*ನೀರು* (ಪುಟ್ಕತೆ)

- Advertisement -
- Advertisement -

‘ಬೇಕೇ ಬೇಕು ನೀರೂ ಬೇಕು’ ಹೀಗೆ ಸುತ್ತ ಎಂಬತ್ತಾರು ಹಳ್ಳಿ ಜನ ಘೋಷಣೆ ಕೂಗುತ್ತ ಸತ್ಯಾಗ್ರಹಕ್ಕೆ ಕುಳಿತಿದ್ದರು. ಕುಡಿಯೊ ನೀರಿಗಾಗಿ ಎಂಟು ವರ್ಷದಿಂದ ಅರ್ಜಿ ಕೊಟ್ಟು ಸಾಕಾಗಿ ಹೋಗಿತ್ತು. ಇನ್ನೆರಡು ತಿಂಗಳಲ್ಲಿ ಚುನಾವಣೆ. ನೂರನೇ ದಿನದ ಸತ್ಯಾಗ್ರಹಕ್ಕೆ ಮಿನಿಸ್ಟರ್, ಅಧಿಕಾರಿಗಳು ಬಂದರು. ಜನರ ಗದ್ದಲ ಹೆಚ್ಚಾಯಿತು. ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದು ನಿಶ್ಯಬ್ಧರಾದರು.

ಮಿನಿಸ್ಟರ್ ಮೈಕ್ ಹಿಡಿದು ‘ಮಹಾಜನಗಳೇ, ನಿಮ್ಮ ನೋವು ನನಗರ್ಥವಾಗತ್ತೆ. ಈ ಮಣ್ಣಿಗೆ ನೀರು ತರದೆ ನಾನು ಸಾಯಲಾರೆ’ ಎಂದು ಸ್ವಲ್ಪ ಹೊತ್ತು ಸುಮ್ಮನಾದರು. ಮಿನಿಸ್ಟರ್ ಹಿಂಬಾಲಕರು, ಅಧಿಕಾರಿಗಳನ್ನು ಬಿಟ್ಟು ಯಾರೂ ಚಪ್ಪಾಳೆ ತಟ್ಟಲಿಲ್ಲ. ‘ಇನ್ನೆರಡೇ ತಿಂಗಳು. ನನಗೆ ಮತ್ತೆ ಅಧಿಕಾರ ಕೊಡಿ. ನಿಮ್ಮ ಋಣ ತೀರಿಸದೇ ಸಾಯೋದಿಲ್ಲ’ ಎಂದರು. ಅಷ್ಟರಲ್ಲಿ ಮದ್ಯೆ ಬಾಯಿ ಹಾಕಿದ ಜನತೆ.

‘ಸಾಯೆಬ್ರೆ ಎಂಟು ವರ್ಷದಿಂದ ಒಂದು ಹನಿ ಮಳೆ ಬಿದ್ದಿಲ್ಲ’

‘ಸಾಯೆಬ್ರೆ ಕುಡಿಯೋ ನೀರಿಗೆ ಏಳು ಮೈಲಿ ನಡಿಬೇಕಾಗ್ಯದ’

‘ಸಾಯೆಬ್ರೆ ಮಕ್ಕಳು ಸಾಲಿ ಬಿಟ್ಟು ನೀರು ಹೊರಾಕತ್ತೇರ’

‘ಸಾಯೆಬ್ರೆ ಎಂಟು ವರ್ಷ ಆತ್ರಿ. ನಿಮ್ಮನ್ನ ಎರಡು ಸಲ ಗೆಲ್ಸಿವಿ ನೆಪ್ಪಿರ್ಲಿ’

ಪೊಲೀಸ್ ಎಲ್ಲರನ್ನು ಗದರಿಸಿ ಕೂರಿಸಿದರು.
ಮಿನಿಸ್ಟರ್ : ಮಹಾಜನಗಳೆ 100 ಕಿಲೋಮೀಟರಿಂದ ನದಿ ನೀರು ತರಬೇಕಂದ್ರೆ ಅಷ್ಟು ಸುಲಭವಲ್ಲ. ಆದ್ರೂ ನಾನು ಪ್ರಾಮಾಣಿಕ ಪ್ರಯತ್ನ ಮಾಡಿ ಫೈಲ್ ಮೂವ್ ಮಾಡ್ಸಿದಿನಿ. ಸರ್ಕಾರ ಹಣ ಬಿಡುಗಡೆ ಮಾಡಿದ ತಕ್ಷಣ ಕಾಮಗಾರಿ ಚಾಲೂ ಮಾಡ್ತಿನಿ’

