Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....