Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ....

ಅಡ್ವಾಣಿ ಮತ್ತೆ ನೆನಪಿಸಿರುವ ಜಿನ್ನಾರ ಸುತ್ತ….

- Advertisement -
- Advertisement -

ನಮ್ಮ ಸ್ವಾತಂತ್ರ್ಯ ಸಂಗ್ರಾಮ ಅಂತ್ಯಗೊಂಡಿದ್ದರಲ್ಲಿನ ಒಂದು ವಿಚಿತ್ರ ವಿಶಿಷ್ಟತೆ ಯಾವುದೆಂದರೆ; ನನ್ನ ನರನಾಡಿಗಳಲ್ಲಿ ನಾನು ಸಂಪೂರ್ಣವಾಗಿ ಹಿಂದೂ ಎಂದು ಹೇಳಿದ್ದ ಮಹಾತ್ಮ ಗಾಂಧಿ ಜಾತ್ಯಾತೀತ ಭಾರತದ ರಾಷ್ಟ್ರಪಿತ ಆದದ್ದು. ಹಾಗೆಯೇ ದೇವರು-ಧರ್ಮದಲ್ಲಿ ನಂಬಿಕೆ ಇರದಿದ್ದ, ಉರ್ದು ಭಾಷೆ ಇರಲಿ, ಇಂಗ್ಲಿಷ್ ಬಿಟ್ಟರೆ ಭಾರತದ ಒಂದೇಒಂದು ಭಾಷೆಯಲ್ಲಿ ಮಾತನಾಡಲು ಬಾರದಿದ್ದ, ಇಸ್ಲಾಂನಲ್ಲಿ ನಿಷೇಧಿಸಲ್ಪಟ್ಟಿರುವ ‘ತೀರ್ಥ’ ಮತ್ತು ಆಹಾರವನ್ನು ಸೇವಿಸುತ್ತಿದ್ದ, ನಾಸ್ತಿಕರಾಗಿದ್ದ ಮೊಹ್ಮದ್ ಅಲಿ ಜಿನ್ನಾರವರು ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪಿತವಾದ ಪಾಕಿಸ್ತಾನದ ರಾಷ್ಟ್ರಪಿತ ಆದದ್ದು!!

ಇಂಥಾ ವೈಚಿತ್ರ್ಯದ ನಡುವೆಯೂ ಇವರಿಬ್ಬರ ಮಧ್ಯೆ ಹಲವು ಸಾಮ್ಯತೆಗಳಿವೆ. ಅವುಗಳಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ-ಜಿನ್ನಾ, ಇಬ್ಬರೂ ಹಿಂದೂ-ಮುಸ್ಲೀಮರ ನಡುವೆ ಸೌಹಾರ್ದವ ಬಯಸಿದವರು.

ಬಾಲಗಂಗಾಧರ ತಿಲಕ್‌ರವರು ಸ್ವರಾಜ್ಯ ನನ್ನ ಜನ್ಮಸಿದ್ದ ಹಕ್ಕು ಎಂಬ ಹೇಳಿಕೆಯ ಮೂಲಕ ಬ್ರಿಟಿಷ್ ಸರ್ಕಾರದ ಕೆಂಗಣ್ಣಿಗೆ ಗುರಿಯಾದಾಗ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದವರಲ್ಲಿ ಜಿನ್ನಾ ಕೂಡಾ ಒಬ್ಬರು. ಗೋಪಾಲ್ ಕೃಷ್ಣ ಗೋಖಲೆಯವರು ಒಂದುಕಡೆ ಜಿನ್ನಾರ ಬಗ್ಗೆ ಧಾರ್ಮಿಕ ಪೂರ್ವಗ್ರಹಗಳಿಂದ ಕಳಂಕಿತರಾಗದಿರುವ ಜಿನ್ನಾ ಹಿಂದೂ-ಮುಸ್ಲಿಂ ಐಕ್ಯತೆಗೆ ಹೇಳಿ ಮಾಡಿಸಿದಂತಹ ರಾಯಭಾರಿ ಎಂದು ಹೇಳಿದ್ದು ಅತಿಶಯೋಕ್ತಿಯ ಮಾತಲ್ಲ.

ಮುಸ್ಲಿಂ ಲೀಗ್‌ನವರು ಜಿನ್ನಾರನ್ನು ಅದೆಷ್ಟೇ ಓಲೈಸಿದರೂ ಸ್ವಾತಂತ್ರ್ಯ ಸಿಗಬೇಕಿದ್ದರೆ ಹಿಂದೂಗಳು ಹಾಗೂ ಮುಸ್ಲಿಮರು ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳುತ್ತಿದ್ದ ಜಿನ್ನಾ ಕಾಂಗ್ರೆಸ್‌ನಲ್ಲೇ ಉಳಿದರು. ಆದರೆ ಕಾಲಕ್ರಮೇಣ ಕಾಂಗ್ರೆಸ್ ಮೇಲೆ ಗಾಂಧಿಯವರ ಹಿಡಿತ ಬಿಗಿಗೊಂಡಿತು. ಅದರಲ್ಲಿದ್ದ ಹಿಂದೂ ನಾಯಕರೆಲ್ಲರೂ ಗಾಂಧಿಗೆ ಡೊಗ್ಗು ಸಲಾಮು ಹೊಡೆಯುವುದು ಹೆಚ್ಚಾಗಿ ನೆಹರೂರವರ ಬಗ್ಗೆ ಗಾಂಧಿ ಹೆಚ್ಚು ಒಲವು ತೋರಿಸಲಾರಂಭಿಸಿದರು. ಇದೇ ಹೊತ್ತಿಗೆ ಸರಿಯಾಗಿ ಹಿಂದೂ ಮಹಾಸಭಾದವರ ‘ಹಿಂದೂ ರಾಷ್ಟ್ರ’ದ ಗದ್ದಲ ಹೆಚ್ಚಾಗಿತ್ತಲ್ಲದೆ ‘ದ್ವಿರಾಷ್ಟ್ರ ನೀತಿ’ಯೂ ಹೆಚ್ಚು ಮನ್ನಣೆ ಪಡೆಯಲಾರಂಭಿಸಿತು.

