Homeರಾಜಕೀಯಹೆಗಡೆ ಮಗಳು ಕೈ ಕ್ಯಾಂಡಿಡೇಟಾದರೆ ಅನಂತ್ಮಾಣಿಗೆ ಸೋಲು ಗ್ಯಾರಂಟಿ!

ಹೆಗಡೆ ಮಗಳು ಕೈ ಕ್ಯಾಂಡಿಡೇಟಾದರೆ ಅನಂತ್ಮಾಣಿಗೆ ಸೋಲು ಗ್ಯಾರಂಟಿ!

- Advertisement -
- Advertisement -

ಶುದ್ಧೋದನ |

ಉತ್ತರ ಕನ್ನಡದಲ್ಲಿ ಲೋಕಸಭೆ ಚುನಾವಣೆಯ ಸಂಭಾವ್ಯ ಪೈಲ್ವಾನಕುರಿತು ರಂಗು-ರಂಗಿನ ಮಾತುಕತೆ ನಡೆಯಲಾರಂಭಿಸಿದೆ. ಬಿಜೆಪಿಯ ಕಟ್ಟಾ ಬೆಂಬಲಿಗರಾದ ಬ್ರಾಹ್ಮಣರೂ ಅಧಿಕ ಪ್ರಸಂಗಿ ಸಂಸದ ಅನಂತ್ಮಾಣಿಯ ಹಾವಳಿಗೆ ರೋಸತ್ತು ಹೋಗಿದ್ದಾರೆ. ಸ್ವಪಕ್ಷದೊಳಗಿನ ಬ್ರಾಹ್ಮಣ ಲಾಬಿಯೂ ಆತನಿಗೆ ತಿರುಗಿ ಬಿದ್ದಿರೋದು ಚುನಾವಣಾ ಕಣಕ್ಕೆ ರೋಚಕತೆಯನ್ನು ತಂದುಕೊಟ್ಟಿದೆ. ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ, ಶಿರಸಿ ಶಾಸಕ-ಕಾಗೇರಿ ಹೆಗಡೆ ವಗೈರೆ ವಿಪ್ರೋತ್ತಮರ ವಿರೋಧಿ ಪಡೆ ಅನಂತ್ಮಾಣಿಗೆ ಗೇಟ್‌ಪಾಸ್ ಕೊಡಿಸುವ ಹಠಕ್ಕೆ ಬಿದ್ದಿದೆ. ಈಚೆಗೆ ನಿಧನರಾದ ಕೇಂದ್ರ ಮಂತ್ರಿ ಅನಂತ ಕುಮಾರ್ ಶಾಸ್ತ್ರೀಯ ಇಂಗಿತವೂ ಇದೇ ಆಗಿತ್ತು. ಹಿಂದುತ್ವದ ಇತಿಹಾಸ ‘ತಜ್ಞ’ ಸೂಲಿಬೆಲೆ ಚಕ್ರವರ್ತಿಯನ್ನು ಉತ್ತರಕನ್ನಡದಲ್ಲಿ ಬಿಜೆಪಿ ಕ್ಯಾಂಡಿಡೇಟ್ ಮಾಡುವ ಪ್ರಯತ್ನ ಬಿರುಸಾಗಿ ನಡೆಯುತ್ತಿದೆ. ಇದು ಸಾಧ್ಯವಾಗದಿದ್ದರೆ ಅನಂತ್ಮಾಣಿಯ ಆಜನ್ಮ ಶತ್ರು ಕಾಗೇರಿ ಹೆಗಡೆಯನ್ನು ಕೇಸರಿ ಪಾಳೆಯದ ಕಪ್ಪುಕುದುರೆ ಮಾಡಿ ಯುದ್ಧಕ್ಕಿಳಿಸುವ ಪ್ಲಾನ್-ಬಿ ಕೂಡ ಹೆಣೆಯಲಾಗಿದೆ.

