HomeUncategorizedಹೂಗಳ ಶವಯಾತ್ರೆಯಲಿ

ಹೂಗಳ ಶವಯಾತ್ರೆಯಲಿ

- Advertisement -
- Advertisement -
   –ಡಾ. ವಿನಯಾ ಒಕ್ಕುಂದ

‘ನಂಗೆ ತಡ ಆಗ್ತಿದೆ. ಏನ್ ನೀನು.. ಬೆಳಿಗ್ಗೆ ಬೆಳಿಗ್ಗೆಯೇ ಫೇಸ್‍ಬುಕ್ಕಾ$’ ಎಂದು ಒಂದಿಷ್ಟು ಜರ್ಬಿನಲ್ಲಿಯೇ ಮಗಳ ರೂಂ ಹೊಕ್ಕಿದ್ದೆ. ಅವಳು ತಾನು ನೋಡುತ್ತಿದ್ದ ಮೊಬೈಲ್‍ನ್ನು ನನ್ನೆದುರು ಹಿಡಿದಳು. ಅಲ್ಲಿ ಮುದ್ದಾದ ಹುಡುಗಿಯೊಬ್ಬಳಿದ್ದಳು. ‘ಹೂಂ ಚಂದಿದ್ದಾಳೆ’ ಅಂದೆ. ಅವಳ ರೇಪ್ ಆಗಿ ಮರ್ಡರ್ ಆಗಿದೆಯಂತಮ್ಮಾ- ಅಂದಳು. ಏನು ಎಲ್ಲಿ ಎಲ್ಲ ಅರೆಬರೆ. ಯಾರೋ ಅಂಟುರಾಳ ಕುದಿಸಿ ಗಂಟಲಿಗೆ ಹೊಯ್ದಿದ್ದಾರೆ ಅನ್ನುವಂತೆ ನೋವಿನ ಅಮಲೇರಿತ್ತು. ತೊಡೆಗುಂಟ ನಡುಕ. ಯಾಕೆ ಇಷ್ಟು ದುರ್ಬಲವಾಗುತ್ತಿದ್ದೇನೆ ಎಂದೂ ತಿಳಿಯದಷ್ಟು. ಸಂಜೆಯಷ್ಟೊತ್ತಿಗೆ ಮಗಳು ಕಥುವಾದ 8 ವರ್ಷದ ಮುದ್ದು ಮಗು ಆಸೀಫಾಳ ಚಿತ್ರ ಬರೆಯುತ್ತ ಕೂತಿದ್ದಳು. ಸ್ನಾನವನ್ನೂ ಮಾಡಿರಲಿಲ್ಲ. ಕೇಳಿದರೆ ‘ಮಾಡಬೇಕು ಅನ್ನಿಸಲಿಲ್ಲ’ ಎಂದಳು. ಯಾತನೆಯನ್ನು ಅದುಮಿಡುವ ಒರಟುತನದಲ್ಲಿ. ಈಗ ಸಂಭಾಳಿಸಿಕೊಂಡಿದ್ದೇವೆ. ನಮನಮಗೆ ನಾವೇ. ಅವಳು ಫೇಸ್‍ಬುಕ್ ವಿಷಯಗಳನ್ನು ಮುಂದೆ ಹಿಡಿಯುತ್ತ ನಾನು ಪೇಪರ್‍ನ ಸುದ್ದಿಗಳನ್ನು ತೋರಿಸುತ್ತ…. ಅಂತ್ಯವೇ ಇಲ್ಲದ ಜುಗಲ್‍ಬಂದಿಯ ತಡಬಡಿಕೆಯಲ್ಲಿ.
