Homeಕರ್ನಾಟಕಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

ಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

- Advertisement -
- Advertisement -

| ಶುದ್ಧೋದನ |

ಉತ್ತರಕನ್ನಡದ ಸೋಶಿಯಲ್ ಮೀಡಿಯಾದಲ್ಲೀಗ ಕೇಸರಿ ಕುಮಾರರಿಬ್ಬರ ಗುದಮುರಗಿ ಜೋರು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ಅನಂತ್‍ಕುಮಾರ್ ಹೆಗ್ಡೆ ಮತ್ತು ಕೇಸರಿ ಭಾಷಣ`ಕೋರ’ ಚಕ್ರವರ್ತಿ ಸೂಲಿಬೆಲೆ ಒಬ್ಬರಿಗೊಬ್ಬರು ಕೆಸರು ಎರಚಿಕೊಳ್ಳುತ್ತಿರೋದು ರೋಚಕವಿದೆ. ಹಾಗೆ ನೋಡಿದರೆ ಮೊನ್ನೆ ಮುಗಿದ ಇಲೆಕ್ಷನ್ ಸಂದರ್ಭದಲ್ಲೇ ಮಾಣಿಗೆ ಟಿಕೆಟ್ ಕೊಡಬಾರದೆಂದು ದೊಡ್ಡ ಕೂಗೆದ್ದಿತ್ತು. ಆತನ ಬದಲಿಗೆ ನಮೋ ಬ್ರಿಗೇಡ್‍ನ ಪ್ರೊಪ್ರೇಟರ್ ಚಕ್ರವರ್ತಿ ಸೂಲಿಬೆಲೆ ಹೆಸರು ತೇಲಿ ಬಂದಿತ್ತು. ಸ್ಥಳೀಯ ಆರೆಸ್ಸೆಸ್-ಹಿಂಜಾವೇ ಪಡೆಯೇ ಮಾಣಿ ವಿರುದ್ಧ ಮುರಕೊಂಡು ಬಿದ್ದಿತ್ತು. ಮತದಾರರು ಮತ್ತು ಬಿಜೆಪಿ ಕಾರ್ಯಕರ್ತರ ತಿರಸ್ಕಾರ, ತಾತ್ಸಾರಕ್ಕೆ ತುತ್ತಾಗಿರುವ ಮಾಣಿಗೆ ಟಿಕೆಟ್ ಕೊಡಬಾರದೆಂದು ಉತ್ತರ ಕನ್ನಡದ ಆರೆಸ್ಸೆಸ್‍ನ ಒಂದು ತಂಡ ಪ್ರಬಲ ಹೋರಾಟ ಮಾಡಿತ್ತು. ಉತ್ತರ ಕನ್ನಡ ಸಂಘಪರಿವಾರದ ಕಲ್ಲಡ್ಕ, ಹನ್ಮಂತ ಶಾನಭಾಗ್ ಎರಡೂ ಕಡೆ “ಆಟ” ಆಡಿದ್ದರು.

ಅಂತಿಮವಾಗಿ ಮಾಣಿಗೇ ಟಿಕೆಟ್ ಸಿಕ್ಕಿತು. ಆತ ಗೆದ್ದೂ ಬಿಟ್ಟ. ಆದರೆ ಬಿಜೆಪಿ ಒಳಮನೆಯ ಬೇಗುದಿ ಕಮ್ಮಿ ಆಗಲಿಲ್ಲ. ಸೂಲಿಬೆಲೆ ಟೀಮಂತೂ ಮೋದಿ ಮತ ಭಿಕ್ಷೆಯಿಂದ ಗೆದ್ದಿರುವ ಮಾಣಿ ಧೀಮಾಕಿಂದ ಬೀಗುವುದು ಬೇಕಾಗಿಲ್ಲ ಎಂಬ ರಹಸ್ಯ ಅಭಿಯಾನವನ್ನೇ ಹುಟ್ಟುಹಾಕಿತು! ಮಾಣಿ ಮಾಡಿದ ಜನದ್ರೋಹದ ಪಾಪಕ್ಕೇ ಮಂತ್ರಿಯಾಗದೆ ಮೂಲೆ ಪಾಲಾಗಿದ್ದಾನೆಂದು ಆತನ ವಿರೋಧಿ ಬಳಗ ತಿವಿಯತೊಡಗಿತ್ತು. ಇದೆಲ್ಲದರಿಂದ ಮಾಣಿ ಕೊತಕೊತ ಕುದಿಯುತ್ತಲೇ ಇದ್ದ. ತನಗೆ ಅಡ್ಡಗಾಲು ಹಾಕಿದವರನ್ನೆಲ್ಲಾ ಒಬ್ಬೊಬ್ಬರಾಗಿ ಸಂಹರಿಸಲು ಆತ ಸ್ಕೆಚ್ ರೆಡಿಮಾಡಿಕೊಂಡಿದ್ದ. ಸಂಘಪರಿವಾರದಲ್ಲಿ ತನಗಿರುವ ಸಂಪರ್ಕ ಬಳಸಿಕೊಂಡು ಮಾಣಿ ಈಗ ಜಿಲ್ಲಾ ಚೆಡ್ಡಿ ಪಡೆಯಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸುತ್ತಿದ್ದಾನೆ. ತನಗೆ ವಿರೋಧ ಮಾಡಿದ ಜಿಲ್ಲಾ ಆರೆಸ್ಸೆಸ್, ಹಿಂಜಾವೇ ಮುಖಂಡರನ್ನು ಸಂಘಟನೆಯ ಹುದ್ದೆಗಳಿಂದ ಕಿತ್ತುಹಾಕಿಸುತ್ತಿದ್ದಾನೆ. ಈಗಾಗಲೇ ಜಿಲ್ಲಾಮಟ್ಟದ ಒಬ್ಬ ಕಾರ್ಯವಾಹಕ ಮತ್ತು ಭಟ್ಕಳದ ಆರೆಸ್ಸೆಸ್ ಲೀಡರ್‍ಗೆ ಸ್ಥಾನ ಚ್ಯುತಿ ಮಾಡಲಾಗಿದೆ. ಎಲ್ಲಾ ತಾಲ್ಲೂಕಿನ ಬಿಜೆಪಿ-ಆರೆಸ್ಸೆಸ್‍ನಲ್ಲಿ ಮಾಣಿ ಮಾರಿಹಬ್ಬ ನಡೆಯಲಿದೆ!

