Homeಮುಖಪುಟಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

- Advertisement -
- Advertisement -

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ₹34 ಕೋಟಿ ಹಣವನ್ನು 40 ದಿನಗಳಲ್ಲಿ ಸಂಗ್ರಹಿಸಲು ಕೇರಳ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳ ಧಾರ್ಮಿಕ ಮತ್ತು ರಾಜಕೀಯ ಮುಖಂಡರು ಕೈಜೋಡಿಸಿದ್ದಾರೆ. ಮಾನವೀಯತೆಗಾಗಿ ನಡೆದ ಈ ಅಭಿಯಾನವನ್ನು ‘ನೈಜ ಕೇರಳ ಸ್ಟೋರಿ’ ಎಂದು ಕರೆಯಲಾಗುತ್ತಿದೆ.

ಶುಕ್ರವಾರ ಸಂಜೆ ಹೊತ್ತಿಗೆ ಪೂರ್ಣ ಮೊತ್ತವನ್ನು ಸಂಗ್ರಹಿಸಲಾಗಿದೆ. ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ ಸೌದಿ ರಿಯಾಲ್ 15 ಮಿಲಿಯನ್ ಮೌಲ್ಯದ ಹಣವನ್ನು ಪಾವತಿಸಲು ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ.

41 ವರ್ಷದ ಅಬ್ದುಲ್ ರಹೀಮ್ 18 ವರ್ಷಗಳ ಹಿಂದೆ ರಿಯಾದ್‌ನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದರು. ಇತ್ತೀಚಿಗೆ, ದುಬೈನಲ್ಲಿ ನೆಲೆಸಿರುವ ಕೇರಳದ ವಲಸಿಗರು ಬಾಲಕನ ಕುಟುಂಬಕ್ಕೆ ದಂಡದ ಹಣ (ಅರೇಬಿಕ್‌ನಲ್ಲಿ “ದಿಯಾ”) ಪಡೆದು ಕ್ಷಮಾದಾನ ನೀಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಏಪ್ರಿಲ್ 15ರ ಮೊದಲು ಹಣ ಪಾವತಿಸಲು ಗಡುವು ನೀಡಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುವ ಮೊದಲು ಕೋಝಿಕ್ಕೋಡ್‌ನ ಫಿರೋಕ್‌ನಲ್ಲಿ ಆಟೋ ಚಾಲಕನಾಗಿದ್ದ ರಹೀಂ, ದುಬೈನಲ್ಲಿ ತಾನು ಕೆಲಸ ಮಾಡುತ್ತಿದ್ದ ಮಾಲೀಕರ 15 ವರ್ಷದ ಪಾರ್ಶ್ವವಾಯು ಮಗನ ಸಾವಿಗೆ ಕಾರಣನಾದ ಎಂಬ ಆರೋಪ ಇದೆ.

ಬಾಲಕನನ್ನು ನೋಡಿಕೊಳ್ಳುವುದು ಮತ್ತು ಆತ ಹೋಗಬೇಕಾದಲ್ಲೆಲ್ಲಾ ಕಾರಿನಲ್ಲಿ ಓಡಿಸುವುದು ಅವನ ಕೆಲಸವಾಗಿತ್ತು. ಆದರೆ, ರಹೀಂ ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಜೋಡಿಸಲಾದ ವೈದ್ಯಕೀಯ ಸಹಾಯವನ್ನು ಬೀಳಿಸಿದ್ದು, ಬಾಲಕ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಇದೆ.

