Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ...

ಪ್ರಿಯಾಂಕ ಗಾಂಧಿ ಎಂಬ ಹುಡುಗಿಗೆ ಹ್ಯಾಟ್ಸ್ಆಫ್ ಹೇಳುತ್ತಾ…

- Advertisement -
- Advertisement -

 ಗೌರಿ ಲಂಕೇಶ್

30 ಏಪ್ರಿಲ್, 2008 (`ಕಂಡಹಾಗೆ’ ಸಂಪಾದಕೀಯದಿಂದ)

ಮೊನ್ನೆ ಪ್ರಿಯಾಂಕ ಗಾಂಧಿ, ತನ್ನ ತಂದೆ ರಾಜೀವ್ ಗಾಂಧಿಯನ್ನು ಕೊಂದವರ ತಂಡದಲ್ಲಿದ್ದ, ಈಗ ಆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ನಳಿನಿ ಎಂಬಾಕೆಯನ್ನು ವೆಲ್ಲೂರ್ ಜೈಲಿನಲ್ಲಿ ಭೇಟಿಯಾಗಿದ್ದರ ಸುದ್ದಿ ಹೊರಬೀಳುತ್ತಿದ್ದಂತೆ ಹಲವಾರು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾದವು. ಅವುಗಳಲ್ಲಿ ಬಿಜೆಪಿ ಪಕ್ಷದವರ ಪ್ರತಿಕ್ರಿಯೆಯಂತೂ ತಮಾಷೆಯಾಗಿತ್ತು. ಮೊದಮೊದಲು ಆಕೆ ಹೀಗೇಕೆ ಮಾಡಿದಳು ಎಂದು ನಮಗೆ ಅರ್ಥವೇ ಆಗುತ್ತಿಲ್ಲ ಎಂದ ಬಿಜೆಪಿಯ ವಕ್ತಾರ. ಆದರೂ ಈ ಬಗ್ಗೆ ನಿಮಗೊಂದು ಅಭಿಪ್ರಾಯ ಇರಲೇಬೇಕಲ್ಲಾ ಎಂದು ಒತ್ತಾಯಿಸಿದಾಗ “ವೈಯಕ್ತಿಕ ವಿಷಯಗಳ ಬಗ್ಗೆ ನಾವು ಮಾತಾಡುವುದಿಲ್ಲ” ಎಂದ. ಹೇಳಿಕೇಳಿ, ಅವಕಾಶ ಸಿಕ್ಕಾಗಲೆಲ್ಲ ಸೋನಿಯಾ ಗಾಂಧಿ ಮತ್ತವರ ಮಕ್ಕಳ ಮೇಲೆ ಕಾರಿಕೊಂಡು ಬೀಳುವುದು ಆವರ ಜಾಯಮಾನ, ಆದರೆ ಪ್ರಿಯಾಂಕ-ನಳಿನಿ ಭೇಟಿಯ ಹಿಂದೆ ಯಾವ ರಾಜಕೀಯವೂ ಇರಲಿಲ್ಲ ಎಂದು ಗೊತ್ತಾಗಿ ಬಿಜೆಪಿಗಳು ಸುಮ್ಮನಾದರು.