ಇನ್ನೊಂದೆಡೆ ಮಾಣಿ ಬಂಡವಾಳ ಬಯಲು ಮಾಡುವ ಆನ್‍ಲೈನ್ ಕಸರತ್ತು ನಡೆಯಲಾರಂಭಿಸಿದೆ. ಚಕ್ರವರ್ತಿ ಸೂಲಿಬೆಲೆ, ಮಾಣಿ ಅಯೋಗ್ಯತೆಯನ್ನು ವ್ಯವಸ್ಥಿತವಾಗಿ ಜಗಜ್ಜಾಹೀರು ಮಾಡುತ್ತಿದ್ದಾನೆ. ಉತ್ತರ ಕನ್ನಡದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಯ ಸೋಷಿಯಲ್ ಮೀಡಿಯಾ ಅಭಿಯಾನ ತನ್ನ ತೇಜೋವಧೆ ಮಾಡುವ ಹಿಕಮತ್ತೆಂಬ ಭಾವನೆ ಮಾಣಿಯದು. ಆಸ್ಪತ್ರೆ ಆಗದಿರುವುದು ಸಂಸದನ ಅಸಾಮಥ್ರ್ಯ ಬಿಂಬಿಸುತ್ತಿದೆ ಎಂಬಂತೆ ಪ್ರಚಾರ ಮಾಡಲಾಗಿತ್ತು. ಇದರ ಹಿಂದೆ ತನ್ನ ಹಿತಶತೃ ಸೂಲಿಬೆಲೆ ಇದ್ದಾನೆಂಬ ಖಚಿತ ನಂಬಿಕೆ ಮಾಣಿಯದು. ಹಾಗಾಗಿ ಆತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಇಡುವವರನ್ನೇ ತನ್ನ ಟ್ವಿಟರ್ ಖಾತೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು. ಅಷ್ಟೇ ಅಲ್ಲ, ಆಸ್ಪತ್ರೆಗಾಗಿ ಮನವಿ ಹಿಡಿದುಕೊಂಡು ಬಂದ ಹುಡುಗರಿಗೆ ರೇಗಿ ಸೋಷಿಯಲ್ ಮೀಡಿಯಾದವರಿಂದಲೇ ಆಸ್ಪತ್ರೆ ಮಾಡಿಸಿಕೊಳ್ಳಿ ಎಂದಬ್ಬರಿಸಿದ್ದ.

ಈ ಜಗಳ ಸೂಲಿಬೆಲೆ ಮತ್ತು ಅನಂತ್ಮಾಣಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಾಚಾಮಗೋಚರವಾಗಿ ಬೈದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ. ಇವರ ಕಾಲೆಳೆದಾಟ ಫೇಸ್ಬುಕ್, ವಾಟ್ಸಾಪ್‍ನಲ್ಲಿ ಕದನ ಕುತೂಹಲ ಕೆರಳಿಸಿದೆ. ಗೆದ್ದವರ ಈ ಗದ್ದಲ ವಿರೋಧ ಪಕ್ಷಗಳಿಗೆ ಮಜಾ ನೀಡುತ್ತಿದ್ದರೆ, ಬಿಜೆಪಿಯಲ್ಲಿ ಮುಜುಗರ ಮೂಡಿಸಿದೆ.

