Homeರಾಜಕೀಯಅಧ್ಯಕ್ಷ ಮ್ಯಾಕ್ರೋನ್ ವಿರುದ್ಧ ಫ್ರಾನ್ಸ್ ನಲ್ಲಿ ಪ್ರತಿರೋಧದ ಅಲೆ

ಅಧ್ಯಕ್ಷ ಮ್ಯಾಕ್ರೋನ್ ವಿರುದ್ಧ ಫ್ರಾನ್ಸ್ ನಲ್ಲಿ ಪ್ರತಿರೋಧದ ಅಲೆ

- Advertisement -
- Advertisement -
  • ಡಾ. ಸ್ವಾತಿ ಶುಕ್ಲಾ |

ಮೇ 25ರ ಶನಿವಾರ, ಫ್ರಾನ್ಸ್‍ನ ಬೀದಿಗಳಲ್ಲಿ ಲಕ್ಷಾಂತರ ಜನರ ‘ಜನಪ್ರಿಯ ಅಲೆ’ಯ ಪ್ರತಿರೋಧ. ಫ್ರಾನ್ಸ್‍ನ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್‍ರ ಕಾರ್ಮಿಕ ವಿರೋಧಿ ಸುಧಾರಣೆಗಳು ಆ ಜನರನ್ನು ಬೀದಿಗೆ ತಂದಿದ್ದವು. ಸಿಜಿಟಿ ಎಂಬ ಅಲ್ಲಿನ ಅತೀ ದೊಡ್ಡ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಈ ಪ್ರತಿಭಟನೆಗೆ ಕರೆ ಕೊಟ್ಟಿತ್ತು. ಅಧ್ಯಕ್ಷರ ಪ್ರಸ್ತಾಪಿತ ಜನವಿರೋಧಿ ಆರ್ಥಿಕ ಸುಧಾರಣೆಗಳ ವಿರುದ್ಧ ಶಿಕ್ಷಕರು, ಪೊಲೀಸ್ ಅಧಿಕಾರಿಗಳು ಮತ್ತು ಸಾರಿಗೆ ನೌಕರರು ಪ್ರತಿಭಟಿಸುತ್ತಲೇ ಇದ್ದಾರೆ. ಕಳೆದ ಮೇನಲ್ಲಿ ಮ್ಯಾಕ್ರೋನ್ ಅಧಿಕಾರಕ್ಕೆ ಬಂದ ನಂತರ ಸರ್ಕಾರೀ ಸೇವೆಯಲ್ಲಿನ ನೌಕರರ ಮೂರನೇ ಅತೀ ದೊಡ್ಡ ಮುಷ್ಕರ ಇದಾಗಿದೆ.

ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯಲು ತಂದಿರುವ ಹೊಸ ನಿಯಮಗಳು, ವಲಸೆ ಕುರಿತ ಕಾನೂನುಗಳು ಮತ್ತು ಪೊಲೀಸರಿಗೆ ಹೆಚ್ಚು ಅಧಿಕಾರವನ್ನು ನೀಡುವ ನೀತಿಯ ವಿರುದ್ಧ ಶನಿವಾರದ ಪ್ರತಿಭಟನೆ ದನಿಯೆತ್ತಿತ್ತು. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಸರ್ಕಾರೀ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯುವುದಕ್ಕೆ ಹೊಸ ನಿಯಮಗಳು ಅಡ್ಡಿಯಾಗಿದ್ದವು ಮತ್ತು ಪೊಲೀಸರಿಗೆ ನೀಡಲಾದ ಹೆಚ್ಚಿನ ಅಧಿಕಾರವು ಅಲ್ಲಿನ ಶೋಷಿತ ಸಮುದಾಯಗಳ ವಸತಿ ಪ್ರದೇಶಗಳಲ್ಲಿ ಪೊಲೀಸ್ ದೌರ್ಜನ್ಯವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇದುವರೆಗಿನ ಕಾರ್ಮಿಕ ಕಾನೂನುಗಳು ಮತ್ತು ಕಾರ್ಮಿಕ ಸಂಘಗಳಿಂದ ಕಾರ್ಮಿಕರಿಗೆ ಸಿಗುವ ರಕ್ಷಣೆಯ ಕಾರಣದಿಂದಲೇ ಫ್ರಾನ್ಸ್‍ನಲ್ಲಿ ಹೆಚ್ಚು ಆರ್ಥಿಕ ವ್ಯವಹಾರವೂ ನಡೆಯುತ್ತಿಲ್ಲ ಮತ್ತು ಉದ್ಯೋಗ ಸೃಷ್ಟಿಯೂ ಆಗುತ್ತಿಲ್ಲವೆಂದು ಹೇಳುವ ಮ್ಯಾಕ್ರೋನ್ ಕಾರ್ಮಿಕಪರ ಕಾನೂನುಗಳನ್ನು ಕಿತ್ತುಹಾಕುವ ‘ಮಹತ್ವದ’ ಕ್ರಮಕ್ಕೆ ಮುಂದಾಗಿದ್ದಾರೆ. ಹೊಸ ನೀತಿಯ ಪ್ರಕಾರ, ಕಂಪೆನಿಗಳು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇದುವರೆಗೆ ಇರುವ ಒಪ್ಪಂದಗಳನ್ನು ಪಾಲಿಸಬೇಕಿಲ್ಲ; ಹೊಸ ಆರ್ಥಿಕ ನೀತಿಯ ವಿಧಾನಗಳಾದ ಹೈರ್ & ಫೈರ್ – ಬೇಕೆಂದಾಗ ತೆಗೆದುಕೋ ಇಲ್ಲವಾದರೆ ಮನೆಗೆ ಕಳಿಸು – ನೀತಿಯನ್ನೂ, ಕೆಲಸದ ಸ್ಥಳದ ಸೌಲಭ್ಯಗಳನ್ನೂ ಮತ್ತು ಕೆಲಸದ ಅವಧಿಯನ್ನೂ ತಮಗೆ ಇಷ್ಟಬಂದ ರೀತಿಯಲ್ಲಿ ಬದಲಾಯಿಸಬಹುದು. ಏಕಪಕ್ಷೀಯವಾಗಿ ಕೆಲಸದಿಂದ ಕಿತ್ತು ಹಾಕಿದಾಗ ಕೊಡಬೇಕಿದ್ದ ಪರಿಹಾರದ ಮೊತ್ತವನ್ನೂ ಕಡಿಮೆ ಮಾಡಿರುವುದು ಯೂನಿಯನ್ನುಗಳಲ್ಲಿ ಆಕ್ರೋಶ ಮೂಡಿಸಿದೆ. ವಿದೇಶೀ ನೆಲೆಯ ಕಂಪೆನಿಗಳಲ್ಲೂ ಕಾರ್ಮಿಕರನ್ನು ಬೇಕಾಬಿಟ್ಟಿ ಕಿತ್ತು ಹಾಕುವುದಕ್ಕೆ ಇದು ಅವಕಾಶ ಮಾಡಿಕೊಟ್ಟಿದೆ. ಮ್ಯಾಕ್ರೋನ್ ಪ್ರಕಾರ ಇವೆಲ್ಲದರಿಂದ ಫ್ರಾನ್ಸ್‍ನ ಜಾಗತಿಕ ಸ್ಪರ್ಧಾ ಸಾಮಥ್ರ್ಯ ಹೆಚ್ಚಲಿದೆ.

ಪ್ಯಾರಿಸ್, ಮರ್ಸೆಲ್ಲಿ ಮತ್ತು ನ್ಯಾಂಟೆಸ್ ಒಳಗೊಂಡಂತೆ 160 ಕಡೆಗಳಲ್ಲಿ ಪ್ರತಿಭಟನೆಗಳು ನಡೆದವು. ಪ್ಯಾರಿಸ್ ಒಂದರಲ್ಲೇ 80,000 ಜನರು ಪಾಲ್ಗೊಂಡರು. ಪ್ರತಿಭಟನಾಕಾರರು ಹಿಂಸೆಗಿಳಿಯಬಹುದೆಂಬ ಸಂಶಯದ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದರು ಮತ್ತು ಅಶ್ರುವಾಯು ಸಿಡಿಸಿದರು. 43 ಜನರನ್ನು ಬಂಧಿಸಿ, 26 ಜನರನ್ನು ಇನ್ನೂ ತಮ್ಮ ವಶದಲ್ಲೇ ಇರಿಸಿಕೊಂಡಿದ್ದಾರೆ.

