Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...