Homeಮುಖಪುಟಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

ಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

- Advertisement -
- Advertisement -
ಭಯೋತ್ಪಾದನೆ ವಿರುದ್ಧ ಸಮರಕ್ಕಾಗಿ ಪಾಕಿಸ್ತಾನ ಜತೆಗಿನ ಎಲ್ಲಾ ಸಂಬಂಧ ಕಡಿದುಕೊಳ್ಳುವತ್ತ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪುತ್ರ ಪಾಕಿಸ್ತಾನಿ ಮೂಲದ ಉದ್ಯಮ ಪಾಲುದಾರನನ್ನು ಹೊಂದಿದ್ದಾನೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ

“ಒಂದೆಡೆ ಪಾಕಿಸ್ತಾನದಲ್ಲಿ ಪಟಾಕಿ ಸಿಡಿಸಲಾಗುತ್ತದೆ (ಬಿಜೆಪಿ ಸೋತರೆ) ಎಂದು ಅಮಿತ್ ಶಾ ಹೇಳುತ್ತಾರೆ, ಇನ್ನೊಂದೆಡೆ, ಅಜಿತ್ ದೋವಲ್‌ರ ಪುತ್ರ ಶೌರ್ಯ ದೋವಲ್ ಪಾಕಿಸ್ತಾನಿ ವ್ಯಕ್ತಿ ಸೈಯದ್ ಆಲ್ ಅಬ್ಬಾಸ್ ಜತೆ ಉದ್ಯಮ ಸಹಭಾಗಿತ್ವ ಹೊಂದಿದ್ದಾನೆ. ಆತನ ಇನ್ನೊಬ್ಬ ಉದ್ಯಮ ಪಾಲುದಾರ ಸೌದಿ ಅರೇಬಿಯಾದ ವ್ಯಕ್ತಿ. ಇದಕ್ಕೆ ಅಮಿತ್ ಶಾ ಅವರಿಂದ ಯಾವುದೇ ಆಕ್ಷೇಪವೂ ಇಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಕಟಕಿಯಾಡಿದ್ದಾರೆ.

ಮೋದಿ ಹಾಗೂ ಶಾ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾಷೆ ಮತ್ತು ಸಭ್ಯತೆಯ ಬಗ್ಗೆ ಪಾಠ ಮಾಡಬೇಕಾದ ಅಗತ್ಯವಿಲ್ಲ, ಇಡೀ ದೇಶವೇ ಅವರ ನಮ್ರತೆ ಮತ್ತು ಶಿಷ್ಟಾಚಾರವನ್ನು ಮೆಚ್ಚಿಕೊಂಡಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಸುರ್ಜೇವಾಲಾ ಬಿಜೆಪಿ ಬಳಿ ಕೇಳಿದ ಪ್ರಶ್ನೆಗಳು:
  • 2016ರಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಪತ್ನಿ ಪಾಕಿಸ್ತಾನದಿಂದ ಮುಂಬೈಗೆ ಪ್ರಯಾಣಿಸಿದ್ದು ಹೇಗೆ ಮತ್ತು ರಾಜ್ಯ ಅಥವಾ ಕೇಂದ್ರ ಸರ್ಕಾರ ಆಕೆಯನ್ನು ಬಂಧಿಸಲಿಲ್ಲ ಯಾಕೆ?
  • ದಾವೂದ್ ಇಬ್ರಾಹಿಂ ಜತೆ ಮಾತನಾಡಿದ ಕಾರಣಕ್ಕೆ ಏಕನಾಥ್ ಖಾಡ್ಸೆ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂಬುದು ಸುಳ್ಳೇ?
  • ಬಿಜೆಪಿ ನಾಯಕರು ಹಾಗೂ ಸಚಿವರೂ ಆದ ಗಿರೀಶ್ ಮಹಾಜನ್ ಮತ್ತು ಶಾಸಕರಾದ ದೇವಯಾನಿ ಫರಂಡೆ, ಸೀಮಾ ಹೀರೆ ಮತ್ತು ಇತರೆ ಬಿಜೆಪಿ ನಾಯಕರು ನಾಸಿಕ್‌ನಲ್ಲಿ ಈ ವರ್ಷ ಮೇ 19ರಂದು ನಡೆದ ದಾವೂದ್‌ನ ಸೊಸೆಯ ಮದುವೆಯಲ್ಲಿ ಹೇಗೆ ಪಾಲ್ಗೊಂಡರು?
  • ವ್ಯೂಹಾತ್ಮಕ ವಾಯುಪಡೆಯ ನೆಲೆಯಾದ ಪಠಾಣ್‌ಕೋಟ್‌ಗೆ ಪಾಕಿಸ್ತಾನದ ಐಎಸ್ಐ ಅಧಿಕಾರಿಗಳನ್ನು ಸರ್ಕಾರ ಒಳಬಿಟ್ಟಿದ್ದು ಹೇಗೆ?
  • ಉಧಾಮ್‌ಪುರ ಹಾಗೂ ಗುರುದಾಸ್‌ಪುರದಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕ ದಾಳಿಗಳಾದ ಬಳಿಕವೂ ಆಹ್ವಾನರಹಿತ ಅತಿಥಿಯಾಗಿ ಪಾಕ್ ಪ್ರಧಾನಿ ನವಾಜ್ ಅವರ ಮೊಮ್ಮಗಳ ಮದುವೆಗಾಗಿ ಮೋದಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದು ಯಾಕೆ?
  • ಬಿಜೆಪಿಯ ಐಟಿ ಸೆಲ್‌ನಲ್ಲಿದ್ದ ಧ್ರುವ ಸಕ್ಸೇನಾ ನೇತೃತ್ವದಲ್ಲಿ 11 ಜನರು ಪಾಕಿಸ್ತಾನದ ಐಎಸ್ಐ ಪರವಾಗಿ ಗೂಢಚರ್ಯೆ ನಡೆಸುತ್ತಿರುವಾಗ ಸಿಕ್ಕಿಬಿದ್ದಿದ್ದು ಸುಳ್ಳೇ?
  • ಹಿಂದಿನ ಬಿಜೆಪಿ ಸರ್ಕಾರ ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್, ಕಾಶ್ಮೀರಿ ಉಗ್ರ ಮುಶ್ತಕ್ ಝರ್‌ಗರ್ ಹಾಗೂ ಉಮರ್ ಸೈಯದ್ ಶೇಖ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ಕಂದಹಾರ್‌ಗೆ ಕರೆದೊಯ್ದದ್ದು ಸುಳ್ಳೇ?
  • ಹಿಜಬ್ ಉಗ್ರ ಬುರ್ಹಾನ್ ವಾನಿಯನ್ನು ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು ಮತ್ತು ಭದ್ರತಾ ಪಡೆಗಳು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಎಂದು ಜಮ್ಮು ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಹೇಳಿರಲಿಲ್ಲವೇ?
  • ವಾನಿಯ ಕುಟುಂಬಕ್ಕೆ ಉದ್ಯೋಗ ಹಾಗೂ ಪರಿಹಾರವನ್ನು ಜಮ್ಮು ಕಾಶ್ಮೀರದ ಪಿಡಿಪಿ-ಬಿಜೆಪಿ ಸರ್ಕಾರ ನೀಡಿದ್ದು ಸತ್ಯವಲ್ಲವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...