ಈಗಾಗಲೇ ನಡೆದಿರುವ ಸಮೀಕ್ಷೆಗಳೆಲ್ಲವೂ ಮಾಣಿ ಗೆಲ್ಲುವುದು ಅನುಮಾನ ಎಂತಲೇ ಹೇಳಿವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಎಚ್ಚರಿಕೆಯ ಒಮ್ಮತದ ಗೇಮ್‌ಪ್ಲ್ಯಾನ್ ಹೆಣೆದರೆ ಅನಂತ್ಮಾಣಿಯನ್ನು ಮಾಜಿ ಮಾಡೋದು ಕಷ್ಟದ ಕೆಲಸವೇನೂ ಅಲ್ಲ. ಕಾಂಗ್ರೆಸ್-ಜೆಡಿಎಸ್ ಹೈಕಮಾಂಡ್ ಎರಡನ್ನು ಏಕಕಾಲದಲ್ಲಿ ನಿಭಾಯಿಸಬಲ್ಲ ಆರ್.ವಿ.ದೇಶಪಾಂಡೆ ದಗಲುಬಾಜಿತನ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮೈತ್ರಿಕೂಟದ ಹುರಿಯಾಳು ನಿರಾಯಾಸವಾಗಿ ಗೆಲ್ಲಬಹುದು. ಹಾಗಂತ ದೇಶಪಾಂಡೆ, ಕಳೆದ ಬಾರಿ ಬರೋಬ್ಬರಿ ಒಂದು ಮುಕ್ಕಾಲು ಲಕ್ಷ ಮತದಂತರದಲ್ಲಿ ಸೋತಿರುವ ತನ್ನ ಮಗ ಪ್ರಶಾಂತನನ್ನೇ ಮತ್ತೆ ಅಭ್ಯರ್ಥಿಯಾಗಿಸಿದರೆ ಅದು ಕಾಂಗ್ರೆಸ್ಸಿಗೇ ಲುಕ್ಸಾನು. ಯಾಕೆಂದರೆ ಜಿಲ್ಲೆಯ ಎರಡು ಪ್ರಬಲ ಜಾತಿಯಾದ ಹವ್ಯಕ ಬ್ರಾಹ್ಮಣರು ಮತ್ತು ದೀವರನ್ನು ದೇಶಪಾಂಡೆ ಎದುರು ಹಾಕಿಕೊಂಡಿರೋದು ಅವರಿಗೆ ಮುಳುವಾಗಲಿದೆ.

ಮಗನಲ್ಲದಿದ್ದರೆ, ಡಿಸಿಸಿ ಅಧ್ಯಕ್ಷನೂ ಕಳೆದ ಅಸೆಂಬ್ಲಿ ಇಲೆಕ್ಷನ್ನಲ್ಲಿ ಶಿರಸಿಯಲ್ಲಿ ಸೋತಿರುವ ಭೀಮಣ್ಣ ನಾಯ್ಕನನ್ನಾದರು ಅಭ್ಯರ್ಥಿಯಾಗಿಸುವ ಸಾಹಸಕ್ಕೆ ದೇಶಪಾಂಡೆ ಸಾಹೇಬರು ಕೈಹಾಕಬಹುದು. ಆದರೆ ಸ್ವಜಾತಿ ದೀವರ ನಡುವೆಯೇ ಲೀಡರ್‌ಗಿರಿ ಬೆಳೆಸಿಕೊಳ್ಳಲಾಗದ ಭೀಮಣ್ಣನಿಗೆ ಎಂಪಿಗಿರಿ ಕ್ಯಾಂಡಿಡೇಟಾಗುವ ವರ್ಚಸ್ಸಿಲ್ಲ ಅನ್ನೋದು ಮಾತ್ರ ಸತ್ಯ. ಇನ್ನು ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್‌ರಿಗೆ ಉತ್ತರಕನ್ನಡದಿಂದ ಎಂಪಿಗಿರಿಗೆ ಸ್ಪರ್ಧಿಸುವ ಯೋಚನೆಯಿದ್ದಂತಿದೆ. ಆದರೆ ಈಡಿಗರ ನಾಯಕನೆಂಬ ಬ್ರ್ಯಾಂಡೇ ಹರಿಪ್ರಸಾದ್‌ಗೆ ಮುಳುವಾಗಿದೆ. ಯಾಕೆಂದರೆ ಜಿಲ್ಲೆಯಲ್ಲಿ ದೀವರ ವಿರುದ್ದ ಇತರ ಸಣ್ಣ ಪುಟ್ಟ ಜಾತಿಗಳು-ಬ್ರಾಹ್ಮಣರು ಒಂದಾಗುವ ದ್ವೇಷದ ವಾತಾವರಣವಿದೆ. ಇದು ಹಿಂದುತ್ವದ ಅಡ್ಡ ಪರಿಣಾಮ! ಬ್ರಾಹ್ಮಣಿಕೆಯ ತಂತ್ರಗಾರಿಕೆ!!