ಜನತೆ : ಅಲ್ಲಿಮಟ ನಮ್ಕತಿ? ಸಾಯೆಬ್ರೆ ಅಂತರ್ಜಲ ಇಲ್ಲದಂಗಾಗ್ಯದ. ಬೋರ್ ಬಾವಿ ಬರಿದಾಗ್ಯವ. ಕೆರೆ, ಕುಂಟೆ ಬಾಯ್ಬಿಟ್ಕಂಡ್ ನೀರು ನೀರು ಅಂತಾವೆ. ದನಕರುಗಳಿಗಾದ್ರೂ ಕುಡಿಯೋ ನೀರು ವ್ಯವಸ್ಥೆ ಮಾಡ್ರಿ

ಮಿನಿಸ್ಟರ್: ಅದಕ್ಕೆ ಇನ್ನೂರು ಕೋಟಿ ಬೇಕು. ಸರ್ಕಾರ ಸಾಲದಲ್ಲಿದೆ. ಯಾವ್ದುಕ್ಕೂ ಎರಡು ತಿಂಗಳು ಸಮಯ ಕೊಡಿ ದಯಮಾಡಿ

ಜನತೆ ಮಾತಾಡಬೇಕೆಂದುಕೊಂಡರೂ ಪೊಲೀಸ್ ಬಿಡಲಿಲ್ಲ. ಅಧಿಕಾರಿಗಳು ಮಿನಿಸ್ಟರ್ ಕಿವಿಲಿ ಏನೋ ಹೇಳಿದಾಗ
ಮಿನಿಸ್ಟರ್: ಮಹಾಜನಗಳೇ ನಿಮಗೊಂದು ಸಂತಸದ ಸುದ್ಧಿ.

ಮಿನಿಸ್ಟರ್ ಮಾತು ಕೇಳಿ ಅಲ್ಲಿದ್ದ ರೈತರಿಗೆ ಬೆಳೆ ಕಂಡಂಗಾಯ್ತು. ಕೂಲಿ ಜನಗಳಿಗೆ ಕೆಲಸ ಕಂಡಂಗಾಯ್ತು. ಮಹಿಳೆಯರಿಗೆ ಮೋಡ ಕಟ್ಟಿದಂಗಾಯ್ತು. ಮಕ್ಕಳಿಗೆ ಬರಿಮೈಲಿ ಈಜು ಹೊಡೆದಂಗಾಯ್ತು. ಜನರ ಕಿವಿಗಳೆಲ್ಲ ನೆಟ್ಟಗಾದವು.

ಮಿನಿಸ್ಟರ್: ಈ ಸಾಧನೆ ಅಮೆರಿಕಾ, ಚೀನಾ, ರಷ್ಯಾ ಅಷ್ಟೇ ಮಾಡಿದ್ದು. ಈಗ ಆ ಸಾಧನೇನ ನಮ್ಮ ದೇಶ ಮಾಡುತ್ತಿದೆ. ಇವತ್ತು ರಾತ್ರಿ ಚಂದ್ರನ ಮೇಲೆ ಉಪಗ್ರಹ ಕಳಿಸುತ್ತಿದ್ದಾರೆ. ಸಾವಿರ ಕೋಟಿ ಪ್ರಾಜೆಕ್ಟ್ ಈ ಚಂದ್ರಯಾನ. ಎಲ್ಲರೂ ನೋಡಿ ಹಾರೈಸಿ. ದೇಶದ ಕೀರ್ತಿ ಪ್ರಚಾರ ಮಾಡಿ.

ಮಿನಿಸ್ಟರ್ ಮಾತು ಕೇಳಿ ಜನತೆಯಲ್ಲೊಬ್ಬ ‘ಸಾಯೆಬ್ರೆ ಸಾವ್ರ ಕೋಟಿಯಾ’ ಎಂದೊಡನೆ ಅದ್ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದರು. ಮಿನಿಸ್ಟರ್ ಕಾರು ಹತ್ತುವವರೆಗೆ ಘೋಷಣೆ ಮೊಳಗುತ್ತಲೇ ಇತ್ತು. ಅಲ್ಲೆ ಸಂದಿಯಲ್ಲಿ ನುಗ್ಗಿ ಸೂಟು ತೊಟ್ಟ ಅಧಿಕಾರಿಯೊಬ್ಬರ ಕೈ ಹಿಡಿದುಕೊಂಡ ಶಾಲೆ ಯೂನಿಪಾರ್ಮ್ ತೊಟ್ಟ ಹುಡುಗಿ ‘ಸಾರ್ ಚಂದ್ರಯಾನ ಯಾಕೆ’ ಎಂದು ಕೇಳಿದಳು. ಅಧಿಕಾರಿ ಹೆಮ್ಮೆಯಿಂದ ಹೇಳಿದ ‘ ಚಂದ್ರನಲ್ಲಿ ನೀರು ಹುಡುಕೋಕೆ ಪುಟ್ಟ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...