Homeಮುಖಪುಟಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

ಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

- Advertisement -
- Advertisement -

ದೇಶದ ತುಂಬ ದ್ವೇಷ ಹರಡುವ ಶಕ್ತಿಗಳು ಹೆಚ್ಚುತ್ತಿವೆ. ಅಸಹಿಷ್ಣುತೆ ಮನೆ ಮಾಡಿದೆ. ಯುದ್ದೋನ್ಮಾದದ ವಾತಾವರಣ ಸೃಷ್ಟಿಯಾಗಿದೆ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ,, ಜನರ ನಡುವೆ ಪ್ರೀತಿ, ಸಹಬಾಳ್ವೆಯನ್ನು ಬಿತ್ತಬೇಕಾದವರೇ ದ್ವೇಷದ ಮಾತುಗಳನ್ನಾಡುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾದರೆ ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ ಅನುಸರಿಸುವುದು ಬಹಳ ಮುಖ್ಯವಾಗಿದೆ. ದ್ವೇಷವನ್ನು ಅಳಿಸಿ ಪ್ರೀತಿಯನ್ನು ಹಂಚುವಂತಹ ಕೆಲಸಕ್ಕೆ ಎಲ್ಲರೂ ಮುಂದಾಗಬೇಕೆಂಬ ಪಣವನ್ನು ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ತೊಟ್ಟರು.

ಜನಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರಿನ ಸ್ವಾತಂತ್ರ್ಯ ಚೌಕದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯನ್ನು ಮೇಣದ ಬತ್ತಿಗಳನ್ನು ಹಚ್ಚಿ ಮಾನವೀಯತೆ ಸಾಕಾರಗೊಳ್ಳಲಿ. ಶಾಂತಿ ಮತ್ತು ಅಹಿಂಸೆಯೇ ನಮ್ಮ ಧ್ಯೇಯ, ನಮ್ಮಲ್ಲಿರುವುದು ಒಂದೇ ರಕ್ತ ನಾವು ಮನುಷ್ಯರು ಎಂಬ ಘೋಷಣೆಗಳನ್ನು ಕೂಗಿದರು. ಇದು ಬೆಳಕು. ಈ ಬೆಳಕಿನಲ್ಲಿ ಮಾನವೀಯತೆ ಸಾರೋಣ. ಯಾವುದೇ ಜಾತಿ, ಮತ, ಧರ್ಮ ಮತ್ತು ಪ್ರಾದೇಶಿಕತೆ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರೋಣ ಎಂಬ ಸಂದೇಶಗಳನ್ನು ಸಾರಲಾಯಿತು.

ಭಾಷಣಕಾರರ ಮಾತುಗಳೆಲ್ಲವೂ ಗಾಂಧೀ ಅವರ ಅಹಿಂಸೆ ಕುರಿತಾಗಿದ್ದವು.ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ. ದ್ವೇಷದ ಸಂಸ್ಕೃತಿಯಲ್ಲ.ಬದಲಿಗೆ ಪ್ರೀತಿ ಮತ್ತು ಸಹನೆಯ, ಧರ್ಮನಿರಪೇಕ್ಷೆಯ ಸಂವಿಧಾನ ಹೊಂದಿರುವ ದೇಶ. ನಾವು ಬಾಳ್ವೆಯಿಂದ ಬದುಕಬೇಕು. ಯುದ್ದೋನ್ಮಾದಕ್ಕೆ ಅವಕಾಶ ಕೊಡಬಾರದು. ಹಿಂಸೆ ನಮ್ಮ ಸಂಸ್ಕೃತಿಯಲ್ಲ. ಹಿಂಸೆ ಶಾಶ್ವತ ಪರಿಹಾರವನ್ನು ತಂದುಕೊಡುವುದಿಲ್ಲ. ಹಿಂಸೆಯಿಂದ ದುಃಖ ಹೆಚ್ಚುತ್ತದೆ. ಹಿಂಸೆ ನೋವನ್ನು ತರಿಸುತ್ತದೆ. ಹೀಗಾಗಿ ಗಾಂಧೀ ಅವರ ಅಹಿಂಸೆ ಮಾರ್ಗ ಸುಂದರ ಸಮಾಜವನ್ನು ನಿರ್ಮಾಣ ಮಾಡುತ್ತದೆ. ಅತ್ತ ನಾವು ಹೋಗಬೇಕು ಎಂಬುದನ್ನು ಜನಪರ ಚಿಂತಕೆ ಕೆ.ದೊರೈರಾಜ್ ಸಾರಿ ಹೇಳಿದರು.