ಈ ಹಂತದಲ್ಲೂ ಅವರು ಕಾಂಗ್ರೆಸ್‌ನಿಂದ ಹೊರಹೋಗಲು ಇಚ್ಛಿಸಲಿಲ್ಲ. ಆದರೆ ಬಹುಸಂಖ್ಯಾತ ಜನಾಂಗ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಹೊಂದಿರುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಅಲ್ಪಸಂಖ್ಯಾತರಲ್ಲಿ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಳ ಬಗ್ಗೆ ಆತಂಕ ಮೂಡುವುದು ಸಹಜ. ಅದನ್ನು ನಿವಾರಿಸಬೇಕಾದರೆ ಕಾನೂನಿನಲ್ಲಿ ಅವರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು. ಎಂದು ಎಚ್ಚರಿಕೆ ನೀಡಿದ್ದರು. ಅವರ ಈ ಎಚ್ಚರಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸದಿದ್ದಾಗ ನಿರಾಶೆಗೊಂಡ ಜಿನ್ನಾ ಕಾಂಗ್ರೆಸ್ ಪಕ್ಷದಿಂದಲೇ ದೂರ ಸರಿಯಲಾರಂಭಿಸಿದರು.

ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ಸಿಗುವ ನಾಲ್ಕು ದಿನ ಮುನ್ನ ಜಿನ್ನಾರವರು ಮಾಡಿದ ಭಾಷಣವೇ ಇವತ್ತು ಅಡ್ವಾಣಿಗೆ ಬಹಳ ಮೆಚ್ಚುಗೆಯಾಗಿದೆ. ಆದರೆ ಜಿನ್ನಾರವರು ಹಿಂದೂ-ಮುಸ್ಲಿಂ ಐಕ್ಯತೆ ಬಗ್ಗೆ ಹಾಗೆ ಮಾತನಾಡಿದ್ದು ಅದೊಂದೇ ಬಾರಿ ಅಲ್ಲ. ಪಾಕಿಸ್ತಾನಕ್ಕಾಗಿ ಹೋರಾಡಿದ್ದ ಜಿನ್ನಾ ಮೂಲಭೂತವಾಗಿ ಇಸ್ಲಾಂ ಧರ್ಮಕ್ಕೆ ಬದ್ದರಾಗಿಯೂ ಇರಲಿಲ್ಲ. ಹಾಗೆಯೇ ಹಿಂದೂ ದ್ವೇಷಿಯೂ ಆಗಿರಲಿಲ್ಲ. ಅವರು ಪಾಕಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಹಲವೇ ದಿನಗಳ ನಂತರ ಎಂ.ಎಸ್.ಎಂ ಶರ್ಮ ಎಂಬ ಹಿಂದೂ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ನಾನು ಈಗಲೂ ಹಿಂದೂ-ಮುಸ್ಲಿಂರ ಐಕ್ಯತೆಯನ್ನು ಬಯಸುತ್ತೇನಲ್ಲದೆ, ಸದ್ಯದಲ್ಲೇ ಪಾಕಿಸ್ತಾನದಲ್ಲಿರುವ ಹಿಂದೂಗಳ ರಕ್ಷಣೆಗೆಂದು ನಾನೇ ‘ಪ್ರೊಟೆಕ್ಟರ್ ಜನರಲ್’ಆಗಿ ನಿಲ್ಲುತ್ತೇನೆ ಎಂದು ಹೇಳಿದ್ದರು.

ಅಂದಹಾಗೆ, ಇಲ್ಲಿ ದಾಖಲಿಸಿರುವುದಕ್ಕೆಲ್ಲಾ ಮೂಲ ಪ್ರೇರಣೆ ‘ಅಂಡರ್‌ಸ್ಟಾಂಡಿಂಗ್ ದಿ ಮುಸ್ಲಿಂ ಮೈಂಡ್’ ಎಂಬ ಪುಸ್ತಕದಲ್ಲಿ ಜಿನ್ನಾರವರನ್ನು ಕುರಿತ ಅಧ್ಯಾಯ. ಈ ಪುಸ್ತಕವನ್ನು ಬರೆದವರಿರುವವರು ಮತ್ತಿನ್ಯಾರೂ ಅಲ್ಲ… ಪ್ರಖ್ಯಾತ ಸಂಶೋಧಕರೂ, ಮಹಾತ್ಮ ಗಾಂಧಿಯವರ ಮೊಮ್ಮಗನೂ ಆಗಿರುವ ರಾಜ್‌ಮೋಹನ್ ಗಾಂಧಿಯವರು!!

ಗೌರಿ ಲಂಕೇಶ್,
ಜೂನ್ 22, 2005 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...