Homeರಾಷ್ಟ್ರೀಯ₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

- Advertisement -
- Advertisement -

ಟ್ವಿಟರ್‌‌ಗೆ ಪರ್ಯಾಯವಾಗಿ ರಚನೆಯಾಗಿದ್ದ ಭಾರತೀಯ ಮೂಲದ ‘ಕೂ’ ಅಪ್ಲಿಕೇಷನ್‌‌ ಆದಾಯ ಗಳಿಕೆಯ ವಿಚಾರದಲ್ಲಿ ಸುದ್ದಿಯಾಗಿದೆ. 2022ರ ಆರ್ಥಿಕ ವರ್ಷದಲ್ಲಿ 202 ಕೋಟಿ ರೂ.ಗಳನ್ನು ವೆಚ್ಚ ಮಾಡಿರುವ ‘ಕೂ’ ಅಪ್ಲಿಕೇಷನ್‌, ಕೇವಲ 14 ಲಕ್ಷ ರೂಗಳನ್ನು ಗಳಿಸಿದೆ ಎಂದು ವರದಿಯಾಗಿದೆ.

ಈ ಹಿಂದಿನ ಆರ್ಥಿಕ ವರ್ಷಗಳಿಗೆ ಹೋಲಿಸಿದರೆ 2022ರಲ್ಲಿ ‘ಕೂ’ ಅಪ್ಲಿಕೇಷನ್‌‌ನ ಒಟ್ಟಾರೆ ನಷ್ಟದಲ್ಲಿ ಸುಮಾರು 6 ಪಟ್ಟು ಏರಿಕೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಕಂಪನಿಯು 2021 ರಲ್ಲಿ 8 ಲಕ್ಷ ಆದಾಯ ಗಳಿಸಿತ್ತು. ಇದೀಗ 2022 ರಲ್ಲಿ 14 ಲಕ್ಷ ರೂ.ಗೆ ಏರಿಯೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕೂ’ ಪ್ಲಾಟ್‌ಫಾರ್ಮ್ ಅನ್ನು 2020 ರಲ್ಲಿ ಸ್ಥಾಪಿಸಲಾಗಿತ್ತು. ಈ ಅಪ್ಲಿಕೇಷನ್‌ ಬಳಕೆದಾರರಿಗೆ ಪಠ್ಯ, ಆಡಿಯೋ ಮತ್ತು ವೀಡಿಯೊಗಳ ಮೂಲಕ ಸಂವಹನ ನಡೆಸಲು ಅನುಮತಿಸುತ್ತದೆ. ಅಪ್ಲಿಕೇಶನ್ ಪ್ರಸ್ತುತ ಕೆಲವು ವಿದೇಶಿ ಭಾಷೆಗಳನ್ನು ಒಳಗೊಂಡಂತೆ 11 ಸ್ಥಳೀಯ ಭಾಷೆಗಳಲ್ಲಿ ಲಭ್ಯವಿದೆ.

ಕಳೆದ ವರ್ಷ ‘ಕೂ’ ಬ್ರೆಜಿಲ್‌ನಲ್ಲಿ ಪೋರ್ಚುಗೀಸ್ ಭಾಷೆಯಲ್ಲಿ ಕೂಡಾ ಪ್ರಾರಂಭವಾಗಿದೆ. ಅಂಡ್ರಾಯಿಡ್‌ ಮತ್ತು IOS ಆಪರೇಟಿಂಗ್ ಸಿಸ್ಟಂಗಳಲ್ಲಿ ಒಟ್ಟು ಸರಿಸುಮಾರು 6 ಕೋಟಿ ಜನರು ಈ ಅಪ್ಲಿಕೇಶನ್ ಅನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಅಪ್ಲಿಕೇಷನ್‌ನ ನಿರ್ವಹಣಾ ಆದಾಯವು ಕೇವಲ 14 ಲಕ್ಷವಿದ್ದು, ಕಂಪನಿಯು ಬಡ್ಡಿ ಮತ್ತು ಹೂಡಿಕೆಗಳ ಮೇಲಿನ ಲಾಭ ಮತ್ತು ಇತರ ಕಾರ್ಯಾಚರಣೆಯೇತರ ಆದಾಯದಿಂದ 4.74 ಕೋಟಿ ರೂಪಾಯಿಗಳನ್ನು ಗಳಿಸಿದ್ದು, 2022 ರಲ್ಲಿ ಅದರ ಒಟ್ಟಾರೆ ಆದಾಯವನ್ನು 4.88 ಕೋಟಿಯಾಗಿದೆ.

ಆದಾಗ್ಯೂ, ಜಾಹೀರಾತು ಮತ್ತು ಪ್ರಚಾರದ ಚಟುವಟಿಕೆಗಳು, ಉದ್ಯೋಗಿ ಪ್ರಯೋಜನಗಳು, ಕಾನೂನು ಮತ್ತು ವೃತ್ತಿಪರ ಶುಲ್ಕ, ಸಾಫ್ಟ್‌ವೇರ್, ಪರವಾನಗಿ, ಕ್ಲೌಡ್ ಸರ್ವರ್, ಅಪ್ಲಿಕೇಶನ್ ಎಂಬೆಡ್‌ಗಳು ಮತ್ತು ಇತರ ಸಂವಹನ-ಸಂಬಂಧಿತ ವೆಚ್ಚಗಳ ಮೊತ್ತ 202 ಕೋಟಿ ರೂ. ಆಗಿದೆ ಎಂದು ವರದಿ ಉಲ್ಲೇಖಿಸಿದೆ.

ಅಪ್ಲಿಕೇಷನ್ ಆರಂಭವಾದಾಗ ಇದನ್ನು ರಾಷ್ಟ್ರೀಯವಾದಿ ಟ್ವಿಟರ್‌ ಎಂದು ಕರೆಯಲಾಗಿತ್ತು. ಆದರೆ ಕಳದ ವರ್ಷದ ಅಕ್ಟೋಬರ್‌ನಲ್ಲಿ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದ್ದು, ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ ಎಂದು ಅದರ ಸಂಸ್ಥಾಪಕ ಹೇಳಿಕೊಂಡಿದ್ದರು.

https://mobile.twitter.com/Ravisutanjani/status/1613544678640717824

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...