*ನೀರು* (ಪುಟ್ಕತೆ)

- Advertisement -
- Advertisement -

‘ಬೇಕೇ ಬೇಕು ನೀರೂ ಬೇಕು’ ಹೀಗೆ ಸುತ್ತ ಎಂಬತ್ತಾರು ಹಳ್ಳಿ ಜನ ಘೋಷಣೆ ಕೂಗುತ್ತ ಸತ್ಯಾಗ್ರಹಕ್ಕೆ ಕುಳಿತಿದ್ದರು. ಕುಡಿಯೊ ನೀರಿಗಾಗಿ ಎಂಟು ವರ್ಷದಿಂದ ಅರ್ಜಿ ಕೊಟ್ಟು ಸಾಕಾಗಿ ಹೋಗಿತ್ತು. ಇನ್ನೆರಡು ತಿಂಗಳಲ್ಲಿ ಚುನಾವಣೆ. ನೂರನೇ ದಿನದ ಸತ್ಯಾಗ್ರಹಕ್ಕೆ ಮಿನಿಸ್ಟರ್, ಅಧಿಕಾರಿಗಳು ಬಂದರು. ಜನರ ಗದ್ದಲ ಹೆಚ್ಚಾಯಿತು. ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದು ನಿಶ್ಯಬ್ಧರಾದರು.

ಮಿನಿಸ್ಟರ್ ಮೈಕ್ ಹಿಡಿದು ‘ಮಹಾಜನಗಳೇ, ನಿಮ್ಮ ನೋವು ನನಗರ್ಥವಾಗತ್ತೆ. ಈ ಮಣ್ಣಿಗೆ ನೀರು ತರದೆ ನಾನು ಸಾಯಲಾರೆ’ ಎಂದು ಸ್ವಲ್ಪ ಹೊತ್ತು ಸುಮ್ಮನಾದರು. ಮಿನಿಸ್ಟರ್ ಹಿಂಬಾಲಕರು, ಅಧಿಕಾರಿಗಳನ್ನು ಬಿಟ್ಟು ಯಾರೂ ಚಪ್ಪಾಳೆ ತಟ್ಟಲಿಲ್ಲ. ‘ಇನ್ನೆರಡೇ ತಿಂಗಳು. ನನಗೆ ಮತ್ತೆ ಅಧಿಕಾರ ಕೊಡಿ. ನಿಮ್ಮ ಋಣ ತೀರಿಸದೇ ಸಾಯೋದಿಲ್ಲ’ ಎಂದರು. ಅಷ್ಟರಲ್ಲಿ ಮದ್ಯೆ ಬಾಯಿ ಹಾಕಿದ ಜನತೆ.

‘ಸಾಯೆಬ್ರೆ ಎಂಟು ವರ್ಷದಿಂದ ಒಂದು ಹನಿ ಮಳೆ ಬಿದ್ದಿಲ್ಲ’

‘ಸಾಯೆಬ್ರೆ ಕುಡಿಯೋ ನೀರಿಗೆ ಏಳು ಮೈಲಿ ನಡಿಬೇಕಾಗ್ಯದ’

‘ಸಾಯೆಬ್ರೆ ಮಕ್ಕಳು ಸಾಲಿ ಬಿಟ್ಟು ನೀರು ಹೊರಾಕತ್ತೇರ’

‘ಸಾಯೆಬ್ರೆ ಎಂಟು ವರ್ಷ ಆತ್ರಿ. ನಿಮ್ಮನ್ನ ಎರಡು ಸಲ ಗೆಲ್ಸಿವಿ ನೆಪ್ಪಿರ್ಲಿ’

ಪೊಲೀಸ್ ಎಲ್ಲರನ್ನು ಗದರಿಸಿ ಕೂರಿಸಿದರು.
ಮಿನಿಸ್ಟರ್ : ಮಹಾಜನಗಳೆ 100 ಕಿಲೋಮೀಟರಿಂದ ನದಿ ನೀರು ತರಬೇಕಂದ್ರೆ ಅಷ್ಟು ಸುಲಭವಲ್ಲ. ಆದ್ರೂ ನಾನು ಪ್ರಾಮಾಣಿಕ ಪ್ರಯತ್ನ ಮಾಡಿ ಫೈಲ್ ಮೂವ್ ಮಾಡ್ಸಿದಿನಿ. ಸರ್ಕಾರ ಹಣ ಬಿಡುಗಡೆ ಮಾಡಿದ ತಕ್ಷಣ ಕಾಮಗಾರಿ ಚಾಲೂ ಮಾಡ್ತಿನಿ’

