Homeಮುಖಪುಟ'ಎಕ್ಸಿಟ್ ಪೋಲ್‌'ನಿಂದ ಷೇರು ಮಾರುಕಟ್ಟೆಯಲ್ಲಿ ₹30 ಲಕ್ಷ ಕೋಟಿ ನಷ್ಟ: 'ದೇಶದ ಬೃಹತ್ ಹಗರಣ' ಎಂದ...

‘ಎಕ್ಸಿಟ್ ಪೋಲ್‌’ನಿಂದ ಷೇರು ಮಾರುಕಟ್ಟೆಯಲ್ಲಿ ₹30 ಲಕ್ಷ ಕೋಟಿ ನಷ್ಟ: ‘ದೇಶದ ಬೃಹತ್ ಹಗರಣ’ ಎಂದ ರಾಹುಲ್ ಗಾಂಧಿ

- Advertisement -
- Advertisement -

“ಜೂನ್ 1ರಂದು ಕೆಲವು ಖಾಸಗಿ ಸಂಸ್ಥೆಗಳು ನಡೆಸಿದ್ದ ‘ಎಕ್ಸಿಟ್‌ ಪೋಲ್‌’ನಿಂದ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್ ಹಗರಣ. ಇದರ ಬಗ್ಗೆ ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿರುವ ಎಐಸಿಸಿಯ ಮುಖ್ಯ ಕಚೇರಿಯಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 4 ರಂದು ಷೇರು ಮಾರುಕಟ್ಟೆ ಏರಿಕೆಯಾಗಲಿದೆ ಮತ್ತು ನೀವೆಲ್ಲರೂ ಹೂಡಿಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು. ಜೊತೆಗೆ ಹಣಕಾಸು ಸಚಿವರೂ ಇದೇ ರೀತಿ ಹೇಳಿದ್ದರು. ಜೂನ್ 4ರ ಮೊದಲು ಷೇರುಗಳನ್ನು ಖರೀದಿಸಿ ಎಂದು ಖುದ್ದು ಪ್ರಧಾನಿ ಮೋದಿ ಕೂಡ ಹೇಳಿದ್ದರು. ಅಲ್ಲದೇ, ಜೂನ್ 4ರಂದು ಮಾರುಕಟ್ಟೆಯ ಹಿಂದಿನ ದಾಖಲೆಗಳನ್ನು ಮುರಿಯಲಿದೆ ಎಂದಿದ್ದರು. ಬಿಜೆಪಿಗೆ ಬಹುಮತ ಬರುವುದಿಲ್ಲ ಎಂದು ಪಕ್ಷದ ಆಂತರಿಕ ಸರ್ವೇಯಿಂದ ಖಚಿತ ಮಾಹಿತಿ ಇದ್ದರೂ ಕೂಡ ಈ ರೀತಿಯ ಹೇಳಿಕೆಗಳನ್ನು ನೀಡಿ, ದೇಶದ ಜನರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾಡಿದ್ದಾರೆ. ಎಕ್ಸಿಟ್ ಪೋಲ್‌ನಿಂದ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್ ಹಗರಣ” ಎಂದು ಹೇಳಿದ್ದಾರೆ.

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ 5 ಕೋಟಿ ಕುಟುಂಬಗಳಿಗೆ ಪ್ರಧಾನಿ ಮತ್ತು ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದು ಏಕೆ? ಜನರಿಗೆ ಹೂಡಿಕೆ ಸಲಹೆ ನೀಡುವುದು ಅವರ ಕೆಲಸವೇ? ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ” ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಎಂದು ಸಲಹೆ ನೀಡುವುದಕ್ಕೆ ಎರಡೂ ಸಂದರ್ಶನಗಳನ್ನು ಒಂದೇ ಮಾಧ್ಯಮಕ್ಕೆ ನೀಡಲಾಗಿದೆ. ಈ ಮಾಧ್ಯಮ ಸಂಸ್ಥೆಯ ಮಾತೃ ಸಂಸ್ಥೆಯು ಷೇರು ಮಾರುಕಟ್ಟೆಯನ್ನು ತಿರುಚಿದ ಆರೋಪಕ್ಕಾಗಿ ಸೆಬಿಯಿಂದ ತನಿಖೆ ಎದುರಿಸುತ್ತಿದೆ. ಇದೇ ಸಂಸ್ಥೆಗೆ ಏಕೆ ಸಂದರ್ಶನ ನೀಡಿದ್ದಾರೆ? ಬಿಜೆಪಿ ಮತ್ತು ನಕಲಿ ಎಕ್ಸಿಟ್ ಪೋಲ್‌ಗಳನ್ನು ಪ್ರಕಟಿಸಿದ ಸಂಸ್ಥೆಗಳಿಗೂ ಹಾಗೂ ಎಕ್ಸಿಟ್‌ ಪೋಲ್‌ಗೂ ಮುಂಚೆ ಷೇರು ಖರೀದಿಸಿದ ಸಂಶಯಾಸ್ಪದ ವಿದೇಶಿ ಹೂಡಿಕೆದಾರರಿಗೂ ನಡುವಿನ ಸಂಬಂಧವೇನು? ಇದಕ್ಕೆಲ್ಲ ಉತ್ತರ ಸಿಗಬೇಕಿದೆ ಎಂದು ರಾಹುಲ್ ಹೇಳಿದ್ದಾರೆ.

“ಇದು ಷೇರು ಮಾರುಕಟ್ಟೆಯ ಅತಿದೊಡ್ಡ ಹಗರಣ. ಈ ಕುರಿತು ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು ಎಂದು ನಾವು ಒತ್ತಾಯಿಸುತ್ತೇವೆ. 30 ಲಕ್ಷ ಕೋಟಿ ರೂ. ನಷ್ಟವಾಗಿರುವುದರಿಂದ 5 ಕೋಟಿ ಕುಟುಂಬಗಳಿಗೆ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ದೇಶದ ಜನರಿಗಾದ ನಷ್ಟಕ್ಕೆ ಯಾರು ಹೊಣೆ ಎಂಬುವುದಕ್ಕೆ ಉತ್ತರ ಸಿಗಬೇಕಿದೆ” ಎಂದಿದ್ದಾರೆ.

ಇದನ್ನೂ ಓದಿ : ಹೊಸದಾಗಿ ಚುನಾಯಿತರಾದ 251 ಸಂಸದರ ಮೇಲಿದೆ ಕ್ರಿಮಿನಲ್ ಮೊಕದ್ದಮೆ: ಎಡಿಆರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...