ಇದೆಲ್ಲದರಿಂದ ಒಂದು ಹಂತದಲ್ಲಿ ತಬ್ಬಿಬ್ಬಾದ ಸೂಲಿಬೆಲೆ ಜಗಳ ಸಾಕು, ಕೆಲಸ ಮಾಡೋಣ ಎಂಬ ಟ್ವೀಟ್ ಮಾಡಿದರೂ ಆರೋಪ-ಪ್ರತ್ಯಾರೋಪದ ಬಯಲಾಟ ಮಾತ್ರ ನಿಂತಿಲ್ಲ. ಮೋದಿ ಮತ ಭಿಕ್ಷೆಯಿಂದ ಗೆದ್ದ ಸಂಸದರು ಧಿಮಾಕು ತೋರಿಸದೆ ಕೆಲಸ ಮಾಡಬೇಕು ಎಂದು ಸೂಲಿಬೆಲೆ ಟ್ವಿಟಿಸಿದ್ದೇ ಬಿಜೆಪಿಯಲ್ಲಿ ಕಂಪನ ಸೃಷ್ಠಿಯಾಗಲು ಮೂಲಕಾರಣ. ಸದಾನಂದ ಗೌಡ, ಶೋಭಾ ಕರಂದ್ಲಾಜೆಯಂಥ ದೊಡ್ಡವರೆ ಸೂಲಿಬೆಲೆ ಮಾತಿಂದ ಕೆರಳಿ ಕೆಂಡವಾದರು. ನಮಗೆ ಬುದ್ಧಿ ಹೇಳಲು ಚಕ್ರವರ್ತಿ ಯಾರು? ಎಂದು ಎಗರಾಡಿದರು.

ತನಗೆ ಟಿಕೆಟ್ ತಪ್ಪಲು ಕಾರಣವಾದ ನಾಯಕರನ್ನು ನಿರ್ದಿಷ್ಟವಾಗಿ ಗುರಿಮಾಡಿಕೊಂಡೇ ಸೂಲಿಬೆಲೆ ಸಂಸದರ ಬಣ್ಣ ಬಯಲಾಗಿಸುತ್ತಿದ್ದಾನೆ. ಇದು ಬಿಜೆಪಿಯ ಅಧಿಕಾರಸ್ಥರ ಚೇಲಾಗಳನ್ನು ಕೆರಳಿಸಿದೆ. ಜನಪ್ರತಿನಿಧಿಗಳು ಕೆಲಸ ಮಾಡಲಿ ಎಂದು ಹೇಳೋದು ತಪ್ಪೇನಲ್ಲ. ಆದರೆ ಹಾಗೆ ಹೇಳಿದ್ದು ಸೂಲಿಬೆಲೆಯಾದ್ದರಿಂದ ಬಿಜೆಪಿಯಲ್ಲಿ ಬೆಂಕಿಹೊತ್ತಿಕೊಂಡಿತು. ತನ್ನಿಂದಾಗಿಯೇ ಕರ್ನಾಟಕದಲ್ಲಿ ಬಿಜೆಪಿಯ 25 ಸಂಸದರು ಗೆದ್ದಿದ್ದಾರೆಂದು ಸೂಲಿಬೆಲೆ ಹೇಳಿದ್ದಾನೆಂದು ಕಿಡಿ ಹೊತ್ತಿಸಲಾಯಿತು. ಸೂಲಿಬೆಲೆ ಹಾಗೆ ಹೇಳಿಯೇ ಇಲ್ಲವೆಂದು ಆತನ ಬೆಂಬಲಿಗ ನೆಟ್ಟಿಗರ ವಾದ. ಅಸಲಿಗೆ ಆತ ಹಾಗೆ ಹೇಳಿಯೂ ಇರಲಿಲ್ಲ, ಅಂಥ ಸಂದೇಶವೂ ಲಭ್ಯವಿಲ್ಲ. ಆರು ಸಲ ಸಂಸದರಾದವರಿಗೆ, ಎಂಟು ಸಲ ಮಂತ್ರಿಯಾದವರಿಗೆ ಜನಸಾಮಾನ್ಯರ ಅಳಲಿಗೆ ಸ್ಪಂದಿಸಲಾಗದಾ? ಎಂದಾತ ಟ್ವಿಟಿಸಿದ್ದನಷ್ಟೇ. ಇದು ಮಾಣಿಗೆ ಚೆಡ್ಡಿಯೊಳಗೆ ಇರುವೆ ಕಡಿದಂತೆ ಚಡಪಡಿಕೆ ತಂದಿದೆ.

ಇದರ ಬೆನ್ನಿಗೇ ಕೊಡಗಿನಲ್ಲೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಅದಕ್ಕೆ ಅಲ್ಲಿಯ ಸಂಸದ ತಕ್ಷಣ ಸ್ಪಂದಿಸಿದ್ದಾರೆ. ಉ.ಕನ್ನಡದ ಎಂಪಿ ಒಣ ರುಬಾಬು ಮಾಡುತ್ತ ತಲೆ ತಪ್ಪಿಸಿಕೊಳ್ಳುತ್ತಿದ್ದ. ಈ ಹೊತ್ತಲ್ಲಿ ಸೂಲಿಬೆಲೆ ಮಾಡಿದ ಟ್ವೀಟ್ ಮಾಣಿ ಬೆಂಬಲಿಗರಲ್ಲಿ ಆಕ್ರೋಶ ಮೂಡಿಸಿದೆ. ಈಗ ಟ್ರೋಲ್‍ಗಳು ಬರಪೂರ ನಡೆಯುತ್ತಿದೆ. ಬಿಜೆಪಿಯೊಳಗಿನ ಬಡಿದಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...