Homeಸಿನಿಮಾಕ್ರೀಡೆಹಿಮಾಳ ಸಾಧನೆ ನುಂಗಿಹಾಕಿದ ಭಾರತದ ಜಾತಿ ಮನಸ್ಸು

ಹಿಮಾಳ ಸಾಧನೆ ನುಂಗಿಹಾಕಿದ ಭಾರತದ ಜಾತಿ ಮನಸ್ಸು

- Advertisement -
- Advertisement -

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ. ಅಸ್ಸಾಂನ ನಾಗಾಂವ ಜಿಲ್ಲೆಯ ಧಿಂಗ್ ಹಳ್ಳಿಯ ಬಡರೈತ ಕುಟುಂಬದ ಈ ಕೂಸಿಗೆ ಕ್ರೀಡಾ ಹಿನ್ನೆಲೆ ಇಲ್ಲ. ಹುಟ್ಟಿದೂರಿನಲ್ಲಿ ಕ್ರೀಡೆಯ ಮೂಲ ಸೌಕರ್ಯದ ಯಾವ ಸವಲತ್ತೂ ಇರಲಿಲ್ಲ. ಇಂಥಾ ಹುಡುಗಿ ಇಡೀ ಜಗತ್ತೇ ನಿಬ್ಬೆರಗಾಗುವಂಥ ಸಾಧನೆ ಮಾಡಿದ್ದಾಳೆ. ಭಾರತದ ಕ್ರೀಡಾ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಚಿನ್ನ ಪಡೆದವಳು ಹಿಮಾ ದಾಸ್!

ದೇಶಕ್ಕೆ ವಿಶ್ವ ಚಾಂಪಿಯನ್ ಪಟ್ಟ ತಂದುಕೊಟ್ಟ ಹಿಮಾಳ ಬಗ್ಗೆ ದೇಶಾದ್ಯಂತ ಪ್ರಶಂಸೆಯ ಮಹಾಪೂರವೇ ಹರಿದು ಬಂತು. ಆಡಳಿತ ಪಕ್ಷ ವಿರೋಧ ಪಕ್ಷಗಳೆಲ್ಲವೂ ಹಿಮಾಳಿಗೆ ಅಭಿನಂದನೆ ಹೇಳಲು ಪೈಪೋಟಿಗೆ ಬಿದ್ದವು. ಕ್ರೀಡಾಲೋಕದ ದಿಗ್ಗಜರು, ಸಿನಿಮಾ ತಾರೆಯರು, ಸಾಹಿತ್ಯವಂತರು – ಹೀಗೆ ಎಲ್ಲರೂ ಅಭಿನಂದನೆಯ ಹೊಳೆಯನ್ನೇ ಹರಿಸಿದರು. ಸಾಮಾಜಿಕ ಜಾಲತಾಣಗಳಲ್ಲಂತೂ ಅಭಿನಂದನೆಯ ಪ್ರವಾಹವೇ ಹರಿಯಿತು. ಪ್ರಪ್ರಥಮ ಬಾರಿಗೆ ಭಾರತದ ಹುಡುಗಿ ವಿಶ್ವ ಚಾಂಪಿಯನ್ ಆಗಿ ಚಿನ್ನದ ಪದಕ ಗಳಿಸಿದ್ದರಿಂದ ಈ ಅಭಿಮಾನದ ಹೊಳೆ ಸಹಜವೇ ಆಗಿತ್ತು.

