Homeರಾಷ್ಟ್ರೀಯ₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

₹202 ಕೋಟಿ ಖರ್ಚು ಮಾಡಿ, ₹14 ಲಕ್ಷ ಗಳಿಸಿದ ‘ರಾಷ್ಟ್ರವಾದಿ’ ಅಪ್ಲಿಕೇಷನ್ ಖ್ಯಾತಿಯ ‘ಕೂ’!

- Advertisement -
- Advertisement -

ಟ್ವಿಟರ್‌‌ಗೆ ಪರ್ಯಾಯವಾಗಿ ರಚನೆಯಾಗಿದ್ದ ಭಾರತೀಯ ಮೂಲದ ‘ಕೂ’ ಅಪ್ಲಿಕೇಷನ್‌‌ ಆದಾಯ ಗಳಿಕೆಯ ವಿಚಾರದಲ್ಲಿ ಸುದ್ದಿಯಾಗಿದೆ. 2022ರ ಆರ್ಥಿಕ ವರ್ಷದಲ್ಲಿ 202 ಕೋಟಿ ರೂ.ಗಳನ್ನು ವೆಚ್ಚ ಮಾಡಿರುವ ‘ಕೂ’ ಅಪ್ಲಿಕೇಷನ್‌, ಕೇವಲ 14 ಲಕ್ಷ ರೂಗಳನ್ನು ಗಳಿಸಿದೆ ಎಂದು ವರದಿಯಾಗಿದೆ.

ಈ ಹಿಂದಿನ ಆರ್ಥಿಕ ವರ್ಷಗಳಿಗೆ ಹೋಲಿಸಿದರೆ 2022ರಲ್ಲಿ ‘ಕೂ’ ಅಪ್ಲಿಕೇಷನ್‌‌ನ ಒಟ್ಟಾರೆ ನಷ್ಟದಲ್ಲಿ ಸುಮಾರು 6 ಪಟ್ಟು ಏರಿಕೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಕಂಪನಿಯು 2021 ರಲ್ಲಿ 8 ಲಕ್ಷ ಆದಾಯ ಗಳಿಸಿತ್ತು. ಇದೀಗ 2022 ರಲ್ಲಿ 14 ಲಕ್ಷ ರೂ.ಗೆ ಏರಿಯೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕೂ’ ಪ್ಲಾಟ್‌ಫಾರ್ಮ್ ಅನ್ನು 2020 ರಲ್ಲಿ ಸ್ಥಾಪಿಸಲಾಗಿತ್ತು. ಈ ಅಪ್ಲಿಕೇಷನ್‌ ಬಳಕೆದಾರರಿಗೆ ಪಠ್ಯ, ಆಡಿಯೋ ಮತ್ತು ವೀಡಿಯೊಗಳ ಮೂಲಕ ಸಂವಹನ ನಡೆಸಲು ಅನುಮತಿಸುತ್ತದೆ. ಅಪ್ಲಿಕೇಶನ್ ಪ್ರಸ್ತುತ ಕೆಲವು ವಿದೇಶಿ ಭಾಷೆಗಳನ್ನು ಒಳಗೊಂಡಂತೆ 11 ಸ್ಥಳೀಯ ಭಾಷೆಗಳಲ್ಲಿ ಲಭ್ಯವಿದೆ.

ಕಳೆದ ವರ್ಷ ‘ಕೂ’ ಬ್ರೆಜಿಲ್‌ನಲ್ಲಿ ಪೋರ್ಚುಗೀಸ್ ಭಾಷೆಯಲ್ಲಿ ಕೂಡಾ ಪ್ರಾರಂಭವಾಗಿದೆ. ಅಂಡ್ರಾಯಿಡ್‌ ಮತ್ತು IOS ಆಪರೇಟಿಂಗ್ ಸಿಸ್ಟಂಗಳಲ್ಲಿ ಒಟ್ಟು ಸರಿಸುಮಾರು 6 ಕೋಟಿ ಜನರು ಈ ಅಪ್ಲಿಕೇಶನ್ ಅನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಅಪ್ಲಿಕೇಷನ್‌ನ ನಿರ್ವಹಣಾ ಆದಾಯವು ಕೇವಲ 14 ಲಕ್ಷವಿದ್ದು, ಕಂಪನಿಯು ಬಡ್ಡಿ ಮತ್ತು ಹೂಡಿಕೆಗಳ ಮೇಲಿನ ಲಾಭ ಮತ್ತು ಇತರ ಕಾರ್ಯಾಚರಣೆಯೇತರ ಆದಾಯದಿಂದ 4.74 ಕೋಟಿ ರೂಪಾಯಿಗಳನ್ನು ಗಳಿಸಿದ್ದು, 2022 ರಲ್ಲಿ ಅದರ ಒಟ್ಟಾರೆ ಆದಾಯವನ್ನು 4.88 ಕೋಟಿಯಾಗಿದೆ.

ಆದಾಗ್ಯೂ, ಜಾಹೀರಾತು ಮತ್ತು ಪ್ರಚಾರದ ಚಟುವಟಿಕೆಗಳು, ಉದ್ಯೋಗಿ ಪ್ರಯೋಜನಗಳು, ಕಾನೂನು ಮತ್ತು ವೃತ್ತಿಪರ ಶುಲ್ಕ, ಸಾಫ್ಟ್‌ವೇರ್, ಪರವಾನಗಿ, ಕ್ಲೌಡ್ ಸರ್ವರ್, ಅಪ್ಲಿಕೇಶನ್ ಎಂಬೆಡ್‌ಗಳು ಮತ್ತು ಇತರ ಸಂವಹನ-ಸಂಬಂಧಿತ ವೆಚ್ಚಗಳ ಮೊತ್ತ 202 ಕೋಟಿ ರೂ. ಆಗಿದೆ ಎಂದು ವರದಿ ಉಲ್ಲೇಖಿಸಿದೆ.

ಅಪ್ಲಿಕೇಷನ್ ಆರಂಭವಾದಾಗ ಇದನ್ನು ರಾಷ್ಟ್ರೀಯವಾದಿ ಟ್ವಿಟರ್‌ ಎಂದು ಕರೆಯಲಾಗಿತ್ತು. ಆದರೆ ಕಳದ ವರ್ಷದ ಅಕ್ಟೋಬರ್‌ನಲ್ಲಿ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದ್ದು, ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ ಎಂದು ಅದರ ಸಂಸ್ಥಾಪಕ ಹೇಳಿಕೊಂಡಿದ್ದರು.

https://mobile.twitter.com/Ravisutanjani/status/1613544678640717824

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...