Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...