ಇಂಥಾ ಸಂಭ್ರಮದ ಗಳಿಗೆಯಲ್ಲೇ ಜಗತ್ತಿನೆದುರು ಭಾರತ ತಲೆತಗ್ಗಿಸಬೇಕಾದ ವಿದ್ಯಮಾನವೂ ಸಂಭವಿಸಿದೆ.
ಕ್ರೀಡಾ ಆಗಸದಲ್ಲಿ ದಿಡೀರ್ ಮಿಂಚಿನಂತೆ ಬಂದೆರಗಿದ ಹಿಮಾದಾಸ್ ಯಾರು, ಏನು ಎಂಬ ಬಗ್ಗೆ ಹೊರ ಜಗತ್ತಿಗಿರಲಿ, ಭಾರತೀಯರಿಗೇ ಗೊತ್ತಿರಲಿಲ್ಲ. ಹೀಗಾಗಿ ಕುತೂಹಲಭರಿತ ಭಾರತೀಯರು ಈ ಹೊಸ ತಾರೆಯ ಬಗ್ಗೆ ತಿಳಿದುಕೊಳ್ಳಲು ಗೂಗಲ್ ಸರ್ಚ್ ಇಂಜಿನ್‍ನ ಮೊರೆಹೋದರು. ಹಿಮಾದಾಸ್ ಯಾರು? ಯಾವ ಊರು? ಹಿಂದಿನ ಕ್ರೀಡಾ ಸಾಧನೆ ಏನು? ಆಕೆಯ ಶಿಕ್ಷಣ ಎಲ್ಲಿ ನಡೆದಿದೆ? ತರಬೇತು ನೀಡಿದವರು ಯಾರು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಿರಬಹುದೆಂದು ನೀವು ಸಹಜವಾಗಿ ಊಹಿಸುತ್ತೀರಿ. ಆದರೆ ಗೂಗಲ್‍ನಲ್ಲಿ ಹೆಚ್ಚಿನ ಮಂದಿ ಹುಡುಕಿದ್ದು ಆಕೆಯ ಜಾತಿಯನ್ನು! ಭಾರತೀಯರಿಗೆ ಯಾಕೆ ಅಷ್ಟೊಂದು ಕುತೂಹಲ ಗೊತ್ತೆ? ಆಕೆಯ ಜಾತಿ ಯಾವುದೆಂದು ಪತ್ತೆಯಾದರೆ ಅದಕ್ಕೆ ತಕ್ಕಂತೆ ಅವಳಿಗೆ ಬಿರುದು ಸನ್ಮಾನಗಳನ್ನು ಕೊಡಬಹುದು. ಆಕೆಯನ್ನು ತಮ್ಮ ಜಾತಿಯ ‘ಹಿರಿಮೆ’ಗೆ ಗರಿಯನ್ನಾಗಿಯೂ, ಐಕಾನ್ ಆಗಿಯೂ ಬಳಸಿಕೊಳ್ಳಬಹುದು. ಇದು ವಿಚಿತ್ರ ಅನಿಸಬಹುದು. ಆದರೆ ಇದುವೇ ಭಾರತದ ಅತ್ಯಂತ ಸಹಜ ಸ್ಥಿತಿ. ಭಾರತೀಯರ ಇಂಥಾ ಜಾತಿ ಬುದ್ದಿಯ ಬಗ್ಗೆ ಜಗತ್ತಿನ ಸಾವಿರಾರು ಮಂದಿ ಛೀಮಾರಿ ಹಾಕಿದ್ದಾರೆ.
ಗೂಗಲ್‍ನಲ್ಲಿ ಹಿಮಾ ದಾಸ್ ಎಂದು ಸರ್ಚ್ ಕೊಟ್ಟರೆ ನಮಗೆ ಮೊದಲು ಅದರ ನ್ಯೂಸ್ ಫೀಡ್‍ನ ಆಯ್ಕೆಗಳು ಕಾಣಸಿಗುತ್ತವೆ. ಇದೇ ವಿಷಯದ ವಿಭಿನ್ನ ಆಯಾಮಗಳ ಬಗ್ಗೆ ಅತಿ ಹೆಚ್ಚು ಹುಡುಕಾಟ ನಡೆಸಿರುವ ವಿಷಯ ಪಟ್ಟಿಯನ್ನು ಅನುಕ್ರಮವಾಗಿ ಗೂಗಲ್ ನಿಮಗೆ ಒದಗಿಸುತ್ತದೆ. ಹೀಗೆ ಭಾರತೀಯರ ಜಾತಿವಾದಿ ಮನಸ್ಥಿತಿ ಸರ್ಚ್ ಲಿಸ್ಟ್‍ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಿಮಾ ದಾಸ್‍ಳ ಪ್ರತಿಭೆ ವಿಶ್ವಮಟ್ಟದಲ್ಲಿ ಸಾಬೀತಾಗಿದೆಯಲ್ಲಾ? ಆಕೆಯ ಪ್ರತಿಭೆಯನ್ನು ಗುರುತಿಸಿದರಷ್ಟೇ ಸಾಲದೆ? ಇಲ್ಲ. ಆಕೆಯ ಜಾತಿ ಯಾವುದೆಂದು ತಿಳಿದುಕೊಂಡ ನಂತರವೇ ಆಕೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕೋ ಬೇಡವೋ ಎಂದು ನಿರ್ಧರಿಸಲು ಬಹುಶಃ ಈ ಮಂದಿ ನಿರ್ಣಯಿಸಿದ್ದಿರಬಹುದು. ಇದು ಭಾರತೀಯ ಮನಸ್ಥಿತಿ.

