Homeಕರ್ನಾಟಕಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

ಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

- Advertisement -
- Advertisement -

| ಶುದ್ಧೋದನ |

ಉತ್ತರಕನ್ನಡದ ಸೋಶಿಯಲ್ ಮೀಡಿಯಾದಲ್ಲೀಗ ಕೇಸರಿ ಕುಮಾರರಿಬ್ಬರ ಗುದಮುರಗಿ ಜೋರು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ಅನಂತ್‍ಕುಮಾರ್ ಹೆಗ್ಡೆ ಮತ್ತು ಕೇಸರಿ ಭಾಷಣ`ಕೋರ’ ಚಕ್ರವರ್ತಿ ಸೂಲಿಬೆಲೆ ಒಬ್ಬರಿಗೊಬ್ಬರು ಕೆಸರು ಎರಚಿಕೊಳ್ಳುತ್ತಿರೋದು ರೋಚಕವಿದೆ. ಹಾಗೆ ನೋಡಿದರೆ ಮೊನ್ನೆ ಮುಗಿದ ಇಲೆಕ್ಷನ್ ಸಂದರ್ಭದಲ್ಲೇ ಮಾಣಿಗೆ ಟಿಕೆಟ್ ಕೊಡಬಾರದೆಂದು ದೊಡ್ಡ ಕೂಗೆದ್ದಿತ್ತು. ಆತನ ಬದಲಿಗೆ ನಮೋ ಬ್ರಿಗೇಡ್‍ನ ಪ್ರೊಪ್ರೇಟರ್ ಚಕ್ರವರ್ತಿ ಸೂಲಿಬೆಲೆ ಹೆಸರು ತೇಲಿ ಬಂದಿತ್ತು. ಸ್ಥಳೀಯ ಆರೆಸ್ಸೆಸ್-ಹಿಂಜಾವೇ ಪಡೆಯೇ ಮಾಣಿ ವಿರುದ್ಧ ಮುರಕೊಂಡು ಬಿದ್ದಿತ್ತು. ಮತದಾರರು ಮತ್ತು ಬಿಜೆಪಿ ಕಾರ್ಯಕರ್ತರ ತಿರಸ್ಕಾರ, ತಾತ್ಸಾರಕ್ಕೆ ತುತ್ತಾಗಿರುವ ಮಾಣಿಗೆ ಟಿಕೆಟ್ ಕೊಡಬಾರದೆಂದು ಉತ್ತರ ಕನ್ನಡದ ಆರೆಸ್ಸೆಸ್‍ನ ಒಂದು ತಂಡ ಪ್ರಬಲ ಹೋರಾಟ ಮಾಡಿತ್ತು. ಉತ್ತರ ಕನ್ನಡ ಸಂಘಪರಿವಾರದ ಕಲ್ಲಡ್ಕ, ಹನ್ಮಂತ ಶಾನಭಾಗ್ ಎರಡೂ ಕಡೆ “ಆಟ” ಆಡಿದ್ದರು.

ಅಂತಿಮವಾಗಿ ಮಾಣಿಗೇ ಟಿಕೆಟ್ ಸಿಕ್ಕಿತು. ಆತ ಗೆದ್ದೂ ಬಿಟ್ಟ. ಆದರೆ ಬಿಜೆಪಿ ಒಳಮನೆಯ ಬೇಗುದಿ ಕಮ್ಮಿ ಆಗಲಿಲ್ಲ. ಸೂಲಿಬೆಲೆ ಟೀಮಂತೂ ಮೋದಿ ಮತ ಭಿಕ್ಷೆಯಿಂದ ಗೆದ್ದಿರುವ ಮಾಣಿ ಧೀಮಾಕಿಂದ ಬೀಗುವುದು ಬೇಕಾಗಿಲ್ಲ ಎಂಬ ರಹಸ್ಯ ಅಭಿಯಾನವನ್ನೇ ಹುಟ್ಟುಹಾಕಿತು! ಮಾಣಿ ಮಾಡಿದ ಜನದ್ರೋಹದ ಪಾಪಕ್ಕೇ ಮಂತ್ರಿಯಾಗದೆ ಮೂಲೆ ಪಾಲಾಗಿದ್ದಾನೆಂದು ಆತನ ವಿರೋಧಿ ಬಳಗ ತಿವಿಯತೊಡಗಿತ್ತು. ಇದೆಲ್ಲದರಿಂದ ಮಾಣಿ ಕೊತಕೊತ ಕುದಿಯುತ್ತಲೇ ಇದ್ದ. ತನಗೆ ಅಡ್ಡಗಾಲು ಹಾಕಿದವರನ್ನೆಲ್ಲಾ ಒಬ್ಬೊಬ್ಬರಾಗಿ ಸಂಹರಿಸಲು ಆತ ಸ್ಕೆಚ್ ರೆಡಿಮಾಡಿಕೊಂಡಿದ್ದ. ಸಂಘಪರಿವಾರದಲ್ಲಿ ತನಗಿರುವ ಸಂಪರ್ಕ ಬಳಸಿಕೊಂಡು ಮಾಣಿ ಈಗ ಜಿಲ್ಲಾ ಚೆಡ್ಡಿ ಪಡೆಯಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸುತ್ತಿದ್ದಾನೆ. ತನಗೆ ವಿರೋಧ ಮಾಡಿದ ಜಿಲ್ಲಾ ಆರೆಸ್ಸೆಸ್, ಹಿಂಜಾವೇ ಮುಖಂಡರನ್ನು ಸಂಘಟನೆಯ ಹುದ್ದೆಗಳಿಂದ ಕಿತ್ತುಹಾಕಿಸುತ್ತಿದ್ದಾನೆ. ಈಗಾಗಲೇ ಜಿಲ್ಲಾಮಟ್ಟದ ಒಬ್ಬ ಕಾರ್ಯವಾಹಕ ಮತ್ತು ಭಟ್ಕಳದ ಆರೆಸ್ಸೆಸ್ ಲೀಡರ್‍ಗೆ ಸ್ಥಾನ ಚ್ಯುತಿ ಮಾಡಲಾಗಿದೆ. ಎಲ್ಲಾ ತಾಲ್ಲೂಕಿನ ಬಿಜೆಪಿ-ಆರೆಸ್ಸೆಸ್‍ನಲ್ಲಿ ಮಾಣಿ ಮಾರಿಹಬ್ಬ ನಡೆಯಲಿದೆ!

