Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....