ಭಾರತದಲ್ಲಿ ಜಾತಿ ವ್ಯವಸ್ಥೆ ಮುಂದುವರೆದಿರುವುದಕ್ಕೆ ಶಿಕ್ಷಣದ ಕೊರತೆ ಪ್ರಮುಖ ಕಾರಣ ಎಂದೂ, ಎಲ್ಲೋ ಮೂಲೆಯ ಕುಗ್ರಾಮಗಳಲ್ಲಿ ಮಾತ್ರ ಜಾತಿ ವ್ಯವಸ್ಥೆ ಉಳಿದುಕೊಂಡಿದೆ, ನಗರಪ್ರದೇಶಗಳಲ್ಲಿ ಜಾತಿ ವ್ಯವಸ್ಥೆ ನಾಮಾವಶೇಷವಾಗಿದೆಯೆಂತಲೂ ಎಂದು ಅನೇಕ ಆಸ್ಥಾನ ಪಂಡಿತರು ಸದಾ ತೌಡು ಕುಟ್ಟುತ್ತಾರೆ. ಹಾಗಾದರೆ ಜಾಲತಾಣದಲ್ಲಿ ಹಿಮಾಳ ಜಾತಿ ಕಂಡುಕೊಳ್ಳಲು ಪ್ರಯಾಸಪಟ್ಟವರು ಅವಿದ್ಯಾವಂತರೆ? ಅಥವಾ ಕುಗ್ರಾಮದ ಗಮಾರರೆ? ಹೀಗೆ ಕ್ಯಾಸ್ಟ್ ಸರ್ಚ್ ಮಾಡಿದ ಬಹುತೇಕರು ತಮ್ಮ ಕೈಗಳಲ್ಲಿ ಸ್ಮಾರ್ಟ್ ಫೋನ್ ಹಿಡಿದಿರುವ ಸುಶಿಕ್ಷಿತ ನಗರವಾಸಿಗಳೇ.

ವಿಪರ್ಯಾಸವೆಂದರೆ, ಸಾರ್ವಜನಿಕ ಚರ್ಚೆಗಳಲ್ಲಿ ‘ಜಾತಿ ಎಲ್ಲಿದೆ ಹೇಳಿ?’ ಎಂಬ ವಿತಂಡ ವಾದ ಹೂಡುವವರು ಇದೇ ಮಂದಿ! ನಮ್ಮ ಸಮಾಜದಲ್ಲಿ ಇಂಥಾ ಆಷಾಡಭೂತಿತನ ರಕ್ತಗತವಾಗಿಬಿಟ್ಟಂತಿದೆ.

ಪಿಟಿ ಉಷಾ ವಿಚಾರದಲ್ಲೂ ಇದೇ ಆಶ್ಚರ್ಯ ನಿಮಗೆ ಕಾದಿರುತ್ತದೆ. ಉಷಾ ಅಥ್ಲೀಟ್‍ನಿಂದ ನಿವೃತ್ತಿಯಾಗಿ ದಶಕ ಕಳೆದಿದ್ದರೂ ಇಂದಿಗೂ ಆಕೆಯ ಜಾತಿ ತಿಳಿದುಕೊಳ್ಳಲು ಹೆಚ್ಚಿನ ಜನ ಆಸಕ್ತಿ ತೋರುತ್ತಿದ್ದಾರೆ. 2016ರ ರಿಯೋ ಒಲಂಪಿಕ್ಸ್‍ನ ಬ್ಯಾಡ್ಮಿಂಟನ್‍ನಲ್ಲಿ ಪಿವಿ ಸಿಂಧು ಬೆಳ್ಳಿ ಪದಕ ಗಳಿಸಿದಾಗಲೂ ನಮ್ಮ ಹೆಮ್ಮೆಯ ಭಾರತೀಯರು ತಮ್ಮ ಚಿಲ್ಲರೆ ಜಾತಿ ಬುದ್ದಿ ತೋರಿಸಿದ್ದರು.

ಈ ಮೇಲಿನ ಉದಾಹರಣೆಗಳೆಲ್ಲ ಜಾತಿಯ ಬೇರುಗಳು ಎಷ್ಟು ಆಳದಲ್ಲಿವೆ ಎಂಬುದನ್ನು ನಿರ್ವಿವಾದಿತವಾಗಿ ಎತ್ತಿ ತೋರಿಸುತ್ತಿವೆ. ಮೋದಿ ಭಕ್ತಪಡೆ ಭಾರತ ‘ವಿಶ್ವ ಗುರು’ ಎಂದು ಬೊಬ್ಬಿಡುತ್ತಿದ್ದಾರೆ. ಆದರೆ ಭಾರತ ಸಾಗಬೇಕಾದ ದೂರ ಇನ್ನೂ ಬಹಳವಿದೆ ಎಂಬುದನ್ನು ಹಿಮಾ ದಾಸ್ ಎಪಿಸೋಡ್ ಅನುಮಾನಕ್ಕೆಡೆಯಿಲ್ಲದಂತೆ ತೋರಿಸಿಕೊಟ್ಟಿದೆ.