ಪ್ರಿಯಾಂಕ ವಿಷಯಕ್ಕೆ ಬರುವುದಾದರೆ ಆಕೆ ತನ್ನ ಚಿಕ್ಕವಯಸ್ಸಿನಲ್ಲೇ ಹಿಂಸಾಕೃತ್ಯಗಳನ್ನು ಹತ್ತಿರದಿಂದ ನೋಡಿದವಳು. ಮೊದಲು ಆಕೆಯ ಅಜ್ಜಿ ಇಂದಿರಾಗಾಂಧಿಯನ್ನು ಆಕೆಯ ರಕ್ಷಣಾ ದಳದವರೇ ಕೊಂದು ಹಾಕಿದರು. ಅನಂತರ ಆಕೆಯ ತಂದೆಯನ್ನು ಆತ್ಮಹತ್ಯಾ ದಾಳಿಯಲ್ಲಿ ಕೊಂದು ಹಾಕಲಾಯಿತು. ಈಗ ಪ್ರತಿಕ್ಷಣ ರಕ್ಷಣಾದಳದವರಿಂದ ಸುತ್ತುವರೆದಿರುವ, ಗಾಜಿನ ಅರಮನೆಯಲ್ಲಿ ಬದುಕನ್ನು ಸಾಗಿಸುತ್ತಿರುವ, ಹೆಚ್ಚಾಗಿ ಹೊರಗಿನ ಜಗತ್ತಿನೊಂದಿಗೆ ಸಂಪರ್ಕ ಸಾಧ್ಯವಿರದ ಸ್ಥಿತಿಯಲ್ಲಿರುವ ಯುವತಿ ಪ್ರಿಯಾಂಕ. ಅಂತಹ ಪರಿಸ್ಥಿತಿಯಲ್ಲೂ ಆಕೆ ತನ್ನ ಮಾನವೀಯತೆಯನ್ನು ಉಳಿಸಿಕೊಂಡು ಸಹಜವಾಗಿ ಬದುಕಲು ಯತ್ನಿಸುತ್ತಿದ್ದಾಳೆ ಎಂಬುದಕ್ಕೆ ನಳಿನಿ ಭೇಟಿ ಪ್ರಕರಣವೇ ಸಾಕ್ಷಿ.

ಯಾವುದೇ ಪ್ರಚಾರವಿಲ್ಲದೆ, ಯಾರ ಗಮನಕ್ಕೂ ಬಾರದ ಪ್ರಿಯಾಂಕ ತನ್ನ ತಂದೆಯ ಸಾವಿಗೆ ಕಾರಣವಾಗಿದ್ದ ನಳಿನಿಯನ್ನು ಭೇಟಿಯಾಗಿದ್ದ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಪ್ರಿಯಾಂಕ ಯಾಕೆ ಆಕೆಯನ್ನು ಭೇಟಿಯಾದಳು? ಅವರಿಬ್ಬರ ನಡುವೆ ಯಾವ ಮಾತುಕತೆ ನಡೆಯಿತು? ಎಲ್ಲಕ್ಕಿಂತ ಮುಖ್ಯವಾಗಿ ಆಕೆಯನ್ನು ಭೇಟಿ ಆಗುವ ಬಯಕೆ ಪ್ರಿಯಾಂಕಳಲ್ಲಿ ಮೂಡಿದ್ದು ಯಾಕೆ ಎಂಬೆಲ್ಲಾ ಪ್ರಶ್ನೆಗಳು ಉದ್ಭವಿಸಿದವು.

ಅವುಗಳಿಗೆಲ್ಲಾ ಪ್ರಿಯಾಂಕ ಉತ್ತರಿಸಿದ್ದು ಹೀಗೆ “ಅದು ವೈಯಕ್ತಿಕ ವಿಷಯ. ನಾನು ಸ್ವಇಚ್ಛೆಯಿಂದಲೇ ಆಕೆಯನ್ನು ಭೇಟಿಯಾದೆ. ನನ್ನ ಬದುಕಿನಲ್ಲಿ ಸಂಭವಿಸಿರುವ ಹಿಂಸೆ ಮತ್ತು ಸಾಮರಸ್ಯವನ್ನು ಪಡೆಯಲು ನಾವು ಆಯ್ಕೆ ಮಾಡಿಕೊಂಡ ಮಾರ್ಗ ಅದು. ನನಗೆ ಕೋಪ, ದ್ವೇಷ ಮತ್ತು ಹಿಂಸೆಯಲ್ಲಿ ನಂಬಿಕೆ ಇಲ್ಲ. ಮತ್ತು ಅಂತಹ ಭಾವನೆಗಳು ನನ್ನ ಬದುಕನ್ನೇ ಸ್ವಾಧೀನಪಡಿಸಿಕೊಳ್ಳಲು ನಾನು ಎಂದೂ ಬಿಡುವುದಿಲ್ಲ.”

