Homeಕರ್ನಾಟಕಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

- Advertisement -
- Advertisement -

| ಅಶೋಕ್ |

ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ನಾವು ಆಮಿಷಗಳಿಗೆ ಒಳಗಾಗಿಲ್ಲ ಎಂದು ಹೇಳುತ್ತಲೇ 17 ಶಾಸಕರು ಸಾಮೂಹಿಕ ರಾಜೀನಾಮೆ ಕೊಟ್ಟು ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಅಲ್ಲಿನ ಐಶಾರಾಮಿ ಹೋಟೆಲ್‍ನಲ್ಲಿ ಉಳಿದುಕೊಂಡದ್ದು ಮತ್ತು ಈ ಎಲ್ಲಾ ಶಾಸಕರನ್ನು ಮುಲಾಜಿಲ್ಲದೆ ಸ್ಪೀಕರ್ ಅನರ್ಹಗೊಳಿಸಿದ್ದು ಈಗ ಹಳೆಯ ವಿಷಯ.

ಮೈತ್ರಿ ಸರ್ಕಾರದ ವಿರುದ್ಧ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೇರವಾಗಿ ಬಿಜೆಪಿ ಸರ್ಕಾರದ ರಚನೆಗೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಆ ಎಲ್ಲಾ ಕ್ಷೇತ್ರದಲ್ಲೂ ಶತಾಯಗತಾಯ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರು ಮಾತು ಕೊಟ್ಟಿದ್ದಾರೆ. ಮೊನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಕುರಿತು ಸಿಎಂ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಮ್ಮತದ ನಿರ್ಣಯ ತೆಗೆದುಕೊಳ್ಳುವ ಮೂಲಕ ಅನರ್ಹರ ಪರ ಬ್ಯಾಟ್ ಬೀಸಿದ್ದಾರೆ.

ಆದರೆ, ಬಿಜೆಪಿ ಟಿಕೆಟ್ ನೀಡಿದ ಮಾತ್ರಕ್ಕೆ ಅನರ್ಹರ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಹಾಗಾದರೆ ಇದೀಗ ಅನರ್ಹರ ಮುಂದಿರುವ ಸವಾಲುಗಳೇನು? ಮಹಾರಾಷ್ಟ್ರ-ಹರಿಯಾಣ ಚುನಾವಣೆಯು ರಾಜ್ಯದ ಉಪಚುನಾವಣೆ ಮೇಲೆ ಬೀರುವ ಪ್ರಭಾವವೇನು? ಸುಪ್ರೀಂ ತೀರ್ಪು ಕಂಟಕವಾದರೆ ಅನರ್ಹರ ಗತಿ ಏನು? ಅನರ್ಹರು ರಾಜೀನಾಮೆ ನೀಡಿರುವ 17 ಕ್ಷೇತ್ರದಲ್ಲೂ ಬಂಡಾಯ ಅಭ್ಯರ್ಥಿಗಳ ನಡೆ ಏನು? ನಿಜಕ್ಕೂ ರಾಜ್ಯದ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಗೆಲ್ಲುವ ವಾತಾವರಣ ಇದೆಯೇ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

ಅನರ್ಹರಿಗೆ ಮುಹೂರ್ತವಿಟ್ಟ ಸುಪ್ರೀಂ; ಏನಾಗಲಿದೆ ತೀರ್ಪು?

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಸಾಮೂಹಿಕ ರಾಜೀನಾಮೆ ನೀಡಿದ್ದ 14 ಕಾಂಗ್ರೆಸ್ ಹಾಗೂ 3 ಜೆಡಿಎಸ್ ಶಾಸಕರನ್ನು ಸ್ಪೀಕರ್ ರಮೇಶ್‍ಕುಮಾರ್ ಪಕ್ಷಾಂತರ ನಿಷೇಧ ಕಾಯ್ದೆ ಶೆಡ್ಯೂಲ್ 10ರ ಅನ್ವಯ ಕಳೆದ ಜುಲೈ 28ರಂದು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ನೀಡಿದ್ದರು. ಜೊತೆಗೆ ಈ ವಿಧಾನಸಭೆ ಚಾಲ್ತಿಯಲ್ಲಿರುವವರೆಗೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧೆ ನಡೆಸುವಂತಿಲ್ಲ ಎಂಬುದೂ ಆದೇಶದ ಭಾಗವಾಗಿತ್ತು.

