Homeಮುಖಪುಟಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

ಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

- Advertisement -
- Advertisement -

ದೇಶದ ತುಂಬ ದ್ವೇಷ ಹರಡುವ ಶಕ್ತಿಗಳು ಹೆಚ್ಚುತ್ತಿವೆ. ಅಸಹಿಷ್ಣುತೆ ಮನೆ ಮಾಡಿದೆ. ಯುದ್ದೋನ್ಮಾದದ ವಾತಾವರಣ ಸೃಷ್ಟಿಯಾಗಿದೆ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ,, ಜನರ ನಡುವೆ ಪ್ರೀತಿ, ಸಹಬಾಳ್ವೆಯನ್ನು ಬಿತ್ತಬೇಕಾದವರೇ ದ್ವೇಷದ ಮಾತುಗಳನ್ನಾಡುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾದರೆ ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ ಅನುಸರಿಸುವುದು ಬಹಳ ಮುಖ್ಯವಾಗಿದೆ. ದ್ವೇಷವನ್ನು ಅಳಿಸಿ ಪ್ರೀತಿಯನ್ನು ಹಂಚುವಂತಹ ಕೆಲಸಕ್ಕೆ ಎಲ್ಲರೂ ಮುಂದಾಗಬೇಕೆಂಬ ಪಣವನ್ನು ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ತೊಟ್ಟರು.

ಜನಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರಿನ ಸ್ವಾತಂತ್ರ್ಯ ಚೌಕದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯನ್ನು ಮೇಣದ ಬತ್ತಿಗಳನ್ನು ಹಚ್ಚಿ ಮಾನವೀಯತೆ ಸಾಕಾರಗೊಳ್ಳಲಿ. ಶಾಂತಿ ಮತ್ತು ಅಹಿಂಸೆಯೇ ನಮ್ಮ ಧ್ಯೇಯ, ನಮ್ಮಲ್ಲಿರುವುದು ಒಂದೇ ರಕ್ತ ನಾವು ಮನುಷ್ಯರು ಎಂಬ ಘೋಷಣೆಗಳನ್ನು ಕೂಗಿದರು. ಇದು ಬೆಳಕು. ಈ ಬೆಳಕಿನಲ್ಲಿ ಮಾನವೀಯತೆ ಸಾರೋಣ. ಯಾವುದೇ ಜಾತಿ, ಮತ, ಧರ್ಮ ಮತ್ತು ಪ್ರಾದೇಶಿಕತೆ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರೋಣ ಎಂಬ ಸಂದೇಶಗಳನ್ನು ಸಾರಲಾಯಿತು.

ಭಾಷಣಕಾರರ ಮಾತುಗಳೆಲ್ಲವೂ ಗಾಂಧೀ ಅವರ ಅಹಿಂಸೆ ಕುರಿತಾಗಿದ್ದವು.ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ. ದ್ವೇಷದ ಸಂಸ್ಕೃತಿಯಲ್ಲ.ಬದಲಿಗೆ ಪ್ರೀತಿ ಮತ್ತು ಸಹನೆಯ, ಧರ್ಮನಿರಪೇಕ್ಷೆಯ ಸಂವಿಧಾನ ಹೊಂದಿರುವ ದೇಶ. ನಾವು ಬಾಳ್ವೆಯಿಂದ ಬದುಕಬೇಕು. ಯುದ್ದೋನ್ಮಾದಕ್ಕೆ ಅವಕಾಶ ಕೊಡಬಾರದು. ಹಿಂಸೆ ನಮ್ಮ ಸಂಸ್ಕೃತಿಯಲ್ಲ. ಹಿಂಸೆ ಶಾಶ್ವತ ಪರಿಹಾರವನ್ನು ತಂದುಕೊಡುವುದಿಲ್ಲ. ಹಿಂಸೆಯಿಂದ ದುಃಖ ಹೆಚ್ಚುತ್ತದೆ. ಹಿಂಸೆ ನೋವನ್ನು ತರಿಸುತ್ತದೆ. ಹೀಗಾಗಿ ಗಾಂಧೀ ಅವರ ಅಹಿಂಸೆ ಮಾರ್ಗ ಸುಂದರ ಸಮಾಜವನ್ನು ನಿರ್ಮಾಣ ಮಾಡುತ್ತದೆ. ಅತ್ತ ನಾವು ಹೋಗಬೇಕು ಎಂಬುದನ್ನು ಜನಪರ ಚಿಂತಕೆ ಕೆ.ದೊರೈರಾಜ್ ಸಾರಿ ಹೇಳಿದರು.

