Homeಮುಖಪುಟಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

ಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

- Advertisement -
- Advertisement -
ಭಯೋತ್ಪಾದನೆ ವಿರುದ್ಧ ಸಮರಕ್ಕಾಗಿ ಪಾಕಿಸ್ತಾನ ಜತೆಗಿನ ಎಲ್ಲಾ ಸಂಬಂಧ ಕಡಿದುಕೊಳ್ಳುವತ್ತ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪುತ್ರ ಪಾಕಿಸ್ತಾನಿ ಮೂಲದ ಉದ್ಯಮ ಪಾಲುದಾರನನ್ನು ಹೊಂದಿದ್ದಾನೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ

“ಒಂದೆಡೆ ಪಾಕಿಸ್ತಾನದಲ್ಲಿ ಪಟಾಕಿ ಸಿಡಿಸಲಾಗುತ್ತದೆ (ಬಿಜೆಪಿ ಸೋತರೆ) ಎಂದು ಅಮಿತ್ ಶಾ ಹೇಳುತ್ತಾರೆ, ಇನ್ನೊಂದೆಡೆ, ಅಜಿತ್ ದೋವಲ್‌ರ ಪುತ್ರ ಶೌರ್ಯ ದೋವಲ್ ಪಾಕಿಸ್ತಾನಿ ವ್ಯಕ್ತಿ ಸೈಯದ್ ಆಲ್ ಅಬ್ಬಾಸ್ ಜತೆ ಉದ್ಯಮ ಸಹಭಾಗಿತ್ವ ಹೊಂದಿದ್ದಾನೆ. ಆತನ ಇನ್ನೊಬ್ಬ ಉದ್ಯಮ ಪಾಲುದಾರ ಸೌದಿ ಅರೇಬಿಯಾದ ವ್ಯಕ್ತಿ. ಇದಕ್ಕೆ ಅಮಿತ್ ಶಾ ಅವರಿಂದ ಯಾವುದೇ ಆಕ್ಷೇಪವೂ ಇಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಕಟಕಿಯಾಡಿದ್ದಾರೆ.

ಮೋದಿ ಹಾಗೂ ಶಾ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾಷೆ ಮತ್ತು ಸಭ್ಯತೆಯ ಬಗ್ಗೆ ಪಾಠ ಮಾಡಬೇಕಾದ ಅಗತ್ಯವಿಲ್ಲ, ಇಡೀ ದೇಶವೇ ಅವರ ನಮ್ರತೆ ಮತ್ತು ಶಿಷ್ಟಾಚಾರವನ್ನು ಮೆಚ್ಚಿಕೊಂಡಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಸುರ್ಜೇವಾಲಾ ಬಿಜೆಪಿ ಬಳಿ ಕೇಳಿದ ಪ್ರಶ್ನೆಗಳು:
  • 2016ರಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಪತ್ನಿ ಪಾಕಿಸ್ತಾನದಿಂದ ಮುಂಬೈಗೆ ಪ್ರಯಾಣಿಸಿದ್ದು ಹೇಗೆ ಮತ್ತು ರಾಜ್ಯ ಅಥವಾ ಕೇಂದ್ರ ಸರ್ಕಾರ ಆಕೆಯನ್ನು ಬಂಧಿಸಲಿಲ್ಲ ಯಾಕೆ?
  • ದಾವೂದ್ ಇಬ್ರಾಹಿಂ ಜತೆ ಮಾತನಾಡಿದ ಕಾರಣಕ್ಕೆ ಏಕನಾಥ್ ಖಾಡ್ಸೆ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂಬುದು ಸುಳ್ಳೇ?
  • ಬಿಜೆಪಿ ನಾಯಕರು ಹಾಗೂ ಸಚಿವರೂ ಆದ ಗಿರೀಶ್ ಮಹಾಜನ್ ಮತ್ತು ಶಾಸಕರಾದ ದೇವಯಾನಿ ಫರಂಡೆ, ಸೀಮಾ ಹೀರೆ ಮತ್ತು ಇತರೆ ಬಿಜೆಪಿ ನಾಯಕರು ನಾಸಿಕ್‌ನಲ್ಲಿ ಈ ವರ್ಷ ಮೇ 19ರಂದು ನಡೆದ ದಾವೂದ್‌ನ ಸೊಸೆಯ ಮದುವೆಯಲ್ಲಿ ಹೇಗೆ ಪಾಲ್ಗೊಂಡರು?
  • ವ್ಯೂಹಾತ್ಮಕ ವಾಯುಪಡೆಯ ನೆಲೆಯಾದ ಪಠಾಣ್‌ಕೋಟ್‌ಗೆ ಪಾಕಿಸ್ತಾನದ ಐಎಸ್ಐ ಅಧಿಕಾರಿಗಳನ್ನು ಸರ್ಕಾರ ಒಳಬಿಟ್ಟಿದ್ದು ಹೇಗೆ?
  • ಉಧಾಮ್‌ಪುರ ಹಾಗೂ ಗುರುದಾಸ್‌ಪುರದಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕ ದಾಳಿಗಳಾದ ಬಳಿಕವೂ ಆಹ್ವಾನರಹಿತ ಅತಿಥಿಯಾಗಿ ಪಾಕ್ ಪ್ರಧಾನಿ ನವಾಜ್ ಅವರ ಮೊಮ್ಮಗಳ ಮದುವೆಗಾಗಿ ಮೋದಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದು ಯಾಕೆ?
  • ಬಿಜೆಪಿಯ ಐಟಿ ಸೆಲ್‌ನಲ್ಲಿದ್ದ ಧ್ರುವ ಸಕ್ಸೇನಾ ನೇತೃತ್ವದಲ್ಲಿ 11 ಜನರು ಪಾಕಿಸ್ತಾನದ ಐಎಸ್ಐ ಪರವಾಗಿ ಗೂಢಚರ್ಯೆ ನಡೆಸುತ್ತಿರುವಾಗ ಸಿಕ್ಕಿಬಿದ್ದಿದ್ದು ಸುಳ್ಳೇ?
  • ಹಿಂದಿನ ಬಿಜೆಪಿ ಸರ್ಕಾರ ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್, ಕಾಶ್ಮೀರಿ ಉಗ್ರ ಮುಶ್ತಕ್ ಝರ್‌ಗರ್ ಹಾಗೂ ಉಮರ್ ಸೈಯದ್ ಶೇಖ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ಕಂದಹಾರ್‌ಗೆ ಕರೆದೊಯ್ದದ್ದು ಸುಳ್ಳೇ?
  • ಹಿಜಬ್ ಉಗ್ರ ಬುರ್ಹಾನ್ ವಾನಿಯನ್ನು ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು ಮತ್ತು ಭದ್ರತಾ ಪಡೆಗಳು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಎಂದು ಜಮ್ಮು ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಹೇಳಿರಲಿಲ್ಲವೇ?
  • ವಾನಿಯ ಕುಟುಂಬಕ್ಕೆ ಉದ್ಯೋಗ ಹಾಗೂ ಪರಿಹಾರವನ್ನು ಜಮ್ಮು ಕಾಶ್ಮೀರದ ಪಿಡಿಪಿ-ಬಿಜೆಪಿ ಸರ್ಕಾರ ನೀಡಿದ್ದು ಸತ್ಯವಲ್ಲವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....