Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...