Homeಮುಖಪುಟಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

- Advertisement -
- Advertisement -

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ₹34 ಕೋಟಿ ಹಣವನ್ನು 40 ದಿನಗಳಲ್ಲಿ ಸಂಗ್ರಹಿಸಲು ಕೇರಳ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳ ಧಾರ್ಮಿಕ ಮತ್ತು ರಾಜಕೀಯ ಮುಖಂಡರು ಕೈಜೋಡಿಸಿದ್ದಾರೆ. ಮಾನವೀಯತೆಗಾಗಿ ನಡೆದ ಈ ಅಭಿಯಾನವನ್ನು ‘ನೈಜ ಕೇರಳ ಸ್ಟೋರಿ’ ಎಂದು ಕರೆಯಲಾಗುತ್ತಿದೆ.

ಶುಕ್ರವಾರ ಸಂಜೆ ಹೊತ್ತಿಗೆ ಪೂರ್ಣ ಮೊತ್ತವನ್ನು ಸಂಗ್ರಹಿಸಲಾಗಿದೆ. ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ ಸೌದಿ ರಿಯಾಲ್ 15 ಮಿಲಿಯನ್ ಮೌಲ್ಯದ ಹಣವನ್ನು ಪಾವತಿಸಲು ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ.

41 ವರ್ಷದ ಅಬ್ದುಲ್ ರಹೀಮ್ 18 ವರ್ಷಗಳ ಹಿಂದೆ ರಿಯಾದ್‌ನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದರು. ಇತ್ತೀಚಿಗೆ, ದುಬೈನಲ್ಲಿ ನೆಲೆಸಿರುವ ಕೇರಳದ ವಲಸಿಗರು ಬಾಲಕನ ಕುಟುಂಬಕ್ಕೆ ದಂಡದ ಹಣ (ಅರೇಬಿಕ್‌ನಲ್ಲಿ “ದಿಯಾ”) ಪಡೆದು ಕ್ಷಮಾದಾನ ನೀಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಏಪ್ರಿಲ್ 15ರ ಮೊದಲು ಹಣ ಪಾವತಿಸಲು ಗಡುವು ನೀಡಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುವ ಮೊದಲು ಕೋಝಿಕ್ಕೋಡ್‌ನ ಫಿರೋಕ್‌ನಲ್ಲಿ ಆಟೋ ಚಾಲಕನಾಗಿದ್ದ ರಹೀಂ, ದುಬೈನಲ್ಲಿ ತಾನು ಕೆಲಸ ಮಾಡುತ್ತಿದ್ದ ಮಾಲೀಕರ 15 ವರ್ಷದ ಪಾರ್ಶ್ವವಾಯು ಮಗನ ಸಾವಿಗೆ ಕಾರಣನಾದ ಎಂಬ ಆರೋಪ ಇದೆ.

ಬಾಲಕನನ್ನು ನೋಡಿಕೊಳ್ಳುವುದು ಮತ್ತು ಆತ ಹೋಗಬೇಕಾದಲ್ಲೆಲ್ಲಾ ಕಾರಿನಲ್ಲಿ ಓಡಿಸುವುದು ಅವನ ಕೆಲಸವಾಗಿತ್ತು. ಆದರೆ, ರಹೀಂ ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಜೋಡಿಸಲಾದ ವೈದ್ಯಕೀಯ ಸಹಾಯವನ್ನು ಬೀಳಿಸಿದ್ದು, ಬಾಲಕ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಇದೆ.

