Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...