ಸಾಮಾನ್ಯ ಜನರ ಮಾತು ಒತ್ತಟ್ಟಿಗಿರಲಿ, ಅಥ್ಲೀಟ್ ಫೆಡರೇಷನ್ ಇಂಡಿಯ ಸಂಸ್ಥೆ ನಡೆದುಕೊಂಡ ರೀತಿ ನೋಡಿ. ಅಭಿನಂದನೆಗಳನ್ನು ಹೇಳಲಿಕ್ಕಾಗಿ ಟ್ವೀಟ್ ಮಾಡಿದ ಎಎಫ್‍ಐ “ಇಂಗ್ಲಿಷ್ ಮಾತಾಡಲು ಸರಿಯಾಗಿ ಬರದಿದ್ದರೂ ಕೂಡ ಹಿಮಾ ಉತ್ತಮ ಸಾಧನೆ ಮಾಡಿದ್ದಾಳೆ… ಹಿಮಾ ದಾಸ್‍ಗೆ ಅಭಿನಂದನೆಗಳು…”. ಎಎಫ್‍ಐನ ಧೋರಣೆಗೆ ಟ್ವಿಟ್ಟಿಗರು ‘ಹಿಮಾ ದಾಸ್ ಹೋಗಿದ್ದುದು ಓಟದ ಸ್ಪರ್ದೆಗೋ ? ಅಥವಾ ಇಂಗ್ಲಿಷ್ ಭಾಷಾ ಪಾಂಡಿತ್ಯ ಸ್ಪರ್ಧೆಗೋ?’ ಎಂದು ತಿರುಗೇಟು ನೀಡಿದ್ದಾರೆ.

ಆದರೆ ಫಿನ್‍ಲೆಂಡ್‍ನ ವಿದೇಶಿ ನೆಲದಲ್ಲಿ ನೆಲೆಸಿರುವ ಕೆಲವು ಭಾರತೀಯರು ಈ ಚಿನ್ನದ ಹುಡುಗಿಗೆ ಏನಾದರೂ ಉಡುಗೊರೆ ಕೊಡಬೇಕೆಂದು ತಮ್ಮ ವಾಟ್ಸಪ್ ಗ್ರೂಪಿನಲ್ಲಿ ಚರ್ಚಿಸಿದರು. ಒಂದಷ್ಟು ಹಣವನ್ನು ಬಹುಮಾನವಾಗಿ ಕೊಡಲು ತೀರ್ಮಾನಿಸಿ ಅಂದೇ ಒಂದು ಲಕ್ಷ ರೂನಷ್ಟು ಹಣ ಸಂಗ್ರಹಿಸಿದರು. ಹಿಮಾ ದಾಸ್‍ಳನ್ನು ಭೇಟಿಯಾಗಿ ಅಭಿನಂದಿಸಿ, ಆತಿಥ್ಯ ನೀಡಿ ಸತ್ಕರಿಸಿದರು. ಆದರೆ ಹಣವನ್ನು ಸ್ಥಳದಲ್ಲೇ ಹಸ್ತಾಂತರಿಸಲಿಲ್ಲ. ಯಾಕೆಂದರೆ ಆ ಹಣ ಯಾರ ಕೈಗೆ ಸೇರುತ್ತದೋ ಎಂಬುದು ಅವರಿಗೆ ಖಾತ್ರಿಯಿರಲಿಲ್ಲ. ಹಾಗಾಗಿ ಆ ಹಣವನ್ನು ನೇರವಾಗಿ ಹಿಮಾಳ ಖಾತೆಗೆ ವರ್ಗಾಯಿಸಲು ತೀರ್ಮಾನಿಸಿದ್ದಾರೆ. ಅರ್ಹ ವ್ಯಕ್ತಿಗೆ ಸೇರಬೇಕಾದ ಹಣ ಮತ್ಯಾರೋ ಮಧ್ಯವರ್ತಿಗಳ ಪಾಲಾಗುತ್ತದೆಂಬುದು ಅವರ ಈ ತೀರ್ಮಾನಕ್ಕೆ ಕಾರಣ.

