Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...