ಇದು ಆರಂಭವೂ ಅಲ್ಲ. ಅಂತ್ಯವು ಅಲ್ಲ. ದೇಶದಲ್ಲಿ ಸಹಬಾಳ್ವೆಯ ಬಗ್ಗೆ ಆಕಾರಣ ತ್ವೇಷಮಯ ಸ್ಥಿತಿ ಉಲ್ಬಣಿಸತೊಡಗಿದಂತೆ ಆ ಉರಿಕೆನ್ನಾಲಿಗೆಗೆ ಹೆಣ್ಣುಮಕ್ಕಳು ಬಲಿಯಾಗುತ್ತಾರೆ.  ಅಸಹನೆ ವೈಯಕ್ತಿಕವಾಗಿರಲಿ, ಕೌಟುಂಬಿಕವಾಗಿರಲಿ, ಮತೀಯವಾಗಿರಲಿ, ರಾಷ್ಟ್ರೀಯವಾಗಿರಲಿ… ಅದರ ವಿಷಫಲವನ್ನು ಹೆಣ್ಣು ಅನುಭವಿಸಬೇಕಿದೆ. ದುರಂತವೆಂದರೆ, ದಿನದಿಂದ ದಿನಕ್ಕೆ ವಿಕೃತತೆ ಬೆಳೆಯುತ್ತಲೂ ಇದೆ. ನಾಗರಿಕ ಸಮಾಜದಲ್ಲಿ ಬಾಳುತ್ತಿದ್ದೇವೆಯೇ ಎಂದು ಅನುಮಾನಿಸಿಕೊಳ್ಳುವಂತೆ. ಕಥುವಾದ ಮಗುವನ್ನು ದೇವಸ್ಥಾನದಲ್ಲಿ ಬಂಧಿಸಿಟ್ಟು ನಿರಂತರ ಅತ್ಯಾಚಾರ ಮಾಡಿದವರು, ಹಿಂದೂ ಧರ್ಮದ ಭಾರತವನ್ನು ರಕ್ಷಿಸುತ್ತಿದ್ದೇವೆ- ಎಂದು ಭ್ರಮಿಸಿದವರು. ದೇವಸ್ಥಾನದ ಪಾವಿತ್ರ್ಯ, ತಮ್ಮ ನೀಚ ಕೆಲಸ ಹೇಗೆ ತಾಳೆಯಾದೀತೆಂಬ ಅನುಮಾನವೂ ಅವರನ್ನು ಕಾಡಲಿಲ್ಲ. ಈ ಆರೋಪಿಗಳು ಸಮಾಜದ ಮುಖ್ಯವಾಹಿನಿಯಲ್ಲಿರುವ ಸಭ್ಯ ನಾಗರಿಕರು. ಆ ಮಗುವಿನಂಥದೇ ಹೆಣ್ಣು ಮಕ್ಕಳಿರುವ ತಂದೆಯಂದಿರು. ದೂರದ ಊರಿನ ಸಂಬಂಧಿಗೆ- ಹೀಗೊಂದು ರೇಪ್ ಅವಕಾಶವಿದೆ ಬರುತ್ತೀಯಾ? – ಎಂದು ಹಂಚಿಕೊಂಡು ಅನುಭವಿಸುವ ಸಂಸ್ಕøತಿವಂತರು. ಕಡೆಯ ಬಾರಿ ಒಮ್ಮೆ ರೇಪ್ ಮಾಡಿ ಆಮೇಲೆ ಪ್ರಾಣ ತೆಗೆದರಾಯಿತು ಎಂದು ಪೂರ್ಣ ಪ್ರಯೋಜನ ಪಡೆದುಕೊಳ್ಳುವ ತಿಳಿವಳಿಕಸ್ಥರು. ಅವರು ಮಗುವನ್ನು ಹಸಿವಿನಿಂದ ನೀರಡಿಕೆಯಿಂದ ಬಳಲಿಸಿದರು. ಬಲವಂತವಾಗಿ ಮದ್ಯಪಾನ ಮಾಡಿಸಿ ಆ ಪುಟ್ಟ ದೇಹವನ್ನು ಛಿದ್ರ ಮಾಡಿದರು. ಮಗುವಿನ ದೇಹದ ಒಳಹೊರಗುಗಳನ್ನು ರಣಗಾಯವಾಗಿರಿಸಿದರು. ಆ ಪೈಶಾಚಿಕ ವರ್ತನೆಯನ್ನು ಕೇಳಿದರೆ ‘ಸದ್ಯ ಮಗು ಉಳಿಯಲಿಲ್ಲವಲ್ಲ. ಅಷ್ಟು ಸಾಕು’ – ಎಂದು ಉಸಿರಿಡುವಂತಾಗುತ್ತದೆ. ಜಮ್ಮು-ಕಾಶ್ಮೀರದಲ್ಲಿ ಹಿಂದೂ-ಮುಸ್ಲಿಂರ ನಡುವೆ ಹೆಚ್ಚುತ್ತಿರುವ ಜನಾಂಗೀಯ ದ್ವೇಷದ ಉರಿಯಿದು ಈ ಮಗು ಬಕ್ರೆವಾಲಾ ಎಂಬ ಕುರಿಗಾಹಿ ಅಲೆಮಾರಿ ಕುಟುಂಬಕ್ಕೆ ಸೇರಿದ್ದು. ಅವರು ಮುಸ್ಲಿಂ ಮತಾನುಯಾಯಿಗಳು. ಭಾರತದ ಯಾವ ಮೂಲೆಯಲ್ಲಿರುವ ಮುಸ್ಲಿಂರನ್ನೂ ಪಾಕಿಸ್ತಾನದ ಏಜೆಂಟರು ಎಂದು ಗುಲ್ಲೆಬ್ಬಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವುದು ಕೋಮುವಾದಿಗಳಿಗೆ ಸಾಧ್ಯವಾಗಿರುವಾಗ ಪಾಕಿಸ್ತಾನದ ಗಡಿಯ ಬಡ ಮುಸ್ಲಿಮರ ಮೇಲೆ ಈ ಆರೋಪ ಹೊರಿಸುವುದು ಅಲ್ಲಿಯ ಹಿಂದೂ ಏಕತಾ ಮಂಚ್ ಮತ್ತು ಭಾರತ ಬಚಾವೊ ರಥಯಾತ್ರೆಯ ಸಂಘಟನೆಗಳಿಗೆ ಕಷ್ಟವಲ್ಲ. ಒಮ್ಮೆ ದೊಡ್ಡದನಿಯಲ್ಲಿ ಆರೋಪವನ್ನು ಹೊರೆಸಿ, ಪ್ರಚಾರಕ್ಕೆ ತಂದರೆ ಮುಕ್ಕಾಲು ಕೆಲಸ ಆಯಿತೆಂದೇ ಲೆಕ್ಕ. ಪ್ರಚಾರವೇ ಅಧಿಕೃತತೆಯಾದ ಕಾಲದಲ್ಲಿ ಶಿಕ್ಷಿಸುವ ಅಧಿಕಾರ ದತ್ತವಾಗುತ್ತದೆ. ಸಂವಿಧಾನಾತ್ಮಕ ಕಾನೂನು ಏನೇ ಹೇಳಲಿ, ಮತೀಯತೆಯೇ ಕಾನೂನಾದವರಿಗೆ ಅದರ ಹಂಗೇ ಇಲ್ಲ. ತಮ್ಮೊಳಗಿನ ಧರ್ಮಾಂಧತೆ ಮತ್ತು ಕಾಮುಕ ವಿಕೃತಿಗೆ ರಾಷ್ಟ್ರಭಕ್ತಿಯ ತೆಳು ಪರದೆ ಹೊದ್ದು ರಕ್ಷಣಾತ್ಮಕ ಯುದ್ಧದ ವರಸೆಗಳನ್ನು ಹಾಕುತ್ತಲೇ ಇದ್ದಾರೆ. ಕಟುವಾದ ಘಟನೆಗೆ ಏನೆಲ್ಲ ಮೊನಚುಗಳಿವೆ. ಎಳೆಯ ಹೂವಿನಂತಹ ಮಗುವಿನ ದೇಹ ಅನುಭವಿಸಿರಬಹುದಾದ ಯಾತನೆಯ ವಿದ್ರಾವಕತೆ, ಮತೀಯ ಭ್ರಮೆ ಮನುಷ್ಯರನ್ನು ಅದೆಷ್ಟು ಕ್ರೂರಿಗಳನ್ನಾಗಿಸಬಹುದೆಂಬ ಭೀಕರತೆ, ದೇಶದ ನ್ಯಾಯಾಂಗವನ್ನು ರಕ್ಷಿಸುವ ಹೊಣೆ ಹೊತ್ತ ವಕೀಲರು, ರಕ್ಷಕರಾಗಿರಬೇಕಿದ್ದ ಪೋಲಿಸರು, ಶಾಸಕಾಂಗದ ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿಗಳು ಆರೋಪಿಗಳ ರಕ್ಷಣೆಗೆ ಪಣತೊಟ್ಟಿರುವ ಅಧಃಪತಗಳೆಲ್ಲ ಸೇರಿದ ಜಟಿಲ ಹೆಣಿಗೆಯಿದು. ರಾಜ್ಯದಲ್ಲಿ ನ್ಯಾಯಸಿಗದು, ಮಗುವಿನ ಸಮಾಧಿಯೂ ಸುರಕ್ಷಿತವಲ್ಲ – ಎಂದು ಬಡ ಕುಟುಂಬ ಕಣ್ಣೀರು ಹಾಕುತ್ತಿದ್ದರೆ; ಇಂತಹ ಹೇಯ ಘಟನೆಗಳಿಗೆ ಮೌನದಿಂದಲೇ ಸ್ಪಂದಿಸುವ, ಕಡೆಗೊಂದು ತೇಪೆಯ ಮಾತು ಹಚ್ಚುವ ಜನನಾಯಕರಿರುವ ರಾಷ್ಟ್ರವಿದು. ಅಲೆಮಾರಿ ಜನಾಂಗದ ಮಗುವಿನ ಈ ಬರ್ಬರ ಹಿಂಸೆಯ ಪಾಪವನ್ನು ಮಾನ್ಯ ಪ್ರಧಾನಿಗಳು ಬುಡಕಟ್ಟು ಮಹಿಳೆಯೊಬ್ಬರ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಪರಿಹರಿಸಿಕೊಳ್ಳಲು ಬಯಸಿದರೇನೋ. ಪಾಪ ಪರಿಹಾರವಾಯಿತೇ? ಗೊತ್ತಿಲ್ಲ. ಜನರ ಮನಸ್ಥಿತಿಯನ್ನು ಸ್ವಲ್ಪ ಮಟ್ಟಿಗಾದರೂ ವಿಚಲಿತಗೊಳಿಸಿ ತಮ್ಮ ಉದಾರ ವ್ಯಕ್ತಿತ್ವದ ನಾಟಕ ಮುಂದುವರಿಸುವಲ್ಲಿಯಂತೂ ಆ ದೃಶ್ಯ ಸಹಾಯ ಮಾಡಿರಬಹುದು. ಒಬ್ಬರು ಸಂವಿಧಾನದ ಸಾಧ್ಯತೆಯನ್ನು ಪ್ರಶ್ನಿಸುತ್ತಾರೆ. ಇನ್ನೊಬ್ಬರು ಅಂಬೇಡ್ಕರರನ್ನು ಸಂತ – ಋಷಿ ಎಂದೆಲ್ಲ ಕರೆದು ಹೂ ಏರಿಸಿ ಮತಬೇಟೆಗೆ ಯತ್ನಿಸುತ್ತಾರೆ. ಎರಡೂ ಕೆಲಸ ಒಂದೇ ಚಿಂತನೆಯ ಜನರದ್ದೇ. ಜನ ಬರೀ ಪ್ರೇಕ್ಷಕರು. ಗೋಣಾಡಿಸುವವರು.

