Homeಮುಖಪುಟಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

ಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

- Advertisement -
- Advertisement -

ಬಿಹಾರದ ಮಹಾಘಟಬಂಧನ್‌ನ ಅತಿದೊಡ್ಡ ಪಕ್ಷವಾಗಿರುವ ಆರ್‌ಜೆಡಿ ಶನಿವಾರ ಲೋಕಸಭೆ ಚುನಾವಣೆಗೆ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರಕ್ಷಾ ಬಂಧನದಂದು ಬಡ ಕುಟುಂಬಗಳ ಸಹೋದರಿಯರಿಗೆ ವರ್ಷಕ್ಕೆ ₹1 ಲಕ್ಷ ಮತ್ತು ಪ್ರತಿ ವರ್ಷ 1 ಕೋಟಿ ಸರ್ಕಾರಿ ಉದ್ಯೋಗ ಸೃಷ್ಟಿ ಭರವಸೆ ನೀಡಿದೆ.

ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಆರ್‌ಜೆಡಿಯ ಚುನಾವಣಾ ಪ್ರಣಾಳಿಕೆ ‘ಪರಿವರ್ತನ್ ಪತ್ರ’ವನ್ನು ಬಿಡುಗಡೆ ಮಾಡಿ, “2024ರ ಚುನಾವಣೆಗೆ ಪಕ್ಷವು 24 ‘ಜನ ವಚನ’ಗಳನ್ನು ಘೋಷಣೆ ಮಾಡುತ್ತಿದೆ; ಪಕ್ಷವು ನಮ್ಮ ಬದ್ಧತೆಯನ್ನು ಪೂರೈಸುತ್ತದೆ” ಎಂದು ಹೇಳಿದರು.

“ಇಂಡಿಯಾ ಬಣವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಆರ್‌ಜೆಡಿ ದೇಶಾದ್ಯಂತ ನಿರುದ್ಯೋಗಿ ಯುವಕರಿಗೆ 1 ಕೋಟಿ ಸರ್ಕಾರಿ ಉದ್ಯೋಗಗಳನ್ನು ಪಡೆಯುವುದನ್ನು ಖಾತ್ರಿಪಡಿಸುತ್ತದೆ. ಈ ಪ್ರಕ್ರಿಯೆಯು ಈ ವರ್ಷದ ಸ್ವಾತಂತ್ರ್ಯ ದಿನದಂದು ಪ್ರಾರಂಭವಾಗಲಿದೆ. ಅದು ‘ಬೆರೋಜ್‌ಗಾರಿ ಸೆ ಆಜಾದಿ’ಯಂತಿರುತ್ತದೆ” ಸುದ್ದಿಗಾರರಿಗೆ ತಿಳಿಸಿದರು.

“ನಿರುದ್ಯೋಗ ನಮ್ಮ ದೊಡ್ಡ ಶತ್ರು ಆದರೆ ಬಿಜೆಪಿ ನಾಯಕರು ಅದರ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ಅವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು … ಆದರೆ ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ” ಎಂದು ಅವರು ಹೇಳಿದರು.

“ಈ ವರ್ಷದ ರಕ್ಷಾ ಬಂಧನದ ಸಂದರ್ಭದಲ್ಲಿ, ನಾವು ಬಡ ಕುಟುಂಬಗಳಿಗೆ ಸೇರಿದ ನಮ್ಮ ಸಹೋದರಿಯರಿಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿಗಳನ್ನು ನೀಡಲು ಪ್ರಾರಂಭಿಸುತ್ತೇವೆ” ಎಂದು ಆರ್‌ಜೆಡಿ ನಾಯಕ ಹೇಳಿದರು.

ಪ್ರಣಾಳಿಕೆಯಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ₹500 ಕ್ಕೆ ನೀಡುವುದಾಗಿ ಭರವಸೆ ನೀಡಲಾಯಿತು.

“ಬಿಹಾರದಲ್ಲಿ ಉತ್ತಮ ಸಂಪರ್ಕಕ್ಕಾಗಿ, ನಾವು ಪೂರ್ಣಿಯಾ, ಭಾಗಲ್ಪುರ್, ಮುಜಾಫರ್‌ಪುರ, ಗೋಪಾಲ್‌ಗಂಜ್ ಮತ್ತು ರಕ್ಸಾಲ್‌ನಲ್ಲಿ ಐದು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸುತ್ತೇವೆ. ಜೊತೆಗೆ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ₹1.60 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಅನ್ನು ಮಂಜೂರು ಮಾಡುತ್ತೇವೆ. ತಿಂಗಳಿಗೆ ಉಚಿತ ವಿದ್ಯುತ್ ನೀಡಲಾಗುವುದು, ಬಿಹಾರದ ಜನರು ಸಹ 200 ಯೂನಿಟ್ ಪಡೆಯುತ್ತಾರೆ” ಎಂದು ಹೇಳಿದರು.

ಕೇಂದ್ರದಲ್ಲಿ ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಸಶಸ್ತ್ರ ಪಡೆಗಳಲ್ಲಿ ಗುತ್ತಿಗೆ ಉದ್ಯೋಗದ ಅಗ್ನಿವೀರ್ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಭರಚಸೆ ನೀಡಿದ್ದಾರೆ.

ಇದನ್ನೂ ಓದಿ; ಹೇಮಂತ್ ಸೊರೆನ್ ಬಂಧನ ಖಂಡಿಸಿ ಪ್ರತಿಭಟಿಸಿದ ಆದಿವಾಸಿಗಳ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...