ಇದೇ ಕಾರಣಕ್ಕೆ ಸ್ಪೀಕರ್ ತೀರ್ಪನ್ನು ವಿರೋಧಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಎರಡು ವಾರದಿಂದ ವಾದ-ಪ್ರತಿವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ನವೆಂಬರ್ 4ಕ್ಕೆ ಕಾಯ್ದಿರಿಸಿದೆ. ಆದರೆ, ತೀರ್ಪು ಅನರ್ಹ ಶಾಸಕರ ಪರವಾಗಿಯೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಏಕೆಂದರೆ ಕಾಂಗ್ರೆಸ್ ಪರ ವಾದ ಮಂಡಿಸಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ “ಪಕ್ಷಾಂತರ ಒಂದು ಸಾಮೂಹಿಕ ಪಿಡುಗಾಗಿ ಬದಲಾಗಿದ್ದು, ಇದಕ್ಕೆ ನ್ಯಾಯಾಲಯದ ತೀರ್ಪು ಔಷಧಿಯಾಗಬೇಕು. ಹೀಗೆ ಆಮಿಷಗಳಿಗೆ ಬಲಿಯಾಗಿ ಪಕ್ಷದ್ರೋಹ ಮಾಡುವವರಿಗೆ ತಕ್ಕ ಪಾಠವಾಗಬೇಕು ಎಂದು ನ್ಯಾಯಮೂರ್ತಿಗಳ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಪ್ರಕರಣವನ್ನು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು” ಎಂದು ಮನವಿ ಮಾಡಿದ್ದಾರೆ.

ಅಕಸ್ಮಾತ್ ನ್ಯಾಯಾಲಯ ಇವರ ವಾದಕ್ಕೆ ಮನ್ನಣೆ ನೀಡಿ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದರೆ ಅನರ್ಹರು ಉಪಚುನಾವಣೆ ಆಸೆಯನ್ನು ಬಿಡಲೇಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಒಂದುವೇಳೆ ತೀರ್ಪು ಅನರ್ಹರ ಪರ ಹೊರ ಬಿದ್ದರೂ ಸಹ ಖುಷಿ ಪಡಲು ಕಾರಣವಿಲ್ಲ. ಏಕೆಂದರೆ ಅನರ್ಹರ ಸೋಲಿಗೆ ಉದಾಹರಣೆಯಾಗಿ ಕಣ್ಣ ಮುಂದಿದೆ ತಮಿಳುನಾಡು ರಾಜಕಾರಣ. ಅನರ್ಹರಾದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡ ಶಾಸಕರು ಚುನಾವಣೆಯಲ್ಲಿ ಸೋಲನುಭವಿಸಿದ್ದರು.

ಕರ್ನಾಟಕದಲ್ಲೂ ಅನರ್ಹ ಶಾಸಕರ ವಿರುದ್ಧ ಇದೇ ರೀತಿಯ ವ್ಯಾಪಕ ಜನಾಭಿಪ್ರಾಯ ಇದೆ. ಅಕಸ್ಮಾತ್ ಇವರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದರೂ ಗೆಲ್ಲಲು ಬೇಕಾದ ಪೂರಕ ವಾತಾವರಣ ಕ್ಷೇತ್ರದಲ್ಲಿ ಇಲ್ಲ. ಅಲ್ಲದೆ, ಸ್ಪೀಕರ್ ರಮೇಶ್‍ಕುಮಾರ್ ಸಾಮೂಹಿಕ ರಾಜೀನಾಮೆ ಪ್ರಕರಣವನ್ನು ಸಂಪೂರ್ಣ ವಿಚಾರಣೆ ನಡೆಸಿ ಕಾನೂನುತಜ್ಞರ ಅಭಿಪ್ರಾಯ ಪಡೆದೇ ತೀರ್ಪು ನೀಡಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಬಹುತೇಕ ಸ್ಪೀಕರ್ ತೀರ್ಪನ್ನು ಎತ್ತಿಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದುವೇಳೆ ಇದು ಸಾಧ್ಯವಾದರೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಬಹುತೇಕ
ಅಂತ್ಯವಾದಂತೆಯೇ ಸರಿ.