ಫ್ರಾನ್ಸ್‍ನ ಎಡ ಪಕ್ಷದ ನಾಯಕ ಜ್ಚಾನ್ -ಲು ಮೆಲೆನ್ಕೋ ದಕ್ಷಿಣದ ಬಂದರು ನಗರ ಮರ್ಸೆಲ್ಲಿಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಹೇಳಿದ ಮಾತುಗಳು ಹೀಗಿವೆ. ‘ಬಡವರ, ಶೋಷಿತರ, ಸೂರು ರಹಿತರ ಮತ್ತು ನಿರುದ್ಯೋಗಿಗಳ ಪರವಾಗಿ ನಾವಿಂದು ಹೇಳುವ ಮಾತು ಒಂದೇ. ಸಾಕು, ಸಾಕು, ಸಾಕು. ಈ ರೀತಿಯ ಜಗತ್ತು ನಮಗೆ ಸಾಕಾಗಿದೆ’.

ಈ ಮಧ್ಯೆ ಸರ್ಕಾರದ ನೀತಿಯ ವಿರುದ್ಧ ಫ್ರಾನ್ಸ್‍ನ ರೈಲು ಚಾಲಕರ ಮುಷ್ಕರ ಮೂರನೆಯ ತಿಂಗಳಿಗೆ ಕಾಲಿಟ್ಟಿದೆ. ಅವರ ಸೇವಾ ನಿಯಮಗಳನ್ನು ಬದಲಿಸುವ, ಬದುಕಿರುವ ಕಾಲ ಭದ್ರತೆ ಕಲ್ಪಿಸುತ್ತಿದ್ದ ಅನುಕೂಲ ಕಿತ್ತು ಹಾಕುವ ಮತ್ತು ಅವಧಿಪೂರ್ವವಾಗಿ ನಿವೃತ್ತಗೊಳಿಸುವ ನೀಯ ವಿರುದ್ಧ ಅವರು ಮುಷ್ಕರ ಹೂಡಿದ್ದಾರೆ. ಇತ್ತೀಚೆಗಿನ ಪ್ರತಿಭಟನೆಗಳಲ್ಲಿ ಅವರ ಜೊತೆ ಏರ್‍ಫ್ರಾನ್ಸ್‍ನ ಸಿಬ್ಬಂದಿ ವಿದ್ಯಾರ್ಥಿಗಳು ಮತ್ತು ಮ್ಯಾಕ್ರೋನ್‍ರ ನೀತಿಯನ್ನು ವಿರೋಧಿಸುವ ಇತರ ಕಾರ್ಮಿಕರೂ ಸಹಾ ಸೇರಿಕೊಂಡಿದ್ದಾರೆ.

ಫ್ರಾನ್ಸ್‍ನ ಇತಿಹಾಸದಲ್ಲೇ ಅತೀ ಕಿರಿಯ ಅಧ್ಯಕ್ಷರಾಗಿರುವ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರಿಗೆ 40 ವರ್ಷ ವಯಸ್ಸು. ನಡುಪಂಥೀಯರಾದ ಅವರು, ಈ ಹಿಂದೆ ಬ್ಯಾಂಕಿಂಗ್ ಉದ್ದಿಮೆಯಲ್ಲಿದ್ದರು. ‘ಎಲ್ಲರಿಗೂ ಉದ್ಯೋಗ’ದ ಭರವಸೆ ಮತ್ತು ಆರ್ಥಿಕತೆಯ ಪುನಶ್ಚೇತನದ ಘೋಷಣೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಪ್ರಪಂಚದ ಮಟ್ಟದಲ್ಲಿ ಒಬ್ಬ ಪ್ರಮುಖ ನಾಯಕನಾಗಿ ಗುರುತಿಸಲ್ಪಡುತ್ತಿರುವ ಆತ, ಆಗಾಗ್ಗೆ ಇತರ ವಿಶ್ವ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ಆದರೆ, ತನ್ನ ತವರಿನಲ್ಲೇ ದೊಡ್ಡ ಸವಾಲನ್ನು ಎದುರಿಸಬೇಕಾಗಿ ಬಂದಿದೆ. ನಿವೃತ್ತಿ ವೇತನ ಪಡೆಯುತ್ತಿರುವವರಿಗೆ ತೆರಿಗೆ ಹಾಕಿ ಸರ್ಕಾರೀ ಸಾಲವನ್ನು ತೀರಿಸಬೇಕೆಂದು ಹೇಳುವ ಆತ, ಶ್ರೀಮಂತರಿಗೆ ತೆರಿಗೆ ಕಡಿಮೆ ಮಾಡಬೇಕೆಂಬ ನೀತಿಯನ್ನು ಪ್ರತಿಪಾದಿಸುತ್ತಾರೆ. ಇವೆಲ್ಲದರಿಂದ ಆತನನ್ನು ‘ಶ್ರೀಮಂತರ ಅಧ್ಯಕ್ಷ’ ಎಂದು ಕರೆಯಲಾಗುತ್ತದೆ. ಕಾರ್ಮಿಕ ವಿರೋಧಿ ನೀತಿಗಳು ಮತ್ತು ವಿಶ್ವವಿದ್ಯಾಲಯಗಳಿಗೆ ದಾಖಲಾತಿಯನ್ನು ಕಷ್ಟವಾಗಿಸಿರುವುದರಿಂದ, ವಯಸ್ಸಾದವರು ಮತ್ತು ಯುವಜನರೆಲ್ಲರಿಂದ ವಿರೋಧ ಎದುರಿಸಬೇಕಾಗಿ ಬಂದಿದ್ದು, ಆತನ ಮಾನ್ಯತೆ ಕಡಿಮೆಯಾಗುತ್ತಿದೆ.

