Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...