ಇನ್ನು ಹಿಮಾಳ ವೈಯುಕ್ತಿಕ ಹಿನ್ನೆಲೆಯನ್ನು ಗಮನಿಸಿದರೆ ಅವಳ ಸಾಧನೆಯ ಮಹತ್ವ ನಮ್ಮ ಅರಿವಿಗೆ ಬರುತ್ತದೆ. ಶಾಲಾ ದಿನಗಳಲ್ಲಿ ಹುಡುಗರ ತಂಡದಲ್ಲಿ ಪುಟ್ಬಾಲ್ ಆಡುತ್ತಿದ್ದ ಹಿಮಾ ಫಿನ್ಲೆಂಡ್‍ನಲ್ಲಿ ನಡೆದ 20 ವರ್ಷದೊಳಗಿನ ವಿಶ್ವ ಅಥ್ಲೇಟಿಕ್ ಜೂನಿಯರ್ಸ್ ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಕೇವಲ 51.46 ಸೆಕೆಂಡುಗಳಲ್ಲಿ ಚಿನ್ನದ ಜಯ ಸಾಧಿಸಿ ದಾಖಲೆ ಬರೆದ ಭಾರತದ ಮೊದಲ ಅಥ್ಲೇಟ್.

16 ಜನರ ಅವಿಭಕ್ತ ಕುಟುಂಬದಲ್ಲಿ ಜೋನಿಲಾ ಮತ್ತು ರಂಜಿತ ದಾಸ್ ರೈತ ದಂಪತಿಗಳ ಕೂಸು ಹಿಮ. ಇಡೀ ಕುಟುಂಬ ಇರುವ ಭತ್ತದ ಗದ್ದೆಯಲ್ಲಿ ದುಡಿದರಷ್ಟೇ ಆದಾಯ. ಆದರೆ ಇದಾವುದು ಹಿಮಾ ಸಾಧನೆಗೆ ಅಡ್ಡಿಯಾಗಲೇ ಇಲ್ಲ. ಫುಟ್ಬಾಲ್ ಕನಸು ಕಂಡು, ವಾಸ್ತವದಲ್ಲಿ ಅಥ್ಳೇಟಿಕ್ಸ್‍ನಲ್ಲಿ ಹೆಜ್ಜೆಯಿರಿಸಿದ ಹಿಮಾಗೆ ಗುವಾಹಟಿಯ ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ನಿಪೋ ದಾಸ್ ಬೆಂಬಲವಾಗಿ ನಿಂತರು. ರಾಷ್ಟ್ರೀಯ ತಂಡದ ಕೋಚ್ ಬಸಂತ ಸಿಂಗ್ ಹಿಮಾಳ ಹಾದಿಯನ್ನು ಮತ್ತಷ್ಟು ಸ್ಪಷ್ಟ ಮತ್ತು ನಿಚ್ಚಳವಾಗಿಸಿದರು. ಪಿ.ಟಿ.ಉಷಾ ಕೂಡ ಹಿಮಾಳ ಜೊತೆಯಲ್ಲೇ ಇದ್ದು ಆಕೆಯನ್ನು ಹುರಿದುಂಬಿಸಿದ್ದರು. ಈ ಎಲ್ಲರ ಶ್ರಮವನ್ನು ನಾವು ಗೌರವದಿಂದ ನೆನೆಯಬೇಕು.

ಹಿಮಾ ದಾಸ್ ಒಂದು ಅಂಶವನ್ನಂತೂ ಅನುಮಾನಕ್ಕೆಡೆಯಿಲ್ಲದಂತೆ ಸಾಬೀತುಪಡಿಸಿದ್ದಾಳೆ. ಭಾರತಕ್ಕೆ ಚಿನ್ನದ ಪದಕಗಳನ್ನು ಗಳಿಸಬಲ್ಲ ಪ್ರತಿಭೆಗಳು ಮಹಾನಗರಗಳ ಕಾನ್ವೆಂಟುಗಳಲ್ಲಿ, ಭವ್ಯವಾದ ಮಹಲುಗಳಲ್ಲಿ ಇರುವುದಿಲ್ಲ; ನಮ್ಮ ಹಳ್ಳಿಗಾಡುಗಳಲ್ಲಿ, ಭತ್ತದ ಗದ್ದೆಗಳಲ್ಲಿ, ಆದಿವಾಸಿಗಳ ಹಾಡಿಗಳಲ್ಲಿಯೂ ಇದ್ದಾರೆ. ಆದರೆ ಅಲ್ಲಿನ ಪ್ರತಿಭೆಗಳನ್ನು ಹುಡುಕುವ ಮನಸ್ಸಿದೆಯೆ?

  • – ರೂಪಾ ಕೆ. ಮತ್ತಿಕೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...