ಜೆಡಿಎಸ್‌ನ ಆನಂದ ಅಸ್ನೋಟಿಕರ್ ತಾನೊಬ್ಬ ಹಿಂದುಳಿದ ವರ್ಗದ ನಾಯಕಾಗ್ರೇಸ ಎಂಬಂತೆ ಪೋಸು ಕೊಡುತ್ತಿದ್ದಾನೆ. ಆದರೆ ಅಸ್ನೋಟಿಕರ್‌ಗೆ ಕಾರವಾರದಾಚೆಗೆ ಮತ ಪಡೆಯುವ ಶಕ್ತಿಯಿಲ್ಲ. ಬಿಜೆಪಿಯ ಅನಂತ್ಮಾಣಿ ಸೋಲಿಸಲು ಮೈತ್ರಿಕೂಟ ಆತನದೇ ಜಾತಿಯ ಹವ್ಯಕ ಅಭ್ಯರ್ಥಿ ನಿಲ್ಲಿಸುವ ಸ್ಟಾçಟಜಿ ಮಾಡಬೇಕಾಗಿದೆ. ಅನಂತ್ಮಾಣಿ ಬಗ್ಗೆ ಬೇಸರದಲ್ಲಿರುವ ಹವ್ಯಕರ ಮತ ಈ ತಂತ್ರಗಾರಿಕೆಯಿಂದ ಸಲೀಸಾಗಿ ಪಡೆಯಬಹುದು. ದೇಶಪಾಂಡೆ ಖಾನ್‌ದಾನ್ ಇಲೆಕ್ಷನ್ ಕಣದಿಂದ ದೂರಾದರೆ ದೀವರು ಮತ್ತಿತರ ಹಿಂದುಳಿದ ಸಮುದಾಯದ ಮತವೂ ಮೈತ್ರಿಕೂಟಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್‌ನಲ್ಲಿ ಅಂಥ ದೈತ್ಯ(ಅನಂತ್ಮಾಣಿ) ಸಂಹಾರಕ ಹವ್ಯಕ ಕಾಣಿಸುತ್ತಿಲ್ಲ. ಜೆಡಿಎಸ್‌ನಲ್ಲಿರುವ ಶಶಿಭೂಷಣ ಹೆಗಡೆ ಇಡೀ ಜಿಲ್ಲೆಯಲ್ಲಿ ಪ್ರಭಾವಳಿಯಿದೆ. ಹೆಗಡೆಜೀ ಮೊಮ್ಮಗನೆಂಬ ಬಲವಿದೆ. ಹವ್ಯಕರ ಮತ ಪಡೆಯಬಲ್ಲ ಶಶಿಭೂಷಣ್‌ಗೆ ಇತರ ವರ್ಗದ ಮತಕ್ಕೆ ಹಸ್ತ ಚಿಹ್ನೆ ಅನಿವಾರ್ಯ. ತೆನೆಹೊತ್ತ ಮಹಿಳೆಯಿಂದ ಇದು ಸಾಧ್ಯವಾಗದು. ಅಂದರೆ ಶಶಿ ಕಾಂಗ್ರೆಸ್ ಕ್ಯಾಂಡಿಡೇಟ್ ಆಗಿ, ದೇಶಪಾಂಡೆ ಶುದ್ಧಿಯಿಂದ ಕೆಲಸ ಮಾಡಿದರೆ ಗೆಲುವು ಸಾಧ್ಯ.