2011, 2017, 2022, 2011, 2017 ಮತ್ತು 2022 ರಲ್ಲಿ ಪ್ರತಿ ಬಾರಿ ಮೇಲ್ಮನವಿ ವಿಫಲವಾದಾಗ ವಿಚಾರಣಾ ನ್ಯಾಯಾಲಯವು ಮರಣದಂಡನೆ ಆದೇಶವನ್ನು ನವೀಕರಿಸುತ್ತಲೇ ಬಂದಿದೆ. ಶಿಕ್ಷೆ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದ ಸತತ ಮೇಲ್ಮನವಿಗಳು ರಹೀಂ ಜೀವದಾನಕ್ಕೆ ಈವರೆಗೆ ಸಮಯಾವಕಾಶ ನೀಡಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನೊಂದಿಗೆ ಹೊಂದಿಕೊಂಡಿರುವ ಸಂಘಟನೆಯಾದ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್‌ನ ಸೌದಿ ಘಟಕದ ಪ್ರಧಾನ ಕಾರ್ಯದರ್ಶಿ ವೆಂಘಾಟ್ ಇತ್ತೀಚೆಗೆ ಕೋಝಿಕ್ಕೋಡ್‌ಗೆ ಆಗಮಿಸಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಸಹಾಯದಿಂದ ದೇಣಿಗೆ ಅಭಿಯಾನವನ್ನು ಆರಂಭಿಸಿದರು.

“ರಹೀಂನ ಜೀವ ಉಳಿಸಲು ರಚಿಸಲಾದ ಸಮಿತಿಯಲ್ಲಿ ಹಿಂದೂ, ಮುಸ್ಲಿಮರು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಇದ್ದಾರೆ” ಎಂದು ವೆಂಘಾಟ್ ಹೇಳಿದರು.

ಸುರೇಶ್ ಎಂಬ ವ್ಯಕ್ತಿ ಕಾನೂನು ನೆರವು ಸಮಿತಿಯ ಅಧ್ಯಕ್ಷರಾಗಿದ್ದು, ಮಾರ್ಚ್ 3 ರಂದು ಕೋಝಿಕ್ಕೋಡ್‌ನಲ್ಲಿ ಸೇವ್ ಅಬ್ದುಲ್ ರಹೀಂ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ವಾಣಿಜ್ಯೋದ್ಯಮಿಗಳು ಮತ್ತು ವ್ಲಾಗರ್‌ಗಳು ಪ್ರಚಾರ ಮಾಡುವ ಮೂಲಕ ಹಣ ಸಂಗ್ರಹಣೆಯ ಅಭಿಯಾನ ವೇಗ ಪಡೆದುಕೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಅವಶ್ಯಕತೆ ಇರುವ ಹಣ ಸಂಗ್ರಹವಾದ ನಂತರ ಸಮಿತಿಯು ದೇಣಿಗೆ ಅಭಿಯಾನವನ್ನು ಮುಚ್ಚಿದೆ.

ರಹೀಂನ ತಾಯಿ ಪಾತು, ಕೇರಳದ ಜನರ ಸಹಾಯದಿಂದ ಆಕೆಯ ಪ್ರಾರ್ಥನೆಗೆ ಉತ್ತರ ದೊರೆತಾಗ ತನ್ನ ಸಂತೋಷವನ್ನು ವರ್ಣಿಸಲು ಪದಗಳಿಲ್ಲ ಎಂದು ಹೇಳಿದರು.

“ಇಲ್ಲಿನ ಜನರ ನಡುವಿನ ಕೋಮು ಸೌಹಾರ್ದತೆಯು ಇಷ್ಟು ದೊಡ್ಡ ಮೊತ್ತವನ್ನು ಶೀಘ್ರವಾಗಿ ಸಂಗ್ರಹಿಸಲು ಸಹಾಯ ಮಾಡಿತು. ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ, ಅದರ ಮೂಲಕ ಹಣವನ್ನು ಮೀಸಲಾದ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ಬ್ಯಾಂಕ್ ಖಾತೆಗೆ ರವಾನೆ ಮಾಡಲಾಗುವುದು ಎಂದು ವೆಂಘಾಟ್ ಹೇಳಿದರು.

“ಒಮ್ಮೆ ಆ ಪ್ರಕ್ರಿಯೆ ಮುಗಿದ ನಂತರ, ನಾವು ಅವರ ಬಿಡುಗಡೆಯನ್ನು ಸುರಕ್ಷಿತವಾಗಿರಿಸಿಕೊಳ್ಳುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆದರೆ, ಅದಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ” ಎಂದು ವೆಂಗಟ್ ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...