ಫ್ರಾನ್ಸ್‍ನ ಕಾರ್ಮಿಕ ಸಂಘಗಳೆಂದರೆ ಯಾರೂ ಮುಟ್ಟಲಾಗದ ಶಕ್ತಿಶಾಲಿ ಸಂಘಗಳಾಗಿ ದಶಕಗಳಿಂದ ಸ್ಥಾಪಿತವಾಗಿವೆ. 1995ರಲ್ಲಿ ಸಂಪ್ರದಾಯವಾದಿ ನಾಯಕತ್ವವು ತರಲು ಹೊರಟಿದ್ದ ಇದೇ ಬಗೆಯ ಜನವಿರೋಧಿ ನೀತಿಗಳನ್ನು ರಾಷ್ಟ್ರವ್ಯಾಪಿ ಮುಷ್ಕರಗಳು ಹಿಮ್ಮೆಟ್ಟಿಸಿದ್ದವು. 1968ರ ನಂತರ ನಡೆದ ಅತೀ ದೊಡ್ಡ ಸಾಮಾಜಿಕ ಹೋರಾಟ ಅದಾಗಿದ್ದು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಒಟ್ಟು ಸೇರಿ ಸರ್ಕಾರವನ್ನೇ ಕೆಳಗಿಳಿಸುವ ಮಟ್ಟ ತಲುಪಿದ್ದವು.

ಆದರೆ, ಈ ಸಾರಿಯ ಗೆಲುವಿನ ತಕ್ಕಡಿ ಮ್ಯಾಕ್ರೋನ್ ಕಡೆಗೇ ಬಾಗುವ ಸಾಧ್ಯತೆ ಇದೆ. ಏಕೆಂದರೆ, ಸತತ ಮುಷ್ಕರಗಳಿಂದ ಇತರ ಸಾರ್ವಜನಿಕರ ಬೆಂಬಲವು ಕಡಿಮೆಯಾಗುತ್ತಿದೆ ಮತ್ತು ಈಗಲೂ ಮ್ಯಾಕ್ರೋನ್ ಒಬ್ಬ ಒಳ್ಳೆಯ ಸುಧಾರಣಾವಾದಿ ಎಂದು ನಂಬುವವರ ಸಂಖ್ಯೆಯೂ ಸಾಕಷ್ಟಿದೆ. ಕಾರ್ಮಿಕ ಸಂಘಗಳೂ ಈ ಹಿಂದಿನಷ್ಟು ಸದೃಢವಾಗಿಲ್ಲ. 60 ವರ್ಷಗಳ ಹಿಂದೆ ಒಟ್ಟು ಕಾರ್ಮಿಕರಲ್ಲಿ ಮೂರನೇ ಒಂದು ಭಾಗದಷ್ಟು ಕಾರ್ಮಿಕ ಸಂಘಗಳ ಸದಸ್ಯತ್ವ ಪಡೆದುಕೊಂಡಿದ್ದರೆ, ಈಗದು ಬಹಳ ಕಡಿಮೆಯಾಗಿದೆ.

ಮ್ಯಾಕ್ರೋನ್ ಇವೆಲ್ಲದರಿಂದ ಅಲುಗಾಡಿದಂತಿಲ್ಲ ಮತ್ತು ‘ಈ ಆಂದೋಲನಗಳು ನನ್ನನ್ನು ತಡೆಯಲು ಸಾಧ್ಯವಿಲ್ಲ’ ಎಂದು ಘೋಷಿಸಿದ್ದಾರೆ. ಏನಾಗಬಹುದು ಎಂಬುದಕ್ಕೆ ಕಾಲವೇ ಉತ್ತರವನ್ನು ಹೇಳಬಲ್ಲದು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...