ಇನ್ನೊಂದೆಡೆ ಮಾಣಿ ಬಂಡವಾಳ ಬಯಲು ಮಾಡುವ ಆನ್‍ಲೈನ್ ಕಸರತ್ತು ನಡೆಯಲಾರಂಭಿಸಿದೆ. ಚಕ್ರವರ್ತಿ ಸೂಲಿಬೆಲೆ, ಮಾಣಿ ಅಯೋಗ್ಯತೆಯನ್ನು ವ್ಯವಸ್ಥಿತವಾಗಿ ಜಗಜ್ಜಾಹೀರು ಮಾಡುತ್ತಿದ್ದಾನೆ. ಉತ್ತರ ಕನ್ನಡದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಯ ಸೋಷಿಯಲ್ ಮೀಡಿಯಾ ಅಭಿಯಾನ ತನ್ನ ತೇಜೋವಧೆ ಮಾಡುವ ಹಿಕಮತ್ತೆಂಬ ಭಾವನೆ ಮಾಣಿಯದು. ಆಸ್ಪತ್ರೆ ಆಗದಿರುವುದು ಸಂಸದನ ಅಸಾಮಥ್ರ್ಯ ಬಿಂಬಿಸುತ್ತಿದೆ ಎಂಬಂತೆ ಪ್ರಚಾರ ಮಾಡಲಾಗಿತ್ತು. ಇದರ ಹಿಂದೆ ತನ್ನ ಹಿತಶತೃ ಸೂಲಿಬೆಲೆ ಇದ್ದಾನೆಂಬ ಖಚಿತ ನಂಬಿಕೆ ಮಾಣಿಯದು. ಹಾಗಾಗಿ ಆತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಇಡುವವರನ್ನೇ ತನ್ನ ಟ್ವಿಟರ್ ಖಾತೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು. ಅಷ್ಟೇ ಅಲ್ಲ, ಆಸ್ಪತ್ರೆಗಾಗಿ ಮನವಿ ಹಿಡಿದುಕೊಂಡು ಬಂದ ಹುಡುಗರಿಗೆ ರೇಗಿ ಸೋಷಿಯಲ್ ಮೀಡಿಯಾದವರಿಂದಲೇ ಆಸ್ಪತ್ರೆ ಮಾಡಿಸಿಕೊಳ್ಳಿ ಎಂದಬ್ಬರಿಸಿದ್ದ.

ಈ ಜಗಳ ಸೂಲಿಬೆಲೆ ಮತ್ತು ಅನಂತ್ಮಾಣಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಾಚಾಮಗೋಚರವಾಗಿ ಬೈದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ. ಇವರ ಕಾಲೆಳೆದಾಟ ಫೇಸ್ಬುಕ್, ವಾಟ್ಸಾಪ್‍ನಲ್ಲಿ ಕದನ ಕುತೂಹಲ ಕೆರಳಿಸಿದೆ. ಗೆದ್ದವರ ಈ ಗದ್ದಲ ವಿರೋಧ ಪಕ್ಷಗಳಿಗೆ ಮಜಾ ನೀಡುತ್ತಿದ್ದರೆ, ಬಿಜೆಪಿಯಲ್ಲಿ ಮುಜುಗರ ಮೂಡಿಸಿದೆ.