ಇಂಗ್ಲಿಷ್‍ನಲ್ಲಿ ಒಂದು ಹೇಳಿಕೆ ಇದೆ: “ಟು ಎರ್ ಈಸ್ ಹ್ಯೂಮನ್, ಟು ಫರ್‍ಗೀವ್ ಈಸ್ ಡಿವೈನ್” ಅಂತ. ಹಾಗೆ ಪ್ರಿಯಾಂಕ ಕೂಡ ಸಾಮಾನ್ಯ ಮನುಷ್ಯಳಂತಿದ್ದು ನಳಿನಿ ಬಗ್ಗೆ ಮರೆಯಬಹುದಿತ್ತು. ಅಥವಾ ನಳಿನಿ ಮಾಡಿದ ತಪ್ಪಿಗೆ ಸರಿಯಾದ ಶಿಕ್ಷೆ ಆಗಿದೆ ಎಂದು ಸುಮ್ಮನಿರಬಹುದಿತ್ತು. ಆದರೆ ಪ್ರಿಯಾಂಕ ಮರೆಯಲಿಲ್ಲ, ಸುಮ್ಮನಿರಲಿಲ್ಲ. ಬದಲಾಗಿ ನಳಿನಿಯನ್ನು ಭೇಟಿಯಾಗಿ, ಅವಳೊಂದಿಗೆ ಸಾಮಾನ್ಯ ಯುವತಿಯರಂತೆ ಬಾಣಂತನ, ಮಕ್ಕಳ ಬಗ್ಗೆ ಚರ್ಚಿಸಿ, ಒಂದು ಉಡುಗೊರೆಯನ್ನು ನೀಡುವ ಮೂಲಕ ಪ್ರಿಯಾಂಕ ತನ್ನ ಎಲ್ಲಾ ದುಃಖ ಮತ್ತು ನೋವುಗಳೊಂದಿಗೆ ಮುಖಾಮುಖಿಯಾಗಿ ತನ್ನ ಮನಸ್ಸಿನಲ್ಲೇ ಅವುಗಳಿಗೆ ಒಂದು ಅಂತ್ಯ ಕಂಡುಕೊಂಡಿದ್ದಾಳಲ್ಲದೆ ತನ್ನ ಮಾನವೀಯತೆಯನ್ನು ಮೆರೆದಿದ್ದಾಳೆ. ಅಂದಹಾಗೆ ರಾಜೀವ್‍ಗಾಂಧಿಯ ಹತ್ಯೆಗೆ ಸಂಬಂಧಪಟ್ಟಂತೆ ನ್ಯಾಯಾಲಯ ನಳನಿಗೆ ಮತ್ತಾಕೆಯ ಗಂಡ ಮುರುಗನ್, ಇಬ್ಬರಿಗೂ ಮರಣದಂಡನೆ ವಿಧಿಸಿತ್ತು. ಆದರೆ ತೀರ್ಪು ಬರುವ ಮುನ್ನವೇ ನಳಿನಿಗೆ ಜೈಲಿನಲ್ಲೇ ಒಂದು ಹೆಣ್ಣುಮಗು ಹುಟ್ಟಿತ್ತು. ಆಗ ನಳಿನಿ ಮತ್ತು ಮುರುಗನ್ ಇಬ್ಬರೂ ಗಲ್ಲಿಗೇರಿಸಲ್ಪಟ್ಟರೆ ಅವರ ಮಗಳು ಅನಾಥೆಯಾಗುತ್ತಾಳೆಂಬ ಕಾರಣಕ್ಕೆ ನಳನಿಗೆ ಮರಣದಂಡನೆ ವಿಧಿಸಬಾರದೆಂದು ರಾಷ್ಟ್ರಪತಿಯವರಿಗೆ ಅಹವಾಲು ಸಲ್ಲಿಸಿದ್ದು ಬೇರಾರು ಅಲ್ಲ. ಮುರುಗನ್ ಮತ್ತು ನಳಿನಿಯ ಕೃತ್ಯದಿಂದ ತನ್ನ ಪ್ರೀತಿಯ ಗಂಡನನ್ನೇ ಕಳೆದುಕೊಂಡಿದ್ದ ಸೋನಿಯಾಗಾಂಧಿ!