ಇದಕ್ಕೆ ದೇಶಪಾಂಡೆ ಒಪ್ಪುವುದು ಅನುಮಾನ. ಹಾಗೆಯೇ ಅನಂತ್ಮಾಣಿ ಬಗ್ಗೆ ಏನೋ ಒಂಥರ ಸೆಳೆತವಿರುವ ಶಶಿ ಆತನ ವಿರುದ್ಧ ನಿಲ್ಲಲಾರನೆಂಬ ಅಭಿಪ್ರಾಯ ಕಾಂಗ್ರೆಸ್-ಜೆಡಿಎಸ್-ಬಿಜೆಪಿಯಲ್ಲಿದೆ. ಈ ಒಳರಾಜಕಾರಣದ ಸುಳಿ ಸಂಕಷ್ಟ, ಜಿಲ್ಲೆಯ ಸೋಷಲ್ ಇಂಜಿನಿಯರಿಂಗ್, ಕ್ಯಾಸ್ಟ್ ಕೆಮಿಸ್ಟ್ರಿ ಲೆಕ್ಕಹಾಕಿರುವ ಕಾಂಗ್ರೆಸ್‌ನ ಒಂದು ಬಣ ತಣ್ಣಗೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮಗಳು ಮಮತಾ ನಿಚ್ಚಾನಿಯನ್ನು ಮೈತ್ರಿಕೂಟದ ಅಭ್ಯರ್ಥಿಯಾಗಿಸುವ ಪ್ಲಾನು ಹಾಕಿಕೊಂಡು ಆಕೆಯ ಹೆಸರು ತೇಲಿ ಬಿಡಲಾರಂಭಿಸಿದೆ. ಇದು ಸೂಕ್ತ ಆಯ್ಕೆ ಮತ್ತು ರಣತಂತ್ರ ಎಂದು ಜನಸಾಮಾನ್ಯರೂ ಹೇಳುತ್ತಿದ್ದಾರೆ. ಬಿಜೆಪಿಯ ಅನಂತ್ಮಾಣಿಯನ್ನು ಮನೆಗೆ ಕಳಿಸುವ ಮೂಡ್‌ನಲ್ಲಿರುವ ಮತದಾರರಿಗೆ ಹೆಗಡೆಜೀ ಖಾನ್‌ದಾನ್ ಹೆಸರು ಕೇಳುತ್ತಿದ್ದಂತೆಯೇ ಮೈತ್ರಿಕೂಟದತ್ತ ನೋಟ ಹರಿದಿದೆ.

ಇವತ್ತಿಗೂ ಉತ್ತರ ಕನ್ನಡದಲ್ಲಿ ಹೆಗಡೆಜೀ ಮತ್ತು `ಬಂ’ ನಾಮ ಬಿಲದ ವಿಚಿತ್ರ ಸೆಳೆತವಿದೆ. ಹೆಗಡೆಜೀ ಅಂದರೆ ಆತನ ಜಾತಿಬಂಧುಗಳಾದ ಹವ್ಯಕರಲ್ಲಿ ಕಮಲ-ಅನಂತ್ಮಾಣಿಯನ್ನು ಮರೆಸುವಷ್ಟು ಮೇನಿಯಾ ಇದೆ. ಹೆಗಡೆಜೀ ವಂಶದ ಮಮತಾ ಕಾಂಗ್ರೆಸ್ ಅಭ್ಯರ್ಥಿ ಅಂತಾದರೆ ಹವ್ಯಕರು ಕಣ್ಮುಚ್ಚಿ ಓಟು ಹಾಕೋದು ಖಂಡಿತ. ಹಾಗೆಯೇ ನಾಡಾವರು, ಪಟಗಾರರು.. ಮುಂತಾದ ಸಣ್ಣ-ಪುಟ್ಟ ಸಮುದಾಯಕ್ಕೆ ಹೆಗಡೆಜೀ ಬಗ್ಗೆ ಅಭಿಮಾನವಿದೆ. ಬಿಜೆಪಿಯಲ್ಲಿರುವ ಹೆಗಡೆಜೀ ಶಿಷ್ಯ ಬಳಗವೂ ‘ಗುರುಕಾಣಿಕೆ’ ನೀಡದೇ ಇರಲಾರದು. ದೇಶಪಾಂಡೆಗೂ ತನ್ನನ್ನು ಈ ಮಟ್ಟಕ್ಕೆ ಬೆಳೆಯಲು ಆರಂಭದಲ್ಲಿ ನೀರೆರೆದ ಹೆಗಡೆಜೀ ಋಣ ತೀರಿಸಲು ಇದೊಂದು ಅವಕಾಶ. ದೇಶಪಾಂಡೆ ತನ್ನ ಜನ್ಮಜಾತ ದ್ರೋಹ ಗುಣ-ಧರ್ಮ ಬಿಟ್ಟು ಕೃತಜ್ಞತೆಯಿಂದ ಕೆಲಸ ಮಾಡಿದರೆ ಮೈತ್ರಿಕೂಟದ ಮಮತಾ ನಿರಾಯಾಸವಾಗಿ ಗೆಲ್ಲುತ್ತಾರೆ. ಮಮತಾ ಹೆಗಡೆ(ನಿಚ್ಚಾನಿ)ಯನ್ನು ಹಠ ಹಿಡಿದು ಮೈತ್ರಿಕೂಟದ ಕ್ಯಾಂಡಿಡೇಟ್ ಮಾಡಿದರೆ ಆತ ಹೆಗಡೆಜೀಗೆ ಮಾಡಿದ ಅನ್ಯಾಯಕ್ಕೆ ಪ್ರಾಯಶ್ಚಿತ್ತವೂ ಆಗುತ್ತದೆಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...