Homeಮುಖಪುಟಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

ಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

- Advertisement -
- Advertisement -
ಭಯೋತ್ಪಾದನೆ ವಿರುದ್ಧ ಸಮರಕ್ಕಾಗಿ ಪಾಕಿಸ್ತಾನ ಜತೆಗಿನ ಎಲ್ಲಾ ಸಂಬಂಧ ಕಡಿದುಕೊಳ್ಳುವತ್ತ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪುತ್ರ ಪಾಕಿಸ್ತಾನಿ ಮೂಲದ ಉದ್ಯಮ ಪಾಲುದಾರನನ್ನು ಹೊಂದಿದ್ದಾನೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ

“ಒಂದೆಡೆ ಪಾಕಿಸ್ತಾನದಲ್ಲಿ ಪಟಾಕಿ ಸಿಡಿಸಲಾಗುತ್ತದೆ (ಬಿಜೆಪಿ ಸೋತರೆ) ಎಂದು ಅಮಿತ್ ಶಾ ಹೇಳುತ್ತಾರೆ, ಇನ್ನೊಂದೆಡೆ, ಅಜಿತ್ ದೋವಲ್‌ರ ಪುತ್ರ ಶೌರ್ಯ ದೋವಲ್ ಪಾಕಿಸ್ತಾನಿ ವ್ಯಕ್ತಿ ಸೈಯದ್ ಆಲ್ ಅಬ್ಬಾಸ್ ಜತೆ ಉದ್ಯಮ ಸಹಭಾಗಿತ್ವ ಹೊಂದಿದ್ದಾನೆ. ಆತನ ಇನ್ನೊಬ್ಬ ಉದ್ಯಮ ಪಾಲುದಾರ ಸೌದಿ ಅರೇಬಿಯಾದ ವ್ಯಕ್ತಿ. ಇದಕ್ಕೆ ಅಮಿತ್ ಶಾ ಅವರಿಂದ ಯಾವುದೇ ಆಕ್ಷೇಪವೂ ಇಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಕಟಕಿಯಾಡಿದ್ದಾರೆ.

ಮೋದಿ ಹಾಗೂ ಶಾ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾಷೆ ಮತ್ತು ಸಭ್ಯತೆಯ ಬಗ್ಗೆ ಪಾಠ ಮಾಡಬೇಕಾದ ಅಗತ್ಯವಿಲ್ಲ, ಇಡೀ ದೇಶವೇ ಅವರ ನಮ್ರತೆ ಮತ್ತು ಶಿಷ್ಟಾಚಾರವನ್ನು ಮೆಚ್ಚಿಕೊಂಡಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಸುರ್ಜೇವಾಲಾ ಬಿಜೆಪಿ ಬಳಿ ಕೇಳಿದ ಪ್ರಶ್ನೆಗಳು:
  • 2016ರಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಪತ್ನಿ ಪಾಕಿಸ್ತಾನದಿಂದ ಮುಂಬೈಗೆ ಪ್ರಯಾಣಿಸಿದ್ದು ಹೇಗೆ ಮತ್ತು ರಾಜ್ಯ ಅಥವಾ ಕೇಂದ್ರ ಸರ್ಕಾರ ಆಕೆಯನ್ನು ಬಂಧಿಸಲಿಲ್ಲ ಯಾಕೆ?
  • ದಾವೂದ್ ಇಬ್ರಾಹಿಂ ಜತೆ ಮಾತನಾಡಿದ ಕಾರಣಕ್ಕೆ ಏಕನಾಥ್ ಖಾಡ್ಸೆ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂಬುದು ಸುಳ್ಳೇ?
  • ಬಿಜೆಪಿ ನಾಯಕರು ಹಾಗೂ ಸಚಿವರೂ ಆದ ಗಿರೀಶ್ ಮಹಾಜನ್ ಮತ್ತು ಶಾಸಕರಾದ ದೇವಯಾನಿ ಫರಂಡೆ, ಸೀಮಾ ಹೀರೆ ಮತ್ತು ಇತರೆ ಬಿಜೆಪಿ ನಾಯಕರು ನಾಸಿಕ್‌ನಲ್ಲಿ ಈ ವರ್ಷ ಮೇ 19ರಂದು ನಡೆದ ದಾವೂದ್‌ನ ಸೊಸೆಯ ಮದುವೆಯಲ್ಲಿ ಹೇಗೆ ಪಾಲ್ಗೊಂಡರು?
  • ವ್ಯೂಹಾತ್ಮಕ ವಾಯುಪಡೆಯ ನೆಲೆಯಾದ ಪಠಾಣ್‌ಕೋಟ್‌ಗೆ ಪಾಕಿಸ್ತಾನದ ಐಎಸ್ಐ ಅಧಿಕಾರಿಗಳನ್ನು ಸರ್ಕಾರ ಒಳಬಿಟ್ಟಿದ್ದು ಹೇಗೆ?
  • ಉಧಾಮ್‌ಪುರ ಹಾಗೂ ಗುರುದಾಸ್‌ಪುರದಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕ ದಾಳಿಗಳಾದ ಬಳಿಕವೂ ಆಹ್ವಾನರಹಿತ ಅತಿಥಿಯಾಗಿ ಪಾಕ್ ಪ್ರಧಾನಿ ನವಾಜ್ ಅವರ ಮೊಮ್ಮಗಳ ಮದುವೆಗಾಗಿ ಮೋದಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದು ಯಾಕೆ?
  • ಬಿಜೆಪಿಯ ಐಟಿ ಸೆಲ್‌ನಲ್ಲಿದ್ದ ಧ್ರುವ ಸಕ್ಸೇನಾ ನೇತೃತ್ವದಲ್ಲಿ 11 ಜನರು ಪಾಕಿಸ್ತಾನದ ಐಎಸ್ಐ ಪರವಾಗಿ ಗೂಢಚರ್ಯೆ ನಡೆಸುತ್ತಿರುವಾಗ ಸಿಕ್ಕಿಬಿದ್ದಿದ್ದು ಸುಳ್ಳೇ?
  • ಹಿಂದಿನ ಬಿಜೆಪಿ ಸರ್ಕಾರ ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್, ಕಾಶ್ಮೀರಿ ಉಗ್ರ ಮುಶ್ತಕ್ ಝರ್‌ಗರ್ ಹಾಗೂ ಉಮರ್ ಸೈಯದ್ ಶೇಖ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ಕಂದಹಾರ್‌ಗೆ ಕರೆದೊಯ್ದದ್ದು ಸುಳ್ಳೇ?
  • ಹಿಜಬ್ ಉಗ್ರ ಬುರ್ಹಾನ್ ವಾನಿಯನ್ನು ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು ಮತ್ತು ಭದ್ರತಾ ಪಡೆಗಳು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಎಂದು ಜಮ್ಮು ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಹೇಳಿರಲಿಲ್ಲವೇ?
  • ವಾನಿಯ ಕುಟುಂಬಕ್ಕೆ ಉದ್ಯೋಗ ಹಾಗೂ ಪರಿಹಾರವನ್ನು ಜಮ್ಮು ಕಾಶ್ಮೀರದ ಪಿಡಿಪಿ-ಬಿಜೆಪಿ ಸರ್ಕಾರ ನೀಡಿದ್ದು ಸತ್ಯವಲ್ಲವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...