ಸೋನಿಯಾ ಗಾಂಧಿಯ ಈ ಕಾಳಜಿಯಿಂದಲೇ ತನ್ನ ಪ್ರಾಣ ಉಳಿಸಿಕೊಂಡ ನಳಿನಿ ಅಂದಿನಿಂದ ಸೋನಿಯಾರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾಳೆ. ಆಕೆ ಬರೆದ ಪತ್ರಗಳಲ್ಲಿ ಸೋನಿಯಾರನ್ನು ‘ಪ್ರೀತಿಯ ತಾಯಿ’ ಎಂದೇ ಸಂಬೋಧಿಸಿದ್ದಾಳೆ.

ಆದರೆ ವಿಪರ್ಯಾಸ ನೋಡಿ.

ಮಾತೆಯರ ಹೆಸರಲ್ಲಿ ‘ಸೌಂದರ್ಯ ಲಹರಿ’ ಎಂಬ ಅಶ್ಲೀಲ ಶ್ಲೋಕಗಳನ್ನು ಸಾಮೂಹಿಕವಾಗಿ ಮಹಿಳೆಯರಿಂದ ಪಠಿಸುವ ಚೆಡ್ಡಿಗಳಿಗೆ ಇಟಲಿಯಲ್ಲಿ ಜನಿಸಿದ್ದರೂ ಈಗ ಭಾರತೀಯರಾಗಿರುವ ಸೋನಿಯಾರ ಮಾತೃತ್ವ ಅರ್ಥವಾಗುವುದಿಲ್ಲ. ಅಷ್ಟೇ ಅಲ್ಲ, ಸೋನಿಯಾ ಗಾಂಧಿ ಭಾರತದ ಪ್ರಧಾನಿಯಾದರೆ ತನ್ನ ಗಂಡ ಬದುಕಿರುವಾಗಲೇ ತಾನು ವಿಧವೆಯಂತೆ ಜೀವಿಸುತ್ತೇನೆ ಎಂದು ಸುಷ್ಮಾ ಸ್ವರಾಜ್‍ನಂತಹ ತಲೆ ಕೆಟ್ಟ ಹೆಂಗಸರು ಪ್ರತಿಭಟಿಸುತ್ತಾರೆ.

ಒಂದೆಡೆ, ತನ್ನ ಗಂಡನನ್ನು ಕಳೆದುಕೊಂಡಿದ್ದರೂ, ಆತನನ್ನು ಕೊಂದವರ ಮಗಳ ಬಗ್ಗೆ ತಾಯಿ ವಾತ್ಸಲ್ಯ ತೋರುವ ಸೋನಿಯಾ. ಇನ್ನೊಂದೆಡೆ, ಗರ್ಭವತಿಯರ ಹೊಟ್ಟೆಯನ್ನೇ ತ್ರಿಶೂಲಗಳಿಂದ ಬಗೆದು ಅದರಲ್ಲಿನ ಭ್ರೂಣವನ್ನು ಹಿಡಿದು ಸಂಭ್ರಮಿಸುವ ಬಿಜೆಪಿಗಳು.

ಇವರ ನಡುವೆ ಯಾರು ಈ ದೇಶಕ್ಕೆ ಹಿತವರು?

ಬರೀ ಟೊಳ್ಳುತನ, ಢೋಂಗಿತನ ತುಂಬಿರುವ ಇಂದಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ಪ್ರಿಯಾಂಕಳ ಗಟ್ಟಿತನ ಆಶಾದಾಯಕವಾಗಿದೆ ಎಂಬುದನ್ನು ಬಿಜೆಪಿಗಳ ಹೊರತಾಗಿ ಎಲ್ಲರೂ ನಂಬುತ್ತಾರೆ. ಹ್ಯಾಟ್ಸ್ ಆಫ್ ಟು ಪ್ರಿಯಾಂಕ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...