Homeಮುಖಪುಟಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ಏನು ನಿಮ್ಮ...

ಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ಏನು ನಿಮ್ಮ ಲೀಲೆ?

ಕಳೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿ ಚುನಾವಣೆಗೆ ಸ್ಪರ್ಧಿಸಿತಾದರೂ ಗಳಿಸಿದ್ದು ಮಾತ್ರ ಕೇವಲ 1 ಸ್ಥಾನ. ಆದರೆ, ತನ್ನ ರಾಜಕೀಯ ಹೋರಾಟವನ್ನು ಪವನ್ ಕಲ್ಯಾಣ್ ಹೀಗೆ ನಡೆಸಿದ್ದರೂ ಸಹ ಜನರ ಪ್ರಶಂಸೆಗೆ ಪಾತ್ರರಾಗುತ್ತಿದ್ದರೇನೋ?

- Advertisement -
- Advertisement -

ಪವನ್ ಕಲ್ಯಾಣ್.. ಈತ ತೆಲುಗು ಸಿನಿಮಾ ರಂಗದ ಪವರ್ ಸ್ಟಾರ್. ಅದಕ್ಕೂ ಮೇಲಾಗಿ ಮೆಗಾ ಸ್ಟಾರ್ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ ಅವರ ಖಾಸಾ ತಮ್ಮ. ಮಾಡಿದ್ದು ಕೇವಲ 25 ಚಿತ್ರಗಳು. ಈ ಪೈಕಿ ಹಿಟ್ ಸಾಲಿಗೆ ಸೇರುವ ಚಿತ್ರಗಳ ಸಂಖ್ಯೆ ಮೂರು ಮತ್ತೊಂದು ಮಾತ್ರ. ಹೀಗಿದ್ದೂ ಈತ ಪವರ್ ಸ್ಟಾರ್ ಪಟ್ಟಕ್ಕೆ ಏರಿದ್ದು ಹೇಗೆ? ಎಂಬುದು ಈಗಲೂ ಉತ್ತರವಿಲ್ಲದ ಪ್ರಶ್ನೆಯೇ ಸರಿ.

ಆದರೆ, ಈತ ಕೇವಲ ಸಿನಿ ರಂಗದಲ್ಲೇ ಮುಂದುವರೆದಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ರಾಜಕೀಯಕ್ಕೂ ಧುಮುಕಿರುವ ಈತನ ಕೆಲವು ಎಡಬಿಡಂಗಿ ನಿಲುವುಗಳು ಇದೀಗ ಪೇಚಿಗೆ ಸಿಲುಕುವಂತಾಗಿದೆ. ಸ್ವತಃ ಈತನ ಅಭಿಮಾನಿಗಳೇ ಗೊಂದಲದಲ್ಲಿದ್ದಾರೆ.

ಅಸಲಿಗೆ ಆಂಧ್ರಪ್ರದೇಶದಲ್ಲಿ ಪರ್ಯಾಯ ರಾಜಕೀಯ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆಯ ಉದ್ದೇಶದಿಂದ ನಟ ಚಿರಂಜೀವಿ 2008ರಲ್ಲಿ ತಿರುಪತಿಯಲ್ಲಿ ಮದರ್ ತೆರೆಸಾ ಅವರ ಹುಟ್ಟುಹಬ್ಬದ ದಿನವಾದ ಆಗಸ್ಟ್ 2 ರಂದು ಅದ್ದೂರಿಯಾಗಿ “ಪ್ರಜಾರಾಜ್ಯಂ” ಎಂಬ ಪಕ್ಷವನ್ನು ಸ್ಥಾಪಿಸಿ ಚುನಾವಣೆ ಎದುರಿಸಿದ್ದರು. ಈ ಸಂದರ್ಭದಲ್ಲಿ ಪವನ್ ಕಲ್ಯಾಣ್ ತನ್ನ ಅಣ್ಣನ ಬೆನ್ನಿಗೆ ನಿಂತಿದ್ದರು. ಆದರೆ, ಪ್ರಜಾರಾಜ್ಯಂ ನಿರೀಕ್ಷಿತ ಸ್ಥಾನ ಗಳಿಸುವಲ್ಲಿ ವಿಫಲವಾಗಿತ್ತು. ಪರಿಣಾಮ ಕಾಂಗ್ರೆಸ್ ಪಕ್ಷದ ಜೊತೆಗೆ ತನ್ನ ಪ್ರಜಾರಾಜ್ಯಂ ಪಕ್ಷವನ್ನು ವಿಲೀನ ಮಾಡಿದ್ದ ಜಿರಂಜೀವಿ, ಸೋನಿಯಾ ಗಾಂಧಿ ಅವರ ಕೃಪಕಟಾಕ್ಷದಿಂದ ಕೇಂದ್ರ ಸಚಿವ ಹುದ್ದೆಗೆ ಏರುವ ಮೂಲಕ ರಾಜಕೀಯವಾಗಿ ತಣ್ಣಗಾಗಿದ್ದರು.

