Homeಮುಖಪುಟಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

ಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

- Advertisement -
- Advertisement -
ಭಯೋತ್ಪಾದನೆ ವಿರುದ್ಧ ಸಮರಕ್ಕಾಗಿ ಪಾಕಿಸ್ತಾನ ಜತೆಗಿನ ಎಲ್ಲಾ ಸಂಬಂಧ ಕಡಿದುಕೊಳ್ಳುವತ್ತ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪುತ್ರ ಪಾಕಿಸ್ತಾನಿ ಮೂಲದ ಉದ್ಯಮ ಪಾಲುದಾರನನ್ನು ಹೊಂದಿದ್ದಾನೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ

“ಒಂದೆಡೆ ಪಾಕಿಸ್ತಾನದಲ್ಲಿ ಪಟಾಕಿ ಸಿಡಿಸಲಾಗುತ್ತದೆ (ಬಿಜೆಪಿ ಸೋತರೆ) ಎಂದು ಅಮಿತ್ ಶಾ ಹೇಳುತ್ತಾರೆ, ಇನ್ನೊಂದೆಡೆ, ಅಜಿತ್ ದೋವಲ್‌ರ ಪುತ್ರ ಶೌರ್ಯ ದೋವಲ್ ಪಾಕಿಸ್ತಾನಿ ವ್ಯಕ್ತಿ ಸೈಯದ್ ಆಲ್ ಅಬ್ಬಾಸ್ ಜತೆ ಉದ್ಯಮ ಸಹಭಾಗಿತ್ವ ಹೊಂದಿದ್ದಾನೆ. ಆತನ ಇನ್ನೊಬ್ಬ ಉದ್ಯಮ ಪಾಲುದಾರ ಸೌದಿ ಅರೇಬಿಯಾದ ವ್ಯಕ್ತಿ. ಇದಕ್ಕೆ ಅಮಿತ್ ಶಾ ಅವರಿಂದ ಯಾವುದೇ ಆಕ್ಷೇಪವೂ ಇಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಕಟಕಿಯಾಡಿದ್ದಾರೆ.

ಮೋದಿ ಹಾಗೂ ಶಾ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾಷೆ ಮತ್ತು ಸಭ್ಯತೆಯ ಬಗ್ಗೆ ಪಾಠ ಮಾಡಬೇಕಾದ ಅಗತ್ಯವಿಲ್ಲ, ಇಡೀ ದೇಶವೇ ಅವರ ನಮ್ರತೆ ಮತ್ತು ಶಿಷ್ಟಾಚಾರವನ್ನು ಮೆಚ್ಚಿಕೊಂಡಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಸುರ್ಜೇವಾಲಾ ಬಿಜೆಪಿ ಬಳಿ ಕೇಳಿದ ಪ್ರಶ್ನೆಗಳು:
  • 2016ರಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಪತ್ನಿ ಪಾಕಿಸ್ತಾನದಿಂದ ಮುಂಬೈಗೆ ಪ್ರಯಾಣಿಸಿದ್ದು ಹೇಗೆ ಮತ್ತು ರಾಜ್ಯ ಅಥವಾ ಕೇಂದ್ರ ಸರ್ಕಾರ ಆಕೆಯನ್ನು ಬಂಧಿಸಲಿಲ್ಲ ಯಾಕೆ?
  • ದಾವೂದ್ ಇಬ್ರಾಹಿಂ ಜತೆ ಮಾತನಾಡಿದ ಕಾರಣಕ್ಕೆ ಏಕನಾಥ್ ಖಾಡ್ಸೆ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂಬುದು ಸುಳ್ಳೇ?
  • ಬಿಜೆಪಿ ನಾಯಕರು ಹಾಗೂ ಸಚಿವರೂ ಆದ ಗಿರೀಶ್ ಮಹಾಜನ್ ಮತ್ತು ಶಾಸಕರಾದ ದೇವಯಾನಿ ಫರಂಡೆ, ಸೀಮಾ ಹೀರೆ ಮತ್ತು ಇತರೆ ಬಿಜೆಪಿ ನಾಯಕರು ನಾಸಿಕ್‌ನಲ್ಲಿ ಈ ವರ್ಷ ಮೇ 19ರಂದು ನಡೆದ ದಾವೂದ್‌ನ ಸೊಸೆಯ ಮದುವೆಯಲ್ಲಿ ಹೇಗೆ ಪಾಲ್ಗೊಂಡರು?
  • ವ್ಯೂಹಾತ್ಮಕ ವಾಯುಪಡೆಯ ನೆಲೆಯಾದ ಪಠಾಣ್‌ಕೋಟ್‌ಗೆ ಪಾಕಿಸ್ತಾನದ ಐಎಸ್ಐ ಅಧಿಕಾರಿಗಳನ್ನು ಸರ್ಕಾರ ಒಳಬಿಟ್ಟಿದ್ದು ಹೇಗೆ?
  • ಉಧಾಮ್‌ಪುರ ಹಾಗೂ ಗುರುದಾಸ್‌ಪುರದಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕ ದಾಳಿಗಳಾದ ಬಳಿಕವೂ ಆಹ್ವಾನರಹಿತ ಅತಿಥಿಯಾಗಿ ಪಾಕ್ ಪ್ರಧಾನಿ ನವಾಜ್ ಅವರ ಮೊಮ್ಮಗಳ ಮದುವೆಗಾಗಿ ಮೋದಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದು ಯಾಕೆ?
  • ಬಿಜೆಪಿಯ ಐಟಿ ಸೆಲ್‌ನಲ್ಲಿದ್ದ ಧ್ರುವ ಸಕ್ಸೇನಾ ನೇತೃತ್ವದಲ್ಲಿ 11 ಜನರು ಪಾಕಿಸ್ತಾನದ ಐಎಸ್ಐ ಪರವಾಗಿ ಗೂಢಚರ್ಯೆ ನಡೆಸುತ್ತಿರುವಾಗ ಸಿಕ್ಕಿಬಿದ್ದಿದ್ದು ಸುಳ್ಳೇ?
  • ಹಿಂದಿನ ಬಿಜೆಪಿ ಸರ್ಕಾರ ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್, ಕಾಶ್ಮೀರಿ ಉಗ್ರ ಮುಶ್ತಕ್ ಝರ್‌ಗರ್ ಹಾಗೂ ಉಮರ್ ಸೈಯದ್ ಶೇಖ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ಕಂದಹಾರ್‌ಗೆ ಕರೆದೊಯ್ದದ್ದು ಸುಳ್ಳೇ?
  • ಹಿಜಬ್ ಉಗ್ರ ಬುರ್ಹಾನ್ ವಾನಿಯನ್ನು ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು ಮತ್ತು ಭದ್ರತಾ ಪಡೆಗಳು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಎಂದು ಜಮ್ಮು ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಹೇಳಿರಲಿಲ್ಲವೇ?
  • ವಾನಿಯ ಕುಟುಂಬಕ್ಕೆ ಉದ್ಯೋಗ ಹಾಗೂ ಪರಿಹಾರವನ್ನು ಜಮ್ಮು ಕಾಶ್ಮೀರದ ಪಿಡಿಪಿ-ಬಿಜೆಪಿ ಸರ್ಕಾರ ನೀಡಿದ್ದು ಸತ್ಯವಲ್ಲವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...