ಉನ್ನಾವ್‍ದ ಘಟನೆಯಂತೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥನ ಸಂಪುಟ ಸಚಿವರಿಗೆ ನೇರ ಸಂಬಂಧಿಸಿದ್ದು. ಸುಮಾರು ಒಂದು ವರ್ಷದ ಹಿಂದಿನ ಪ್ರಕರಣವನ್ನು ಮುಚ್ಚಿಹಾಕುವ ರಾಜಕಾರಣ ನಿಚ್ಚಳವಾಗಿದೆ. ಈ ಘಟನೆಗಳಲ್ಲಿ ಭಾರತದ ಆತ್ಮಗೌರವವನ್ನು ಎತ್ತಿಹಿಡಿದ ಎರಡು ಉಳಿಕೆಗಳಿವೆ. ಉನ್ನಾವ್ ಘಟನೆಯನ್ನು ನಿರ್ವಹಿಸುತ್ತಿರುವ ಹೈಕೋರ್ಟ್ ಮತ್ತು ಕಟುವಾ ಪ್ರಕರಣವನ್ನು ತನಿಖೆ ನಡೆಸಿದ್ದ ಉನ್ನತ ಅಧಿಕಾರಿ ರಮೇಶ ಜಾಲ ಅವರು ತಮ್ಮೆಲ್ಲ ಒತ್ತಡಗಳ ನಡುವೆಯೂ ಮಗುವಿನ ನ್ಯಾಯಕ್ಕಾಗಿ ಪ್ರಯತ್ನಿಸಿದ ರೀತಿ. ಅವರು ಉಗ್ರವಾದಿಗಳ ದಾಳಿಗೆ ಒಳಗಾಗಿ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿದ್ದರು ಮತ್ತು ಅವರು ಹುಟ್ಟಿನಿಂದ ಕಾಶ್ಮೀರಿ ಪಂಡಿತ ಸಮುದಾಯದವರು ಎನ್ನುವುದು ಕಣ್ಣಿವೆಯನ್ನು ಒದ್ದೆಯಾಗಿಸುತ್ತದೆ. ಆದಿತ್ಯನಾಥನನ್ನು ನಾಥ ಪಂಥದಯೋಗಿ ಎನ್ನುವವರಿಗೆ, ನಾಥ ಪಂಥದ ಮೂಲಸತ್ವದ ಅರಿವಿದೆಯೋ? ಎಂದು ಕೇಳಬೇಕೆನಿಸುತ್ತದೆ. ಶಾಲೆ, ಕಾಲೇಜು, ಅಂಗಡಿ, ಮುಂಗಟ್ಟು, ಮಸೀದಿ ಕಡೆಗೆ ಅಂಬೇಡ್ಕರ ಮೂರ್ತಿಗೂ ಕೇಸರಿ ಬಣ್ಣ ಬಳಿವ ದಾಷ್ಟ್ರ್ಯವನ್ನು ತೋರುವ ಸರ್ವಾಧಿಕಾರಿ ಯಾವ ಸಾಧಕ ಸಂಪ್ರದಾಯ ಸೇರಲು ಸಾಧ್ಯ? ನನಗಂತೂ ಆ ವ್ಯಕ್ತಿಯ ಹೆಸರು ಕೇಳಿದಾಗೆಲ್ಲ ಗೋರಖಪುರವೇ ನೆನಪಾಗುತ್ತದೆ. “ನಾನು ಶವಯಾತ್ರೆಯಲಿ ಹೂಗಳನು ಕಂಡಿದ್ದೆ. ನಿನ್ನೆ ಗೋರಖಪುರದಲ್ಲಿ ಹೂಗಳ ಶವಯಾತ್ರೆ ಕಂಡೆ” – ಎಂಬ ಗುಲ್ಜಾರರ ಕವಿತೆಯೂ. ಅದ್ಯಾಕೆ ಒಂದು ನಿರ್ದಿಷ್ಟ ಸಮುದಾಯದ ಬಡವರೇ ಹೆಚ್ಚಿರುವ ಪ್ರದೇಶದ ಆಸ್ಪತ್ರೆಯಲ್ಲಿ ವಿದ್ಯುತ್ ಕೈಕೊಟ್ಟುಬಿಟ್ಟಿತು? ಎಂದು ಕೇಳಬೇಕೆನಿಸುತ್ತದೆ. ರಾಜೇಂದ್ರ ಚೆನ್ನಿಯವರು ಉಲ್ಲೇಖಿಸುವ ನಾಓಮಿಕ್ಲೀನ್ ಬರೆದ ಖಿhe shoಛಿಞ ಜoಛಿಣಡಿiಟಿe ಕೃತಿಯಲ್ಲಿ
ಅಮೆರಿಕದ ನಗರವೊಂದನ್ನು ಚಂಡಮಾರುತ ಅಪ್ಪಳಿಸಿ ಕೆಳಮಧ್ಯಮ ವರ್ಗದ ಬಡಾವಣೆಗಳನ್ನು ಗುಡಿಸಿಹಾಕುತ್ತದೆ. ಜನ ಬೀದಿಗೆ ಬೀಳುತ್ತಾರೆ. ರಾಜಕೀಯ ಧುರೀಣರು ಮಾತ್ರ ‘ನಾವು ಮಾಡಲಾಗದ್ದನ್ನು ದೇವರೇ ಮಾಡಿದ’ ಎಂದು ಸಂತಸಪಡುತ್ತಾರೆ. ಅಲ್ಲಿ ಕಾರ್ಪೊರೇಟ್ ಕಂಪನಿಗಳಿಂದ ಟೂರಿಸ್ಟ ರೆಸಾರ್ಟುಗಳ ಯೋಜನೆ ಸಿದ್ಧವಾಗುತ್ತದೆ. “ಒಂದು ಅತ್ಯಾಚಾರವನ್ನು ದೊಡ್ಡದು ಮಾಡಬೇಡಿ ದೇಶದ ಪ್ರವಾಸೋದ್ಯಮಕ್ಕೆ ಧಕ್ಕೆ ಆಗುತ್ತದೆ- ಎಂದು ‘ಅಧಿಕಾರಸ್ಥರು’ ಮಾತಾಡುವಾಗ ಈ ಎಲ್ಲವುಗಳಿಗೆ ಇರುವ ಸಹ ಸಂಬಂಧ ಮನಸ್ಸನ್ನು ಚುಚ್ಚತೊಡಗುತ್ತಿದೆ.
ಇಂದಿನ ಬೆಳಗು, ಸೂರತ್ ಪೊದೆಯಲ್ಲಿ ಹೆಣ್ಣು ಮಗುವೊಂದರ ಮೃತದೇಹ ಪತ್ತೆಯಾಗಿದ್ದು 86 ಗಾಯಗಳಿದ್ದ ಮತ್ತು ಸತತ ಭೀಕರ ಅತ್ಯಾಚಾರಕ್ಕೊಳಗಾದ ದೇಹ ಎನ್ನಲಾಗಿದೆ. ಮಗುವಿನ ದಾತಾರರೂ ಗುರುತಿಲ್ಲ. – ಮನಸ್ಸು ನಡುಗುತ್ತಿದೆ. ನನ್ನ ಮಗಳೀಗ ಚಿತ್ರದ ಯಾವ ರೇಖೆಯಲ್ಲಿದ್ದಾಳೋ, ಅದೇನು ಕೇಳುತ್ತಾಳೋ…. ಅಥವಾ ಜೀವ ರೋಸಿ ವಾಸ್ತವದ ನಿಷ್ಠುರತೆಗೆ ಬೆನ್ನುಹಾಕಿ ಅದೆಂಥದೋ ಮನರಂಜನೆಯ ಚೆನಲ್‍ಗೆ ಕಣ್ಣು ಕೀಲಿಸಿದರೆ…. ಗುಲ್ಜಾರ್, ಹೂಗಳ ಶವಯಾತ್ರೆ ಎಂದು ಕರೆದದ್ದು ಯಾವೆಲ್ಲದ್ದಕ್ಕೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...