Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...