ಗಾಂಧೀಜಿ ಸುಳ್ಳನ್ನು ಹೇಳಬೇಡಿ ಅಂದ್ರು ಆದರೆ ಸುಳ್ಳುಕೋರರು ಜಾಸ್ತಿಯಾಗಿದ್ದಾರೆ. ಹಿಂಸೆ ಮಾಡಬಾರದು ಅಂದ್ರು, ಆದರೆ ಹಿಂಸೆಯ ಮಾತುಗಳನ್ನಾಡುವವರು ಹೆಚ್ಚಾಗಿದ್ದಾರೆ. ಸತ್ಯವನ್ನು ನುಡಿಯಬೇಕು ಅಂದ್ರು, ಆದರೆ ಅಸತ್ಯವನ್ನೇ ಮನೆಮಾತಾಗಿಸಿಕೊಂಡವರು ಹೆಚ್ಚು. ಗಾಂಧೀ ಚಿಂತನೆಗಳನ್ನು ಹೇಳುತ್ತಲೇ, ಹಿಂಸೆಗೂ ಪ್ರಚೋದಿಸುವ ಶಕ್ತಿಗಳು ಸಮಾಜದಲ್ಲಿ ದ್ವೇಷವನ್ನೂ ಹರಡುತ್ತಾ ಜನರ ನೆಮ್ಮದಿಗೆ ಭಂಗ ತರುತ್ತಿವೆ. ಇದು ಶಾಶ್ವತವಲ್ಲ. ಆದರೂ ಕೋಮುವಾದಿ ಶಕ್ತಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿವೆ. ನಾವು ಪ್ರೀತಿಯೊಂದನ್ನು ಹಂಚಬೇಕಾಗಿದೆ ಎಂಬಂತಹ ಮಾತುಗಳನ್ನು ಗಣ್ಯರು ಹೇಳಿದರು.

ಟೌನ್ ಹಾಲ್ ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂರಾರು ಕಾರ್ಯಕರ್ತರು ಯುವ ಮುಖಂಡ ತಾಜುದ್ದೀನ್ ಶರೀಪ್ ನೇತೃತ್ವದಲ್ಲಿ ಗಾಂಧೀ ಹುತಾತ್ಮ ದಿನವನ್ನು ಆಚರಿಸಲಾಯಿತು.ಮಹಾತ್ಮ ಗಾಂಧಿ ಅವರನ್ನು ನಾಥೂರಾಮ್ ಗೋಡ್ಸೆ ಕೊಂದು ಹಾಕಿದರು. ಗೋಡ್ಸೆ ಸಂತತಿ ಇಂದಿಗೂ ತನ್ನ ಮಸಲತ್ತು ನಡೆಸಿದೆ. ಕೋಮುವಾದಿ ಶಕ್ತಿಗಳು ಆಳ್ವಿಕೆ ನಡೆಸುತ್ತಿದ್ದು ಶಾಂತಿಯುತ ಪ್ರತಿಭಟನೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಕೊಲ್ಲಲಾಗಿದೆ. ಇಂತಹ ಘಟನೆಗಳು ನಡೆಯಬಾರದು. ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಗಾಂಧೀಯ ವಿಚಾರಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ಭಾಷಣಕಾರರು ಬೊಟ್ಟು ಮಾಡಿ ಹೇಳಿದರು.

CAA, NRC ಮತ್ತು NPR ಕಾಯ್ದೆಗಳು ಒಡೆದು ಆಳುವ ನೀತಿಗೆ ಪೂರಕವಾಗಿವೆ. ಅಲ್ಪಸಂಖ್ಯಾತ ಸಮುದಾಯ, ಬಡವರು, ದಲಿತರಲ್ಲಿ ಆತಂಕವನ್ನುಂಟು ಮಾಡಿದೆ. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಸಮಾಜವನ್ನು ಛಿದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಸಮಾಜವನ್ನು ಒಡೆಯುವ ಕೆಲಸವನ್ನು ಬಿಡಬೇಕು. ಸಂವಿಧಾನದ ಆಶಯಗಳಂತೆ ಸರ್ಕಾರವನ್ನು ನಡೆಸಬೇಕು ಎಂದು ಆಗ್ರಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶಕ್ಕಿಂದು ಒದಗಿರುವ ವಿಷಮ ಪರಿಸ್ಥಿತಿಯಿಂದ, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರ ನಮ್ಮಂನ್ನಿಂದು ಪಾರುಮಾಡಬಲ್ಲವು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...