ಬಹುತೇಕರು ತಮ್ಮ ಕೈಗಳಲ್ಲಿ ಸ್ಮಾರ್ಟ್ ಫೋನ್ ಹಿಡಿದಿರುವ ಸುಶಿಕ್ಷಿತ ನಗರವಾಸಿಗಳೇ.

ವಿಪರ್ಯಾಸವೆಂದರೆ, ಸಾರ್ವಜನಿಕ ಚರ್ಚೆಗಳಲ್ಲಿ ‘ಜಾತಿ ಎಲ್ಲಿದೆ ಹೇಳಿ?’ ಎಂಬ ವಿತಂಡ ವಾದ ಹೂಡುವವರು ಇದೇ ಮಂದಿ! ನಮ್ಮ ಸಮಾಜದಲ್ಲಿ ಇಂಥಾ ಆಷಾಡಭೂತಿತನ ರಕ್ತಗತವಾಗಿಬಿಟ್ಟಂತಿದೆ.

ಪಿಟಿ ಉಷಾ ವಿಚಾರದಲ್ಲೂ ಇದೇ ಆಶ್ಚರ್ಯ ನಿಮಗೆ ಕಾದಿರುತ್ತದೆ. ಉಷಾ ಅಥ್ಲೀಟ್‍ನಿಂದ ನಿವೃತ್ತಿಯಾಗಿ ದಶಕ ಕಳೆದಿದ್ದರೂ ಇಂದಿಗೂ ಆಕೆಯ ಜಾತಿ ತಿಳಿದುಕೊಳ್ಳಲು ಹೆಚ್ಚಿನ ಜನ ಆಸಕ್ತಿ ತೋರುತ್ತಿದ್ದಾರೆ. 2016ರ ರಿಯೋ ಒಲಂಪಿಕ್ಸ್‍ನ ಬ್ಯಾಡ್ಮಿಂಟನ್‍ನಲ್ಲಿ ಪಿವಿ ಸಿಂಧು ಬೆಳ್ಳಿ ಪದಕ ಗಳಿಸಿದಾಗಲೂ ನಮ್ಮ ಹೆಮ್ಮೆಯ ಭಾರತೀಯರು ತಮ್ಮ ಚಿಲ್ಲರೆ ಜಾತಿ ಬುದ್ದಿ ತೋರಿಸಿದ್ದರು.

ಈ ಮೇಲಿನ ಉದಾಹರಣೆಗಳೆಲ್ಲ ಜಾತಿಯ ಬೇರುಗಳು ಎಷ್ಟು ಆಳದಲ್ಲಿವೆ ಎಂಬುದನ್ನು ನಿರ್ವಿವಾದಿತವಾಗಿ ಎತ್ತಿ ತೋರಿಸುತ್ತಿವೆ. ಮೋದಿ ಭಕ್ತಪಡೆ ಭಾರತ ‘ವಿಶ್ವ ಗುರು’ ಎಂದು ಬೊಬ್ಬಿಡುತ್ತಿದ್ದಾರೆ. ಆದರೆ ಭಾರತ ಸಾಗಬೇಕಾದ ದೂರ ಇನ್ನೂ ಬಹಳವಿದೆ ಎಂಬುದನ್ನು ಹಿಮಾ ದಾಸ್ ಎಪಿಸೋಡ್ ಅನುಮಾನಕ್ಕೆಡೆಯಿಲ್ಲದಂತೆ ತೋರಿಸಿಕೊಟ್ಟಿದೆ.