2011, 2017, 2022, 2011, 2017 ಮತ್ತು 2022 ರಲ್ಲಿ ಪ್ರತಿ ಬಾರಿ ಮೇಲ್ಮನವಿ ವಿಫಲವಾದಾಗ ವಿಚಾರಣಾ ನ್ಯಾಯಾಲಯವು ಮರಣದಂಡನೆ ಆದೇಶವನ್ನು ನವೀಕರಿಸುತ್ತಲೇ ಬಂದಿದೆ. ಶಿಕ್ಷೆ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದ ಸತತ ಮೇಲ್ಮನವಿಗಳು ರಹೀಂ ಜೀವದಾನಕ್ಕೆ ಈವರೆಗೆ ಸಮಯಾವಕಾಶ ನೀಡಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನೊಂದಿಗೆ ಹೊಂದಿಕೊಂಡಿರುವ ಸಂಘಟನೆಯಾದ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್‌ನ ಸೌದಿ ಘಟಕದ ಪ್ರಧಾನ ಕಾರ್ಯದರ್ಶಿ ವೆಂಘಾಟ್ ಇತ್ತೀಚೆಗೆ ಕೋಝಿಕ್ಕೋಡ್‌ಗೆ ಆಗಮಿಸಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಸಹಾಯದಿಂದ ದೇಣಿಗೆ ಅಭಿಯಾನವನ್ನು ಆರಂಭಿಸಿದರು.

“ರಹೀಂನ ಜೀವ ಉಳಿಸಲು ರಚಿಸಲಾದ ಸಮಿತಿಯಲ್ಲಿ ಹಿಂದೂ, ಮುಸ್ಲಿಮರು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಇದ್ದಾರೆ” ಎಂದು ವೆಂಘಾಟ್ ಹೇಳಿದರು.

ಸುರೇಶ್ ಎಂಬ ವ್ಯಕ್ತಿ ಕಾನೂನು ನೆರವು ಸಮಿತಿಯ ಅಧ್ಯಕ್ಷರಾಗಿದ್ದು, ಮಾರ್ಚ್ 3 ರಂದು ಕೋಝಿಕ್ಕೋಡ್‌ನಲ್ಲಿ ಸೇವ್ ಅಬ್ದುಲ್ ರಹೀಂ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ವಾಣಿಜ್ಯೋದ್ಯಮಿಗಳು ಮತ್ತು ವ್ಲಾಗರ್‌ಗಳು ಪ್ರಚಾರ ಮಾಡುವ ಮೂಲಕ ಹಣ ಸಂಗ್ರಹಣೆಯ ಅಭಿಯಾನ ವೇಗ ಪಡೆದುಕೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಅವಶ್ಯಕತೆ ಇರುವ ಹಣ ಸಂಗ್ರಹವಾದ ನಂತರ ಸಮಿತಿಯು ದೇಣಿಗೆ ಅಭಿಯಾನವನ್ನು ಮುಚ್ಚಿದೆ.

ರಹೀಂನ ತಾಯಿ ಪಾತು, ಕೇರಳದ ಜನರ ಸಹಾಯದಿಂದ ಆಕೆಯ ಪ್ರಾರ್ಥನೆಗೆ ಉತ್ತರ ದೊರೆತಾಗ ತನ್ನ ಸಂತೋಷವನ್ನು ವರ್ಣಿಸಲು ಪದಗಳಿಲ್ಲ ಎಂದು ಹೇಳಿದರು.

“ಇಲ್ಲಿನ ಜನರ ನಡುವಿನ ಕೋಮು ಸೌಹಾರ್ದತೆಯು ಇಷ್ಟು ದೊಡ್ಡ ಮೊತ್ತವನ್ನು ಶೀಘ್ರವಾಗಿ ಸಂಗ್ರಹಿಸಲು ಸಹಾಯ ಮಾಡಿತು. ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ, ಅದರ ಮೂಲಕ ಹಣವನ್ನು ಮೀಸಲಾದ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ಬ್ಯಾಂಕ್ ಖಾತೆಗೆ ರವಾನೆ ಮಾಡಲಾಗುವುದು ಎಂದು ವೆಂಘಾಟ್ ಹೇಳಿದರು.

“ಒಮ್ಮೆ ಆ ಪ್ರಕ್ರಿಯೆ ಮುಗಿದ ನಂತರ, ನಾವು ಅವರ ಬಿಡುಗಡೆಯನ್ನು ಸುರಕ್ಷಿತವಾಗಿರಿಸಿಕೊಳ್ಳುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆದರೆ, ಅದಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ” ಎಂದು ವೆಂಗಟ್ ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...