Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...