Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಕಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಬವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ ೩೧ ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ೧೨ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ ೯-೩ ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ ೩ ಸ್ಥಾನಕ್ಕೆ
೩೦ ಜನರ ಲಾಬಿ
ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ ೧೨ ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ ೯ ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು ೩೦ ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ
ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿಟ್ಟಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿAದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ
ಸಿಗದ ಶಾಂತಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ ೧೭ ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊAದು ಕಥೆ ಎಂಬಂತಾಗಿದೆ.

೧೫ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ ೧೨ ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.
ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ ೯ ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ ೧೫. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ ೧೫ ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.೧೭ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...