ಬಿಜೆಪಿಗೆ ಪೂರಕವಲ್ಲದ ಮಹಾರಾಷ್ಟ್ರ-ಹರಿಯಾಣ ಚುನಾವಣೆ ಫಲಿತಾಂಶ

ಪ್ರಸ್ತುತ ದೇಶದೆಲ್ಲೆಡೆ ಪ್ರಧಾನಿ ಮೋದಿ ಅಲೆ ಇದೆ ಎಂಬ ಸಂದೇಶವನ್ನು ನೀಡಲಾಯಿತಾದರೂ, ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ತೀರ್ಪು ಬಿಜೆಪಿಗೆ ಪೂರಕವಾಗಿಯೇನೂ ಬಂದಿರಲಿಲ್ಲ. ಅದರಲ್ಲೂ ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸಿನ ದರ ಕಡಿಮೆಯೇ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಫಲಿತಾಂಶವೂ ಇದನ್ನೇ ತೋರಿಸಿದೆ.
ಬಿಜೆಪಿ ಈ ಬಾರಿ ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ 140 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದರೆ, ಹರಿಯಾಣದಲ್ಲಿ ಮತ್ತೊಂದು ಅವಧಿಗೆ ಬಹುಮತ ಸರ್ಕಾರ ರಚನೆ ಮಾಡುವ ಮಹತ್ವಾಕಾಂಕ್ಷೆಯಲ್ಲಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಕೇವಲ 104 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಹರಿಯಾಣದಲ್ಲಿ ಬಹುಮತ ಗಳಿಸಲು ಎಡವಿ ಮುಖಭಂಗ ಅನುಭವಿಸಿತ್ತು.

ಅಲ್ಲದೆ, ಮಹಾರಾಷ್ಟ್ರ-ಹರಿಯಾಣ ವಿಧಾನಸಭೆ ಚುನಾವಣೆ ಜೊತೆಗೆ 17 ರಾಜ್ಯದ 51 ವಿಧಾನಸಭೆ ಹಾಗೂ 2 ಲೋಕಸಭೆಗೂ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲೂ ಬಿಜೆಪಿ ಶೇ.70 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ಅಸಲಿಗೆ ಆರ್ಥಿಕ ಹಿಂಜರಿತ, ರೂಪಾಯಿ ಮೌಲ್ಯದ ಕುಸಿತ, ಬ್ಯಾಂಕ್‍ಗಳು ದಿವಾಳಿಯಾಗಿರುವುದು, ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಅನೇಕ ವಿಚಾರಗಳು ಸಾಮಾನ್ಯವಾಗಿ ಬಿಜೆಪಿ ವಿರೋಧಿ ಅಲೆಗೆ ಕಾರಣವಾಗಿದೆ. ಹೀಗಾಗಿ ಈ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆಯ ಮೇಲೂ ಪ್ರಭಾವ ಬೀರಲಿದೆ. ಅಲ್ಲದೆ, ರಾಜ್ಯದ ಅನರ್ಹ ಶಾಸಕರ ವಿರುದ್ಧ 17 ಕ್ಷೇತ್ರದಲ್ಲೂ ಜನಾಭಿಪ್ರಾಯವು ಪಕ್ಷಾಂತರಿಗಳ ಪರ ಇರುತ್ತದೆಂದು ಭಾವಿಸಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...