ಆದರೆ, ಪವನ್ ಕಲ್ಯಾಣ್ ತನ್ನ ಅಣ್ಣನ ಈ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದರು. ಅಲ್ಲದೆ, ತನ್ನ ಅಣ್ಣನಿಂದ ದೂರವಾಗಿ 2014 ಮಾರ್ಚ್ 14 ರಂದು “ಜನಸೇನಾ ಪಾರ್ಟಿ” ಎಂಬ ಮತ್ತೊಂದು ಹೊಸ ಪಕ್ಷವನ್ನು ಸ್ಥಾಪಿಸಿದರು. ರಾಜ್ಯವ್ಯಾಪಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ನಡೆಸಿದ್ದರು. ಅಸಲಿಗೆ ಈ ಪ್ರಚಾರ ಜನಸೇನಾ ಪಕ್ಷದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದರೆ ಸಮಸ್ಯೆ ಇರಲಿಲ್ಲ. ಆದರೆ, ಈ ಪ್ರಚಾರ ಪವನ್ ಕಲ್ಯಾಣ್ ಅವರ ರಾಜಕೀಯ ಅಪಕ್ವತೆ ಹಾಗೂ ಎಡಬಿಡಂಗಿ ತನವನ್ನು ಎದ್ದು ಕಾಣುವಂತೆ ಮಾಡಿತ್ತು.

ಪವನ್ ಕಲ್ಯಾಣ್.

ಪವನ್ ರಾಜಕೀಯ ಎಡಬಿಡಂಗಿ ತನಕ್ಕೆ ಕೊನೆ ಎಂದು?;

2014ರಲ್ಲಿ ಪವನ್ ಕಲ್ಯಾಣ್ ರಾಜಕೀಯ ಪ್ರವೇಶಿಸಿದಾಗ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲದೆ ಸ್ವತಂತ್ರ್ಯವಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದೇ ಊಹಿಸಲಾಗಿತ್ತು.

ಆದರೆ, ಈ ಸಂದರ್ಭದಲ್ಲಿ ತಮ್ಮ ದ್ವನಿ ಬದಲಿಸಿದ್ದ ಪವನ್, ನೇರಾನೇರ ಪ್ರಧಾನಿ ನರೇಂದ್ರ ಮೋದಿಯ ಪರ ಬ್ಯಾಟಿಂಗ್ ನಡೆಸಿದ್ದರು. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಅನಿವಾರ್ಯ ಎಂದು ಹೋದಲ್ಲಿ ಬಂದಲ್ಲೆಲ್ಲಾ ಬೊಬ್ಬೆ ಹೊಡೆದಿದ್ದರು. ಹೀಗಾಗಿ ಚಿರಂಜೀವಿಯಂತೆ ಪವನ್ ಕಲ್ಯಾಣ್ ಸಹ ತಮ್ಮ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸುವುದು ಖಚಿತ ಎನ್ನುವ ಮಾತು ಚಾಲ್ತಿಗೆ ಬರಲಾರಂಭಿಸಿತು.

