Homeಮುಖಪುಟಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿ ಬಿಡುಗಡೆಗೆ 40 ದಿನಗಳಲ್ಲಿ ₹34 ಕೋಟಿ ಸಂಗ್ರಹ

- Advertisement -
- Advertisement -

ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ₹34 ಕೋಟಿ ಹಣವನ್ನು 40 ದಿನಗಳಲ್ಲಿ ಸಂಗ್ರಹಿಸಲು ಕೇರಳ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳ ಧಾರ್ಮಿಕ ಮತ್ತು ರಾಜಕೀಯ ಮುಖಂಡರು ಕೈಜೋಡಿಸಿದ್ದಾರೆ. ಮಾನವೀಯತೆಗಾಗಿ ನಡೆದ ಈ ಅಭಿಯಾನವನ್ನು ‘ನೈಜ ಕೇರಳ ಸ್ಟೋರಿ’ ಎಂದು ಕರೆಯಲಾಗುತ್ತಿದೆ.

ಶುಕ್ರವಾರ ಸಂಜೆ ಹೊತ್ತಿಗೆ ಪೂರ್ಣ ಮೊತ್ತವನ್ನು ಸಂಗ್ರಹಿಸಲಾಗಿದೆ. ಸಾವನ್ನಪ್ಪಿರುವ ಬಾಲಕನ ಕುಟುಂಬಕ್ಕೆ ಸೌದಿ ರಿಯಾಲ್ 15 ಮಿಲಿಯನ್ ಮೌಲ್ಯದ ಹಣವನ್ನು ಪಾವತಿಸಲು ನ್ಯಾಯಾಲಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಕೇವಲ ಮೂರು ದಿನಗಳು ಮಾತ್ರ ಉಳಿದಿವೆ.

41 ವರ್ಷದ ಅಬ್ದುಲ್ ರಹೀಮ್ 18 ವರ್ಷಗಳ ಹಿಂದೆ ರಿಯಾದ್‌ನ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದರು. ಇತ್ತೀಚಿಗೆ, ದುಬೈನಲ್ಲಿ ನೆಲೆಸಿರುವ ಕೇರಳದ ವಲಸಿಗರು ಬಾಲಕನ ಕುಟುಂಬಕ್ಕೆ ದಂಡದ ಹಣ (ಅರೇಬಿಕ್‌ನಲ್ಲಿ “ದಿಯಾ”) ಪಡೆದು ಕ್ಷಮಾದಾನ ನೀಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ, ಏಪ್ರಿಲ್ 15ರ ಮೊದಲು ಹಣ ಪಾವತಿಸಲು ಗಡುವು ನೀಡಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುವ ಮೊದಲು ಕೋಝಿಕ್ಕೋಡ್‌ನ ಫಿರೋಕ್‌ನಲ್ಲಿ ಆಟೋ ಚಾಲಕನಾಗಿದ್ದ ರಹೀಂ, ದುಬೈನಲ್ಲಿ ತಾನು ಕೆಲಸ ಮಾಡುತ್ತಿದ್ದ ಮಾಲೀಕರ 15 ವರ್ಷದ ಪಾರ್ಶ್ವವಾಯು ಮಗನ ಸಾವಿಗೆ ಕಾರಣನಾದ ಎಂಬ ಆರೋಪ ಇದೆ.

ಬಾಲಕನನ್ನು ನೋಡಿಕೊಳ್ಳುವುದು ಮತ್ತು ಆತ ಹೋಗಬೇಕಾದಲ್ಲೆಲ್ಲಾ ಕಾರಿನಲ್ಲಿ ಓಡಿಸುವುದು ಅವನ ಕೆಲಸವಾಗಿತ್ತು. ಆದರೆ, ರಹೀಂ ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಜೋಡಿಸಲಾದ ವೈದ್ಯಕೀಯ ಸಹಾಯವನ್ನು ಬೀಳಿಸಿದ್ದು, ಬಾಲಕ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂಬ ಆರೋಪ ಇದೆ.

2011, 2017, 2022, 2011, 2017 ಮತ್ತು 2022 ರಲ್ಲಿ ಪ್ರತಿ ಬಾರಿ ಮೇಲ್ಮನವಿ ವಿಫಲವಾದಾಗ ವಿಚಾರಣಾ ನ್ಯಾಯಾಲಯವು ಮರಣದಂಡನೆ ಆದೇಶವನ್ನು ನವೀಕರಿಸುತ್ತಲೇ ಬಂದಿದೆ. ಶಿಕ್ಷೆ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದ ಸತತ ಮೇಲ್ಮನವಿಗಳು ರಹೀಂ ಜೀವದಾನಕ್ಕೆ ಈವರೆಗೆ ಸಮಯಾವಕಾಶ ನೀಡಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನೊಂದಿಗೆ ಹೊಂದಿಕೊಂಡಿರುವ ಸಂಘಟನೆಯಾದ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್‌ನ ಸೌದಿ ಘಟಕದ ಪ್ರಧಾನ ಕಾರ್ಯದರ್ಶಿ ವೆಂಘಾಟ್ ಇತ್ತೀಚೆಗೆ ಕೋಝಿಕ್ಕೋಡ್‌ಗೆ ಆಗಮಿಸಿ ಬಿಜೆಪಿ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳ ಸಹಾಯದಿಂದ ದೇಣಿಗೆ ಅಭಿಯಾನವನ್ನು ಆರಂಭಿಸಿದರು.

“ರಹೀಂನ ಜೀವ ಉಳಿಸಲು ರಚಿಸಲಾದ ಸಮಿತಿಯಲ್ಲಿ ಹಿಂದೂ, ಮುಸ್ಲಿಮರು ಮತ್ತು ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ಸದಸ್ಯರು ಇದ್ದಾರೆ” ಎಂದು ವೆಂಘಾಟ್ ಹೇಳಿದರು.

ಸುರೇಶ್ ಎಂಬ ವ್ಯಕ್ತಿ ಕಾನೂನು ನೆರವು ಸಮಿತಿಯ ಅಧ್ಯಕ್ಷರಾಗಿದ್ದು, ಮಾರ್ಚ್ 3 ರಂದು ಕೋಝಿಕ್ಕೋಡ್‌ನಲ್ಲಿ ಸೇವ್ ಅಬ್ದುಲ್ ರಹೀಂ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದರು. ವಾಣಿಜ್ಯೋದ್ಯಮಿಗಳು ಮತ್ತು ವ್ಲಾಗರ್‌ಗಳು ಪ್ರಚಾರ ಮಾಡುವ ಮೂಲಕ ಹಣ ಸಂಗ್ರಹಣೆಯ ಅಭಿಯಾನ ವೇಗ ಪಡೆದುಕೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಅವಶ್ಯಕತೆ ಇರುವ ಹಣ ಸಂಗ್ರಹವಾದ ನಂತರ ಸಮಿತಿಯು ದೇಣಿಗೆ ಅಭಿಯಾನವನ್ನು ಮುಚ್ಚಿದೆ.

ರಹೀಂನ ತಾಯಿ ಪಾತು, ಕೇರಳದ ಜನರ ಸಹಾಯದಿಂದ ಆಕೆಯ ಪ್ರಾರ್ಥನೆಗೆ ಉತ್ತರ ದೊರೆತಾಗ ತನ್ನ ಸಂತೋಷವನ್ನು ವರ್ಣಿಸಲು ಪದಗಳಿಲ್ಲ ಎಂದು ಹೇಳಿದರು.

“ಇಲ್ಲಿನ ಜನರ ನಡುವಿನ ಕೋಮು ಸೌಹಾರ್ದತೆಯು ಇಷ್ಟು ದೊಡ್ಡ ಮೊತ್ತವನ್ನು ಶೀಘ್ರವಾಗಿ ಸಂಗ್ರಹಿಸಲು ಸಹಾಯ ಮಾಡಿತು. ನಾನು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ, ಅದರ ಮೂಲಕ ಹಣವನ್ನು ಮೀಸಲಾದ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯ ಬ್ಯಾಂಕ್ ಖಾತೆಗೆ ರವಾನೆ ಮಾಡಲಾಗುವುದು ಎಂದು ವೆಂಘಾಟ್ ಹೇಳಿದರು.

“ಒಮ್ಮೆ ಆ ಪ್ರಕ್ರಿಯೆ ಮುಗಿದ ನಂತರ, ನಾವು ಅವರ ಬಿಡುಗಡೆಯನ್ನು ಸುರಕ್ಷಿತವಾಗಿರಿಸಿಕೊಳ್ಳುತ್ತೇವೆ ಎಂದು ನಿರೀಕ್ಷಿಸುತ್ತೇವೆ. ಆದರೆ, ಅದಕ್ಕೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಮಗೆ ತಿಳಿದಿಲ್ಲ” ಎಂದು ವೆಂಗಟ್ ಹೇಳಿದರು.

ಇದನ್ನೂ ಓದಿ; ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...