Homeಚಳವಳಿ​​ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪತ್ರ ಬರೆದ 625 ಬುದ್ಧಿಜೀವಿಗಳು

​​ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪತ್ರ ಬರೆದ 625 ಬುದ್ಧಿಜೀವಿಗಳು

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆ 2019 ಅನ್ನು “ವಿಭಜಕ, ತಾರತಮ್ಯದಿಂದ ಕೂಡಿದ ಮತ್ತು ಅಸಂವಿಧಾನಿಕ” ಎಂದು ಕರೆದಿರುವ ಬರಹಗಾರರು, ಕಲಾವಿದರು, ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 600 ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳು ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಸ್ತಾವಿತ ಕಾನೂನನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಮನವಿಗೆ ಸಹಿ ಹಾಕಿದವರಲ್ಲಿ ಬರಹಗಾರರಾದ ನಯನತಾರಾ ಸಾಹಗಲ್, ಅಶೋಕ್ ವಾಜಪೇಯಿ, ಅರುಂಧತಿ ರಾಯ್, ಪಾಲ್ ಜಕಾರಿಯಾ, ಅಮಿತಾವ್ ಘೋಷ್ ಮತ್ತು ಶಶಿ ದೇಶಪಾಂಡೆ ಸೇರಿದ್ದಾರೆ. ಕಲಾವಿದರಾದ ಟಿ.ಎಂ.ಕೃಷ್ಣ, ಅತುಲ್ ದೋಡಿಯಾ, ವಿವಾನ್ ಸುಂದರಂ, ಸುಧೀರ್ ಪಟ್ವರ್ಧನ್, ಗುಲಮ್ಮೊಹಮ್ಮದ್ ಶೇಖ್ ಮತ್ತು ನಿಲಿಮಾ ಶೇಖ್ ಇದ್ದಾರೆ. ಚಲನಚಿತ್ರ ನಿರ್ಮಾಪಕರಾದ ಅಪರ್ಣ ಸೇನ್, ನಂದಿತಾ ದಾಸ್ ಮತ್ತು ಆನಂದ್ ಪಟವರ್ಧನ್ ಪ್ರಮುಖರಾಗಿದ್ದಾರೆ. ವಿದ್ವಾಂಸರಾದ ರೋಮಿಲಾ ಥಾಪರ್, ಪ್ರಭಾತ್ ಪಟ್ನಾಯಕ್, ರಾಮಚಂದ್ರ ಗುಹಾ, ಗೀತಾ ಕಪೂರ್, ಅಕೀಲ್ ಬಿಲ್ಗ್ರಾಮಿ ಮತ್ತು ಜೋಯಾ ಹಸನ್ ವಿರೋಧಕ್ಕೆ ದನಿಗೂಡಿಸಿದ್ದರೆ. ಕಾರ್ಯಕರ್ತರಾದ ಟೀಸ್ತಾ ಸೆಟಲ್ವಾಡ್, ಹರ್ಷ್ ಮಂದಿರ್, ಅರುಣಾ ರಾಯ್ ಮತ್ತು ಬೆಜವಾಡ ವಿಲ್ಸನ್ ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಎಪಿ ಶಾ, ಯೋಗೇಂದ್ರ ಯಾದವ್, ಜಿ.ಎನ್. ದೇವಿ, ನಂದಿನಿ ಸುಂದರ್ ಮತ್ತು ವಜಾಹತ್ ಹಬೀಬುಲ್ಲಾ ಸೇರಿದಂತೆ ಇತರರು ಪ್ರಮುಖರಾಗಿದ್ದಾರೆ.

ಭಾರತದ ಸಂವಿಧಾನವು “ಲಿಂಗ, ಜಾತಿ, ಧರ್ಮ, ವರ್ಗ, ಸಮುದಾಯ ಅಥವಾ ಭಾಷೆಯ ಬೇಧವಿಲ್ಲದೆ ಸಮಾನತೆಯ ಮೂಲಭೂತ ಅಂಶಗಳನ್ನು ಒತ್ತಾಯಿಸುತ್ತದೆ” ಎಂದು ಪ್ರತಿಪಾದಿಸಿದ ಬುದ್ಧಿಜೀವಿಗಳು, ಪೌರತ್ವ ತಿದ್ದುಪಡಿ ಮಸೂದೆ ಮತ್ತು “ರಾಷ್ಟ್ರವ್ಯಾಪಿ ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕ ಪೌರತ್ವ ನೋಂದಣಿ)ಯು ದೇಶಾದ್ಯಂತ ಜನರಿಗೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಆರೋಪಿಸಿದ್ದರೆ. ಇದು ಭಾರತೀಯ ಗಣರಾಜ್ಯದ ಸ್ವರೂಪವನ್ನು ಮೂಲಭೂತವಾಗಿ ಮತ್ತೆಂದೂ ಸರಿಪಡಿಸಲಾಗದಂತೆ ಹಾನಿಗೊಳಿಸುತ್ತದೆ ಎಂದು ದೂರಿದ್ದಾರೆ.

“ಇದಕ್ಕಾಗಿಯೇ ಎಲ್ಲಾ ಆತ್ಮಸಾಕ್ಷಿಯ ನಾಗರಿಕರು ಸರ್ಕಾರವು ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಬೇಕೆಂದು ಕರೆ ನೀಡಿರುವ ಅವರು, ಸರ್ಕಾರವು ಸಂವಿಧಾನಕ್ಕೆ ದ್ರೋಹ ಮಾಡಬಾರದು ಎಂದು ಕಿಡಿಕಾರಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಪರಿಚಯಿಸಿದ ಪೌರತ್ವ ತಿದ್ದುಪಡಿ ಮುಸೂದೆಯನ್ನು ಸೋಮವಾರ ಮಧ್ಯರಾತ್ರಿ ಸುಮಾರು 12 ಗಂಟೆಗಳ ಚರ್ಚೆಯ ನಡುವೆ ಲೋಕಸಭೆಯು ಅಂಗೀಕರಿಸಿದೆ. ಪ್ರತಿಪಕ್ಷಗಳು ಪ್ರಸ್ತಾವಿತ ಕಾನೂನಿಗೆ ವಿರುದ್ಧವಾಗಿ ಮತಚಲಾಯಿಸಿದರು. ಅದು ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ಭಾರತೀಯ ರಾಷ್ಟ್ರೀಯತೆಯನ್ನು ವಿಭಜಿಸಲು ಕಾರಣವಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

2015 ರ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಅಕ್ರಮ ವಲಸೆ ಬಂದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಮಸೂದೆಯಲ್ಲಿ ಪ್ರಸ್ತಾಪವಿದೆ. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ವ್ಯಕ್ತವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....