Homeಚಳವಳಿಅಧಿಸೂಚಿತವಲ್ಲದ ವಿದ್ಯಾರ್ಥಿ ಯೂನಿಯನ್ ಜೊತೆ ಮಾತುಕತೆ ಇಲ್ಲ : ಜೆಎನ್ ಯು ಡೀನ್

ಅಧಿಸೂಚಿತವಲ್ಲದ ವಿದ್ಯಾರ್ಥಿ ಯೂನಿಯನ್ ಜೊತೆ ಮಾತುಕತೆ ಇಲ್ಲ : ಜೆಎನ್ ಯು ಡೀನ್

- Advertisement -
- Advertisement -

ಹಾಸ್ಟೆಲ್ ಶುಲ್ಕ ಹೆಚ್ಚಳ, ಡ್ರೆಸ್ ಕೋಡ್ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಅಧಿಸೂಚಿತವಲ್ಲದೆ ವಿದ್ಯಾರ್ಥಿಗಳ ಯೂನಿಯನ್ ಜೊತೆಗೆ ಮಾತುಕತೆ ನಡೆಸುವುದಿಲ್ಲ ಎಂದು ಜವಾಹರಲಾಲ್ ವಿಶ್ವವಿದ್ಯಾಲಯದ ಡೀನ್ ಉಮೇಶ್ ಕದಮ್ ಖಚಿತಪಡಿಸಿದ್ದಾರೆ.

ಕೆಲವು ಅಧ್ಯಾಪಕರು ಆಡಳಿತ ಮಂಡಳಿಗೆ ಬೆಂಬಲ ವ್ಯಕ್ತಪಡಿಸಿದ್ದು ಆಯ್ಕೆಗೊಂಡಿರುವ ಹಾಸ್ಟೆಲ್ ಪ್ರತಿನಿಧಿಗಳ ಜೊತೆ ಮಾತ್ರ ಮಾತುಕತೆ ನಡೆಸಲು ಆಡಳಿತ ಮಂಡಳಿ ಸಿದ್ದವಿದೆ ಎಂದು ಕದಮ್ ಹೇಳಿದ್ದಾರೆ.

ಹಾಸ್ಟೆಲ್ ಶುಲ್ಕ ಹೆಚ್ಚಳದ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ವಿದ್ಯಾರ್ಥಿಗಳು ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ. ಇದುವರೆಗೂ ವಿದ್ಯಾರ್ಥಿ ಯೂನಿಯನ್ ಅನ್ನು ಅಧಿಸೂಚಿತಗೊಳಿಸಿಲ್ಲ. ಹಾಗಾಗಿ ಅವರ ಜೊತೆ ಮಾತನಾಡುವುದಿಲ್ಲ ಎಂದಿದ್ದಾರೆ. ಆದರೆ ಆಯ್ಕೆಗೊಂಡಿರುವ ಹಾಸ್ಟೆಲ್ ಪ್ರಿತಿನಿಧಿಗಳ ಜೊತೆ ಮಾತುಕತೆಗೆ ಸಿದ್ದ ಎಂದು ತಿಳಿಸಿದ್ದಾರೆ.

ಜೆಎನ್ ಯು ನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿದೆ. ಆದರೆ ಇದುವರೆಗೂ ಫಲಿತಾಂಶವನ್ನು ಪ್ರಕಟಿಸಲಾಗಿಲ್ಲ. ಚುನಾವಣಾ ಫಲಿತಾಂಶದ ಸೀಲು ಮಾಡಿದ ಕವರ್ ನನ್ನ ಕಚೇರಿಯಲ್ಲಿಯೇ ಇದೆ. ನನ್ನಿಂದ ಸೀಲು ಮಾಡಿದ ಕವರ್ ಪಡೆಯದೆ ಚುನಾವಣಾ ಸಮಿತಿ ಫಲಿತಾಂಶವನ್ನು ಪ್ರಕಟಿಸಲು ಬರುವುದಿಲ್ಲ.

ಫಲಿತಾಂಶ ನನ್ನ ಬಳಿಯೇ ಇದೆ. ಹಾಗಾಗಿ ನಾವು ವಿದ್ಯಾರ್ಥಿ ಯೂನಿಯನ್ ಆಯ್ಕೆಯಾಗಿದೆ ಎಂದು ಹೇಗೆ ಘೋಷಿಸಲು ಸಾಧ್ಯ. ಮುಕ್ತ ಮಾತುಕತೆ ನಡೆಯುವುದಾದರೆ ಅದು ಆಯ್ಕೆಗೊಂಡ ಹಾಸ್ಟೆಲ್ ಪ್ರತಿನಿಧಿಗಳ ಜೊತೆಗೇ ಹೊರತು ಅಧಿಸೂಚಿತವಲ್ಲದ ವಿದ್ಯಾರ್ಥಿ ಯೂನಿಯನ್ ಜೊತೆ ಅಲ್ಲ ಎಂದು ಕದಮ್ ಸ್ಪಷ್ಟಪಡಿಸಿದ್ದಾರೆ.

ಅಧಿಕೃತವಲ್ಲದ ವಿದ್ಯಾರ್ಥಿ ಒಕ್ಕೂಟದ ಜೊತೆ ಆಡಳಿತ ಮಂಡಲಿಯೇಕೆ ಮಾತುಕತೆ ನಡೆಸಬೇಕು ಎಂದು ಪ್ರಶ್ನಿಸಿರುವ ಅವರು ಫಲಿತಾಂಶ ಪ್ರಕಟವಾದ ಬಳಿಕವೇ ವಿದ್ಯಾರ್ಥಿ ಸಂಘ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...