ಜನತೆ : ಅಲ್ಲಿಮಟ ನಮ್ಕತಿ? ಸಾಯೆಬ್ರೆ ಅಂತರ್ಜಲ ಇಲ್ಲದಂಗಾಗ್ಯದ. ಬೋರ್ ಬಾವಿ ಬರಿದಾಗ್ಯವ. ಕೆರೆ, ಕುಂಟೆ ಬಾಯ್ಬಿಟ್ಕಂಡ್ ನೀರು ನೀರು ಅಂತಾವೆ. ದನಕರುಗಳಿಗಾದ್ರೂ ಕುಡಿಯೋ ನೀರು ವ್ಯವಸ್ಥೆ ಮಾಡ್ರಿ

ಮಿನಿಸ್ಟರ್: ಅದಕ್ಕೆ ಇನ್ನೂರು ಕೋಟಿ ಬೇಕು. ಸರ್ಕಾರ ಸಾಲದಲ್ಲಿದೆ. ಯಾವ್ದುಕ್ಕೂ ಎರಡು ತಿಂಗಳು ಸಮಯ ಕೊಡಿ ದಯಮಾಡಿ

ಜನತೆ ಮಾತಾಡಬೇಕೆಂದುಕೊಂಡರೂ ಪೊಲೀಸ್ ಬಿಡಲಿಲ್ಲ. ಅಧಿಕಾರಿಗಳು ಮಿನಿಸ್ಟರ್ ಕಿವಿಲಿ ಏನೋ ಹೇಳಿದಾಗ
ಮಿನಿಸ್ಟರ್: ಮಹಾಜನಗಳೇ ನಿಮಗೊಂದು ಸಂತಸದ ಸುದ್ಧಿ.

ಮಿನಿಸ್ಟರ್ ಮಾತು ಕೇಳಿ ಅಲ್ಲಿದ್ದ ರೈತರಿಗೆ ಬೆಳೆ ಕಂಡಂಗಾಯ್ತು. ಕೂಲಿ ಜನಗಳಿಗೆ ಕೆಲಸ ಕಂಡಂಗಾಯ್ತು. ಮಹಿಳೆಯರಿಗೆ ಮೋಡ ಕಟ್ಟಿದಂಗಾಯ್ತು. ಮಕ್ಕಳಿಗೆ ಬರಿಮೈಲಿ ಈಜು ಹೊಡೆದಂಗಾಯ್ತು. ಜನರ ಕಿವಿಗಳೆಲ್ಲ ನೆಟ್ಟಗಾದವು.

ಮಿನಿಸ್ಟರ್: ಈ ಸಾಧನೆ ಅಮೆರಿಕಾ, ಚೀನಾ, ರಷ್ಯಾ ಅಷ್ಟೇ ಮಾಡಿದ್ದು. ಈಗ ಆ ಸಾಧನೇನ ನಮ್ಮ ದೇಶ ಮಾಡುತ್ತಿದೆ. ಇವತ್ತು ರಾತ್ರಿ ಚಂದ್ರನ ಮೇಲೆ ಉಪಗ್ರಹ ಕಳಿಸುತ್ತಿದ್ದಾರೆ. ಸಾವಿರ ಕೋಟಿ ಪ್ರಾಜೆಕ್ಟ್ ಈ ಚಂದ್ರಯಾನ. ಎಲ್ಲರೂ ನೋಡಿ ಹಾರೈಸಿ. ದೇಶದ ಕೀರ್ತಿ ಪ್ರಚಾರ ಮಾಡಿ.

ಮಿನಿಸ್ಟರ್ ಮಾತು ಕೇಳಿ ಜನತೆಯಲ್ಲೊಬ್ಬ ‘ಸಾಯೆಬ್ರೆ ಸಾವ್ರ ಕೋಟಿಯಾ’ ಎಂದೊಡನೆ ಅದ್ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದರು. ಮಿನಿಸ್ಟರ್ ಕಾರು ಹತ್ತುವವರೆಗೆ ಘೋಷಣೆ ಮೊಳಗುತ್ತಲೇ ಇತ್ತು. ಅಲ್ಲೆ ಸಂದಿಯಲ್ಲಿ ನುಗ್ಗಿ ಸೂಟು ತೊಟ್ಟ ಅಧಿಕಾರಿಯೊಬ್ಬರ ಕೈ ಹಿಡಿದುಕೊಂಡ ಶಾಲೆ ಯೂನಿಪಾರ್ಮ್ ತೊಟ್ಟ ಹುಡುಗಿ ‘ಸಾರ್ ಚಂದ್ರಯಾನ ಯಾಕೆ’ ಎಂದು ಕೇಳಿದಳು. ಅಧಿಕಾರಿ ಹೆಮ್ಮೆಯಿಂದ ಹೇಳಿದ ‘ ಚಂದ್ರನಲ್ಲಿ ನೀರು ಹುಡುಕೋಕೆ ಪುಟ್ಟ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...