Homeಚಳವಳಿ​​ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪತ್ರ ಬರೆದ 625 ಬುದ್ಧಿಜೀವಿಗಳು

​​ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪತ್ರ ಬರೆದ 625 ಬುದ್ಧಿಜೀವಿಗಳು

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆ 2019 ಅನ್ನು “ವಿಭಜಕ, ತಾರತಮ್ಯದಿಂದ ಕೂಡಿದ ಮತ್ತು ಅಸಂವಿಧಾನಿಕ” ಎಂದು ಕರೆದಿರುವ ಬರಹಗಾರರು, ಕಲಾವಿದರು, ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 600 ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳು ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಸ್ತಾವಿತ ಕಾನೂನನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಮನವಿಗೆ ಸಹಿ ಹಾಕಿದವರಲ್ಲಿ ಬರಹಗಾರರಾದ ನಯನತಾರಾ ಸಾಹಗಲ್, ಅಶೋಕ್ ವಾಜಪೇಯಿ, ಅರುಂಧತಿ ರಾಯ್, ಪಾಲ್ ಜಕಾರಿಯಾ, ಅಮಿತಾವ್ ಘೋಷ್ ಮತ್ತು ಶಶಿ ದೇಶಪಾಂಡೆ ಸೇರಿದ್ದಾರೆ. ಕಲಾವಿದರಾದ ಟಿ.ಎಂ.ಕೃಷ್ಣ, ಅತುಲ್ ದೋಡಿಯಾ, ವಿವಾನ್ ಸುಂದರಂ, ಸುಧೀರ್ ಪಟ್ವರ್ಧನ್, ಗುಲಮ್ಮೊಹಮ್ಮದ್ ಶೇಖ್ ಮತ್ತು ನಿಲಿಮಾ ಶೇಖ್ ಇದ್ದಾರೆ. ಚಲನಚಿತ್ರ ನಿರ್ಮಾಪಕರಾದ ಅಪರ್ಣ ಸೇನ್, ನಂದಿತಾ ದಾಸ್ ಮತ್ತು ಆನಂದ್ ಪಟವರ್ಧನ್ ಪ್ರಮುಖರಾಗಿದ್ದಾರೆ. ವಿದ್ವಾಂಸರಾದ ರೋಮಿಲಾ ಥಾಪರ್, ಪ್ರಭಾತ್ ಪಟ್ನಾಯಕ್, ರಾಮಚಂದ್ರ ಗುಹಾ, ಗೀತಾ ಕಪೂರ್, ಅಕೀಲ್ ಬಿಲ್ಗ್ರಾಮಿ ಮತ್ತು ಜೋಯಾ ಹಸನ್ ವಿರೋಧಕ್ಕೆ ದನಿಗೂಡಿಸಿದ್ದರೆ. ಕಾರ್ಯಕರ್ತರಾದ ಟೀಸ್ತಾ ಸೆಟಲ್ವಾಡ್, ಹರ್ಷ್ ಮಂದಿರ್, ಅರುಣಾ ರಾಯ್ ಮತ್ತು ಬೆಜವಾಡ ವಿಲ್ಸನ್ ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಎಪಿ ಶಾ, ಯೋಗೇಂದ್ರ ಯಾದವ್, ಜಿ.ಎನ್. ದೇವಿ, ನಂದಿನಿ ಸುಂದರ್ ಮತ್ತು ವಜಾಹತ್ ಹಬೀಬುಲ್ಲಾ ಸೇರಿದಂತೆ ಇತರರು ಪ್ರಮುಖರಾಗಿದ್ದಾರೆ.

ಭಾರತದ ಸಂವಿಧಾನವು “ಲಿಂಗ, ಜಾತಿ, ಧರ್ಮ, ವರ್ಗ, ಸಮುದಾಯ ಅಥವಾ ಭಾಷೆಯ ಬೇಧವಿಲ್ಲದೆ ಸಮಾನತೆಯ ಮೂಲಭೂತ ಅಂಶಗಳನ್ನು ಒತ್ತಾಯಿಸುತ್ತದೆ” ಎಂದು ಪ್ರತಿಪಾದಿಸಿದ ಬುದ್ಧಿಜೀವಿಗಳು, ಪೌರತ್ವ ತಿದ್ದುಪಡಿ ಮಸೂದೆ ಮತ್ತು “ರಾಷ್ಟ್ರವ್ಯಾಪಿ ಎನ್‌ಆರ್‌ಸಿ (ರಾಷ್ಟ್ರೀಯ ನಾಗರಿಕ ಪೌರತ್ವ ನೋಂದಣಿ)ಯು ದೇಶಾದ್ಯಂತ ಜನರಿಗೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಆರೋಪಿಸಿದ್ದರೆ. ಇದು ಭಾರತೀಯ ಗಣರಾಜ್ಯದ ಸ್ವರೂಪವನ್ನು ಮೂಲಭೂತವಾಗಿ ಮತ್ತೆಂದೂ ಸರಿಪಡಿಸಲಾಗದಂತೆ ಹಾನಿಗೊಳಿಸುತ್ತದೆ ಎಂದು ದೂರಿದ್ದಾರೆ.

“ಇದಕ್ಕಾಗಿಯೇ ಎಲ್ಲಾ ಆತ್ಮಸಾಕ್ಷಿಯ ನಾಗರಿಕರು ಸರ್ಕಾರವು ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಬೇಕೆಂದು ಕರೆ ನೀಡಿರುವ ಅವರು, ಸರ್ಕಾರವು ಸಂವಿಧಾನಕ್ಕೆ ದ್ರೋಹ ಮಾಡಬಾರದು ಎಂದು ಕಿಡಿಕಾರಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಪರಿಚಯಿಸಿದ ಪೌರತ್ವ ತಿದ್ದುಪಡಿ ಮುಸೂದೆಯನ್ನು ಸೋಮವಾರ ಮಧ್ಯರಾತ್ರಿ ಸುಮಾರು 12 ಗಂಟೆಗಳ ಚರ್ಚೆಯ ನಡುವೆ ಲೋಕಸಭೆಯು ಅಂಗೀಕರಿಸಿದೆ. ಪ್ರತಿಪಕ್ಷಗಳು ಪ್ರಸ್ತಾವಿತ ಕಾನೂನಿಗೆ ವಿರುದ್ಧವಾಗಿ ಮತಚಲಾಯಿಸಿದರು. ಅದು ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ಭಾರತೀಯ ರಾಷ್ಟ್ರೀಯತೆಯನ್ನು ವಿಭಜಿಸಲು ಕಾರಣವಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

2015 ರ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಅಕ್ರಮ ವಲಸೆ ಬಂದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಮಸೂದೆಯಲ್ಲಿ ಪ್ರಸ್ತಾಪವಿದೆ. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ವ್ಯಕ್ತವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...