2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಜನಸೇನಾ ಪಕ್ಷ ಚುನಾವಣೆಗೆ ಸ್ಪರ್ಧಿಸಲಿದೆ ಎಂದೇ ಬಿಂಬಿಸಲಾಗಿತ್ತು. ಆದರೆ, ಈ ವೇಳೆ ಉಲ್ಟಾ ಹೊಡೆದಿದ್ದ ಪವನ್ ಕಲ್ಯಾಣ್, “ಬಿಜೆಪಿ ದೇಶಕ್ಕೆ ಮಾರಕ. ಇವರಿಗೆ ಮತ ಹಾಕಬೇಡಿ. ಕೆಲವು ಬಿಜೆಪಿ ನಾಯಕರು ಚುನಾವಣೆ ಸಂದರ್ಭದಲ್ಲಿ ಯುದ್ಧ ಘೋಷಣೆ ಮಾಡುವ ಮೂಲಕ ಮತಗಳನ್ನು ಸೆಳೆಯುತ್ತೇವೆ ಎಂದು ಸ್ವತಃ ನನ್ನ ಬಳಿಯೇ ಹೇಳಿದ್ದಾರೆ. ಇವರು ಗೆಲ್ಲುವುದಕ್ಕಾಗಿ ಏನುಬೇಕಾದರೂ ಮಾಡಿಯಾರು. ಹೀಗಾಗಿ ಎರಡನೇ ಅವಧಿಗೂ ಬಿಜೆಪಿ ಗೆಲುವು ಸಾಧಿಸಿದರೆ ಭಾರತವನ್ನು ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಇಡೀ ದೇಶವನ್ನೇ ಅಚ್ಚರಿಗೆ ದೂಡಿದ್ದರು.

ಅಲ್ಲದೆ, ನಮ್ಮ ಪಕ್ಷ ನೇರವಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಾಗಿ ಯಾರೂ ಬಿಜೆಪಿ ಮತಹಾಕಬೇಡಿ ಎಂದು ಪ್ರಚಾರ ನಡೆಸುತ್ತೇವೆ ಎಂದು ಹೇಳುವ ಮೂಲಕ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗುರಿಯಾಗಿದ್ದರು.

ನಂತರ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿ ಚುನಾವಣೆಗೆ ಸ್ಪರ್ಧಿಸಿತಾದರೂ ಗಳಿಸಿದ್ದು ಮಾತ್ರ ಕೇವಲ 1 ಸ್ಥಾನ. ಆದರೆ, ತನ್ನ ರಾಜಕೀಯ ಹೋರಾಟವನ್ನು ಪವನ್ ಕಲ್ಯಾಣ್ ಹೀಗೆ ನಡೆಸಿದ್ದರೂ ಸಹ ಜನರ ಪ್ರಶಂಸೆಗೆ ಪಾತ್ರರಾಗುತ್ತಿದ್ದರೇನೋ?

ಪವನ್ ಕಲ್ಯಾಣ್.

ಆದರೆ, ಕಳೆದ ಎರಡು ವರ್ಷದಿಂದ ಪವನ್ ಕಲ್ಯಾಣ್ ಯಾವ ಪಕ್ಷದ ನಾಯಕರ ವಿರುದ್ಧ ಹೋರಾಟ ನಡೆಸಿದ್ದರೋ ಇದೀಗ ಮತ್ತೆ ಅದೇ ಬಿಜೆಪಿ ನಾಯಕರ ಜೊತೆಗೆ ಕೈಜೋಡಿಸಿದ್ದಾರೆ. ಬಿಜೆಪಿ ಪರ ಬ್ಯಾಟ್ ಬೀಸುವ ಕೆಲಸವನ್ನು ಶಿರಸಾವಹಿಸಿ ಪಾಲಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ ಪಕ್ಷದ ನೂತನ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಪಿ. ನಡ್ಡಾ ಅವರನ್ನು ಇಂದು ಖುದ್ದು ಭೇಟಿ ಮಾಡಿ ಅಭಿನಂದನೆಗಳನ್ನೂ ಸಲ್ಲಿಸಿದ್ದಾರೆ.

ಅತ್ತ ಒಳ್ಳೆಯ ಚಿತ್ರಗಳನ್ನೂ ನೀಡದ ಪವನ್ ಕಲ್ಯಾಣ್, ಇತ್ತ ರಾಜಕೀಯವಾಗಿಯೂ ಸರಿಯಾದ ಗುರಿ ಹಾಗೂ ನಿಲುವುಗಳಿಲ್ಲದ ಇಲ್ಲದ ರಾಜಕೀಯ ಎಡಬಿಡಂಗಿ ತನವನ್ನು ಕಂಡು ಸ್ವತಃ ಆಂಧ್ರಪ್ರದೇಶದ ಅವರ ಅಭಿಮಾನಿ ಬಳಗವೇ ಪವನ್ ಕಲ್ಯಾಣ್ ಏನಪ್ಪಾ ನಿನ್ನ ಲೀಲೆ? ಎಂದು ಪ್ರಶ್ನಿಸುವಂತಾಗಿರುವುದು ಮಾತ್ರ ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...