ಸಾಮಾನ್ಯ ಜನರ ಮಾತು ಒತ್ತಟ್ಟಿಗಿರಲಿ, ಅಥ್ಲೀಟ್ ಫೆಡರೇಷನ್ ಇಂಡಿಯ ಸಂಸ್ಥೆ ನಡೆದುಕೊಂಡ ರೀತಿ ನೋಡಿ. ಅಭಿನಂದನೆಗಳನ್ನು ಹೇಳಲಿಕ್ಕಾಗಿ ಟ್ವೀಟ್ ಮಾಡಿದ ಎಎಫ್‍ಐ “ಇಂಗ್ಲಿಷ್ ಮಾತಾಡಲು ಸರಿಯಾಗಿ ಬರದಿದ್ದರೂ ಕೂಡ ಹಿಮಾ ಉತ್ತಮ ಸಾಧನೆ ಮಾಡಿದ್ದಾಳೆ… ಹಿಮಾ ದಾಸ್‍ಗೆ ಅಭಿನಂದನೆಗಳು…”. ಎಎಫ್‍ಐನ ಧೋರಣೆಗೆ ಟ್ವಿಟ್ಟಿಗರು ‘ಹಿಮಾ ದಾಸ್ ಹೋಗಿದ್ದುದು ಓಟದ ಸ್ಪರ್ದೆಗೋ ? ಅಥವಾ ಇಂಗ್ಲಿಷ್ ಭಾಷಾ ಪಾಂಡಿತ್ಯ ಸ್ಪರ್ಧೆಗೋ?’ ಎಂದು ತಿರುಗೇಟು ನೀಡಿದ್ದಾರೆ.

ಆದರೆ ಫಿನ್‍ಲೆಂಡ್‍ನ ವಿದೇಶಿ ನೆಲದಲ್ಲಿ ನೆಲೆಸಿರುವ ಕೆಲವು ಭಾರತೀಯರು ಈ ಚಿನ್ನದ ಹುಡುಗಿಗೆ ಏನಾದರೂ ಉಡುಗೊರೆ ಕೊಡಬೇಕೆಂದು ತಮ್ಮ ವಾಟ್ಸಪ್ ಗ್ರೂಪಿನಲ್ಲಿ ಚರ್ಚಿಸಿದರು. ಒಂದಷ್ಟು ಹಣವನ್ನು ಬಹುಮಾನವಾಗಿ ಕೊಡಲು ತೀರ್ಮಾನಿಸಿ ಅಂದೇ ಒಂದು ಲಕ್ಷ ರೂನಷ್ಟು ಹಣ ಸಂಗ್ರಹಿಸಿದರು. ಹಿಮಾ ದಾಸ್‍ಳನ್ನು ಭೇಟಿಯಾಗಿ ಅಭಿನಂದಿಸಿ, ಆತಿಥ್ಯ ನೀಡಿ ಸತ್ಕರಿಸಿದರು. ಆದರೆ ಹಣವನ್ನು ಸ್ಥಳದಲ್ಲೇ ಹಸ್ತಾಂತರಿಸಲಿಲ್ಲ. ಯಾಕೆಂದರೆ ಆ ಹಣ ಯಾರ ಕೈಗೆ ಸೇರುತ್ತದೋ ಎಂಬುದು ಅವರಿಗೆ ಖಾತ್ರಿಯಿರಲಿಲ್ಲ. ಹಾಗಾಗಿ ಆ ಹಣವನ್ನು ನೇರವಾಗಿ ಹಿಮಾಳ ಖಾತೆಗೆ ವರ್ಗಾಯಿಸಲು ತೀರ್ಮಾನಿಸಿದ್ದಾರೆ. ಅರ್ಹ ವ್ಯಕ್ತಿಗೆ ಸೇರಬೇಕಾದ ಹಣ ಮತ್ಯಾರೋ ಮಧ್ಯವರ್ತಿಗಳ ಪಾಲಾಗುತ್ತದೆಂಬುದು ಅವರ ಈ ತೀರ್ಮಾನಕ್ಕೆ ಕಾರಣ.

ಇನ್ನು ಹಿಮಾಳ ವೈಯುಕ್ತಿಕ ಹಿನ್ನೆಲೆಯನ್ನು ಗಮನಿಸಿದರೆ ಅವಳ ಸಾಧನೆಯ ಮಹತ್ವ ನಮ್ಮ ಅರಿವಿಗೆ ಬರುತ್ತದೆ. ಶಾಲಾ ದಿನಗಳಲ್ಲಿ ಹುಡುಗರ ತಂಡದಲ್ಲಿ ಪುಟ್ಬಾಲ್ ಆಡುತ್ತಿದ್ದ ಹಿಮಾ ಫಿನ್ಲೆಂಡ್‍ನಲ್ಲಿ ನಡೆದ 20 ವರ್ಷದೊಳಗಿನ ವಿಶ್ವ ಅಥ್ಲೇಟಿಕ್ ಜೂನಿಯರ್ಸ್ ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಕೇವಲ 51.46 ಸೆಕೆಂಡುಗಳಲ್ಲಿ ಚಿನ್ನದ ಜಯ ಸಾಧಿಸಿ ದಾಖಲೆ ಬರೆದ ಭಾರತದ ಮೊದಲ ಅಥ್ಲೇಟ್.