ಗಾಂಧೀಜಿ ಸುಳ್ಳನ್ನು ಹೇಳಬೇಡಿ ಅಂದ್ರು ಆದರೆ ಸುಳ್ಳುಕೋರರು ಜಾಸ್ತಿಯಾಗಿದ್ದಾರೆ. ಹಿಂಸೆ ಮಾಡಬಾರದು ಅಂದ್ರು, ಆದರೆ ಹಿಂಸೆಯ ಮಾತುಗಳನ್ನಾಡುವವರು ಹೆಚ್ಚಾಗಿದ್ದಾರೆ. ಸತ್ಯವನ್ನು ನುಡಿಯಬೇಕು ಅಂದ್ರು, ಆದರೆ ಅಸತ್ಯವನ್ನೇ ಮನೆಮಾತಾಗಿಸಿಕೊಂಡವರು ಹೆಚ್ಚು. ಗಾಂಧೀ ಚಿಂತನೆಗಳನ್ನು ಹೇಳುತ್ತಲೇ, ಹಿಂಸೆಗೂ ಪ್ರಚೋದಿಸುವ ಶಕ್ತಿಗಳು ಸಮಾಜದಲ್ಲಿ ದ್ವೇಷವನ್ನೂ ಹರಡುತ್ತಾ ಜನರ ನೆಮ್ಮದಿಗೆ ಭಂಗ ತರುತ್ತಿವೆ. ಇದು ಶಾಶ್ವತವಲ್ಲ. ಆದರೂ ಕೋಮುವಾದಿ ಶಕ್ತಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿವೆ. ನಾವು ಪ್ರೀತಿಯೊಂದನ್ನು ಹಂಚಬೇಕಾಗಿದೆ ಎಂಬಂತಹ ಮಾತುಗಳನ್ನು ಗಣ್ಯರು ಹೇಳಿದರು.

ಟೌನ್ ಹಾಲ್ ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂರಾರು ಕಾರ್ಯಕರ್ತರು ಯುವ ಮುಖಂಡ ತಾಜುದ್ದೀನ್ ಶರೀಪ್ ನೇತೃತ್ವದಲ್ಲಿ ಗಾಂಧೀ ಹುತಾತ್ಮ ದಿನವನ್ನು ಆಚರಿಸಲಾಯಿತು.ಮಹಾತ್ಮ ಗಾಂಧಿ ಅವರನ್ನು ನಾಥೂರಾಮ್ ಗೋಡ್ಸೆ ಕೊಂದು ಹಾಕಿದರು. ಗೋಡ್ಸೆ ಸಂತತಿ ಇಂದಿಗೂ ತನ್ನ ಮಸಲತ್ತು ನಡೆಸಿದೆ. ಕೋಮುವಾದಿ ಶಕ್ತಿಗಳು ಆಳ್ವಿಕೆ ನಡೆಸುತ್ತಿದ್ದು ಶಾಂತಿಯುತ ಪ್ರತಿಭಟನೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಕೊಲ್ಲಲಾಗಿದೆ. ಇಂತಹ ಘಟನೆಗಳು ನಡೆಯಬಾರದು. ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಗಾಂಧೀಯ ವಿಚಾರಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ಭಾಷಣಕಾರರು ಬೊಟ್ಟು ಮಾಡಿ ಹೇಳಿದರು.

CAA, NRC ಮತ್ತು NPR ಕಾಯ್ದೆಗಳು ಒಡೆದು ಆಳುವ ನೀತಿಗೆ ಪೂರಕವಾಗಿವೆ. ಅಲ್ಪಸಂಖ್ಯಾತ ಸಮುದಾಯ, ಬಡವರು, ದಲಿತರಲ್ಲಿ ಆತಂಕವನ್ನುಂಟು ಮಾಡಿದೆ. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಸಮಾಜವನ್ನು ಛಿದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಸಮಾಜವನ್ನು ಒಡೆಯುವ ಕೆಲಸವನ್ನು ಬಿಡಬೇಕು. ಸಂವಿಧಾನದ ಆಶಯಗಳಂತೆ ಸರ್ಕಾರವನ್ನು ನಡೆಸಬೇಕು ಎಂದು ಆಗ್ರಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶಕ್ಕಿಂದು ಒದಗಿರುವ ವಿಷಮ ಪರಿಸ್ಥಿತಿಯಿಂದ, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರ ನಮ್ಮಂನ್ನಿಂದು ಪಾರುಮಾಡಬಲ್ಲವು.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...