ಇದೆಲ್ಲದರಿಂದ ಒಂದು ಹಂತದಲ್ಲಿ ತಬ್ಬಿಬ್ಬಾದ ಸೂಲಿಬೆಲೆ ಜಗಳ ಸಾಕು, ಕೆಲಸ ಮಾಡೋಣ ಎಂಬ ಟ್ವೀಟ್ ಮಾಡಿದರೂ ಆರೋಪ-ಪ್ರತ್ಯಾರೋಪದ ಬಯಲಾಟ ಮಾತ್ರ ನಿಂತಿಲ್ಲ. ಮೋದಿ ಮತ ಭಿಕ್ಷೆಯಿಂದ ಗೆದ್ದ ಸಂಸದರು ಧಿಮಾಕು ತೋರಿಸದೆ ಕೆಲಸ ಮಾಡಬೇಕು ಎಂದು ಸೂಲಿಬೆಲೆ ಟ್ವಿಟಿಸಿದ್ದೇ ಬಿಜೆಪಿಯಲ್ಲಿ ಕಂಪನ ಸೃಷ್ಠಿಯಾಗಲು ಮೂಲಕಾರಣ. ಸದಾನಂದ ಗೌಡ, ಶೋಭಾ ಕರಂದ್ಲಾಜೆಯಂಥ ದೊಡ್ಡವರೆ ಸೂಲಿಬೆಲೆ ಮಾತಿಂದ ಕೆರಳಿ ಕೆಂಡವಾದರು. ನಮಗೆ ಬುದ್ಧಿ ಹೇಳಲು ಚಕ್ರವರ್ತಿ ಯಾರು? ಎಂದು ಎಗರಾಡಿದರು.

ತನಗೆ ಟಿಕೆಟ್ ತಪ್ಪಲು ಕಾರಣವಾದ ನಾಯಕರನ್ನು ನಿರ್ದಿಷ್ಟವಾಗಿ ಗುರಿಮಾಡಿಕೊಂಡೇ ಸೂಲಿಬೆಲೆ ಸಂಸದರ ಬಣ್ಣ ಬಯಲಾಗಿಸುತ್ತಿದ್ದಾನೆ. ಇದು ಬಿಜೆಪಿಯ ಅಧಿಕಾರಸ್ಥರ ಚೇಲಾಗಳನ್ನು ಕೆರಳಿಸಿದೆ. ಜನಪ್ರತಿನಿಧಿಗಳು ಕೆಲಸ ಮಾಡಲಿ ಎಂದು ಹೇಳೋದು ತಪ್ಪೇನಲ್ಲ. ಆದರೆ ಹಾಗೆ ಹೇಳಿದ್ದು ಸೂಲಿಬೆಲೆಯಾದ್ದರಿಂದ ಬಿಜೆಪಿಯಲ್ಲಿ ಬೆಂಕಿಹೊತ್ತಿಕೊಂಡಿತು. ತನ್ನಿಂದಾಗಿಯೇ ಕರ್ನಾಟಕದಲ್ಲಿ ಬಿಜೆಪಿಯ 25 ಸಂಸದರು ಗೆದ್ದಿದ್ದಾರೆಂದು ಸೂಲಿಬೆಲೆ ಹೇಳಿದ್ದಾನೆಂದು ಕಿಡಿ ಹೊತ್ತಿಸಲಾಯಿತು. ಸೂಲಿಬೆಲೆ ಹಾಗೆ ಹೇಳಿಯೇ ಇಲ್ಲವೆಂದು ಆತನ ಬೆಂಬಲಿಗ ನೆಟ್ಟಿಗರ ವಾದ. ಅಸಲಿಗೆ ಆತ ಹಾಗೆ ಹೇಳಿಯೂ ಇರಲಿಲ್ಲ, ಅಂಥ ಸಂದೇಶವೂ ಲಭ್ಯವಿಲ್ಲ. ಆರು ಸಲ ಸಂಸದರಾದವರಿಗೆ, ಎಂಟು ಸಲ ಮಂತ್ರಿಯಾದವರಿಗೆ ಜನಸಾಮಾನ್ಯರ ಅಳಲಿಗೆ ಸ್ಪಂದಿಸಲಾಗದಾ? ಎಂದಾತ ಟ್ವಿಟಿಸಿದ್ದನಷ್ಟೇ. ಇದು ಮಾಣಿಗೆ ಚೆಡ್ಡಿಯೊಳಗೆ ಇರುವೆ ಕಡಿದಂತೆ ಚಡಪಡಿಕೆ ತಂದಿದೆ.

ಇದರ ಬೆನ್ನಿಗೇ ಕೊಡಗಿನಲ್ಲೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಅದಕ್ಕೆ ಅಲ್ಲಿಯ ಸಂಸದ ತಕ್ಷಣ ಸ್ಪಂದಿಸಿದ್ದಾರೆ. ಉ.ಕನ್ನಡದ ಎಂಪಿ ಒಣ ರುಬಾಬು ಮಾಡುತ್ತ ತಲೆ ತಪ್ಪಿಸಿಕೊಳ್ಳುತ್ತಿದ್ದ. ಈ ಹೊತ್ತಲ್ಲಿ ಸೂಲಿಬೆಲೆ ಮಾಡಿದ ಟ್ವೀಟ್ ಮಾಣಿ ಬೆಂಬಲಿಗರಲ್ಲಿ ಆಕ್ರೋಶ ಮೂಡಿಸಿದೆ. ಈಗ ಟ್ರೋಲ್‍ಗಳು ಬರಪೂರ ನಡೆಯುತ್ತಿದೆ. ಬಿಜೆಪಿಯೊಳಗಿನ ಬಡಿದಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...