16 ಜನರ ಅವಿಭಕ್ತ ಕುಟುಂಬದಲ್ಲಿ ಜೋನಿಲಾ ಮತ್ತು ರಂಜಿತ ದಾಸ್ ರೈತ ದಂಪತಿಗಳ ಕೂಸು ಹಿಮ. ಇಡೀ ಕುಟುಂಬ ಇರುವ ಭತ್ತದ ಗದ್ದೆಯಲ್ಲಿ ದುಡಿದರಷ್ಟೇ ಆದಾಯ. ಆದರೆ ಇದಾವುದು ಹಿಮಾ ಸಾಧನೆಗೆ ಅಡ್ಡಿಯಾಗಲೇ ಇಲ್ಲ. ಫುಟ್ಬಾಲ್ ಕನಸು ಕಂಡು, ವಾಸ್ತವದಲ್ಲಿ ಅಥ್ಳೇಟಿಕ್ಸ್‍ನಲ್ಲಿ ಹೆಜ್ಜೆಯಿರಿಸಿದ ಹಿಮಾಗೆ ಗುವಾಹಟಿಯ ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ನಿಪೋ ದಾಸ್ ಬೆಂಬಲವಾಗಿ ನಿಂತರು. ರಾಷ್ಟ್ರೀಯ ತಂಡದ ಕೋಚ್ ಬಸಂತ ಸಿಂಗ್ ಹಿಮಾಳ ಹಾದಿಯನ್ನು ಮತ್ತಷ್ಟು ಸ್ಪಷ್ಟ ಮತ್ತು ನಿಚ್ಚಳವಾಗಿಸಿದರು. ಪಿ.ಟಿ.ಉಷಾ ಕೂಡ ಹಿಮಾಳ ಜೊತೆಯಲ್ಲೇ ಇದ್ದು ಆಕೆಯನ್ನು ಹುರಿದುಂಬಿಸಿದ್ದರು. ಈ ಎಲ್ಲರ ಶ್ರಮವನ್ನು ನಾವು ಗೌರವದಿಂದ ನೆನೆಯಬೇಕು.

ಹಿಮಾ ದಾಸ್ ಒಂದು ಅಂಶವನ್ನಂತೂ ಅನುಮಾನಕ್ಕೆಡೆಯಿಲ್ಲದಂತೆ ಸಾಬೀತುಪಡಿಸಿದ್ದಾಳೆ. ಭಾರತಕ್ಕೆ ಚಿನ್ನದ ಪದಕಗಳನ್ನು ಗಳಿಸಬಲ್ಲ ಪ್ರತಿಭೆಗಳು ಮಹಾನಗರಗಳ ಕಾನ್ವೆಂಟುಗಳಲ್ಲಿ, ಭವ್ಯವಾದ ಮಹಲುಗಳಲ್ಲಿ ಇರುವುದಿಲ್ಲ; ನಮ್ಮ ಹಳ್ಳಿಗಾಡುಗಳಲ್ಲಿ, ಭತ್ತದ ಗದ್ದೆಗಳಲ್ಲಿ, ಆದಿವಾಸಿಗಳ ಹಾಡಿಗಳಲ್ಲಿಯೂ ಇದ್ದಾರೆ. ಆದರೆ ಅಲ್ಲಿನ ಪ್ರತಿಭೆಗಳನ್ನು ಹುಡುಕುವ ಮನಸ್ಸಿದೆಯೆ?

  • – ರೂಪಾ ಕೆ. ಮತ್ತಿಕೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...